Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಶುಕ್ರವಾರ ಈ ತಪ್ಪು ಮಾಡಬೇಡಿ..! ಲಕ್ಷ್ಮಿ ದೇವಿಯ ಈ ಮಂತ್ರ ಪಠಿಸಿ..!
ಶುಕ್ರವಾರದಂದು ಉಪವಾಸವನ್ನು ಆಚರಿಸುವುದು ಮತ್ತು ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ, ವ್ಯಕ್ತಿಯ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿದೆ ಎಂದು ನಂಬಲಾಗಿದೆ. ಜೊತೆಗೆ ಈ ದಿನ ಲಕ್ಷ್ಮಿಯ ಪೂಜೆಯಿಂದ ಆರ್ಥಿಕ ಲಾಭವನ್ನು ಪಡೆಯುತ್ತಾನೆ ಎನ್ನಲಾಗಿದೆ.
ಸನಾತನ ಧರ್ಮದಲ್ಲಿ ಶುಕ್ರವಾರವನ್ನು ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ದಿನದಂದು ಲಕ್ಷ್ಮಿ ದೇವಿಯನ್ನು ಪೂಜಿಸಿ ಮತ್ತು ಉಪವಾಸ ಮಾಡುವುದರಿಂದ, ವ್ಯಕ್ತಿಯ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ ನಂಬಿಕೆಯ ಪ್ರಕಾರ, ಶುಕ್ರವಾರದಂದು ಕೆಲವು ಕಾರ್ಯಗಳನ್ನು ಮಾಡುವುದರಿಂದ ನಿಮಗೆ ಅಶುಭ ತರಲಿದೆಯಂತೆ.
ಈ ಕಾರ್ಯ ಮಾಡುವುದರಿಂದ ಲಕ್ಷ್ಮಿ ದೇವಿಯು ಮುನಿಸಿಕೊಳ್ಳಬಹುದು ಎಂದು ನಂಬಲಾಗಿದೆ. ಲಕ್ಷ್ಮಿ ದೇವಿ ಮುನಿಸಿಕೊಂಡರೆ ಸಂಪತ್ತಿನ ವೃದ್ಧಿ ಹೊಡೆತ ಬೀಳಲಿದೆ. ಹಾಗಾದರೆ ಶುಕ್ರವಾರ ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ನೋಡೋಣ

ಶುಕ್ರವಾರದಂದು ಈ ತಪ್ಪುಗಳನ್ನು ಮಾಡಬೇಡಿ
ಶುಕ್ರವಾರದಂದು ಮಾಂಸಾಹಾರ ಮತ್ತು ಮದ್ಯ ಸೇವನೆಯನ್ನು ಮಾಡಬಾರದು ಎಂದು ಪರಿಗಣಿಸಲಾಗಿದೆ. ಶುಕ್ರವಾರ ಮಾಂಸ ಮತ್ತು ಮದ್ಯ ಸೇವಿಸಬಾರದು. ಹೀಗೆ ಮಾಡುವುದರಿಂದ ಲಕ್ಷ್ಮಿ ಕೋಪಗೊಳ್ಳುತ್ತಾಳೆ ಮತ್ತು ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗುತ್ತದೆ ಎಂದು ನಂಬಲಾಗಿದೆ.
ಶುಕ್ರವಾರ ಯಾರೊಂದಿಗೂ ಮಾತನಾಡುವಾಗ ನಿಂದನೀಯ ಪದಗಳನ್ನು ಬಳಸಬಾರದಂತೆ. ಈ ದಿನ ಯಾರಾದರೂ ಜಗಳವಾಡಿದರೆ ಅಥವಾ ನಿಂದಿಸಿದರೆ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ ಎಂದು ನಂಬಲಾಗಿದೆ.
ಶುಕ್ರವಾರದಂದು ದಾನ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ ಆದರೆ ಈ ದಿನ ಕೆಲವು ವಸ್ತುಗಳನ್ನು ದಾನ ಮಾಡಬಾರದು. ಈ ದಿನ ಬೆಳ್ಳಿ ಮತ್ತು ಸಕ್ಕರೆಯನ್ನು ದಾನ ಮಾಡುವುದು ಅಶುಭ. ಈ ವಸ್ತುಗಳನ್ನು ದಾನ ಮಾಡುವುದರಿಂದ ಶುಕ್ರ ಗ್ರಹ ದುರ್ಬಲವಾಗುತ್ತದೆ ಎಂದು ನಂಬಲಾಗಿದೆ. ಈ ಕಾರಣದಿಂದಾಗಿ, ಒಬ್ಬ ವ್ಯಕ್ತಿಯು ಜೀವನದಲ್ಲಿ ಭೌತಿಕ ಸಂತೋಷದಿಂದ ವಂಚಿತನಾಗುತ್ತಾನೆ ಎಂದು ನಂಬಲಾಗಿದೆ.
ಇದಲ್ಲದೇ ಈ ದಿನದಂದು ಯಾರೊಂದಿಗೂ ಹಣದ ವ್ಯವಹಾರ ಮಾಡಬಾರದು. ಶುಕ್ರವಾರದಂದು ಯಾರೊಬ್ಬರಿಂದ ಸಾಲ ಪಡೆಯುವುದು ಅಥವಾ ಹಣವನ್ನು ನೀಡುವುದು ಅಶುಭವೆಂದು ಪರಿಗಣಿಸಲಾಗಿದೆ. ಶುಕ್ರವಾರದಂದು ಪೂಜೆ ಮತ್ತು ಅಡಿಗೆಗೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸಬಾರದು. ಈ ರೀತಿ ಮಾಡುವುದರಿಂದ ಮನೆಗೆ ಐಶ್ವರ್ಯ ಬರುವುದಿಲ್ಲ ಎಂದು ಶಾಸ್ತ್ರ ಹೇಳುತ್ತದೆ.
ಈ ದಿನ ಕೊಳಕು ಮತ್ತು ಹರಿದ ಬಟ್ಟೆಗಳನ್ನು ಧರಿಸಿ ದೇವರಿಗೆ ಪೂಜೆ ಮಾಡಬಾರದು. ಕೊಳಕು ಮತ್ತು ಹರಿದ ಬಟ್ಟೆಗಳನ್ನು ಧರಿಸುವುದು ರಾಹು ನಿಮ್ಮನ್ನು ದುರ್ಬಲಗೊಳಿಸುತ್ತಾನೆ ಎಂದು ನಂಬಲಾಗಿದೆ.
ಶುಕ್ರವಾರ ಯಾವ ಮಂತ್ರ ಪಠಿಸಬೇಕು
ಶುಕ್ರವಾರ ರಾತ್ರಿ ಗುಲಾಬಿ ಬಣ್ಣದ ಬಟ್ಟೆಗಳನ್ನು ಧರಿಸಿ ಲಕ್ಷ್ಮಿ ದೇವಿಯನ್ನು ಪೂಜಿಸಿ. ಪೂಜೆಯಲ್ಲಿ 'ಐಂ ಹ್ರೀಂ ಶ್ರೀಂ ಅಷ್ಟಲಕ್ಷ್ಮೀಯ್ಯಾ ಹ್ರೀಂ ಸಿದ್ಧಯೇ ಮಾಂ ಗೃಹೇ ಆಗಚ್ಛಗಚ್ಛ ನಮಃ ಸ್ವಾಹಾ' ಎಂಬ ಮಂತ್ರವನ್ನು 108 ಬಾರಿ ಜಪಿಸಿ. ಶುಕ್ರವಾರ ರಾತ್ರಿ ಶ್ರೀ ಲಕ್ಷ್ಮೀಸೂಕ್ತವನ್ನೂ ಪಠಿಸಿ.
ಶುಕ್ರವಾರ ಮಧ್ಯರಾತ್ರಿ, ಲಕ್ಷ್ಮಿ ದೇವಿಯ ಎಂಟನೇ ರೂಪವಾದ ಅಷ್ಟಲಕ್ಷ್ಮಿಯನ್ನು ಪೂಜಿಸಿ, ಶ್ರೀ ಯಂತ್ರವನ್ನು ಇರಿಸಿ, ತುಪ್ಪದ 8 ದೀಪಗಳನ್ನು ಬೆಳಗಿಸಿ, ಗುಲಾಬಿ ಪರಿಮಳಯುಕ್ತ ಧೂಪವನ್ನು ಹತ್ತಿಸಿ ಸಿಹಿತಿಂಡಿಗಳನ್ನು ಅರ್ಪಿಸಿ. ಕನಕಧಾರಾ ಸ್ತೋತ್ರವನ್ನೂ ಪಠಿಸಿ. ಪೂಜೆಯ ಸಮಯದಲ್ಲಿ ದೇವತೆಗೆ ಗುಲಾಬಿ ಹೂವುಗಳನ್ನು ಅರ್ಪಿಸಿ.
ಶುಕ್ರವಾರ ರಾತ್ರಿ ಮಾತೃ ದೇವಿಯ ಧ್ಯಾನ ಮಾಡಿ, ಪೂಜೆ ಮತ್ತು ಧ್ಯಾನದಲ್ಲಿ ಯಾವುದೇ ರೀತಿಯ ಅಡಚಣೆಯಾಗದಂತೆ ವಿಶೇಷ ಕಾಳಜಿ ವಹಿಸಿ. ಇಲ್ಲದಿದ್ದರೆ ಪೂಜೆಗೆ ಅಡ್ಡಿಯಾಗಬಹುದು. ಲಕ್ಷ್ಮಿ ದೇವಿಯನ್ನು ಪೂಜಿಸುವುದರ ಜೊತೆಗೆ, ಶುಕ್ರವಾರ ರಾತ್ರಿ ಭಗವಾನ್ ವಿಷ್ಣುವನ್ನು ಸಹ ಆರಾಧಿಸಿ. ಹೀಗೆ ಮಾಡುವುದರಿಂದ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಈ ದಿನ, ವಿಷ್ಣುವಿಗೆ ದಕ್ಷಿಣಾವರ್ತಿ ಶಂಖದಿಂದ ಅಭಿಷೇಕ ಮಾಡಿ. ಈ ಪರಿಹಾರಗಳನ್ನು ಮಾಡುವುದರಿಂದ ನೀವು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯುತ್ತೀರಿ.



Click it and Unblock the Notifications