Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಶುಕ್ರವಾರ ಈ ತಪ್ಪು ಮಾಡಬೇಡಿ..! ಲಕ್ಷ್ಮಿ ದೇವಿಯ ಈ ಮಂತ್ರ ಪಠಿಸಿ..!
ಶುಕ್ರವಾರದಂದು ಉಪವಾಸವನ್ನು ಆಚರಿಸುವುದು ಮತ್ತು ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ, ವ್ಯಕ್ತಿಯ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿದೆ ಎಂದು ನಂಬಲಾಗಿದೆ. ಜೊತೆಗೆ ಈ ದಿನ ಲಕ್ಷ್ಮಿಯ ಪೂಜೆಯಿಂದ ಆರ್ಥಿಕ ಲಾಭವನ್ನು ಪಡೆಯುತ್ತಾನೆ ಎನ್ನಲಾಗಿದೆ.
ಸನಾತನ ಧರ್ಮದಲ್ಲಿ ಶುಕ್ರವಾರವನ್ನು ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ದಿನದಂದು ಲಕ್ಷ್ಮಿ ದೇವಿಯನ್ನು ಪೂಜಿಸಿ ಮತ್ತು ಉಪವಾಸ ಮಾಡುವುದರಿಂದ, ವ್ಯಕ್ತಿಯ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ ನಂಬಿಕೆಯ ಪ್ರಕಾರ, ಶುಕ್ರವಾರದಂದು ಕೆಲವು ಕಾರ್ಯಗಳನ್ನು ಮಾಡುವುದರಿಂದ ನಿಮಗೆ ಅಶುಭ ತರಲಿದೆಯಂತೆ.
ಈ ಕಾರ್ಯ ಮಾಡುವುದರಿಂದ ಲಕ್ಷ್ಮಿ ದೇವಿಯು ಮುನಿಸಿಕೊಳ್ಳಬಹುದು ಎಂದು ನಂಬಲಾಗಿದೆ. ಲಕ್ಷ್ಮಿ ದೇವಿ ಮುನಿಸಿಕೊಂಡರೆ ಸಂಪತ್ತಿನ ವೃದ್ಧಿ ಹೊಡೆತ ಬೀಳಲಿದೆ. ಹಾಗಾದರೆ ಶುಕ್ರವಾರ ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ನೋಡೋಣ

ಶುಕ್ರವಾರದಂದು ಈ ತಪ್ಪುಗಳನ್ನು ಮಾಡಬೇಡಿ
ಶುಕ್ರವಾರದಂದು ಮಾಂಸಾಹಾರ ಮತ್ತು ಮದ್ಯ ಸೇವನೆಯನ್ನು ಮಾಡಬಾರದು ಎಂದು ಪರಿಗಣಿಸಲಾಗಿದೆ. ಶುಕ್ರವಾರ ಮಾಂಸ ಮತ್ತು ಮದ್ಯ ಸೇವಿಸಬಾರದು. ಹೀಗೆ ಮಾಡುವುದರಿಂದ ಲಕ್ಷ್ಮಿ ಕೋಪಗೊಳ್ಳುತ್ತಾಳೆ ಮತ್ತು ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗುತ್ತದೆ ಎಂದು ನಂಬಲಾಗಿದೆ.
ಶುಕ್ರವಾರ ಯಾರೊಂದಿಗೂ ಮಾತನಾಡುವಾಗ ನಿಂದನೀಯ ಪದಗಳನ್ನು ಬಳಸಬಾರದಂತೆ. ಈ ದಿನ ಯಾರಾದರೂ ಜಗಳವಾಡಿದರೆ ಅಥವಾ ನಿಂದಿಸಿದರೆ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ ಎಂದು ನಂಬಲಾಗಿದೆ.
ಶುಕ್ರವಾರದಂದು ದಾನ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ ಆದರೆ ಈ ದಿನ ಕೆಲವು ವಸ್ತುಗಳನ್ನು ದಾನ ಮಾಡಬಾರದು. ಈ ದಿನ ಬೆಳ್ಳಿ ಮತ್ತು ಸಕ್ಕರೆಯನ್ನು ದಾನ ಮಾಡುವುದು ಅಶುಭ. ಈ ವಸ್ತುಗಳನ್ನು ದಾನ ಮಾಡುವುದರಿಂದ ಶುಕ್ರ ಗ್ರಹ ದುರ್ಬಲವಾಗುತ್ತದೆ ಎಂದು ನಂಬಲಾಗಿದೆ. ಈ ಕಾರಣದಿಂದಾಗಿ, ಒಬ್ಬ ವ್ಯಕ್ತಿಯು ಜೀವನದಲ್ಲಿ ಭೌತಿಕ ಸಂತೋಷದಿಂದ ವಂಚಿತನಾಗುತ್ತಾನೆ ಎಂದು ನಂಬಲಾಗಿದೆ.
ಇದಲ್ಲದೇ ಈ ದಿನದಂದು ಯಾರೊಂದಿಗೂ ಹಣದ ವ್ಯವಹಾರ ಮಾಡಬಾರದು. ಶುಕ್ರವಾರದಂದು ಯಾರೊಬ್ಬರಿಂದ ಸಾಲ ಪಡೆಯುವುದು ಅಥವಾ ಹಣವನ್ನು ನೀಡುವುದು ಅಶುಭವೆಂದು ಪರಿಗಣಿಸಲಾಗಿದೆ. ಶುಕ್ರವಾರದಂದು ಪೂಜೆ ಮತ್ತು ಅಡಿಗೆಗೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸಬಾರದು. ಈ ರೀತಿ ಮಾಡುವುದರಿಂದ ಮನೆಗೆ ಐಶ್ವರ್ಯ ಬರುವುದಿಲ್ಲ ಎಂದು ಶಾಸ್ತ್ರ ಹೇಳುತ್ತದೆ.
ಈ ದಿನ ಕೊಳಕು ಮತ್ತು ಹರಿದ ಬಟ್ಟೆಗಳನ್ನು ಧರಿಸಿ ದೇವರಿಗೆ ಪೂಜೆ ಮಾಡಬಾರದು. ಕೊಳಕು ಮತ್ತು ಹರಿದ ಬಟ್ಟೆಗಳನ್ನು ಧರಿಸುವುದು ರಾಹು ನಿಮ್ಮನ್ನು ದುರ್ಬಲಗೊಳಿಸುತ್ತಾನೆ ಎಂದು ನಂಬಲಾಗಿದೆ.
ಶುಕ್ರವಾರ ಯಾವ ಮಂತ್ರ ಪಠಿಸಬೇಕು
ಶುಕ್ರವಾರ ರಾತ್ರಿ ಗುಲಾಬಿ ಬಣ್ಣದ ಬಟ್ಟೆಗಳನ್ನು ಧರಿಸಿ ಲಕ್ಷ್ಮಿ ದೇವಿಯನ್ನು ಪೂಜಿಸಿ. ಪೂಜೆಯಲ್ಲಿ 'ಐಂ ಹ್ರೀಂ ಶ್ರೀಂ ಅಷ್ಟಲಕ್ಷ್ಮೀಯ್ಯಾ ಹ್ರೀಂ ಸಿದ್ಧಯೇ ಮಾಂ ಗೃಹೇ ಆಗಚ್ಛಗಚ್ಛ ನಮಃ ಸ್ವಾಹಾ' ಎಂಬ ಮಂತ್ರವನ್ನು 108 ಬಾರಿ ಜಪಿಸಿ. ಶುಕ್ರವಾರ ರಾತ್ರಿ ಶ್ರೀ ಲಕ್ಷ್ಮೀಸೂಕ್ತವನ್ನೂ ಪಠಿಸಿ.
ಶುಕ್ರವಾರ ಮಧ್ಯರಾತ್ರಿ, ಲಕ್ಷ್ಮಿ ದೇವಿಯ ಎಂಟನೇ ರೂಪವಾದ ಅಷ್ಟಲಕ್ಷ್ಮಿಯನ್ನು ಪೂಜಿಸಿ, ಶ್ರೀ ಯಂತ್ರವನ್ನು ಇರಿಸಿ, ತುಪ್ಪದ 8 ದೀಪಗಳನ್ನು ಬೆಳಗಿಸಿ, ಗುಲಾಬಿ ಪರಿಮಳಯುಕ್ತ ಧೂಪವನ್ನು ಹತ್ತಿಸಿ ಸಿಹಿತಿಂಡಿಗಳನ್ನು ಅರ್ಪಿಸಿ. ಕನಕಧಾರಾ ಸ್ತೋತ್ರವನ್ನೂ ಪಠಿಸಿ. ಪೂಜೆಯ ಸಮಯದಲ್ಲಿ ದೇವತೆಗೆ ಗುಲಾಬಿ ಹೂವುಗಳನ್ನು ಅರ್ಪಿಸಿ.
ಶುಕ್ರವಾರ ರಾತ್ರಿ ಮಾತೃ ದೇವಿಯ ಧ್ಯಾನ ಮಾಡಿ, ಪೂಜೆ ಮತ್ತು ಧ್ಯಾನದಲ್ಲಿ ಯಾವುದೇ ರೀತಿಯ ಅಡಚಣೆಯಾಗದಂತೆ ವಿಶೇಷ ಕಾಳಜಿ ವಹಿಸಿ. ಇಲ್ಲದಿದ್ದರೆ ಪೂಜೆಗೆ ಅಡ್ಡಿಯಾಗಬಹುದು. ಲಕ್ಷ್ಮಿ ದೇವಿಯನ್ನು ಪೂಜಿಸುವುದರ ಜೊತೆಗೆ, ಶುಕ್ರವಾರ ರಾತ್ರಿ ಭಗವಾನ್ ವಿಷ್ಣುವನ್ನು ಸಹ ಆರಾಧಿಸಿ. ಹೀಗೆ ಮಾಡುವುದರಿಂದ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಈ ದಿನ, ವಿಷ್ಣುವಿಗೆ ದಕ್ಷಿಣಾವರ್ತಿ ಶಂಖದಿಂದ ಅಭಿಷೇಕ ಮಾಡಿ. ಈ ಪರಿಹಾರಗಳನ್ನು ಮಾಡುವುದರಿಂದ ನೀವು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯುತ್ತೀರಿ.



Click it and Unblock the Notifications