Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Ganesh Chaturthi 2025: ಗಣೇಶ ಚತುರ್ಥಿಗೆ ಶೇರ್ ಮಾಡಲು ಇಲ್ಲವೆ ಅದ್ಭುತ ಫೋಟೋಗಳು..!
ಗಣೇಶ ಚತುರ್ಥಿಯು ಬುದ್ಧಿವಂತಿಕೆ, ಸಮೃದ್ಧಿ ಮತ್ತು ಅದೃಷ್ಟದ ದೇವರು ಎಂದು ಪರಿಗಣಿಸಲಾದ ಗಣೇಶನ ಕುರಿತ ಹಬ್ಬವಾಗಿದೆ. ಈ ಹಬ್ಬವು ಹಿಂದೂ ಚಾಂದ್ರಮಾನ ಮಾಸವಾದ ಭಾದ್ರಪದದ ನಾಲ್ಕನೇ ದಿನದಂದು ಪ್ರಾರಂಭವಾಗಿ ಹತ್ತು ದಿನಗಳವರೆಗೆ ನೆರವೆರಲಿದೆ. ಇದು ಅಪಾರ ಭಕ್ತಿ, ವರ್ಣರಂಜಿತ ಮೆರವಣಿಗೆಗಳು ಸೇರಿದಂತೆ ಸಾಂಸ್ಕೃತಿಕ ಹಬ್ಬವಾಗಿ ಪರಿಗಣಿಸಲಾಗಿದೆ.
ಪಾರ್ವತಿ ದೇವಿಯ ಸೃಷ್ಟಿಯಿಂದ ಜನಿಸಿದ ಗಣೇಶನು ತಂದೆ ಶಿವನಿಂದ ಆನೆಯ ಮುಖವನ್ನು ಪಡೆಯುತ್ತಾನೆ. ಶಿವ-ಪಾರ್ವತಿಯ ಪ್ರಿಯ ಪುತ್ರ ಹಾಗೂ ಜನರ ಕಷ್ಟಗಳ ನಿವಾರಣೆಗೆ ನಿಲ್ಲುವ ಶಕ್ತಿಶಾಲಿ ದೇವ ಗಣೇಶ. ಇವನ ಹುಟ್ಟಿದ ಹಬ್ಬದ ಸಂಭ್ರದ ಆಚರಣೆಯೇ ಗಣೇಶ ಚತುರ್ಥಿ. ಭಗವಾನ್ ಗಣೇಶನು ಬುದ್ಧಿವಂತಿಕೆ, ಸಮೃದ್ಧಿ ಮತ್ತು ಅದೃಷ್ಟದ ಸಂಕೇತವಾಗಿದ್ದಾನೆ.

ವಿಘ್ನಗಳ ನಿವಾರಕ ಗಣೇಶನ ಹಬ್ಬವನ್ನು ಹಿಂದೂ ಪಂಚಾಂಗದ ಪ್ರಕಾರ ಭಾದ್ರಪದ ಮಾಸದ ಚೌತಿಯ ದಿನದಂದು ಆಚರಿಸಲಾಗುವುದು. ಈ ವರ್ಷ ಅಂದರೆ ಆಗಸ್ಟ್ 26 ಹಾಗೂ 27ರಂದು ಆಚರಿಸಲಾಗುವುದು. ಗಣೇಶನ ಹಬ್ಬವನ್ನು ಮೂರು ದಿನ, ಏಳು ದಿನ ಹಾಗೂ ಹನ್ನೊಂದು ದಿನಗಳ ಕಾಲ ಆಚರಿಸಲಾಗುವುದು.

ದೊಡ್ಡ ಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿಯ ದಿನ ಬಂಧು-ಬಾಂಧವರಿಗೆ, ಸ್ನೇಹಿತರಿಗೆ ಹಾಗೂ ನೆರೆಹೊರೆಯವರಿಗೆ ಮನೆಗೆ ಕರೆಯುವುದು ಹಾಗೂ ಶುಭಾಶಯ ಕೋರುವುದು ಒಂದು ಪದ್ಧತಿ.
ಗಣೇಶನು ಎಲ್ಲರಿಗೂ ಉತ್ತಮ ಮಾರ್ಗದರ್ಶಕ ಹಾಗೂ ರಕ್ಷಕ. ಅವನು ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಆರಂಭವನ್ನು ನೀಡಲಿ. ನಿಮ್ಮ ಮುಂದಿನ ಜೀವನದಲ್ಲಿ ಯಾವುದೇ ಅಡೆತಡೆ ಬರದಂತೆ ಕಾಯುವುದರ ಮೂಲಕ ಉತ್ಕೃಷ್ಟ ಜೀವನವನ್ನು ದಯ ಪಾಲಿಸಲಿ. ಗಣೇಶ ಹಬ್ಬದ ಶುಭಾಶಯಗಳು.
ಗಣೇಶನ ಹಬ್ಬ ಆರಂಭಗೊಂಡು 10ನೇ ದಿನವಾದ ಅನಂತ ಚತುರ್ದಶಿಯಂದು ಹಬ್ಬಗಳು ಮುಕ್ತಾಯಗೊಳ್ಳುತ್ತವೆ, ವಿಗ್ರಹಗಳನ್ನು ನದಿ, ಕೆರೆ ಸಮುದ್ರದಂತಹ ನೀರಿನ ಮೂಲಕ್ಕೆ ಭವ್ಯ ಮೆರವಣಿಗೆಗಳಲ್ಲಿ ಕೊಂಡೊಯ್ಯಲಾಗುತ್ತದೆ. ನಂತರ ನಿಮಜ್ಜನ ನಡೆಸಲಾಗುತ್ತದೆ.
ಗಣೇಶನಿಗೆ ಹಲವು ಉಪನಾಮಗಳಿರುವುದು ನಿಮಗೆಲ್ಲಾ ತಿಳಿದಿದೆ. ಹಾಗೆ ಗಣೇಶನ ನಾಮಸ್ಮರಣೆಯ ಸಮಯದಲ್ಲಿ ಗಣಪತಿ ಬಪ್ಪಾ ಮೋರಯಾ ಎಂಬ ಘೋಷಣೆಗಳ ಕೂಗುವುದು ನೀವು ಕೇಳಿರಬಹುದು.

ಆದ್ರೆ ಈ ರೀತಿ ಘೋಷಣೆಗಳ ಕೂಗುವುದು ಏಕೆ ಎಂಬ ಕಥೆ ನಿಮಗೆ ಗೊತ್ತಾ?, ಇದರ ಹಿಂದೆ ಒಂದು ಪುರಾತನ ಕಥೆ ಇದೆ. ಮೊರಯಾದ ಮೂಲ ಕಥೆ 15ನೇ ಶತಮಾನದಲ್ಲಿ ನಡೆದಿರುವುದು ಎಂಬುದಾಗಿ ನಂಬಲಾಗಿದೆ.

ಇಮ್ಮೆ ಮೊರಯಾ ಗೋಸವಿ ಎಂಬ ಸಾಧು ಮಹಾನ್ ಗಣೇಶನ ಭಕ್ತರು. ಅವರು ನಿತ್ಯ ಗಣಪತಿಯ ಪೂಜೆ ನಡೆದು ಹೋಗುತ್ತಿದ್ದರು. ಒಂದು ದಿನ ಮೊರಯಾ ಮಲಗಿದ್ದಾಗ ಕನಸಿನಲ್ಲಿ ಗಣೇಶ ಪ್ರತ್ಯಕ್ಷನಾದನಂತೆ.

ಈ ವೇಳೆ ಗಣಪ ನದಿಯಲ್ಲಿ ನನ್ನ ಮೂರ್ತಿ ಇದೆ ಅನ್ನು ಮೇಲೆತ್ತಿ ಪ್ರತಿಷ್ಠಾಪನೆ ಮಾಡುವಂತೆ ಹೇಳಿದನಂತೆ. ಹಾಗೆ ನದಿಯಲ್ಲಿ ಮೊರಯಾ ಹುಡುಕಾಡಿದಾಗ ದೊಡ್ಡ ಗಣಪನ ಮೂರ್ತಿ ಪತ್ತೆಯಾಗಿತ್ತಂತೆ.
ಈ ಸುದ್ದಿ ತಿಳಿದು ಊರಿನವರೆಲ್ಲಾ ಒಂದು ಕಡೆ ಸೇರಿದರಂತೆ. ಹಾಗೆ ಗಣೇಶ ಕನಸಿನಲ್ಲಿ ಬಂದ ವಿಷಯ ತಿಳಿಸಿದಾಗ ಜನರು ಮೊರಯಾನನ್ನೇ ದೇವರ ಸ್ವರೂಪಿ ಎಂದು ನಂಬಿದರಂತೆ.
ಮುಂದೆ ಮೊರಯಾ ಆ ಊರಿನಲ್ಲಿ ಪವಾಡ ಪುರುಷರಂತೆ ಬದುಕಿದರಂತೆ. ಬರು ಬರುತ್ತಾ ಜನರು ಮೋರಯ ಗೋಸಾನಿಯ ಜ್ಞಾಪಕಾರ್ತವಾಗಿ, ಗಣಪತಿ ಬಪ್ಪಾ ಮೋರಯಾ ಎಂಬ ಘೋಷಣೆ ಕೂಗಲಾಗುತ್ತಿದೆ.



Click it and Unblock the Notifications


