Latest Updates
-
ಉರಿಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಹೀಟ್ ವೇವ್ ಎಚ್ಚರಿಕೆ: ಬಿಸಿಲಿನ ಬೇಗೆಯಿಂದ ಬಚಾವಾಗಲು ಈ ಪಾನೀಯಗಳೇ ಮದ್ದು! -
ಅನುಷ್ಕಾ ಶರ್ಮಾ ಐಪಿಎಲ್ ಲುಕ್: ಸಿಂಪಲ್ ಡ್ರೆಸ್ನಲ್ಲೇ ಮ್ಯಾಜಿಕ್ ಮಾಡಿದ್ದು ಹೇಗೆ? -
ಬಿಸಿಗಾಳಿ ಎಚ್ಚರಿಕೆ: ಏಪ್ರಿಲ್ ಬಿಸಿಲಿನಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಾಯಿಸುವುದು ಹೇಗೆ? -
ಪೊಲೀಸ್ ಕಿರುಕುಳದಿಂದ ಬೇಸತ್ತಿದ್ದೀರಾ? ಪ್ರೇಮಿಗಳಿಗೆ ರಕ್ಷಣೆ ನೀಡಲು ಹೈಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್! -
ಬಿಸಿಲ ಬೇಗೆಯಿಂದ ತತ್ತರಿಸಿದೆಯೇ? ನಿಮ್ಮ ಮನೆ ಮತ್ತು ಗಿಡಗಳನ್ನು ತಂಪಾಗಿರಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಸರಳ ಟಿಪ್ಸ್ ಪಾಲಿಸಿ: ಸುಡುವ ಬಿಸಿಲಿನಲ್ಲಿ ಆರೋಗ್ಯವಾಗಿರುವುದು ಹೇಗೆ? -
ಸುಡುವ ಬಿಸಿಲಿಗೆ ಸುಸ್ತಾದ್ರಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ಕೂಲಿಂಗ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸದಿದ್ದರೆ ಕಾದಿದೆ ದೊಡ್ಡ ಅಪಾಯ! -
ಸಲಿಂಗ ಜೋಡಿಗಳಿಗೆ ಸಿಕ್ತು ಭದ್ರತೆ: ಹೈಕೋರ್ಟ್ನ ಈ ತೀರ್ಪು ನಿಮ್ಮ ಬದುಕನ್ನೇ ಬದಲಿಸಬಹುದು!
ಗಣೇಶ ಚತುರ್ಥಿ 2023: ಗಣೇಶ ಪ್ರತಿಸ್ಥಾಪನೆ ಯಾವಾಗ ಮಾಡಬೇಕು? ಯಾವ ದಿನ ವಿಸರ್ಜನೆ ಮಾಡಬೇಕು?
ಗಣೇಶ ಚತುರ್ಥಿಯೆಂದರೆ ಸಡಗರ-ಸಂಭ್ರಮ, ಈ ಸಂಭ್ರಮ ಬರೀ ಮನೆಗಷ್ಟೇ ಸೀಮಿತವಲ್ಲ, ಊರಿಗೆ ಊರೇ ಸಂಭ್ರಮಿಸುತ್ತದೆ. ಗಣಪನನ್ನು ಬೀದಿ-ಬೀದಿಗಳಲ್ಲಿ ಕೂರಿಸಿ ತುಂಬಾನೇ ಅದ್ಧೂರಿಯಿಂದ ಗಣೇಶ ಚತುರ್ಥಿ ಆಚರಿಸಲಾಗುವುದು. ಗಣೇಶನನ್ನು 3 ದಿನ 7 ದಿನ 10 ದಿನ ಕೂರಿಸಿ ನಂತರ ವಿರ್ಸಜನೆ ಮಾಡುತ್ತಾರೆ. ಈ ವರ್ಷ ಗೌರಿ ಗಣೇಶ ಹಬ್ಬವನ್ನು ಆಚರಿಸಲಾಗುವುದು.
ಈ ವರ್ಷ ಗಣೇಶ ಪ್ರತಿಷ್ಠಾಪನೆ ಯಾವಾಗ ಮಾಡಲಾಗುವುದು? ಶುಭ ಮುಹೂರ್ತ ಯಾವಾಗ, ಗಣೇಶ ಪ್ರತಿಷ್ಠಾಪನೆ ಮಾಡುವಾಗ ಪಾಲಿಸಬೇಕಾದ ನಿಯಮಗಳೇನು ಎಂದು ನೋಡೋಣ ಬನ್ನಿ:

ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 19 ಮಂಗಳವಾರದಂದು ಆಚರಿಸಲಾಗುವುದು.
ಈ ವರ್ಷ ಗಣೇಶನ ಪ್ರತಿಷ್ಠಾಪನೆಗೆ ಶುಭ ಮುಹೂರ್ತ, ಗಣೇಶ ವಿಸರ್ಜನೆಗೆ ಶುಭ ಮುಹೂರ್ತ ಯಾವಾಗ?
ಗಣೇಶನ ಪ್ರತಿಷ್ಠಾಪನೆಗೆ ಶುಭ ಮುಹೂರ್ತ: ಸೆಪ್ಟೆಂಬರ್ 19 ಬೆಳಗ್ಗೆ 11:01ರಿಂದ ಮಧ್ಯಾಹ್ನ 01:28ರವರೆಗೆ.
ಗಣೇಶ ಪ್ರತಿಷ್ಠಾಪನೆಗೆ 2 ಗಂಟೆ 27 ನಿಮಿಷ ಸಮಯವಿದೆ.
ಗಣೇಶ ಪ್ರತಿಷ್ಠಾಪನೆಗೆ ಪಾಲಿಸಬೇಕಾದ ಪೂಜಾ ನಿಯಮಗಳು
* ಗಣೇಶನನ್ನು ತರುವ ಮುನ್ನವೇ ಗಣೇಶನನ್ನು ಕೂರಿಸುವ ಸ್ಥಳವನ್ನು ಸ್ವಚ್ಛ ಮಾಡಿ ಹೂಗಳಿಂದ ಅಲಂಕರಿಸಿ.
* ಪರಿಸರ ಸ್ನೇಹಿ ಗಣೇಶನನ್ನು ತನ್ನಿ
* ಪೂಜಾರಿ ಮಂತ್ರಗಳನ್ನು ಹೇಳುತ್ತಾ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ.
* ಗಣೇಶನಿಗೆ ಹೂವುಗಳು, ಹಣ್ಣುಗಳು, ಶ್ರೀ ಗಣೇಶನಿಗೆ ಪ್ರಿಯವಾದ ಲಡ್ಡು, ಮೋದಕಗಳನ್ನು ಅರ್ಪಿಸಿ.
* ಗಣೇಶನ ಹಾಡುಗಳನ್ನು ಹೇಳುತ್ತಾ ಆರತಿ ಮಾಡಿ.
* ಗಣೇಶನ ಪ್ರತಿಷ್ಠಾಪನೆ ಮಾಡಿದ ಮೇಲೆ 10 ದಿನಗಳವರೆಗೆ ಶ್ರೀ ಗಣೇಶನನ್ನು ಆರಾಧಿಸಿ. 10ನೇ ದಿನ ಗಣೇಶನ ಮೂರ್ತಿಯನ್ನು ವಿಸರ್ಜನೆ ಮಾಡಿ.
ಗಣೇಶ ವಿಸರ್ಜನೆಗೆ ಸಮಯ
ಗಣೇಶನ ಮೂರ್ತಿಯನ್ನು ಸೆಪ್ಟೆಂಬರ್ 28ಕ್ಕೆ ವಿಸರ್ಜನೆ ಮಾಡಿ
ಸೆಪ್ಟೆಂಬರ್ 18ಕ್ಕೆ ಚಂದ್ರನನ್ನು ನೋಡಬಾರದು
ಗಣೇಶ ಚತುರ್ಥಿ ತಿಥಿ ಸೆಪ್ಟೆಂಬರ್ 18 ಮಧ್ಯಾಹ್ನ 12:39ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ 19 ಮಧ್ಯಾಹ್ನ 01:43ಕ್ಕೆ ಮುಕ್ತಾಯ.
ಗಣೇಶ ಕೂರಿಸುವ ಹಿಂದಿನ ದಿನ ಚಂದ್ರನನ್ನು ನೋಡಬಾರದು ಎಂಬ ನಂಬಿಕೆಯಿದೆ. ಆದ್ದರಿಂದ ಸೆಪ್ಟೆಂಬರ್ 18ಕ್ಕೆ ಚಂದ್ರನನ್ನು ನೋಡಬಾರದು, ನೋಡಿದರೆ ಕಷ್ಟಗಳು ಹೆಚ್ಚಾಗುವುದು ಎಂಬ ಧಾರ್ಮಿಕ ನಂಬಿಕೆಯಿದೆ.



Click it and Unblock the Notifications