Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗಣೇಶ ಚತುರ್ಥಿ 2023: ಗಣೇಶ ಪ್ರತಿಸ್ಥಾಪನೆ ಯಾವಾಗ ಮಾಡಬೇಕು? ಯಾವ ದಿನ ವಿಸರ್ಜನೆ ಮಾಡಬೇಕು?
ಗಣೇಶ ಚತುರ್ಥಿಯೆಂದರೆ ಸಡಗರ-ಸಂಭ್ರಮ, ಈ ಸಂಭ್ರಮ ಬರೀ ಮನೆಗಷ್ಟೇ ಸೀಮಿತವಲ್ಲ, ಊರಿಗೆ ಊರೇ ಸಂಭ್ರಮಿಸುತ್ತದೆ. ಗಣಪನನ್ನು ಬೀದಿ-ಬೀದಿಗಳಲ್ಲಿ ಕೂರಿಸಿ ತುಂಬಾನೇ ಅದ್ಧೂರಿಯಿಂದ ಗಣೇಶ ಚತುರ್ಥಿ ಆಚರಿಸಲಾಗುವುದು. ಗಣೇಶನನ್ನು 3 ದಿನ 7 ದಿನ 10 ದಿನ ಕೂರಿಸಿ ನಂತರ ವಿರ್ಸಜನೆ ಮಾಡುತ್ತಾರೆ. ಈ ವರ್ಷ ಗೌರಿ ಗಣೇಶ ಹಬ್ಬವನ್ನು ಆಚರಿಸಲಾಗುವುದು.
ಈ ವರ್ಷ ಗಣೇಶ ಪ್ರತಿಷ್ಠಾಪನೆ ಯಾವಾಗ ಮಾಡಲಾಗುವುದು? ಶುಭ ಮುಹೂರ್ತ ಯಾವಾಗ, ಗಣೇಶ ಪ್ರತಿಷ್ಠಾಪನೆ ಮಾಡುವಾಗ ಪಾಲಿಸಬೇಕಾದ ನಿಯಮಗಳೇನು ಎಂದು ನೋಡೋಣ ಬನ್ನಿ:

ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 19 ಮಂಗಳವಾರದಂದು ಆಚರಿಸಲಾಗುವುದು.
ಈ ವರ್ಷ ಗಣೇಶನ ಪ್ರತಿಷ್ಠಾಪನೆಗೆ ಶುಭ ಮುಹೂರ್ತ, ಗಣೇಶ ವಿಸರ್ಜನೆಗೆ ಶುಭ ಮುಹೂರ್ತ ಯಾವಾಗ?
ಗಣೇಶನ ಪ್ರತಿಷ್ಠಾಪನೆಗೆ ಶುಭ ಮುಹೂರ್ತ: ಸೆಪ್ಟೆಂಬರ್ 19 ಬೆಳಗ್ಗೆ 11:01ರಿಂದ ಮಧ್ಯಾಹ್ನ 01:28ರವರೆಗೆ.
ಗಣೇಶ ಪ್ರತಿಷ್ಠಾಪನೆಗೆ 2 ಗಂಟೆ 27 ನಿಮಿಷ ಸಮಯವಿದೆ.
ಗಣೇಶ ಪ್ರತಿಷ್ಠಾಪನೆಗೆ ಪಾಲಿಸಬೇಕಾದ ಪೂಜಾ ನಿಯಮಗಳು
* ಗಣೇಶನನ್ನು ತರುವ ಮುನ್ನವೇ ಗಣೇಶನನ್ನು ಕೂರಿಸುವ ಸ್ಥಳವನ್ನು ಸ್ವಚ್ಛ ಮಾಡಿ ಹೂಗಳಿಂದ ಅಲಂಕರಿಸಿ.
* ಪರಿಸರ ಸ್ನೇಹಿ ಗಣೇಶನನ್ನು ತನ್ನಿ
* ಪೂಜಾರಿ ಮಂತ್ರಗಳನ್ನು ಹೇಳುತ್ತಾ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ.
* ಗಣೇಶನಿಗೆ ಹೂವುಗಳು, ಹಣ್ಣುಗಳು, ಶ್ರೀ ಗಣೇಶನಿಗೆ ಪ್ರಿಯವಾದ ಲಡ್ಡು, ಮೋದಕಗಳನ್ನು ಅರ್ಪಿಸಿ.
* ಗಣೇಶನ ಹಾಡುಗಳನ್ನು ಹೇಳುತ್ತಾ ಆರತಿ ಮಾಡಿ.
* ಗಣೇಶನ ಪ್ರತಿಷ್ಠಾಪನೆ ಮಾಡಿದ ಮೇಲೆ 10 ದಿನಗಳವರೆಗೆ ಶ್ರೀ ಗಣೇಶನನ್ನು ಆರಾಧಿಸಿ. 10ನೇ ದಿನ ಗಣೇಶನ ಮೂರ್ತಿಯನ್ನು ವಿಸರ್ಜನೆ ಮಾಡಿ.
ಗಣೇಶ ವಿಸರ್ಜನೆಗೆ ಸಮಯ
ಗಣೇಶನ ಮೂರ್ತಿಯನ್ನು ಸೆಪ್ಟೆಂಬರ್ 28ಕ್ಕೆ ವಿಸರ್ಜನೆ ಮಾಡಿ
ಸೆಪ್ಟೆಂಬರ್ 18ಕ್ಕೆ ಚಂದ್ರನನ್ನು ನೋಡಬಾರದು
ಗಣೇಶ ಚತುರ್ಥಿ ತಿಥಿ ಸೆಪ್ಟೆಂಬರ್ 18 ಮಧ್ಯಾಹ್ನ 12:39ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ 19 ಮಧ್ಯಾಹ್ನ 01:43ಕ್ಕೆ ಮುಕ್ತಾಯ.
ಗಣೇಶ ಕೂರಿಸುವ ಹಿಂದಿನ ದಿನ ಚಂದ್ರನನ್ನು ನೋಡಬಾರದು ಎಂಬ ನಂಬಿಕೆಯಿದೆ. ಆದ್ದರಿಂದ ಸೆಪ್ಟೆಂಬರ್ 18ಕ್ಕೆ ಚಂದ್ರನನ್ನು ನೋಡಬಾರದು, ನೋಡಿದರೆ ಕಷ್ಟಗಳು ಹೆಚ್ಚಾಗುವುದು ಎಂಬ ಧಾರ್ಮಿಕ ನಂಬಿಕೆಯಿದೆ.



Click it and Unblock the Notifications