Latest Updates
-
ಮಾವಿನ ಹಣ್ಣು ಖರೀದಿಸುವ ಮುನ್ನ ಈ ತಪ್ಪು ಮಾಡಬೇಡಿ! -
ಅಕ್ಷಯ ತೃತೀಯ ಚಿನ್ನದ ಖರೀದಿ: ಈ ಆಫರ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಯಲ್ಲೂ ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಸುಪ್ರೀಂ ಕೋರ್ಟ್ ಶಾಕ್: ವಿಚ್ಛೇದನ ಒಪ್ಪಂದ ಮುರಿದರೆ ಕಾದಿದೆ ಕಠಿಣ ಶಿಕ್ಷೆ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಭಾರತದ ಈ ನದಿಯಲ್ಲಿ ಚಿನ್ನವೇ ಸಿಗುತ್ತೆ..! ಇಂದಿಗೂ ಜನ ಹುಡುಕಾಡುತ್ತಾರೆ..!
ಭಾರತದಲ್ಲಿ ನದಿಗಳಿಗೆ ಪವಿತ್ರ ಸ್ಥಾನ ನೀಡಲಾಗಿದೆ. ಎಲ್ಲಾ ನದಿಗಳನ್ನು ಸ್ತ್ರೀ ಹೆಸರಿನಿಂದ ಕರೆಯಲಾಗುತ್ತದೆ. ಹಾಗೆ ಪ್ರತಿಯೊಂದು ನದಿಯ ಹಿಂದೆಯೂ ಒಂದೊಂದು ಕಥೆಗಳಿರುವುದು ಕೇಳಿರಬಹುದು. ಭಾರತದಲ್ಲಿ ಹರಿಯುವ ಪ್ರತಿಯೊಂದು ನದಿಯೂ ಒಂದೊಂದು ಪವಿತ್ರ ಸ್ಥಳಗಳ ಕುರಿತು ಹೇಳುತ್ತವೆ. ಹಾಗೆ ತಮ್ಮದೇ ವೈಶಿಷ್ಟ್ಯತೆ ಹೊಂದಿವೆ.
ಅನೇಕ ನದಿಗಳು ಅವುಗಳ ಪಾವಿತ್ರ್ಯ, ಜಲ ಸಂಪನ್ಮೂಲಗಳು ಮತ್ತು ಚೈತನ್ಯಕ್ಕಾಗಿ ಪೂಜಿಸಲ್ಪಡುತ್ತವೆ. ಅದರಲ್ಲೂ ಗಂಗಾ, ತುಂಗಾ, ಯಮುನಾ, ಕೃಷ್ಣಾ, ಗೋಧಾವರಿ ನದಿಯನ್ನು ಪವಿತ್ರ ನದಿಗಳಾಗಿ ನೋಡಲಾಗಿದೆ. ಹಾಗೆ ಕೋಟಿ ಕೋಟಿ ಜನರಿಗೆ ಲಕ್ಷಾಂತರ ರೈತರಿಗೂ ಇವು ಜೀವ ಜಲವಾಗಿ ಪರಿಣಮಿಸಿವೆ. ಹಾಗೆ ಉಪನದಿಗಳು ಉಪ ಕಥೆಗಳು ಇನ್ನೂ ಹತ್ತಾರು ವಿಶೇಷವನ್ನು ಈ ನದಿಗಳು ಒಳಗೊಂಡಿವೆ.

ಇಷ್ಟೆಲ್ಲಾ ವಿಶೇಷತೆಗಳ ನಡುವೆ ಭಾರತದಲ್ಲಿ ಹರಿಯುವ ಒಂದು ನದಿಯಲ್ಲಿ ಇಂದಿಗೂ ಚಿನ್ನಕ್ಕಾಗಿ ಹುಡುಕಾಟ ನಡೆಯುತ್ತಿದೆ ಎಂಬ ವಿಚಾರ ನಿಮಗೆ ಗೊತ್ತಿದ್ಯಾ? ಹೌದು ಚಿನ್ನದ ಕಣಗಳನ್ನು ತನ್ನಲ್ಲಿಟ್ಟುಕೊಂಡು ಹರಿಯುವ ಈ ನದಿ ಭಾರತದಲ್ಲಿ ಕುತೂಹಲಕ್ಕೆ ಕಾರಣವಾಗಿದೆ, ಶತಮಾನದಿಂದಲೂ ಈ ನದಿ ಹರಿಯುತ್ತಿದ್ದು, ಇಂದಿಗೂ ಈ ನದಿಯಲ್ಲಿ ಚಿನ್ನ ಸಿಗುತ್ತಿದೆ ಎಂದು ಬೆಳಗ್ಗೆಯಿಂದ ಕತ್ತಲಾಗುವವರೆಗೂ ಜನರು ಹುಡುಕಾಡುತ್ತಾರೆ.
ಈ ನದಿ ಜಾರ್ಖಂಡ್ನಿಂದ ಸುಮಾರು 474 ಕಿ.ಲೋ ದೂರ ಹರಿಯುತ್ತದೆ. ಈ ನದಿಯ ವಿಶೇಷತೆಯ ಕಾರಣದಿಂದಾಗಿಯೇ ಇದನ್ನು ಸುವರ್ಣರೇಖಾ ನದಿ ಎಂದು ಕರೆಯಲಾಗಿದೆ. ಈ ನದಿಯಲ್ಲಿ ಶತಮಾನದಿಂದಲೂ ಚಿನ್ನದ ಕಣಗಳು ಸಿಗುತ್ತಿವೆ ಎಂಬ ನಂಬಿಕೆ ಇದೆ. ಹೀಗಾಗಿ ಈ ನದಿ ಹರಿಯುವ ಸ್ಥಳದಲ್ಲೆಲ್ಲ ಜನರು ಚಿನ್ನದ ಕಣ ಆರಿಸಲೆಂದು ತುಂಬಿರುವುದು ಸಾಮಾನ್ಯ.
ಸುವರ್ಣರೇಖಾ ಅಂದರೆ ಚಿನ್ನದ ರೇಖೆ. ಈ ವಿಶಿಷ್ಟ ಲಕ್ಷಣವನ್ನು ವೀಕ್ಷಿಸಲು ದೂರದೂರದ ಜನರು ಭೇಟಿ ನೀಡುತ್ತಾರೆ. ಜಾರ್ಖಂಡ್ ಜೊತೆಗೆ ಈ ನದಿಯು ಉತ್ತರಾಖಂಡ, ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕೆಲವು ಭಾಗಗಳನ್ನು ಸಹ ಹಾದು ಹೋಗುತ್ತದೆ. ಈ ನದಿಯ ವಿಶೇಷ ಏನೆಂದರೆ ಅದು ನದಿಯಲ್ಲಿ ಚಿನ್ನ ಸಿಗುವುದು ಮಾತ್ರವಲ್ಲ. ಈ ನದಿಯ ಹಲವು ವಿಶೇಷಗಳಿವೆ.
ಸುವರ್ಣರೇಖಾ ನದಿಯು ಖನಿಜ ಸಮೃದ್ಧಿ ಕಲ್ಲುಗಳಿಂದ ಕೂಡಿದೆ. ಏಕೆಂದರೆ ಈ ನದಿ ಹರಿಯುವ ಸ್ಥಳವು ಬಹಳ ಖನಿಜಾಂಶ ಪ್ರದೇಶದಲ್ಲಿದೆ ಎಂದು ವಿಜ್ಞಾನಿಗಳು ಸಹ ಹೇಳಿದ್ದಾರೆ. ಈ ಖನಿಜ ತುಂಬಿದ ಬಂಡೆಗಳು ನದಿಯ ಸೆಳೆತಕ್ಕೆ ಸಿಲುಕಿದ ಬಳಿಕ ಸಣ್ಣಕಣಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದು ನದಿಯಲ್ಲಿ ಹರಿಯುತ್ತದೆ. ಇದು ಸಂಪೂರ್ಣ ನೈಸರ್ಗಿಕ ವಿಧಾನವಾಗಿದ್ದರೂ ಇದರ ಹೊಂದೆ ಪುರಾತನ ಕಥೆ ಸಹ ಇದೆ.
ಮಹಾಭಾರತ ಅವಧಿಯಲ್ಲಿ ಪಾಂಡವರು ಕಾಡಿನಲ್ಲಿ ವಾಸಿಸುತ್ತಿದ್ದಾಗ ಈ ಪ್ರದೇಶಕ್ಕೆ ಭೇಟಿ ನೀಡಿದರು. ಒಂದು ದಿನ ಪಾಂಡವರ ತಾಯಿ ಕುಂತಿಗೆ ಬಾಯಾರಿಕೆಯಾಗಿತ್ತು. ಆಕೆ ನೀರಿಗಾಗಿ ಇಡಿ ಕಾಡಿನಲ್ಲಿ ಹುಡುಕಾಡಿದ್ದಳಂತೆ ಆದರೆ ಆಕೆಗೆ ನೀರು ಸಿಗದೆ ಪರದಾಡಿದಳು. ಹೀಗಾಗಿ ಆಕೆ ಮಕ್ಕಳ ಕರೆದು ಎಲ್ಲಿಂದಾದರು ನೀರು ತರುವಂತೆ ಹೇಳಿದಳು, ಆದರೆ ನೀರು ಹುಡುಕಿ ಹೊರಟ ಮಕ್ಕಳು ಬರಿಗೈಯಲ್ಲಿ ವಾಪಾಸು ಬಂದರು.
ಆದರೆ ನೀರು ಬೇಕೆಂದು ಹಠ ಹಿಡಿದು ಕುಳಿತಿದ್ದ ಕುಂತಿ ಅರ್ಜುನನಿಗೆ ನೀರಿನ ವ್ಯವಸ್ಥೆ ಮಾಡಲು ಹೇಳಿದಳು. ಅರ್ಜುನ ತನ್ನ ಬಿಲ್ಲುಗಾರಿಗೆಯ ತಂತ್ರಗಾರಿಯಂತೆ ನೆಲಕ್ಕೆ ಬಾಣ ಹೊಡೆದನಂತೆ, ಇದರಿಂದ ಸುವರ್ಣರೇಖಾ ನದಿ ಹುಟ್ಟಿತು ಎಂದು ಹೇಳಲಾಗಿದೆ. ನೀರು ಭೂಮಿ ಒಳಗಿಂದ ಹರಿಯಲು ಆರಂಭಿಸಿದಾಗ ಚಿನ್ನದ ಕಣಗಳು ಅದರೊಂದಿಗೆ ಬೆರೆತುನೀರು ಶುದ್ಧವಾಯಿತು ಈ ನೀರನ್ನು ಕುಂತಿ ಬಳಸಿದಳು ಎಂದು ಹೇಳಲಾಗಿದೆ. ಅಂದಿನಿಂದ ಇಂದಿನ ವರೆಗೂ ಇದು ಚಿನ್ನದ ನದಿಯಾಗಿ ಪ್ರಸಿದ್ಧಿ ಪಡೆದಿದೆ.



Click it and Unblock the Notifications











