Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ನಾನು ಸತ್ತಿಲ್ಲ, ಬದುಕಿದ್ದೇನೆ ಎಂದು ಸರ್ಕಾರಕ್ಕೆ ಸಾಬೀತು ಮಾಡಲು ಕ್ರಿಮಿನಲ್ ಕೃತ್ಯ ಮಾಡಿದ ವ್ಯಕ್ತಿಯ ಕತೆ
ಸರ್ಕಾರದ ಕಡೆಯಿಂದ ಆದ ತಪ್ಪಿಗೆ ಆದ ಕ್ರಿಮಿನಲ್ ಆಗಿದ್ದಾನೆ, ಅದರಲ್ಲಿಯೂ ತಾನು ಬದುಕಿದ್ದೇನೆ ಎಂಬುವುದನ್ನು ಸಾಬೀತು ಮಾಡಲು ಆತ ಕ್ರಿಮಿನಲ್ ಆಗಬೆಕಾಯಿತು, ಕೇಳಿದಾಗ ಎಷ್ಟೊಂದು ವಿಚಿತ್ರ ಎಂದನಿಸುವುದು ಅಲ್ವಾ? ಆದರೆ ಇದು ನಿಜವಾಗಿ ನಡೆದ ಘಟನೆ. ಏನಿದು ಪ್ರಕರಣ, ಅಷ್ಟಕ್ಕೂ ಆತನಿಗೆ ತಾನು ಬದುಕಿದ್ದೇನೆ ಎಂದು ತೋರಿಸಬೇಕಾದ ಅನಿವಾರ್ಯ ಏಕಾಯ್ತು , ಏನಿದು ಘಟನೆ ನೋಡೋಣ ಬನ್ನಿ:

ಈತನ ಹೆಸರು ಬಾಬೂರಾಮ್ ಬಿಹಿಲ್, ರಾಜಾಸ್ಥಾನದ ಬಲ್ಹೋತ್ರ ಜಿಲ್ಲೆಯವನು. ಈತ ಬದುಕಿರುವಾಗಲೇ ಆತ ಸತ್ತಿದ್ದಾನೆ ಎಂದು ಡೆತ್ ಸರ್ಟಿಫಿಕೇಟ್ ನೀಡಲಾಯ್ತು, ಆದರೆ ಆತ ಇಲ್ಲ ನಾನು ಬದುಕಿದ್ದೇನೆ ನಿಮ್ಮಿಂದ ಆದ ತಪ್ಪು ಸರಿಪಡಿಸಿ ಎಂದು ಅಧಿಕಾರಿಗಳಿಗೆ ಹೇಳಿದರೆ ಯಾರೂ ತಮ್ಮ ತಪ್ಪನ್ನು ಸರಿಪಡಿಸಲು ಮನಸ್ಸು ಮಾಡದೆ ಬೇಜಾವ್ದಾರಿಯಿಂದ ನಡೆದುಕೊಳ್ಳುತ್ತಾರೆ. ಆತ 70 ವರ್ಷದ ಬಡ ಮುದುಕ, ನಾನು ಬದುಕಿರುವಾಗಲೇ ಸತ್ತಿದೆ ಎಂದು ಸರ್ಟಿಫಿಕೇಟ್ ಮಾಡಿ ನನ್ನ ಆಸ್ತಿ ಹೊಡೆಯಲು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆ ಬಡಪಾಯಿಗೆ ಆತಂಕ ಉಂಟಾಗುತ್ತದೆ.
ನಾನು ಬದುಕಿದ್ದೇನೆ ಎಂದು ಸಾಬೀತು ಮಾಡಬೇಕು, ಆದರೆ ಹೇಗೆ ... ಹೇಗೆ? ಎಂದು ಚಿಂತೆ ಮಾಡಲಾರಂಭಿಸುತ್ತಾನೆ. ಹೇಗಾದರು ಸರಿ ಸರ್ಕಾರದ ಗಮನ ನನ್ನ ಕಡೆಗೆ ಸೆಳೆಯಬೇಕೆಂದು ಯೋಚಿಸುತ್ತಿದ್ದಾಗ ಆತ ಒಂದು ಆಲೋಚನೆ ಮಾಡುತ್ತಾನೆ, ಅದು ಮಾತ್ರ ಕಾನೂನು ಬಾಹಿರ ದಾರಿಯಾಗಿರುತ್ತದೆ.
ಜುಲೈ 19ಕ್ಕೆ ಒಂದು ಚಾಕು ಹಾಗೂ ಪೆಟ್ರೋಲ್ ಬಾಟಲಿಗೆ ತುಂಬಿ ಅಲ್ಲಿಯ ಶಾಲೆಗೆ ಹೋಗುತ್ತಾನೆ, ಇಬ್ಬರು ಟೀಚರ್ಗಳಿಗೆ ಗಾಯ ಮಾಡುತ್ತಾನೆ, ಅಲ್ಲಿದ್ದ ಪೋಷಕರಿಗೆ ಗಾಯ ಮಾಡುತ್ತಾನೆ, ಆವಾಗ ಅಲ್ಲಿಗೆ ಬಂದ ಪೊಲೀಸರು ಆತನನ್ನು ಅರೆಸ್ಟ್ ಮಾಡುತ್ತಾರೆ. ನಂತರ ಏಕೆ ಈ ಕೃತ್ಯ ಮಾಡಿದೆ ಎಂದು ಕೇಳಿದಾಗ ಆತ ಹೇಳಿದ ಉತ್ತರ ಕೇಳಿ ಪೊಲೀಸರು ತಬ್ಬಿಬ್ಬಾಗುತ್ತಾರೆ.
ನಾನು ಬದುಕಿದ್ದೇನೆ ಎಂದು ತೋರಿಸಲು ಹೀಗೆ ಮಾಡಿದೆ ಎಂದು ಹೇಳುತ್ತಾನೆ
ಆತ ಪೊಲೀಸರಿಗೆ ನಾನು ಬದುಕಿದ್ದೇನೆ ಎಂದು ಸರ್ಕಾರಕ್ಕೆ ಸಾಬೀತು ಮಾಡಲು ಹೀಗೆ ಮಾಡಿದೆ ಎಂದು ಹೇಳಿದ್ದಾನೆ, ಈತನ ಪರಿಸ್ಥಿತಿಗೆ ಯಾರನ್ನು ದೂರಬೇಕು, ವ್ಯವಸ್ಥೆಯನ್ನಾ ಅಥವಾ ಆತನನ್ನಾ? ಈತ ಮಾಡಿದ ತಪ್ಪಿನ ಬಗ್ಗೆ ಸರಿಯೋ? ತಪ್ಪೋ ಎಂಬ ಪ್ರಶ್ನೆ ಮಾಡುವಂತಿದೆ ಈತ ಮಾಡಿದ ಕ್ರೈಮ್.
ಈತನಿಗೆ ತಾನು ಬದುಕಿರುವುದು ಸಾಬೀತು ಪಡಿಸುವುದು ಹೇಗೆ ಎಂಬುವುದೇ ದೊಡ್ಡ ಸಮಸ್ಯೆಯಾಗಿತ್ತು?
ಈತನಿಗೆ ತಾನು ಬದುಕಿದ್ದೇನೆ ಎಂದು ಸಾಬೀತು ಮಾಡುವುದೇ ಸಮಸ್ಯೆಯಾಗಿತ್ತು, ಅಯ್ಯೋ ಏಕಪ್ಪಾ ಡೆತ್ ಸರ್ಟಿಫಿಕೇಟ್ ನೀಡಿದ್ದೀರಿ, ನಾನು ಬದುಕಿದ್ದೇನೆ ಎಂದು ಹೇಳಿದರೂ ಯಾರೂ ಕಿವಿಗೆ ಹಾಕಿಕೊಳ್ಳುತ್ತಿಲ್ಲ, ಆವಾಗ ಪೊಲೀಸರು ಅರೆಸ್ಟ್ ಮಾಡಿದರೆ ನನ್ನ ಹೆಸರಿನಲ್ಲಿ ಕೇಸ್ ದಾಖಲಾಗುತ್ತದೆ, ಆವಾಗ ಅದೇ ಸರ್ಕಾರದ ದಾಖಲೆಯಲ್ಲಿ ನಾನು ಬದುಕಿರುವುದು ದಾಖಲಾಗುತ್ತೆ ಅಲ್ವಾ ಅದೇ ಸಾಕು ಎಂದು ಮನಸ್ಸಿಗೆ ಬಂದಿದ್ದೇ ಸಮೀಪದ ಶಾಲೆಯತ್ತ ನುಗಿದ್ದಾನೆ. ಆತನನ್ನು ಅರೆಸ್ಟ್ ಮಾಡಿರುವ ಪೊಲೀಸರು ಈಗ ಆತನನ್ನು ಕೋರ್ಟ್ ಮುಂದೆ ಹಾಜರು ಪಡಿಸಿದಾಗ ಅವನು ತನ್ನ ಗೋಳು ಹೆಳಿಕೊಂಡಿದ್ದಾನೆ.
ತಾನು ಬದುಕಿರುವುದು ಸಾಬೀತು ಪಡಿಸಲು ಬೇರೆಯವರನ್ನು ಸಾಯಿಸಲು ನೋಡಿದ್ದು ತಪ್ಪು
ಈತ ಬೇರೆಯವರಿಗೆ ತೊಂದರೆ ಮಾಡಿದಿರುವ ಮಾರ್ಗ ಹುಡುಕ ಬಹುದಿತ್ತು, ಆದರೆ ತಾನು ಬದುಕಿದ್ದೇನೆ ಎಂದು ಸಾಬೀತು ಮಾಡಲು ಬೇರೆಯವರಿಗೆ ತೊಂದರೆ ಮಾಡಿದ್ದಾನೆ.
ಕಳೆದ ವರ್ಷ ನವೆಂಬರ್ನಲ್ಲಿ ನಾನು ಬದುಕಿದ್ದೇನೆ ಎಂದು ಬೋರ್ಡ್ ಹಿಡಿದು ಓಡಾಡಿದ್ದ
ಈತ ಸತ್ತಿದ್ದಾನೆ ಎಂದು ಡೆತ್ ಸರ್ಟಿಫಿಕೇಟ್ ಬಂದಾಗ ಇಲ್ಲಾ ಬದುಕಿದ್ದೇನೆ ಎಂದು ಬೋರ್ಡ್ ಹಿಡಿದು ಓಡಾಡಿದ್ದ, ಆದರೂ ಆತನ ಕಡೆಗೆ ಗಮನ ನೀಡಿರಲಿಲ್ಲ, ಆವಾಗ ಅಧಿಕಾರಿಗಳು ಎಚ್ಚೆತ್ತುಕೊಂಡು ತಪ್ಪು ಸರಿಪಡಿಸಿದ್ದರೆ ಆತನಿಂದ ಕ್ರೈಮ್ ನೀಡುತ್ತಿರಲಿಲ್ಲ, ಈಗ ಆತನ ಅಪರಾಧಕ್ಕೆ ಅಧಿಕಾರಿಗಳೂ ಕಾರಣ, ಆತನಿಗೆ ಮಾತ್ರ ಶಿಕ್ಷೆ ಆದರೆ ಸಾಕೇ? ಆತನಿಗೆ ಡೆತ್ ಸರ್ಟಿಫಿಕೇಟ್ ನೀಡಿರುವ ಅಧಿಕಾರಿಗಳೇ ಶಿಕ್ಷೆ ಆಗಬೇಕಲ್ಲವೇ?



Click it and Unblock the Notifications