Latest Updates
-
ಹೊಸ ಜೀವನ ಆರಂಭಿಸುವ ಮುನ್ನ ಎಚ್ಚರ: ವಿಚ್ಛೇದನ ಮತ್ತು ಕಾನೂನು ಹಕ್ಕುಗಳ ಬಗ್ಗೆ ಹೈಕೋರ್ಟ್ ಹೇಳಿದ್ದೇನು? -
ಬಿರುಗಾಳಿ ಮತ್ತು ಬಿಸಿಲ ಬೇಗೆ: ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ನಿಮ್ಮ ಜೀವ ಉಳಿಸುವ ಸರಳ ಮನೆಮದ್ದುಗಳಿವು! -
ಬಿಸಿಲಿನ ಬೇಗೆಗೆ ತತ್ತರಿಸಿದ್ದೀರಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ಕೂಲಿಂಗ್ ಹ್ಯಾಕ್ಸ್ ಮಿಸ್ ಮಾಡ್ಬೇಡಿ! -
ಬದಲಾಗುತ್ತಿರುವ ಹವಾಮಾನ: ನಿಮ್ಮ ಫಿಟ್ನೆಸ್ ದಿನಚರಿಯನ್ನು ಬದಲಾಯಿಸದಿದ್ದರೆ ಕಾದಿದೆ ಅಪಾಯ! -
ವಾಟ್ಸಾಪ್ನಲ್ಲಿ ಪ್ರೀತಿಯ ಬಲೆ: ನಿಮ್ಮ ಖಾತೆ ಖಾಲಿಯಾಗುವ ಮುನ್ನ ಈ ಎಚ್ಚರಿಕೆ ವಹಿಸಿ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಬಿರುಗಾಳಿ ಅಬ್ಬರ: ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಬೇಸಿಗೆಯ ಧಗೆಗೆ ಸುಸ್ತಾಗಿದ್ದೀರಾ? ಈ ಸಾಂಪ್ರದಾಯಿಕ ಆಹಾರಗಳಿದ್ದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಅಂತರಾಷ್ಟ್ರೀಯ ನೃತ್ಯ ದಿನ: ಸೋಶಿಯಲ್ ಮೀಡಿಯಾದಲ್ಲಿ ಡ್ಯಾನ್ಸ್ ಅಬ್ಬರ, ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಈ ತಪ್ಪುಗಳನ್ನು ಮಾಡಬೇಡಿ!
ಗುರು ಚಂಡಾಲ ಯೋಗ: ಪ್ರತಿಯೊಂದು ರಾಶಿಯ ಮೇಲೆ ಯಾವ ಪ್ರಭಾವ ಬೀರಿದೆ ನೋಡಿ
ಗುರು ಮತ್ತು ಸಂಯೋಗದಿಂದಾಗಿ ಚಂಡಾಲ ಯೋಗ ಏರ್ಪಡುವುದು. ಈ ಯೋಗ ಒಳ್ಳೆಯ ಪ್ರಭಾವ ಬೀರುವುದಿಲ್ಲ, ಈ ಚಂಡಾಲ ಯೋಗದಿಂದಾಗಿ ಗುರುವಿಗೆ ತನ್ನ ಶುಭ ಪ್ರಭಾವ ಸಂಪೂರ್ಣವಾಗಿ ಬೀರಲು ಸಾಧ್ಯವಾಗುವುದಿಲ್ಲ ಎಂದು ವೈದಿಕ ಶಾಸ್ತ್ರ ಹೇಳುತ್ತದೆ.
ಗುರು ಮೇಷ ರಾಶಿಗೆ ಪ್ರವೇಶಿಸಿದಾಗ ಗುರು ಚಂಡಾಲ ಯೋಗ ಏರ್ಪಟ್ಟರೂ ಇದರ ಪ್ರಭಾವ 12 ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಇದರ ಪ್ರಭಾವ 7 ತಿಂಗಳವರೆಗೆ ಇರಲಿದೆ. ಗುರು ಚಂಡಾಲ ಯೋಗ 12 ರಾಶಗಳಿಗೆ ಹೇಗಿರಲಿದೆ ಎಂದು ನೋಡೋಣ:

ಮೇಷ ರಾಶಿ: ಈ ಅವಧಿಯಲ್ಲಿ ಮೇಷ ರಾಶಿಯವರು ಎಚ್ಚರವಹಿಸಬೇಕು. ಆರೋಗ್ಯ ಸಮಸ್ಯೆಗಳು ಉಂಟಾಗುವುದು, ಅಲ್ಲದೆ ಸಾಮಾಜಿಕ ಸ್ಥಾನಮಾನದ ಮೇಲೆ ಕೂಡ ಪ್ರಭಾವ ಬೀರಲಿದೆ.
ವೃಷಭ ರಾಶಿ: ವೃಷಭ ರಾಶಿಯವರ ಆರ್ಥಿಕ ಸ್ಥಿತಿಯ ಮೇಲೆ ಪ್ರಭಾವ ಬೀರಲಿದೆ, ಈ ಅವಧಿಯಲ್ಲಿ ಆರ್ಥಿಕ ಸಮಸ್ಯೆ ಎದುರಾಗಬಹುದು ಅಲ್ಲದೆ ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಕುಟುಂಬ ಜೀವನದಲ್ಲೂ ಏರಳಿತಗಳು ಇರಲಿದೆ.
ಮಿಥುನ ರಾಶಿ: ಗುರು ಚಂಡಾಲ ಯೋಗದಿಂದಾಗಿ ಸಹೋದರ ಸಂಬಂಧದಲ್ಲಿ ಸಮಸ್ಯೆ ಉಂಟಾಗಬಹುದು. ಉದ್ಯಮ ಅಥವಾ ರಾಜಕೀಯದಲ್ಲಿ ಇರುವವರು ಈ ಅವಧಿಯಲ್ಲಿ ಹಲವಾರು ಸವಾಲುಗಳನ್ನು ಎದುರಿಸಬಹುದು.
ಕರ್ಕ ರಾಶಿ: ಕರ್ಕ ರಾಶಿಯವರಿಗೆ ಈ ಅವಧಿಯಲ್ಲಿ ಆರ್ಥಿಕ ತೊಂದರೆ ಉಂಟಾಗುವುದು, ಅಲ್ಲದೆ ಈ ಸಮಯದಲ್ಲಿ ನಿಮ್ಮ ಮಾತಿನ ಮೇಲೆ ಕೂಡ ನಿಗಾವಹಿಸುವಂತೆ ಸಲಹೆ ನೀಡಲಾಗಿದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ಸಮಸ್ಯೆಗಳು ಎದುರಾಗುವುದು, ಅಲ್ಲದೆ ಕೌಟುಂಬಿಕ ಜೀವನದಲ್ಲಿ ಕೆಲ ಸಮಸ್ಯೆಗಳು ಉಂಟಾಗುವುದು, ಇದರಿಂದಾಗಿ ನಿಮ್ಮ ಮಾನಸಿಕ ಒತ್ತಡ ಮತ್ತಷ್ಟು ಹೆಚ್ಚಾಗುವುದು.
ಕನ್ಯಾ ರಾಶಿ: ಈ ಅವಧಿಯಲ್ಲಿ ಪ್ರಯಾಣ ಮಾಡುವಾಗ ತುಂಬಾನೇ ಜಾಗ್ರತೆವಹಿಸಿ. ಕೌಟುಂಬಿಕ ಜೀವನದಲ್ಲೂ ಕೆಲ ಸಮಸ್ಯೆಗಳು ಉದ್ಭವವಾಗುವುದು, ಮನೆಯಲ್ಲಿ ಅನಗ್ಯತ ಚರ್ಚೆಯಿಂದ ದೂರವಿರುವುದು ಒಳ್ಳೆಯದು.
ತುಲಾ ರಾಶಿ: ಈ ಅವಧಿಯಲ್ಲಿ ಕಾನೂನು ಬಾಹಿರ ಚಟುವಟಿಕೆ ಮಾಡಿದರೆ ಅದರಿಂದ ತುಂಬಾ ನಷ್ಟ ಅನುಭವಿಸಬೇಕಾಗುವುದು, ಅಡ್ಡ ಮಾರ್ಗದಲ್ಲಿ ಹೋಗಲು ಯತ್ನಿಸಬೇಡಿ. ಅಲ್ಲದೆ ಈ ಅವಧಿಯಲ್ಲಿ ನಿಮ್ಮ ಸಹೋದರ ಜೊತೆ ಮನಸ್ತಾಪ ಉಂಟಾಗಬಹುದು.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರ ವೃತ್ತಿ ಜೀವನದ ಮೇಲೆ ಪ್ರಭಾವ ಬೀರಲಿದೆ. ಸ್ವಂತ ಉದ್ಯೋಗ ಮಾಡುವವರು ಅಥವಾ ಉದ್ಯಮಿಗಳು ಆರ್ಥಿಕ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ತುಂಬಾನೇ ನಷ್ಟ ಉಂಟಾಗಬಹುದು.
ಧನು ರಾಶಿ: ಈ ಅವಧಿಯಲ್ಲಿ ಅದೃಷ್ಟದ ಬೆಂಬಲ ಕಡಿಮೆ ಇರುವುದರಿಂದ ಯಾವುದೇ ಹೊಸ ಹೂಡಿಕೆ ಮಾಡಲು ಹೋಗಬೇಡಿ. ಅಲ್ಲದೆ ಕೌಟುಂಬಿಕ ಜೀವನದಲ್ಲಿ ಏರಳಿತಗಳಿರುವುದರಿಂದ ಮಾನಸಿಕ ಒತ್ತಡ ಅಧಿಕವಿರಲಿದೆ.
ಮಕರ ರಾಶಿ: ಈ ಅವಧಿಯಲ್ಲಿ ನೀವು ನಿಮ್ಮ ಶತ್ರುಗಳ ಬಗ್ಗೆ ತುಂಬಾ ಎಚ್ಚರದಿಂದಿರಬೇಕು. ಈ ಅವಧಿಯಲ್ಲಿ ನಿಮ್ಮ ಆರೋಗ್ಯದ ಕಡೆ ಗಮನ ನೀಡಿ.
ಕುಂಭ ರಾಶಿ: ಈ ಅವಧಿಯಲ್ಲಿ ಕುಂಭ ರಾಶಿಯವರು ಆರ್ಥಿಕ ಏರಳಿತ ಅನುಭವಿಸುವಿರಿ, ಈ ಅವಧಿಯಲ್ಲಿ ಆದಾಯ ಕಡಿಮೆ ಇರಲಿದೆ, ನೀವು ಖರ್ಚನ್ನು ಮಿತಿಯಲ್ಲಿ ಮಾಡಿ.
ಮೀನ ರಾಶಿ: ಕೋರ್ಟ್ನಲ್ಲಿ ಏನಾದರೂ ಕೇಸ್ ನಡೆಯುತ್ತಿದ್ದರೆ ನೀವು ಬಯಸಿದಂತೆ ತೀರ್ಪು ಬಾರದೇ ಹೋಗಬಹುದು. ಅಲ್ಲದೆ ಈ ಅವಧಿಯಲ್ಲಿ ಪೋಷಕರ ಆರೋಗ್ಯದ ಕಡೆಗೆ ಗಮನ ನೀಡಿ.
* ಪ್ರತಿದಿನ ನಿಮ್ಮ ಹಣೆಗೆ ಕೇಸರಿ ತಿಲಕ ಹಚ್ಚಿ
* ಹಸುವಿಗೆ ಮೇವು ದಾನ ಮಾಡಿ
* ಪ್ರತಿದಿನ ವಿಷ್ಣು ಸಹಸ್ರನಾಮ ಪಠಿಸಿ
* ಮಹಾಮೃತ್ಯುಂಜಯ ಮಂತ್ರ ಪಠಿಸಿ
* 108 ಬಾರಿ ಗಾಯತ್ರಿ ಮಂತ್ರ ಪಠಿಸಿ.



Click it and Unblock the Notifications
