Latest Updates
-
ಅರ್ಧದಷ್ಟು ಭಾರತೀಯರಲ್ಲಿ 6 ಗಂಟೆಗೂ ಕಡಿಮೆ ನಿದ್ರೆ: ಸಮೀಕ್ಷೆಯಲ್ಲಿದೆ ಆತಂಕಕಾರಿ ವಿಚಾರ! -
ವಿವಾಹ ಯೋಗ ಕೂಡುವ ಸಾಧ್ಯತೆ ಇದೆ! ಸಂಗಾತಿಗೆ ಗಿಫ್ಸ್ ನೀಡಬಹುದು -
ಮಹಿಳೆಯರು ಕಾಲುಂಗುರ ಏಕೆ ಧರಿಸಬೇಕು? ಎಷ್ಟು ಸುತ್ತು ನಿಮ್ಗೆ ಯಶಸ್ಸು ತರುತ್ತೆ? ರಹಸ್ಯ ತಿಳಿಯಿರಿ -
March 14 Horoscope: ಪ್ರಯಾಣಗಳ ಮಾಡುವ ದಿನವಾಗಲಿದೆ! -
ಸಿಲಿಂಡರ್ 3 ತಿಂಗಳು ಬರಬೇಕೆ? ಇನ್ಮುಂದೆ ಗ್ಯಾಸ್ ಚಿಂತೆ ಬೇಡ.. LPG ಉಳಿಸಲು ಇಲ್ಲಿದೆ 5 ಸ್ಮಾರ್ಟ್ ಟಿಪ್ಸ್ -
ಅಕ್ಕಿ ಬೇಡ, ಉದ್ದಿನಬೇಳೆ ಬೇಡ.. 15 ನಿಮಿಷದ ಹೆಸರು ಬೇಳೆ-ತರಕಾರಿ ಇಡ್ಲಿ! ಉಳಿದ ಇಡ್ಲಿ ಫ್ರೆಶ್ ಆಗಿಡೋದು ಹೇಗೆ? -
ಗ್ಯಾಸ್ ಇಲ್ವಾ? ಚಿಂತೆ ಬೇಡ.. ಒಲೆ ಹಚ್ಚದೇ ಮಾಡುವ 5 ಆರೋಗ್ಯಕರ ಊಟಗಳಿವು! -
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ?
ಗುರು ಚಂಡಾಲ ಯೋಗ: ಪ್ರತಿಯೊಂದು ರಾಶಿಯ ಮೇಲೆ ಯಾವ ಪ್ರಭಾವ ಬೀರಿದೆ ನೋಡಿ
ಗುರು ಮತ್ತು ಸಂಯೋಗದಿಂದಾಗಿ ಚಂಡಾಲ ಯೋಗ ಏರ್ಪಡುವುದು. ಈ ಯೋಗ ಒಳ್ಳೆಯ ಪ್ರಭಾವ ಬೀರುವುದಿಲ್ಲ, ಈ ಚಂಡಾಲ ಯೋಗದಿಂದಾಗಿ ಗುರುವಿಗೆ ತನ್ನ ಶುಭ ಪ್ರಭಾವ ಸಂಪೂರ್ಣವಾಗಿ ಬೀರಲು ಸಾಧ್ಯವಾಗುವುದಿಲ್ಲ ಎಂದು ವೈದಿಕ ಶಾಸ್ತ್ರ ಹೇಳುತ್ತದೆ.
ಗುರು ಮೇಷ ರಾಶಿಗೆ ಪ್ರವೇಶಿಸಿದಾಗ ಗುರು ಚಂಡಾಲ ಯೋಗ ಏರ್ಪಟ್ಟರೂ ಇದರ ಪ್ರಭಾವ 12 ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಇದರ ಪ್ರಭಾವ 7 ತಿಂಗಳವರೆಗೆ ಇರಲಿದೆ. ಗುರು ಚಂಡಾಲ ಯೋಗ 12 ರಾಶಗಳಿಗೆ ಹೇಗಿರಲಿದೆ ಎಂದು ನೋಡೋಣ:

ಮೇಷ ರಾಶಿ: ಈ ಅವಧಿಯಲ್ಲಿ ಮೇಷ ರಾಶಿಯವರು ಎಚ್ಚರವಹಿಸಬೇಕು. ಆರೋಗ್ಯ ಸಮಸ್ಯೆಗಳು ಉಂಟಾಗುವುದು, ಅಲ್ಲದೆ ಸಾಮಾಜಿಕ ಸ್ಥಾನಮಾನದ ಮೇಲೆ ಕೂಡ ಪ್ರಭಾವ ಬೀರಲಿದೆ.
ವೃಷಭ ರಾಶಿ: ವೃಷಭ ರಾಶಿಯವರ ಆರ್ಥಿಕ ಸ್ಥಿತಿಯ ಮೇಲೆ ಪ್ರಭಾವ ಬೀರಲಿದೆ, ಈ ಅವಧಿಯಲ್ಲಿ ಆರ್ಥಿಕ ಸಮಸ್ಯೆ ಎದುರಾಗಬಹುದು ಅಲ್ಲದೆ ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಕುಟುಂಬ ಜೀವನದಲ್ಲೂ ಏರಳಿತಗಳು ಇರಲಿದೆ.
ಮಿಥುನ ರಾಶಿ: ಗುರು ಚಂಡಾಲ ಯೋಗದಿಂದಾಗಿ ಸಹೋದರ ಸಂಬಂಧದಲ್ಲಿ ಸಮಸ್ಯೆ ಉಂಟಾಗಬಹುದು. ಉದ್ಯಮ ಅಥವಾ ರಾಜಕೀಯದಲ್ಲಿ ಇರುವವರು ಈ ಅವಧಿಯಲ್ಲಿ ಹಲವಾರು ಸವಾಲುಗಳನ್ನು ಎದುರಿಸಬಹುದು.
ಕರ್ಕ ರಾಶಿ: ಕರ್ಕ ರಾಶಿಯವರಿಗೆ ಈ ಅವಧಿಯಲ್ಲಿ ಆರ್ಥಿಕ ತೊಂದರೆ ಉಂಟಾಗುವುದು, ಅಲ್ಲದೆ ಈ ಸಮಯದಲ್ಲಿ ನಿಮ್ಮ ಮಾತಿನ ಮೇಲೆ ಕೂಡ ನಿಗಾವಹಿಸುವಂತೆ ಸಲಹೆ ನೀಡಲಾಗಿದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ಸಮಸ್ಯೆಗಳು ಎದುರಾಗುವುದು, ಅಲ್ಲದೆ ಕೌಟುಂಬಿಕ ಜೀವನದಲ್ಲಿ ಕೆಲ ಸಮಸ್ಯೆಗಳು ಉಂಟಾಗುವುದು, ಇದರಿಂದಾಗಿ ನಿಮ್ಮ ಮಾನಸಿಕ ಒತ್ತಡ ಮತ್ತಷ್ಟು ಹೆಚ್ಚಾಗುವುದು.
ಕನ್ಯಾ ರಾಶಿ: ಈ ಅವಧಿಯಲ್ಲಿ ಪ್ರಯಾಣ ಮಾಡುವಾಗ ತುಂಬಾನೇ ಜಾಗ್ರತೆವಹಿಸಿ. ಕೌಟುಂಬಿಕ ಜೀವನದಲ್ಲೂ ಕೆಲ ಸಮಸ್ಯೆಗಳು ಉದ್ಭವವಾಗುವುದು, ಮನೆಯಲ್ಲಿ ಅನಗ್ಯತ ಚರ್ಚೆಯಿಂದ ದೂರವಿರುವುದು ಒಳ್ಳೆಯದು.
ತುಲಾ ರಾಶಿ: ಈ ಅವಧಿಯಲ್ಲಿ ಕಾನೂನು ಬಾಹಿರ ಚಟುವಟಿಕೆ ಮಾಡಿದರೆ ಅದರಿಂದ ತುಂಬಾ ನಷ್ಟ ಅನುಭವಿಸಬೇಕಾಗುವುದು, ಅಡ್ಡ ಮಾರ್ಗದಲ್ಲಿ ಹೋಗಲು ಯತ್ನಿಸಬೇಡಿ. ಅಲ್ಲದೆ ಈ ಅವಧಿಯಲ್ಲಿ ನಿಮ್ಮ ಸಹೋದರ ಜೊತೆ ಮನಸ್ತಾಪ ಉಂಟಾಗಬಹುದು.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರ ವೃತ್ತಿ ಜೀವನದ ಮೇಲೆ ಪ್ರಭಾವ ಬೀರಲಿದೆ. ಸ್ವಂತ ಉದ್ಯೋಗ ಮಾಡುವವರು ಅಥವಾ ಉದ್ಯಮಿಗಳು ಆರ್ಥಿಕ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ತುಂಬಾನೇ ನಷ್ಟ ಉಂಟಾಗಬಹುದು.
ಧನು ರಾಶಿ: ಈ ಅವಧಿಯಲ್ಲಿ ಅದೃಷ್ಟದ ಬೆಂಬಲ ಕಡಿಮೆ ಇರುವುದರಿಂದ ಯಾವುದೇ ಹೊಸ ಹೂಡಿಕೆ ಮಾಡಲು ಹೋಗಬೇಡಿ. ಅಲ್ಲದೆ ಕೌಟುಂಬಿಕ ಜೀವನದಲ್ಲಿ ಏರಳಿತಗಳಿರುವುದರಿಂದ ಮಾನಸಿಕ ಒತ್ತಡ ಅಧಿಕವಿರಲಿದೆ.
ಮಕರ ರಾಶಿ: ಈ ಅವಧಿಯಲ್ಲಿ ನೀವು ನಿಮ್ಮ ಶತ್ರುಗಳ ಬಗ್ಗೆ ತುಂಬಾ ಎಚ್ಚರದಿಂದಿರಬೇಕು. ಈ ಅವಧಿಯಲ್ಲಿ ನಿಮ್ಮ ಆರೋಗ್ಯದ ಕಡೆ ಗಮನ ನೀಡಿ.
ಕುಂಭ ರಾಶಿ: ಈ ಅವಧಿಯಲ್ಲಿ ಕುಂಭ ರಾಶಿಯವರು ಆರ್ಥಿಕ ಏರಳಿತ ಅನುಭವಿಸುವಿರಿ, ಈ ಅವಧಿಯಲ್ಲಿ ಆದಾಯ ಕಡಿಮೆ ಇರಲಿದೆ, ನೀವು ಖರ್ಚನ್ನು ಮಿತಿಯಲ್ಲಿ ಮಾಡಿ.
ಮೀನ ರಾಶಿ: ಕೋರ್ಟ್ನಲ್ಲಿ ಏನಾದರೂ ಕೇಸ್ ನಡೆಯುತ್ತಿದ್ದರೆ ನೀವು ಬಯಸಿದಂತೆ ತೀರ್ಪು ಬಾರದೇ ಹೋಗಬಹುದು. ಅಲ್ಲದೆ ಈ ಅವಧಿಯಲ್ಲಿ ಪೋಷಕರ ಆರೋಗ್ಯದ ಕಡೆಗೆ ಗಮನ ನೀಡಿ.
* ಪ್ರತಿದಿನ ನಿಮ್ಮ ಹಣೆಗೆ ಕೇಸರಿ ತಿಲಕ ಹಚ್ಚಿ
* ಹಸುವಿಗೆ ಮೇವು ದಾನ ಮಾಡಿ
* ಪ್ರತಿದಿನ ವಿಷ್ಣು ಸಹಸ್ರನಾಮ ಪಠಿಸಿ
* ಮಹಾಮೃತ್ಯುಂಜಯ ಮಂತ್ರ ಪಠಿಸಿ
* 108 ಬಾರಿ ಗಾಯತ್ರಿ ಮಂತ್ರ ಪಠಿಸಿ.



Click it and Unblock the Notifications












