Latest Updates
-
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ಪಾನೀಯ ಮತ್ತು ಆಹಾರವೇ ಸಂಜೀವಿನಿ! -
ಸೀರೆ ಉಡೋದ್ರಲ್ಲಿ ಹೊಸ ಕ್ರಾಂತಿ: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗ್ತಿರೋ 'ದೇಸಿ-ಕೋರ್' ಸೀರೆ ಸ್ಟೈಲ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲೂ ಫಿಟ್ ಆಗಿರಬೇಕೆ? ಮುಂಜಾನೆಯ ಈ ಸಣ್ಣ ಬದಲಾವಣೆ ನಿಮ್ಮ ಆರೋಗ್ಯಕ್ಕೆ ವರದಾನ!
ಗುರು ಚಂಡಾಲ ಯೋಗ: ಪ್ರತಿಯೊಂದು ರಾಶಿಯ ಮೇಲೆ ಯಾವ ಪ್ರಭಾವ ಬೀರಿದೆ ನೋಡಿ
ಗುರು ಮತ್ತು ಸಂಯೋಗದಿಂದಾಗಿ ಚಂಡಾಲ ಯೋಗ ಏರ್ಪಡುವುದು. ಈ ಯೋಗ ಒಳ್ಳೆಯ ಪ್ರಭಾವ ಬೀರುವುದಿಲ್ಲ, ಈ ಚಂಡಾಲ ಯೋಗದಿಂದಾಗಿ ಗುರುವಿಗೆ ತನ್ನ ಶುಭ ಪ್ರಭಾವ ಸಂಪೂರ್ಣವಾಗಿ ಬೀರಲು ಸಾಧ್ಯವಾಗುವುದಿಲ್ಲ ಎಂದು ವೈದಿಕ ಶಾಸ್ತ್ರ ಹೇಳುತ್ತದೆ.
ಗುರು ಮೇಷ ರಾಶಿಗೆ ಪ್ರವೇಶಿಸಿದಾಗ ಗುರು ಚಂಡಾಲ ಯೋಗ ಏರ್ಪಟ್ಟರೂ ಇದರ ಪ್ರಭಾವ 12 ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಇದರ ಪ್ರಭಾವ 7 ತಿಂಗಳವರೆಗೆ ಇರಲಿದೆ. ಗುರು ಚಂಡಾಲ ಯೋಗ 12 ರಾಶಗಳಿಗೆ ಹೇಗಿರಲಿದೆ ಎಂದು ನೋಡೋಣ:

ಮೇಷ ರಾಶಿ: ಈ ಅವಧಿಯಲ್ಲಿ ಮೇಷ ರಾಶಿಯವರು ಎಚ್ಚರವಹಿಸಬೇಕು. ಆರೋಗ್ಯ ಸಮಸ್ಯೆಗಳು ಉಂಟಾಗುವುದು, ಅಲ್ಲದೆ ಸಾಮಾಜಿಕ ಸ್ಥಾನಮಾನದ ಮೇಲೆ ಕೂಡ ಪ್ರಭಾವ ಬೀರಲಿದೆ.
ವೃಷಭ ರಾಶಿ: ವೃಷಭ ರಾಶಿಯವರ ಆರ್ಥಿಕ ಸ್ಥಿತಿಯ ಮೇಲೆ ಪ್ರಭಾವ ಬೀರಲಿದೆ, ಈ ಅವಧಿಯಲ್ಲಿ ಆರ್ಥಿಕ ಸಮಸ್ಯೆ ಎದುರಾಗಬಹುದು ಅಲ್ಲದೆ ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಕುಟುಂಬ ಜೀವನದಲ್ಲೂ ಏರಳಿತಗಳು ಇರಲಿದೆ.
ಮಿಥುನ ರಾಶಿ: ಗುರು ಚಂಡಾಲ ಯೋಗದಿಂದಾಗಿ ಸಹೋದರ ಸಂಬಂಧದಲ್ಲಿ ಸಮಸ್ಯೆ ಉಂಟಾಗಬಹುದು. ಉದ್ಯಮ ಅಥವಾ ರಾಜಕೀಯದಲ್ಲಿ ಇರುವವರು ಈ ಅವಧಿಯಲ್ಲಿ ಹಲವಾರು ಸವಾಲುಗಳನ್ನು ಎದುರಿಸಬಹುದು.
ಕರ್ಕ ರಾಶಿ: ಕರ್ಕ ರಾಶಿಯವರಿಗೆ ಈ ಅವಧಿಯಲ್ಲಿ ಆರ್ಥಿಕ ತೊಂದರೆ ಉಂಟಾಗುವುದು, ಅಲ್ಲದೆ ಈ ಸಮಯದಲ್ಲಿ ನಿಮ್ಮ ಮಾತಿನ ಮೇಲೆ ಕೂಡ ನಿಗಾವಹಿಸುವಂತೆ ಸಲಹೆ ನೀಡಲಾಗಿದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ಸಮಸ್ಯೆಗಳು ಎದುರಾಗುವುದು, ಅಲ್ಲದೆ ಕೌಟುಂಬಿಕ ಜೀವನದಲ್ಲಿ ಕೆಲ ಸಮಸ್ಯೆಗಳು ಉಂಟಾಗುವುದು, ಇದರಿಂದಾಗಿ ನಿಮ್ಮ ಮಾನಸಿಕ ಒತ್ತಡ ಮತ್ತಷ್ಟು ಹೆಚ್ಚಾಗುವುದು.
ಕನ್ಯಾ ರಾಶಿ: ಈ ಅವಧಿಯಲ್ಲಿ ಪ್ರಯಾಣ ಮಾಡುವಾಗ ತುಂಬಾನೇ ಜಾಗ್ರತೆವಹಿಸಿ. ಕೌಟುಂಬಿಕ ಜೀವನದಲ್ಲೂ ಕೆಲ ಸಮಸ್ಯೆಗಳು ಉದ್ಭವವಾಗುವುದು, ಮನೆಯಲ್ಲಿ ಅನಗ್ಯತ ಚರ್ಚೆಯಿಂದ ದೂರವಿರುವುದು ಒಳ್ಳೆಯದು.
ತುಲಾ ರಾಶಿ: ಈ ಅವಧಿಯಲ್ಲಿ ಕಾನೂನು ಬಾಹಿರ ಚಟುವಟಿಕೆ ಮಾಡಿದರೆ ಅದರಿಂದ ತುಂಬಾ ನಷ್ಟ ಅನುಭವಿಸಬೇಕಾಗುವುದು, ಅಡ್ಡ ಮಾರ್ಗದಲ್ಲಿ ಹೋಗಲು ಯತ್ನಿಸಬೇಡಿ. ಅಲ್ಲದೆ ಈ ಅವಧಿಯಲ್ಲಿ ನಿಮ್ಮ ಸಹೋದರ ಜೊತೆ ಮನಸ್ತಾಪ ಉಂಟಾಗಬಹುದು.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರ ವೃತ್ತಿ ಜೀವನದ ಮೇಲೆ ಪ್ರಭಾವ ಬೀರಲಿದೆ. ಸ್ವಂತ ಉದ್ಯೋಗ ಮಾಡುವವರು ಅಥವಾ ಉದ್ಯಮಿಗಳು ಆರ್ಥಿಕ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ತುಂಬಾನೇ ನಷ್ಟ ಉಂಟಾಗಬಹುದು.
ಧನು ರಾಶಿ: ಈ ಅವಧಿಯಲ್ಲಿ ಅದೃಷ್ಟದ ಬೆಂಬಲ ಕಡಿಮೆ ಇರುವುದರಿಂದ ಯಾವುದೇ ಹೊಸ ಹೂಡಿಕೆ ಮಾಡಲು ಹೋಗಬೇಡಿ. ಅಲ್ಲದೆ ಕೌಟುಂಬಿಕ ಜೀವನದಲ್ಲಿ ಏರಳಿತಗಳಿರುವುದರಿಂದ ಮಾನಸಿಕ ಒತ್ತಡ ಅಧಿಕವಿರಲಿದೆ.
ಮಕರ ರಾಶಿ: ಈ ಅವಧಿಯಲ್ಲಿ ನೀವು ನಿಮ್ಮ ಶತ್ರುಗಳ ಬಗ್ಗೆ ತುಂಬಾ ಎಚ್ಚರದಿಂದಿರಬೇಕು. ಈ ಅವಧಿಯಲ್ಲಿ ನಿಮ್ಮ ಆರೋಗ್ಯದ ಕಡೆ ಗಮನ ನೀಡಿ.
ಕುಂಭ ರಾಶಿ: ಈ ಅವಧಿಯಲ್ಲಿ ಕುಂಭ ರಾಶಿಯವರು ಆರ್ಥಿಕ ಏರಳಿತ ಅನುಭವಿಸುವಿರಿ, ಈ ಅವಧಿಯಲ್ಲಿ ಆದಾಯ ಕಡಿಮೆ ಇರಲಿದೆ, ನೀವು ಖರ್ಚನ್ನು ಮಿತಿಯಲ್ಲಿ ಮಾಡಿ.
ಮೀನ ರಾಶಿ: ಕೋರ್ಟ್ನಲ್ಲಿ ಏನಾದರೂ ಕೇಸ್ ನಡೆಯುತ್ತಿದ್ದರೆ ನೀವು ಬಯಸಿದಂತೆ ತೀರ್ಪು ಬಾರದೇ ಹೋಗಬಹುದು. ಅಲ್ಲದೆ ಈ ಅವಧಿಯಲ್ಲಿ ಪೋಷಕರ ಆರೋಗ್ಯದ ಕಡೆಗೆ ಗಮನ ನೀಡಿ.
* ಪ್ರತಿದಿನ ನಿಮ್ಮ ಹಣೆಗೆ ಕೇಸರಿ ತಿಲಕ ಹಚ್ಚಿ
* ಹಸುವಿಗೆ ಮೇವು ದಾನ ಮಾಡಿ
* ಪ್ರತಿದಿನ ವಿಷ್ಣು ಸಹಸ್ರನಾಮ ಪಠಿಸಿ
* ಮಹಾಮೃತ್ಯುಂಜಯ ಮಂತ್ರ ಪಠಿಸಿ
* 108 ಬಾರಿ ಗಾಯತ್ರಿ ಮಂತ್ರ ಪಠಿಸಿ.



Click it and Unblock the Notifications
