Latest Updates
-
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ!
ತುಳಸಿ ಅರ್ಪಿಸಬೇಡಿ ಎಂದ ಗುರುವಾಯುರ್ ದೇವಾಲಯ: ತುಳಸಿ ಇಲ್ಲದೆ ಶ್ರೀ ಕೃಷ್ಣನ ಪೂಜೆಯೇ ಎಂದು ಕೇಳುತ್ತಿರುವ ಭಕ್ತರು
ಗುರುವಾಯುರ್ ಕೇರಳದ ಪ್ರಸಿದ್ಧ ದೇವಾಲಯಗಳಲ್ಲೊಂದು. ಗುರುವಾಯುರ್ ದೇವಾಲಯಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆಯುತ್ತಾರೆ, ಶ್ರೀ ಕೃಷ್ಣನ ದೇವಾಲಯಕ್ಕೆ ಹೋಗುವಾಗ ಶ್ರೀ ಕೃಷ್ಣನಿಗೆ ಚಿನ್ನ, ಆಭರಣ, ಹೂ, ಹಣ್ಣುಗಳನ್ನು ಅರ್ಪಿಸುವುದರಷ್ಟೇ ಶ್ರೇಷ್ಠ ತುಳಸಿ ಅರ್ಪಿಸುವುದು, ಹೀಗಾಗಿಯೇ ಭಕ್ತರು ದೇವಾಲಯಕ್ಕೆ ಬರುವಾಗ ತುಳಸಿಯನ್ನು ಅರ್ಪಿಸುತ್ತಾರೆ. ಆದರೆ ಇದೀಗ ಗುರುವಾಯುರ್ ದೇವಾಸ್ಥಾನ ಆಡಳಿತ ಮಂಡಳಿ ತುಳಸಿಯನ್ನು ತರಬೇಡಿ, ಅದರಲ್ಲಿ ರಾಸಾಯನಿಕವಿರುತ್ತದೆ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ತುಳಸಿ ಬದಲಿಗೆ ಕಮಲದ ಹೂವು ತರುವಂತೆ ಹೇಳಿದೆ. ತುಳಸಿ ಸಿಕ್ಕಿದ್ದಷ್ಟು ಸುಲಭವಾಗಿ ಕಮಲದ ಹೂವು ಸಿಗುವುದೇ? ಅಲ್ಲದೆ ಶ್ರೀ ವಿಷ್ಣುವಿನ ಪೂಜೆಗೆ ತುಳಸಿ ಅರ್ಪಿಸಿದರಷ್ಟೇ ಭಕ್ತರಿಗೆ ತೃಪ್ತಿ, ಆದರೆ ಈಗ ಇಂಥದ್ದೊಂದು ಕಾರಣ ನೀಡಿರುವುದು ಮಾತ್ರ ಅಚ್ಚರಿಗೆ ಕಾರಣವಾಗಿದೆ.
ತುಳಸಿಯಲ್ಲಿ ರಾಸಾಯನಿಕವೇ?
ತುಳಸಿಗೆ ಸಾಮಾನ್ಯವಾಗಿ ಯಾವುದೇ ರಾಸಾಯನಿಕ ಹಾಕುವುದಿಲ್ಲ, ತುಳಸಿಯಲ್ಲಿಯೇ ಅನೇಕ ಔಷಧೀಯ ಗುಣಗಳಿರುವುದರಿಂದ ಇದನ್ನು ಮನೆಮದ್ದಾಗಿ ಬಳಸುತ್ತೇವೆ. ಅಲ್ಲದೆ ಶ್ರೀವಿಷ್ಣು ಹಾಗೂ ಶ್ರೀಕೃಷ್ಣ ಆರಾಧನೆ ಮಾಡುವಾಗ ನೈವೇದ್ಯ ಅರ್ಪಿಸುವಾಗ ತುಳಸಿಯನ್ನು ಬಳಸುತ್ತೇವೆ. ತುಳಸಿ ಹಾಕದ ನೈವೇದ್ಯ ಅದು ನೈವೇದ್ಯವಲ್ಲ ಹಾಗಿರುವಾಗ ಈ ತುಳಸಿಯನ್ನು ತರಬೇಡಿ ಎಂದಿರುವುದು ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬುವುದು ಭಕ್ತರ ಬೇಸರಕ್ಕೆ ಕಾರಣವಾಗಿದೆ.
ಧಾರ್ಮಿಕ ನಂಬಿಕೆಯೇನು?
ಶ್ರೀ ಕೃಷ್ಣನು ಶ್ರೀ ವಿಷ್ಣುವಿನ ಅವತಾರ. ಶ್ರೀ ವಿಷ್ಣುವಿಗೆ ಏನೇ ಅರ್ಪಿಸಿ ತುಳಸಿ ಅರ್ಪಿಸದಿದ್ದರೆ ಆ ಪೂಜೆ ಪರಿಪೂರ್ಣವಾಗುವುದಿಲ್ಲ, ಹಾಗಾಗಿ ಶ್ರೀ ವಿಷ್ಣು ಹಾಗೂ ಶ್ರೀ ಕೃಷ್ಣ ಆರಾಧನೆಯಲ್ಲಿ ತುಳಸಿ ಇರಲೇಬೇಕು. ಶ್ರೀ ಗಣೇಶನಿಗೆ ಗರಿಗೆ, ಶಿವನಿಗೆ ಬಿಲ್ವೆಪತ್ರೆ ಹಾಗೂ ಶ್ರೀ ವಿಷ್ಣುವಿನ ಪೂಜೆಯಲ್ಲಿ ತುಳಸಿ ಇರಲೇಬೇಕಾದ ವಸ್ತುಗಳಾಗಿವೆ.
ಪೌರಾಣಿಕ ಕತೆ
ತುಲಾಭಾರ ಮಾಡುವಾಗ ಒಂದು ತಕ್ಕಡಿಯಲ್ಲಿ ಶ್ರೀಕೃಷ್ಣ ಕೂತಿರುತ್ತಾನೆ, ಮತ್ತೊಂದು ತಕ್ಕಡಿಗೆ ಚಿನ್ನ, ಬೆಳ್ಳಿ, ಧಾನ್ಯಗಳು, ನಾಣ್ಯಗಳು ಹೀಗೆ ಬೆಲೆ ಬಾಳುವ ವಸ್ತಗಳನ್ನು ಹಾಕಲಾಗುವುದು, ಆದರೂ ತಕ್ಕಡಿ ಕೆಳಕ್ಕ ಬರುವುದೇ ಇಲ್ಲ, ಆವಾಗ ರುಕ್ಮಣಿ ತುಳಿಸ ಎಲೆ ತಂದು ಆ ಧಾನ್ಯಗಳ ಮೇಲೆ ಇಟ್ಟಾಗ ತಕ್ಕಡಿ ಕೆಳಕ್ಕೆ ಬರುತ್ತದೆ, ಹೀಗಾಗಿ ಶ್ರೀಕೃಷ್ಣನ ಪೂಜೆಯಲ್ಲಿ ತುಳಸಿ ಇರಲೇಬೇಕು ಎಂಬುವುದು ಧಾರ್ಮಿಕ ನಂಬಿಕೆಯಾಗಿದೆ.
ತುಳಸಿ ವಿವಾಹ ಕತೆ
ಪೌರಾಣಿಕ ಕತೆ ಪ್ರಕಾರ ತುಳಸಿ ಸುಂದರವಾದ ಮಹಿಳೆ, ಈಕೆಯನ್ನು ರಾಕ್ಷಸ ಜಲಾಂಧರ ಮದುವೆಯಾಗಿರುತ್ತಾನೆ, ಜಲಾಂಧರ ತುಂಬಾನೇ ಶಕ್ತಿಶಾಲಿ ಅಲ್ಲದೆ ಶಿವನಿಂದ ತನ್ನ ಪತ್ನಿ ಪತಿವ್ರತೆಯಾಗಿರುವವರೆಗೆ ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಾಗಬಾರದು ಎಂಬ ವರವನ್ನು ಪಡೆದಿರುತ್ತಾರೆ. ತುಳಸಿ ತನ್ನ ಪತಿಯನ್ನು ತುಂಬಾನೇ ಪ್ರೀತಿಸುತ್ತಾರೆ, ಪತಿವ್ರತೆಯಾಗಿರುತ್ತಾಳೆ. ಜಲಾಂಧರ ತಗೆ ವರ ಸಿಕ್ಕಿರುವ ಕಾರಣ ಅಹಂಕಾರದಿಂದ ದೇವತೆಗಳಿಗೆ ಕಷ್ಟಗಳನ್ನು ನೀಡುತ್ತಾ ಅಟ್ಟಹಾಸ ಮೆರೆಯುತ್ತಿರುತ್ತಾನೆ.
ಈತನ ಕಾಟ ಸಹಿಸಲಾರದೆ ದೇವತೆಗಳು ಶ್ರೀವಿಷ್ಣುವಿನ ಮೊರೆ ಹೋಗುತ್ತಾರೆ. ಆವಾಗ ಶ್ರೀವಿಷ್ಣು ಜಲಾಂಧರನ ರೂಪ ತಾಳಿ ತುಳಸಿಯ ಪಾವಿತ್ರ್ಯ ಹಾಳು ಮಾಡುತ್ತಾನೆ, ಇದರಿಂದ ಜಲಾಂಧರನ ಶಕ್ತಿ ಕುಗ್ಗುವುದು, ಅವನನ್ನು ಸಂಹರಿಸಲಾಗುವುದು. ತನಗಾದ ಮೋಸ ತಿಳಿದು ತುಳಸಿ ಶ್ರೀ ವಿಷ್ಣುವನ್ನು ಕಲ್ಲಾಗುವಂತೆ ಶಾಪ ನೀಡುತ್ತಾಳೆ, ಅದುವೇ ಸಾಲಿಗ್ರಾಮ, ಬಳಿಕ ಆಕೆಗೆ ಶ್ರೀ ವಿಷ್ಣುವನ್ನು ಕಲ್ಲು ಮಾಡಿದ್ದಕ್ಕೆ ಪಶ್ಚಾತಾಪವಾಗುತ್ತದೆ, ಶ್ರೀ ವಿಷ್ಣುವನ್ನು ಶಾಪ ಮುಕ್ತಳಾಗಿಸುತ್ತಾಳೆ, ಸಾಲಿಗ್ರಾಮ ರೂಪದಲ್ಲಿದ್ದ ಶ್ರೀ ವಿಷ್ಣು ತುಳಸಿಯನ್ನು ಮದುವೆಯಾಗುತ್ತಾನೆ, ಇಲ್ಲಿಂದ ಶ್ರೀ ವಿಷ್ಣುವಿಗೆ ತುಳಸಿ ತುಂಬಾನೇ ಪ್ರೀತಿ ಪಾತ್ರಳಾಗುತ್ತಾಳೆ. ಶ್ರೀ ವಿಷ್ಣುವಿನ ಪೂಜೆಯಲ್ಲಿ ತುಳಸಿಯನ್ನು ಕಡ್ಡಾಯಯವಾಗಿ ಬಳಸಲಾರಂಭಿಸುತ್ತಾರೆ.



Click it and Unblock the Notifications
