Latest Updates
-
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್!
ಈ 4 ರಾಶಿಯವರನ್ನು ಆಂಜನೇಯ ಯಾವತ್ತೂ ಕೈ ಬಿಡೋದಿಲ್ಲ!
ರಾಮಭಕ್ತ ಆಂಜನೇಯನ ಮಹಿಮೆ ಅಪಾರ. ಆಂಜನೇಯನನ್ನು ನೆನೆದರೆ ಸಾಕು ಬೆಟ್ಟದಂತೆ ಬಂದಂತಹ ಕಷ್ಟಗಳೆಲ್ಲಾ ಮಂಜಿನ ಹಾಗೆ ಕರಗಿ ಹೋಗುತ್ತದೆ. ನಮ್ಮ ಧರ್ಮಗ್ರಂಥಗಳಲ್ಲಿ ಉಲ್ಲೇಖವಾಗಿರುವಂತೆ ಯಾರು ನಿತ್ಯ ಹನುಮಂತನನ್ನು ಆರಾಧನೆ ಮಾಡುತ್ತಾರೆ ಅವರ ಜೀವನದಲ್ಲಿ ಯಾವತ್ತೂ ಸುಖ, ಶಾಂತಿ ತುಂಬಿರುತ್ತಂತೆ. ಅದ್ರಲ್ಲಿ ಆ ನಾಲ್ಕು ರಾಶಿಯವರ ಮೇಲೆ ಆಂಜನೇಯನ ಆಶೀರ್ವಾದ ಸದಾ ಇರುತ್ತಂತೆ. ಹಾಗಾದ್ರೆ ಆ ನಾಲ್ಕು ರಾಶಿಯವರು ಯಾರು ಅನ್ನೋದನ್ನು ತಿಳಿಯೋಣ.
ಮೇಷ ರಾಶಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮೇಷ ರಾಶಿಯ ಅಧಿಪತಿ ಮಂಗಳ. ಅಷ್ಟೇ ಅಲ್ಲದೇ ಮೇಷರಾಶಿಯು ಆಂಜನೇಯನಿಗೆ ಪ್ರಿಯವಾದ ರಾಶಿಗಳಲ್ಲಿ ಒಂದಾಗಿದೆ. ಹೀಗಾಗಿ ಮೇಷ ರಾಶಿಯವರು ಮಂಗಳವಾರದ ದಿನ ಆಂಜನೇಯನನ್ನು ಭಕ್ತಿಯಿಂದ ಪೂಜಿಸಿದರೆ ಅವರ ಸಂಕಷ್ಟಗೆಳೆಲ್ಲಾ ಪರಿಹಾರವಾಗುತ್ತೆ ಅನ್ನೋ ನಂಬಿಕೆಯಿದೆ.

ಸಿಂಹ ರಾಶಿ
ಸಿಂಹ ರಾಶಿಯ ಅಧಿಪತಿ ಸೂರ್ಯ. ಜೊತೆಗೆ ಸೂರ್ಯ ದೇವನು ಆಂಜನೇಯನ ಗುರುವಾಗಿದ್ದಾನೆ. ಹೀಗಾಗಿ ಸಿಂಹ ರಾಶಿಯೂ ಕೂಡ ಆಂಜನೇಯನಿಗೆ ಪ್ರಿಯವಾದ ಗ್ರಹವಾಗಿದೆ. ನಂಬಿಕೆಗಳ ಪ್ರಕಾರ ಸಿಂಹ ರಾಶಿಯವರು ಹನುಮಂತನನ್ನು ಆರಾಧನೆ ಮಾಡಿದರೆ ಸಂಕಷ್ಟಗಳೆಲ್ಲಾ ದೂರವಾಗಿ ಖುಷಿ ಹಾಗೂ ಸಮೃದ್ಧಿ ತುಂಬಿರುತ್ತಂತೆ.
ವೃಶ್ಚಿಕ ರಾಶಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವೃಶ್ಚಿಕ ರಾಶಿಯ ಅಧಿಪತಿ ಮಂಗಳ. ಹೀಗಾಗಿ ವೃಶ್ಚಿಕ ರಾಶಿಯವರ ಮೇಲೆ ಹನುಮಂತನ ಆಶೀರ್ವಾದ ಸದಾ ಇರುತ್ತಂತೆ. ನಂಬಿಕೆಗಳ ಪ್ರಕಾರ ವೃಶ್ಚಿಕ ರಾಶಿಯವರು ಮಂಗಳವಾರದ ದಿನ ಹನುಮಂತನನ್ನು ಪೂಜೆ ಮಾಡೋದ್ರಿಂದ ಆರ್ಥಿಕ ಸಮಸ್ಯೆಗಳೆಲ್ಲಾ ಬಗೆ ಹರಿಯುತ್ತಂತೆ ಜೊತೆಗೆ ಅವರ ಸಾಮರ್ಥ್ಯ ಹಾಗೂ ಬುದ್ಧಿಶಕ್ತಿ ಹೆಚ್ಚಾಗುತ್ತಂತೆ.
ಕುಂಭ ರಾಶಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕುಂಭ ರಾಶಿಯೂ ಕೂಡ ಆಂಜನೇಯನಿಗೆ ಪ್ರಿಯವಾದ ರಾಶಿಯಾಗಿದೆ. ಶನಿದೇವನು ಕುಂಭ ರಾಶಿಯ ಅಧಿಪತಿಯಾಗಿದ್ದಾನೆ. ನಂಬಿಕೆಗಳ ಪ್ರಕಾರ ಕುಂಭ ರಾಶಿಯವರು ಆಂಜನೇಯನನ್ನೂ ಭಕ್ತಿಯಿಂದ ಪೂಜೆ ಮಾಡಿದ್ರೆ ಅವರ ಮೇಲೆ ಸದಾ ಆಂಜನೇಯನ ಅನುಗ್ರಹ ಇದ್ದೇ ಇರುತ್ತಂತೆ. ಹೀಗಾಗಿ ಶನಿವಾರದ ದಿನ ಆಂಜನೇಯನ್ನು ಪೂಜೆ ಮಾಡೋದ್ರಿಂದ ಎಲ್ಲಾ ಸಮಸ್ಯೆಗಳು ದೂರವಾಗುತ್ತಂತೆ.
ಆಂಜನೇಯನನ್ನು ಒಲಿಸಿಕೊಳ್ಳಲು ಈ ಮಂತ್ರಗಳನ್ನು ನಿತ್ಯ ಪಠಿಸಿ :
ಓಂ ಹ್ರಾನ್ ಹ್ರೀಂ ಹ್ರಾನ್ ಹ್ರಾನ್ ಹ್ರಾನ್ ಹ್ರಃ ॥ ಹಾಂ ಹನುಮತೇ ರುದ್ರಾತ್ಮಕಾಯ ಹೂಂ ಫಟ್ । ಓಂ ಹನುಮಂತಾಯ ನಮಃ ।
ಓಂ ನಮೋ ಹನುಮತೇ ರುದ್ರಾವತಾರಾಯ ಸರ್ವಶತ್ರುಸಹರಣಾಯ ಹರಾಯ ಸರ್ವವಶೀಕರಣಾಯ ರಾಮದೂತಾಯ ಸ್ವಾಹಾ ।
ಓಂ ಹನುಮಂತೇ ನಮಃ
ಓಂ ಹನುಮತೇ ರುದ್ರಾತ್ಮಕಾಯ ಹೂಂ ಫಟ್ ।
ಮಹಾಬಲಯ ವೀರೈ ಚಿರಂಜೀವಿನ್ ಉದ್ದತೇ. ಹರಿಣೇ ವಜ್ರ ದೇಹೇ ಚೋಲಂಘಿತ್ ಮಹಾವ್ಯಯೇ ।
ಓಂ ನಮೋ ಹನುಮತೇ ರುದ್ರಾವತಾರೈ, ಸರ್ವ ಶತ್ರುನಾಶಕ, ಸರ್ವ ರೋಗಗಳ ನಾಶಕ, ಸರ್ವ ಶತ್ರುನಾಶಕ.
ಶತ್ರುನಾಶಕನೇ ಓಂ ನಮೋ ಹನುಮತೇ ರುದ್ರಾವತಾರಾಯ!
ಓಂ ನಮೋ ಹನುಮತೇ ಆವೇಶಯ ಆವೇಶ ಸ್ವಾಹಾ ।
ನಿತ್ಯವು ಆಂಜನೇಯನ ಈ ಮಂತ್ರಗಳ ಜೊತೆಗೆ ಹನುಮಾನ್ ಚಾಲೀಸ ಪಠಿಸೋದ್ರಿಂದ ಸಂಕಷ್ಟಗಳೆಲ್ಲಾ ದೂರವಾಗುತ್ತಂತೆ.



Click it and Unblock the Notifications
