Latest Updates
-
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಈ 4 ರಾಶಿಯವರನ್ನು ಆಂಜನೇಯ ಯಾವತ್ತೂ ಕೈ ಬಿಡೋದಿಲ್ಲ!
ರಾಮಭಕ್ತ ಆಂಜನೇಯನ ಮಹಿಮೆ ಅಪಾರ. ಆಂಜನೇಯನನ್ನು ನೆನೆದರೆ ಸಾಕು ಬೆಟ್ಟದಂತೆ ಬಂದಂತಹ ಕಷ್ಟಗಳೆಲ್ಲಾ ಮಂಜಿನ ಹಾಗೆ ಕರಗಿ ಹೋಗುತ್ತದೆ. ನಮ್ಮ ಧರ್ಮಗ್ರಂಥಗಳಲ್ಲಿ ಉಲ್ಲೇಖವಾಗಿರುವಂತೆ ಯಾರು ನಿತ್ಯ ಹನುಮಂತನನ್ನು ಆರಾಧನೆ ಮಾಡುತ್ತಾರೆ ಅವರ ಜೀವನದಲ್ಲಿ ಯಾವತ್ತೂ ಸುಖ, ಶಾಂತಿ ತುಂಬಿರುತ್ತಂತೆ. ಅದ್ರಲ್ಲಿ ಆ ನಾಲ್ಕು ರಾಶಿಯವರ ಮೇಲೆ ಆಂಜನೇಯನ ಆಶೀರ್ವಾದ ಸದಾ ಇರುತ್ತಂತೆ. ಹಾಗಾದ್ರೆ ಆ ನಾಲ್ಕು ರಾಶಿಯವರು ಯಾರು ಅನ್ನೋದನ್ನು ತಿಳಿಯೋಣ.
ಮೇಷ ರಾಶಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮೇಷ ರಾಶಿಯ ಅಧಿಪತಿ ಮಂಗಳ. ಅಷ್ಟೇ ಅಲ್ಲದೇ ಮೇಷರಾಶಿಯು ಆಂಜನೇಯನಿಗೆ ಪ್ರಿಯವಾದ ರಾಶಿಗಳಲ್ಲಿ ಒಂದಾಗಿದೆ. ಹೀಗಾಗಿ ಮೇಷ ರಾಶಿಯವರು ಮಂಗಳವಾರದ ದಿನ ಆಂಜನೇಯನನ್ನು ಭಕ್ತಿಯಿಂದ ಪೂಜಿಸಿದರೆ ಅವರ ಸಂಕಷ್ಟಗೆಳೆಲ್ಲಾ ಪರಿಹಾರವಾಗುತ್ತೆ ಅನ್ನೋ ನಂಬಿಕೆಯಿದೆ.

ಸಿಂಹ ರಾಶಿ
ಸಿಂಹ ರಾಶಿಯ ಅಧಿಪತಿ ಸೂರ್ಯ. ಜೊತೆಗೆ ಸೂರ್ಯ ದೇವನು ಆಂಜನೇಯನ ಗುರುವಾಗಿದ್ದಾನೆ. ಹೀಗಾಗಿ ಸಿಂಹ ರಾಶಿಯೂ ಕೂಡ ಆಂಜನೇಯನಿಗೆ ಪ್ರಿಯವಾದ ಗ್ರಹವಾಗಿದೆ. ನಂಬಿಕೆಗಳ ಪ್ರಕಾರ ಸಿಂಹ ರಾಶಿಯವರು ಹನುಮಂತನನ್ನು ಆರಾಧನೆ ಮಾಡಿದರೆ ಸಂಕಷ್ಟಗಳೆಲ್ಲಾ ದೂರವಾಗಿ ಖುಷಿ ಹಾಗೂ ಸಮೃದ್ಧಿ ತುಂಬಿರುತ್ತಂತೆ.
ವೃಶ್ಚಿಕ ರಾಶಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವೃಶ್ಚಿಕ ರಾಶಿಯ ಅಧಿಪತಿ ಮಂಗಳ. ಹೀಗಾಗಿ ವೃಶ್ಚಿಕ ರಾಶಿಯವರ ಮೇಲೆ ಹನುಮಂತನ ಆಶೀರ್ವಾದ ಸದಾ ಇರುತ್ತಂತೆ. ನಂಬಿಕೆಗಳ ಪ್ರಕಾರ ವೃಶ್ಚಿಕ ರಾಶಿಯವರು ಮಂಗಳವಾರದ ದಿನ ಹನುಮಂತನನ್ನು ಪೂಜೆ ಮಾಡೋದ್ರಿಂದ ಆರ್ಥಿಕ ಸಮಸ್ಯೆಗಳೆಲ್ಲಾ ಬಗೆ ಹರಿಯುತ್ತಂತೆ ಜೊತೆಗೆ ಅವರ ಸಾಮರ್ಥ್ಯ ಹಾಗೂ ಬುದ್ಧಿಶಕ್ತಿ ಹೆಚ್ಚಾಗುತ್ತಂತೆ.
ಕುಂಭ ರಾಶಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕುಂಭ ರಾಶಿಯೂ ಕೂಡ ಆಂಜನೇಯನಿಗೆ ಪ್ರಿಯವಾದ ರಾಶಿಯಾಗಿದೆ. ಶನಿದೇವನು ಕುಂಭ ರಾಶಿಯ ಅಧಿಪತಿಯಾಗಿದ್ದಾನೆ. ನಂಬಿಕೆಗಳ ಪ್ರಕಾರ ಕುಂಭ ರಾಶಿಯವರು ಆಂಜನೇಯನನ್ನೂ ಭಕ್ತಿಯಿಂದ ಪೂಜೆ ಮಾಡಿದ್ರೆ ಅವರ ಮೇಲೆ ಸದಾ ಆಂಜನೇಯನ ಅನುಗ್ರಹ ಇದ್ದೇ ಇರುತ್ತಂತೆ. ಹೀಗಾಗಿ ಶನಿವಾರದ ದಿನ ಆಂಜನೇಯನ್ನು ಪೂಜೆ ಮಾಡೋದ್ರಿಂದ ಎಲ್ಲಾ ಸಮಸ್ಯೆಗಳು ದೂರವಾಗುತ್ತಂತೆ.
ಆಂಜನೇಯನನ್ನು ಒಲಿಸಿಕೊಳ್ಳಲು ಈ ಮಂತ್ರಗಳನ್ನು ನಿತ್ಯ ಪಠಿಸಿ :
ಓಂ ಹ್ರಾನ್ ಹ್ರೀಂ ಹ್ರಾನ್ ಹ್ರಾನ್ ಹ್ರಾನ್ ಹ್ರಃ ॥ ಹಾಂ ಹನುಮತೇ ರುದ್ರಾತ್ಮಕಾಯ ಹೂಂ ಫಟ್ । ಓಂ ಹನುಮಂತಾಯ ನಮಃ ।
ಓಂ ನಮೋ ಹನುಮತೇ ರುದ್ರಾವತಾರಾಯ ಸರ್ವಶತ್ರುಸಹರಣಾಯ ಹರಾಯ ಸರ್ವವಶೀಕರಣಾಯ ರಾಮದೂತಾಯ ಸ್ವಾಹಾ ।
ಓಂ ಹನುಮಂತೇ ನಮಃ
ಓಂ ಹನುಮತೇ ರುದ್ರಾತ್ಮಕಾಯ ಹೂಂ ಫಟ್ ।
ಮಹಾಬಲಯ ವೀರೈ ಚಿರಂಜೀವಿನ್ ಉದ್ದತೇ. ಹರಿಣೇ ವಜ್ರ ದೇಹೇ ಚೋಲಂಘಿತ್ ಮಹಾವ್ಯಯೇ ।
ಓಂ ನಮೋ ಹನುಮತೇ ರುದ್ರಾವತಾರೈ, ಸರ್ವ ಶತ್ರುನಾಶಕ, ಸರ್ವ ರೋಗಗಳ ನಾಶಕ, ಸರ್ವ ಶತ್ರುನಾಶಕ.
ಶತ್ರುನಾಶಕನೇ ಓಂ ನಮೋ ಹನುಮತೇ ರುದ್ರಾವತಾರಾಯ!
ಓಂ ನಮೋ ಹನುಮತೇ ಆವೇಶಯ ಆವೇಶ ಸ್ವಾಹಾ ।
ನಿತ್ಯವು ಆಂಜನೇಯನ ಈ ಮಂತ್ರಗಳ ಜೊತೆಗೆ ಹನುಮಾನ್ ಚಾಲೀಸ ಪಠಿಸೋದ್ರಿಂದ ಸಂಕಷ್ಟಗಳೆಲ್ಲಾ ದೂರವಾಗುತ್ತಂತೆ.



Click it and Unblock the Notifications
