Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಸರ್ಕಾರಿ ಶಾಲೆಯಲ್ಲಿ ಓದಿದ ಬಾಲಕಿಗೆ ಮೈಕ್ರೋಸಾಫ್ಟ್ನಿಂದ ₹31 ಲಕ್ಷ ವೇತನ..!
ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಹೆಚ್ಚು ಸಂಬಳ ಸಿಗುವ ನೌಕರಿ ಸಿಗುವುದಿಲ್ಲ ಎಂದು ಪೋಷಕರು ಮಕ್ಕಳನ್ನು ಇಂಗ್ಲೀಷ್ ಮೀಡಿಯಂನಲ್ಲಿ ಲಕ್ಷ ಲಕ್ಷ ಶುಲ್ಕ ನೀಡಿ ಓದಿಸುತ್ತಾರೆ. ಸರ್ಕಾರಿ ಶಾಲೆ ಎಂದರೆ ಮೂಗು ಮುರಿದು ಮುಂದೆ ಸಾಗುವವರೇ ಹೆಚ್ಚಾಗಿದ್ದಾರೆ. ಆದರೆ ಇಲ್ಲೊಬ್ಬಳು ಸರ್ಕಾರಿ ಶಾಲೆಯಲ್ಲಿ ಓದಿ ಸಾಫ್ಟ್ವೇರ್ ಕಂಪನಿಯಲ್ಲಿ ಯಾರು ಊಹಿಸದ ವೇತನಕ್ಕೆ ಆಯ್ಕೆಯಾಗಿದ್ದಾಳೆ.
ಹರಿಯಾಣದ ಫತೇಹಾಬಾದ್ನ ಕಾಜಲ್ ಎಂಬಾಕೆ ಈಗ ಮೈಕ್ರೋಸಾಫ್ಟ್ನಲ್ಲಿ ನೌಕರಿ ಗಿಟ್ಟಿಸಿದ್ದು ಆಕೆಗೆ ವಾರ್ಷಿಕವಾಗಿ ಕಂಪನಿ 31 ಲಕ್ಷ ರೂ.ಗಳ ಆಕರ್ಷಕ ವೇತನ ನೀಡಲು ಮುಂದಾಗಿದೆ. ನಾಲ್ಕು ವರ್ಷಗಳಲ್ಲಿ ಅವರ ಪಟ್ಟುಬಿಡದ ಬದ್ಧತೆಯು ಐಐಟಿ ಬಾಂಬೆಯಲ್ಲಿ ಓದು ಮುಗಿಸಿದ್ದ ಆಕೆ ಈ 25 ವರ್ಷದ ಅವಧಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ ಮೈಕ್ರೋಸಾಫ್ಟ್ಗೆ ಆಯ್ಕೆಯಾದ ಮೊದಲ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.

ತಾಯಿ ಆಸೆ ಈಡೇರಿಸಿದ ಮಗಳು
ಕಾಜಲ್ ತಾಯಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಆಕೆಯ ತಂದೆ ಟಾಟಾ ಸ್ಟೀಲ್ನಲ್ಲಿ ಉದ್ಯೋಗಿಯಾಗಿದ್ದಾರೆ. ಕಾಜಲ್ ತಾಯಿಗೆ ಮಗಳನ್ನು ದೊಡ್ಡ ಹುದ್ದೆಯಲ್ಲಿ ನೋಡುವ ಕನಸಿತ್ತು. ಹೀಗಾಗಿ ಆರಂಭಿಕ ಶಿಕ್ಷಣ ಸರ್ಕಾರಿ ಶಾಲೆಯಲ್ಲಿಯೇ ಕೊಡಿಸಿದ್ದರು. ಬಳಿಕ ಕಷ್ಟ ಪಟ್ಟಿ ಆಕೆ ಐಐಟಿ ಬಾಂಬೆಯ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಹಗಲು ರಾತ್ರಿ ಓದು ಮುಂದುವರೆಸಿದ್ದಳು.
ಅಭಿನಂದಿಸಿದ ಹರಿಯಾಣ ಸಿಎಂ
ಸರ್ಕಾರಿ ಶಾಲೆಯಲ್ಲಿ ಓದಿದ ಬಾಲಕಿ ಮೈಕ್ರೋಸಾಫ್ಟ್ನಲ್ಲಿ ಕೆಲಸ ಗಿಟ್ಟಿಸುತ್ತಿದ್ದಂತೆ ಆಕೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಈ ನಡುವೆ ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಆಕೆಯೊಂದಿಗೆ ಮಾತನಾಡಿದ ಸಿಎಂ ಆಕೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹಗಲು-ರಾತ್ರಿ ಓದಿದ ಕಾಜಲ್
ಸರ್ಕಾರಿ ಶಾಲೆಯ 2018-20ನೇ ಬ್ಯಾಚ್ನ ವಿದ್ಯಾರ್ಥಿನಿ ಕಾಜಲ್ ತನ್ನ 11 ಮತ್ತು 12ನೇ ತರಗತಿಗಳಲ್ಲಿ ಸೂಪರ್ 100 ಕಾರ್ಯಕ್ರಮದ ಮೂಲಕ ಐಐಟಿ ಜಂಟಿ ಪ್ರವೇಶ ಪರೀಕ್ಷೆಗೆ (ಐಐಟಿ ಜೆಇಇ) ಶ್ರದ್ಧೆಯಿಂದ ತಯಾರಿ ನಡೆಸಿದ್ದಳು. ಐಐಟಿ ಜೆಇಇಯಲ್ಲಿ ಜಯಗಳಿಸಿ, ಐಐಟಿ ಮುಂಬೈನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದಳು. ಈ ಪ್ರವೇಶ ಪರೀಕ್ಷೆ ಬರೆಯಲು ಆಕೆ ಹಗಲು ರಾತ್ರಿ ಓದುತ್ತಿದ್ದಳು. ತಾಯಿ ಬೆಂಬಲಕ್ಕೆ ನಿಂತಿದ್ದರಿಂದ ಈ ಪರೀಕ್ಷೆ ಕಠಿಣವಾಗಲಿಲ್ಲ ಎಂದು ಕಾಜಲ್ ಸಂತಸ ಹಂಚಿಕೊಂಡಿದ್ದಾಳೆ.
ಐಐಟಿ ಪ್ರವೇಶ ಪರೀಕ್ಷೆ ಪಾಸ್ ಮಾಡುವುದೇಗೆ?
ಐಐಟಿ ಪ್ರವೇಶ ಪರೀಕ್ಷೆಗಳ ಪಾಸ್ ಮಾಡುವುದೆಂದರೆ ಸುಲಭದ ಮಾತಲ್ಲ. ಈ ಪರೀಕ್ಷೆಗಳು ಅತ್ಯಂತ ಕಷ್ಟಕರವಾಗಿರುತ್ತದೆ. ಈ ಪ್ರವೇಶ ಪರೀಕ್ಷೆ ಪಾಸ್ ಮಾಡಿ ಪ್ರವೇಶಾತಿ ಪಡೆದು ಅಭ್ಯಾಸ ಬಳಿಕ ಒಂದೊಳ್ಳೆ ಕಂಪನಿಯಲ್ಲಿ ಕೆಲಸ ಗಿಟ್ಟಿಸಬೇಕು ಎಂಬುದು ಕನಸಾಗಿರುತ್ತೆ. ಆದ್ರೆ ಈ ರೀತಿ ಐಐಟಿ ಪ್ರವೇಶಾತಿ ಪಡೆಯಲು ವರ್ಷಕ್ಕೂ ಅಧಿಕ ಸಮಯ ಕಠಿಣ ಅಭ್ಯಾಸ ಮಾಡಬೇಕಿದೆ. ಕಾಜಲ್ ಸಹ ಈ ಕುರಿತು ಮಾತನಾಡುತ್ತ ಐಐಟಿ ಪ್ರವೇಶಾತಿ ಪಡೆದ ಬಗ್ಗೆ ಹಂಚಿಕೊಂಡಿದ್ದಾರೆ.
ಪ್ರವೇಶ ಪರೀಕ್ಷೆಗೆ ತಯಾರಾಗುವಾಗ ಆಕೆ ಹೆಚ್ಚು ಸಮಯ ಓದಿಗಾಗಿ ಮೀಸಲಿಡುತ್ತಿದ್ದಳಂತೆ. ಪ್ರತಿನಿತ್ಯ ಪೇಪರ್ ಓದುವ ಹವ್ಯಾಸ ಬೆಳೆಸಿಕೊಂಡಿದ್ದಳಂತೆ. ಪ್ರವೇಶ ಪರೀಕ್ಷೆ ತಯಾರಿಗೆ ಬೇಕಾದ ಪುಸ್ತಕಗಳನ್ನು ಖರೀದಿಸಿ ನಿತ್ಯ ಓದುಬೇಕು. ಜೊತೆಗೆ ಕಠಿಣ ಮೆಂಟಲ್ ಎಬಿಲಿಟಿ ಪ್ರಶ್ನೆಗಳ ಬಿಡಿಸುವ ಯತ್ನ ಮಾಡುತ್ತಿರಬೇಕು ಎಂದು ಸಲಹೆ ನೀಡುತ್ತಾಳೆ.



Click it and Unblock the Notifications