Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಸರ್ಕಾರಿ ಶಾಲೆಯಲ್ಲಿ ಓದಿದ ಬಾಲಕಿಗೆ ಮೈಕ್ರೋಸಾಫ್ಟ್ನಿಂದ ₹31 ಲಕ್ಷ ವೇತನ..!
ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಹೆಚ್ಚು ಸಂಬಳ ಸಿಗುವ ನೌಕರಿ ಸಿಗುವುದಿಲ್ಲ ಎಂದು ಪೋಷಕರು ಮಕ್ಕಳನ್ನು ಇಂಗ್ಲೀಷ್ ಮೀಡಿಯಂನಲ್ಲಿ ಲಕ್ಷ ಲಕ್ಷ ಶುಲ್ಕ ನೀಡಿ ಓದಿಸುತ್ತಾರೆ. ಸರ್ಕಾರಿ ಶಾಲೆ ಎಂದರೆ ಮೂಗು ಮುರಿದು ಮುಂದೆ ಸಾಗುವವರೇ ಹೆಚ್ಚಾಗಿದ್ದಾರೆ. ಆದರೆ ಇಲ್ಲೊಬ್ಬಳು ಸರ್ಕಾರಿ ಶಾಲೆಯಲ್ಲಿ ಓದಿ ಸಾಫ್ಟ್ವೇರ್ ಕಂಪನಿಯಲ್ಲಿ ಯಾರು ಊಹಿಸದ ವೇತನಕ್ಕೆ ಆಯ್ಕೆಯಾಗಿದ್ದಾಳೆ.
ಹರಿಯಾಣದ ಫತೇಹಾಬಾದ್ನ ಕಾಜಲ್ ಎಂಬಾಕೆ ಈಗ ಮೈಕ್ರೋಸಾಫ್ಟ್ನಲ್ಲಿ ನೌಕರಿ ಗಿಟ್ಟಿಸಿದ್ದು ಆಕೆಗೆ ವಾರ್ಷಿಕವಾಗಿ ಕಂಪನಿ 31 ಲಕ್ಷ ರೂ.ಗಳ ಆಕರ್ಷಕ ವೇತನ ನೀಡಲು ಮುಂದಾಗಿದೆ. ನಾಲ್ಕು ವರ್ಷಗಳಲ್ಲಿ ಅವರ ಪಟ್ಟುಬಿಡದ ಬದ್ಧತೆಯು ಐಐಟಿ ಬಾಂಬೆಯಲ್ಲಿ ಓದು ಮುಗಿಸಿದ್ದ ಆಕೆ ಈ 25 ವರ್ಷದ ಅವಧಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ ಮೈಕ್ರೋಸಾಫ್ಟ್ಗೆ ಆಯ್ಕೆಯಾದ ಮೊದಲ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.

ತಾಯಿ ಆಸೆ ಈಡೇರಿಸಿದ ಮಗಳು
ಕಾಜಲ್ ತಾಯಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಆಕೆಯ ತಂದೆ ಟಾಟಾ ಸ್ಟೀಲ್ನಲ್ಲಿ ಉದ್ಯೋಗಿಯಾಗಿದ್ದಾರೆ. ಕಾಜಲ್ ತಾಯಿಗೆ ಮಗಳನ್ನು ದೊಡ್ಡ ಹುದ್ದೆಯಲ್ಲಿ ನೋಡುವ ಕನಸಿತ್ತು. ಹೀಗಾಗಿ ಆರಂಭಿಕ ಶಿಕ್ಷಣ ಸರ್ಕಾರಿ ಶಾಲೆಯಲ್ಲಿಯೇ ಕೊಡಿಸಿದ್ದರು. ಬಳಿಕ ಕಷ್ಟ ಪಟ್ಟಿ ಆಕೆ ಐಐಟಿ ಬಾಂಬೆಯ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಹಗಲು ರಾತ್ರಿ ಓದು ಮುಂದುವರೆಸಿದ್ದಳು.
ಅಭಿನಂದಿಸಿದ ಹರಿಯಾಣ ಸಿಎಂ
ಸರ್ಕಾರಿ ಶಾಲೆಯಲ್ಲಿ ಓದಿದ ಬಾಲಕಿ ಮೈಕ್ರೋಸಾಫ್ಟ್ನಲ್ಲಿ ಕೆಲಸ ಗಿಟ್ಟಿಸುತ್ತಿದ್ದಂತೆ ಆಕೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಈ ನಡುವೆ ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಆಕೆಯೊಂದಿಗೆ ಮಾತನಾಡಿದ ಸಿಎಂ ಆಕೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹಗಲು-ರಾತ್ರಿ ಓದಿದ ಕಾಜಲ್
ಸರ್ಕಾರಿ ಶಾಲೆಯ 2018-20ನೇ ಬ್ಯಾಚ್ನ ವಿದ್ಯಾರ್ಥಿನಿ ಕಾಜಲ್ ತನ್ನ 11 ಮತ್ತು 12ನೇ ತರಗತಿಗಳಲ್ಲಿ ಸೂಪರ್ 100 ಕಾರ್ಯಕ್ರಮದ ಮೂಲಕ ಐಐಟಿ ಜಂಟಿ ಪ್ರವೇಶ ಪರೀಕ್ಷೆಗೆ (ಐಐಟಿ ಜೆಇಇ) ಶ್ರದ್ಧೆಯಿಂದ ತಯಾರಿ ನಡೆಸಿದ್ದಳು. ಐಐಟಿ ಜೆಇಇಯಲ್ಲಿ ಜಯಗಳಿಸಿ, ಐಐಟಿ ಮುಂಬೈನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದಳು. ಈ ಪ್ರವೇಶ ಪರೀಕ್ಷೆ ಬರೆಯಲು ಆಕೆ ಹಗಲು ರಾತ್ರಿ ಓದುತ್ತಿದ್ದಳು. ತಾಯಿ ಬೆಂಬಲಕ್ಕೆ ನಿಂತಿದ್ದರಿಂದ ಈ ಪರೀಕ್ಷೆ ಕಠಿಣವಾಗಲಿಲ್ಲ ಎಂದು ಕಾಜಲ್ ಸಂತಸ ಹಂಚಿಕೊಂಡಿದ್ದಾಳೆ.
ಐಐಟಿ ಪ್ರವೇಶ ಪರೀಕ್ಷೆ ಪಾಸ್ ಮಾಡುವುದೇಗೆ?
ಐಐಟಿ ಪ್ರವೇಶ ಪರೀಕ್ಷೆಗಳ ಪಾಸ್ ಮಾಡುವುದೆಂದರೆ ಸುಲಭದ ಮಾತಲ್ಲ. ಈ ಪರೀಕ್ಷೆಗಳು ಅತ್ಯಂತ ಕಷ್ಟಕರವಾಗಿರುತ್ತದೆ. ಈ ಪ್ರವೇಶ ಪರೀಕ್ಷೆ ಪಾಸ್ ಮಾಡಿ ಪ್ರವೇಶಾತಿ ಪಡೆದು ಅಭ್ಯಾಸ ಬಳಿಕ ಒಂದೊಳ್ಳೆ ಕಂಪನಿಯಲ್ಲಿ ಕೆಲಸ ಗಿಟ್ಟಿಸಬೇಕು ಎಂಬುದು ಕನಸಾಗಿರುತ್ತೆ. ಆದ್ರೆ ಈ ರೀತಿ ಐಐಟಿ ಪ್ರವೇಶಾತಿ ಪಡೆಯಲು ವರ್ಷಕ್ಕೂ ಅಧಿಕ ಸಮಯ ಕಠಿಣ ಅಭ್ಯಾಸ ಮಾಡಬೇಕಿದೆ. ಕಾಜಲ್ ಸಹ ಈ ಕುರಿತು ಮಾತನಾಡುತ್ತ ಐಐಟಿ ಪ್ರವೇಶಾತಿ ಪಡೆದ ಬಗ್ಗೆ ಹಂಚಿಕೊಂಡಿದ್ದಾರೆ.
ಪ್ರವೇಶ ಪರೀಕ್ಷೆಗೆ ತಯಾರಾಗುವಾಗ ಆಕೆ ಹೆಚ್ಚು ಸಮಯ ಓದಿಗಾಗಿ ಮೀಸಲಿಡುತ್ತಿದ್ದಳಂತೆ. ಪ್ರತಿನಿತ್ಯ ಪೇಪರ್ ಓದುವ ಹವ್ಯಾಸ ಬೆಳೆಸಿಕೊಂಡಿದ್ದಳಂತೆ. ಪ್ರವೇಶ ಪರೀಕ್ಷೆ ತಯಾರಿಗೆ ಬೇಕಾದ ಪುಸ್ತಕಗಳನ್ನು ಖರೀದಿಸಿ ನಿತ್ಯ ಓದುಬೇಕು. ಜೊತೆಗೆ ಕಠಿಣ ಮೆಂಟಲ್ ಎಬಿಲಿಟಿ ಪ್ರಶ್ನೆಗಳ ಬಿಡಿಸುವ ಯತ್ನ ಮಾಡುತ್ತಿರಬೇಕು ಎಂದು ಸಲಹೆ ನೀಡುತ್ತಾಳೆ.



Click it and Unblock the Notifications