Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬಿಸಿಗಾಳಿ ಎಫೆಕ್ಟ್.! ಶಾಲಾ ಕೊಠಡಿಯನ್ನೇ ಮಿನಿ ಈಜುಕೊಳ ಮಾಡಿದ ಶಿಕ್ಷಕರು..!
ಬೇಸಿಗೆಯ ತಾಪಮಾನ ಏರಿಕೆ ಜನರನ್ನು ಕಂಗೆಡಿಸಿದೆ. ಜನರು ಮನೆಯಿಂದ ಹೊರಬರಲು ಅಕ್ಷರಶಃ ಹಿಂದೇಟು ಹಾಕುವಂತಾಗಿದೆ. ಅದರಲ್ಲೂ ಹೀಟ್ ವೇವ್ ಜನರ ಪ್ರಾಣಕ್ಕೂ ಸಂಚಕಾರ ತರುತ್ತಿದೆ. ಹೀಗಾಗಿ ಜನ ಮಧ್ಯಾಹ್ನದ ಉರಿ ಬಿಸಿಲಿಗೆ ಬಾರದೆ ಮನೆಯಲ್ಲೇ ಉಳಿಯುವಂತಾಗಿದೆ.
ಬಿಸಿಲಿನ ತಾಪ ಎಷ್ಟಿದೆ ಎಂದರೆ ಜನರು ಬಿಸಿ ನೀರಿನ ಬಳಕೆಯನ್ನೇ ಮರೆತು ಬಿಟ್ಟಿದ್ದಾರೆ. ಇನ್ನು ಪ್ರಾಣಿ ಪಕ್ಷಿಗಳ ಪಾಡಂತು ಕೇಳುವುದೇ ಬೇಡ ಎನ್ನುವಂತಾಗಿದೆ. ಇತ್ತ ವೃದ್ಧರು ಮತ್ತು ಮಕ್ಕಳು ಸಹ ಬಿಸಿಗಾಳಿಯಿಂದ ತತ್ತರಿಸಿದ್ದಾರೆ. ಅವರಿಗೆ ಮನೆಯಿಂದ ಹೊರಬಾರದಿರುವ ಪರಿಸ್ಥಿತಿಯಲ್ಲೂ ಬೇಸಿಗೆಯ ಉರಿ ತಡೆಯಲಾಗುತ್ತಿಲ್ಲ.

ಇನ್ನು ಈ ಬಿಸಿಗಾಳಿಯ ಪರಿಣಾಮವಾಗಿ ಹತ್ತು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಲವರು ಆಸ್ಪತ್ರೆಗೆ ದಾಖಲಾಗುವಂತಹ ಪ್ರಸಂಗಗಳು ಸಹ ನಾವು ನೋಡಬಹುದು. ಏಕೆಂದರೆ ಹೆಚ್ಚು ನೀರು ಕುಡಿಯದಿದ್ದರೆ ನಮ್ಮ ದೇಹ ಡಿಹೈಡ್ರೇಷನ್ಗೆ ಒಳಗಾಗುತ್ತದೆ. ಇದು ಹಲವು ಸಮಸ್ಯೆಗೆ ಕಾರಣವಾಗುತ್ತದೆ.
ಇತ್ತ ಬೇಸಿಗೆಯಿಂದ ಮಕ್ಕಳು ಶಾಲೆಗೆ ಬರಲು ಸಮಸ್ಯೆ ಎದುರಾಗಬಾರದು ಎಂದು ಶಾಲೆಗಳಿಗೆ ರಜೆ ನೀಡಲಾಗಿರುತ್ತದೆ. ಆದರೆ ಇಲ್ಲೊಂದು ಶಾಲೆಯಲ್ಲಿ ಕ್ಲಾಸ್ ರೂಮ್ ಅನ್ನೇ ಸ್ವಿಮ್ಮಿಂಗ್ ಪೂಲ್ ಮಾಡಲಾಗಿದ್ದು, ಮಕ್ಕಳಿಗೆ ಮಜಾವೋ ಮಜಾ ಎನ್ನುವಂತಾಗಿದೆ.
ಉತ್ತರ ಪ್ರದೇಶದ ಕನೌಜ್ನಲ್ಲಿರುವ ಶಾಲೆಯೊಂದರಲ್ಲಿ ಕ್ಲಾಸ್ ರೂಮಿಗೆ ತಣ್ಣನೆಯ ನೀರು ಹಾಕಿ ಅಲ್ಲಿ ಮಕ್ಕಳು ಆಟವಾಡುತ್ತಿದ್ದಾರೆ. ಬೇಸಿಗೆಯಿಂದ ಬಸವಳಿದಿದ್ದ ಮಕ್ಕಳು ನೀರಿನಲ್ಲಿ ಚೆಲ್ಲಾಟವಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಮಕ್ಕಳ ಖುಷಿಗೆ ಜನರೂ ಮರಳಾಗಿದ್ದಾರೆ.
ಉತ್ತರ ಪ್ರದೇಶದ ಹಲವು ಭಾಗದಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಹೀಗಾಗಿ ಶಾಲೆಯಲ್ಲಿ ಮಕ್ಕಳು ಕೂರುವುದು ಸಾಧ್ಯವಿಲ್ಲದ ಪರಿಸ್ಥಿತಿ ಆಗಿದೆ. ಹೀಗಾಗಿ ಶಾಲೆಯ ಕೊಠಡಿಯೊಂದಕ್ಕೆ ನೀರು ಹಾಕಿ ಅಲ್ಲಿ ಮಕ್ಕಳು ಆಡಿಕೊಳ್ಳಲು ಬಿಡಲಾಗಿದೆ. ಬೇಸಿಗೆಯ ಉರಿಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳು ನೀರಿನಲ್ಲಿ ಆಟವಾಡಲು ಬಿಟ್ಟಾಗ ಕುಣಿದು ಕುಪ್ಪಳಿಸಿದ್ದಾರೆ.
ಈ ಶಾಲೆಗೆ ಬೇಸಿಗೆಯಲ್ಲಿ ಮಕ್ಕಳು ಬರುತ್ತಿಲ್ಲ ಎಂಬ ಕಾರಣಕ್ಕೆ ಈ ಕ್ರಮಕ್ಕೆ ಮುಂದಾಗಲಾಗಿದೆಯಂತೆ. ಇಲ್ಲಿ ಬೇಸಿಗೆಯ ಕಾರಣ ನೀಡಿ ಮಕ್ಕಳು ಶಾಲೆಗೆ ಬರುತ್ತಿಲ್ಲ ಹೀಗಾಗಿ ಶಾಲೆಯಲ್ಲೇ ಮಿನಿ ವಾಟರ್ ಪಾರ್ಕ್ ಮಾಡಿ ಮಕ್ಕಳನ್ನು ಶಾಲೆ ಕಡೆ ಆಕರ್ಷಿಸಲು ಮುಂದಾಗಲಾಗಿದೆ. ಕಳೆದ 15 ದಿನಗಳಿಂದ ಈ ಭಾಗದಲ್ಲಿ ತಾಪಮಾನ ಏರಿಕೆಯಾಗಿದ್ದು, ಮಕ್ಕಳು ಶಾಲೆಯತ್ತ ತಿರುಗಿಯೂ ನೋಡುತ್ತಿಲ್ಲ. ಹೀಗಾಗಿ ಅವರನ್ನು ಹೀಗೆ ಬಿಟ್ಟರೆ ಶಾಶ್ವತವಾಗಿ ಶಾಲೆಯಿಂದ ಹೊರಗುಳಿಯುವ ಸಾಧ್ಯತೆ ಇರುವ ಕಾರಣ ಮಕ್ಕಳ ಶಾಲೆಯತ್ತ ಸೆಳೆಯುವ ಸಲುವಾಗಿ ಈ ರೀತಿ ವ್ಯವಸ್ಥೆ ಮಾಡಲಾಗಿದೆ.
ಪೂರ್ವ ಭಾರತದಲ್ಲಿ ಮೇ 1 ರವರೆಗೆ ಮತ್ತು ದಕ್ಷಿಣ ಪೆನಿನ್ಸುಲರ್ ಪ್ರದೇಶದಲ್ಲಿ ಮುಂದಿನ ಐದು ದಿನಗಳಲ್ಲಿ ತೀವ್ರತರವಾದ ಬಿಸಿಗಾಳಿಯ ವಾತಾವರಣವನ್ನು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ.
ಹವಾಮಾನ ಇಲಾಖೆಯು ಇತ್ತೀಚಿಗೆ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಸಹ ಘೋಷಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಆಂಧ್ರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ತೀವ್ರವಾದ ಬಿಸಿಗಾಳಿ ಇರುವ ಸಾಧ್ಯತೆ ಇದ್ದು, ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚಿಸಿದೆ.
ಈ ರೀತಿ ಮಕ್ಕಳಿಗೆ ಬೇಸಿಗೆಯಲ್ಲಿ ಅನುಕೂಲವಾಗುವಂತೆ, ಬಿಸಿಗಾಳಿಯ ಹೊಡೆತದಿಂದ ಕೆಲ ಕಾಲ ತಂಪಾಗಿರಿಸಲು ಶಾಲೆ ಮಾಡಿರುವ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಮಕ್ಕಳ ಆರೋಗ್ಯದ ಕಡೆ ಶಿಕ್ಷಕರ ಕಾಳಜಿಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



Click it and Unblock the Notifications