Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಬಿಸಿಗಾಳಿ ಎಫೆಕ್ಟ್.! ಶಾಲಾ ಕೊಠಡಿಯನ್ನೇ ಮಿನಿ ಈಜುಕೊಳ ಮಾಡಿದ ಶಿಕ್ಷಕರು..!
ಬೇಸಿಗೆಯ ತಾಪಮಾನ ಏರಿಕೆ ಜನರನ್ನು ಕಂಗೆಡಿಸಿದೆ. ಜನರು ಮನೆಯಿಂದ ಹೊರಬರಲು ಅಕ್ಷರಶಃ ಹಿಂದೇಟು ಹಾಕುವಂತಾಗಿದೆ. ಅದರಲ್ಲೂ ಹೀಟ್ ವೇವ್ ಜನರ ಪ್ರಾಣಕ್ಕೂ ಸಂಚಕಾರ ತರುತ್ತಿದೆ. ಹೀಗಾಗಿ ಜನ ಮಧ್ಯಾಹ್ನದ ಉರಿ ಬಿಸಿಲಿಗೆ ಬಾರದೆ ಮನೆಯಲ್ಲೇ ಉಳಿಯುವಂತಾಗಿದೆ.
ಬಿಸಿಲಿನ ತಾಪ ಎಷ್ಟಿದೆ ಎಂದರೆ ಜನರು ಬಿಸಿ ನೀರಿನ ಬಳಕೆಯನ್ನೇ ಮರೆತು ಬಿಟ್ಟಿದ್ದಾರೆ. ಇನ್ನು ಪ್ರಾಣಿ ಪಕ್ಷಿಗಳ ಪಾಡಂತು ಕೇಳುವುದೇ ಬೇಡ ಎನ್ನುವಂತಾಗಿದೆ. ಇತ್ತ ವೃದ್ಧರು ಮತ್ತು ಮಕ್ಕಳು ಸಹ ಬಿಸಿಗಾಳಿಯಿಂದ ತತ್ತರಿಸಿದ್ದಾರೆ. ಅವರಿಗೆ ಮನೆಯಿಂದ ಹೊರಬಾರದಿರುವ ಪರಿಸ್ಥಿತಿಯಲ್ಲೂ ಬೇಸಿಗೆಯ ಉರಿ ತಡೆಯಲಾಗುತ್ತಿಲ್ಲ.

ಇನ್ನು ಈ ಬಿಸಿಗಾಳಿಯ ಪರಿಣಾಮವಾಗಿ ಹತ್ತು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಲವರು ಆಸ್ಪತ್ರೆಗೆ ದಾಖಲಾಗುವಂತಹ ಪ್ರಸಂಗಗಳು ಸಹ ನಾವು ನೋಡಬಹುದು. ಏಕೆಂದರೆ ಹೆಚ್ಚು ನೀರು ಕುಡಿಯದಿದ್ದರೆ ನಮ್ಮ ದೇಹ ಡಿಹೈಡ್ರೇಷನ್ಗೆ ಒಳಗಾಗುತ್ತದೆ. ಇದು ಹಲವು ಸಮಸ್ಯೆಗೆ ಕಾರಣವಾಗುತ್ತದೆ.
ಇತ್ತ ಬೇಸಿಗೆಯಿಂದ ಮಕ್ಕಳು ಶಾಲೆಗೆ ಬರಲು ಸಮಸ್ಯೆ ಎದುರಾಗಬಾರದು ಎಂದು ಶಾಲೆಗಳಿಗೆ ರಜೆ ನೀಡಲಾಗಿರುತ್ತದೆ. ಆದರೆ ಇಲ್ಲೊಂದು ಶಾಲೆಯಲ್ಲಿ ಕ್ಲಾಸ್ ರೂಮ್ ಅನ್ನೇ ಸ್ವಿಮ್ಮಿಂಗ್ ಪೂಲ್ ಮಾಡಲಾಗಿದ್ದು, ಮಕ್ಕಳಿಗೆ ಮಜಾವೋ ಮಜಾ ಎನ್ನುವಂತಾಗಿದೆ.
ಉತ್ತರ ಪ್ರದೇಶದ ಕನೌಜ್ನಲ್ಲಿರುವ ಶಾಲೆಯೊಂದರಲ್ಲಿ ಕ್ಲಾಸ್ ರೂಮಿಗೆ ತಣ್ಣನೆಯ ನೀರು ಹಾಕಿ ಅಲ್ಲಿ ಮಕ್ಕಳು ಆಟವಾಡುತ್ತಿದ್ದಾರೆ. ಬೇಸಿಗೆಯಿಂದ ಬಸವಳಿದಿದ್ದ ಮಕ್ಕಳು ನೀರಿನಲ್ಲಿ ಚೆಲ್ಲಾಟವಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಮಕ್ಕಳ ಖುಷಿಗೆ ಜನರೂ ಮರಳಾಗಿದ್ದಾರೆ.
ಉತ್ತರ ಪ್ರದೇಶದ ಹಲವು ಭಾಗದಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಹೀಗಾಗಿ ಶಾಲೆಯಲ್ಲಿ ಮಕ್ಕಳು ಕೂರುವುದು ಸಾಧ್ಯವಿಲ್ಲದ ಪರಿಸ್ಥಿತಿ ಆಗಿದೆ. ಹೀಗಾಗಿ ಶಾಲೆಯ ಕೊಠಡಿಯೊಂದಕ್ಕೆ ನೀರು ಹಾಕಿ ಅಲ್ಲಿ ಮಕ್ಕಳು ಆಡಿಕೊಳ್ಳಲು ಬಿಡಲಾಗಿದೆ. ಬೇಸಿಗೆಯ ಉರಿಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳು ನೀರಿನಲ್ಲಿ ಆಟವಾಡಲು ಬಿಟ್ಟಾಗ ಕುಣಿದು ಕುಪ್ಪಳಿಸಿದ್ದಾರೆ.
ಈ ಶಾಲೆಗೆ ಬೇಸಿಗೆಯಲ್ಲಿ ಮಕ್ಕಳು ಬರುತ್ತಿಲ್ಲ ಎಂಬ ಕಾರಣಕ್ಕೆ ಈ ಕ್ರಮಕ್ಕೆ ಮುಂದಾಗಲಾಗಿದೆಯಂತೆ. ಇಲ್ಲಿ ಬೇಸಿಗೆಯ ಕಾರಣ ನೀಡಿ ಮಕ್ಕಳು ಶಾಲೆಗೆ ಬರುತ್ತಿಲ್ಲ ಹೀಗಾಗಿ ಶಾಲೆಯಲ್ಲೇ ಮಿನಿ ವಾಟರ್ ಪಾರ್ಕ್ ಮಾಡಿ ಮಕ್ಕಳನ್ನು ಶಾಲೆ ಕಡೆ ಆಕರ್ಷಿಸಲು ಮುಂದಾಗಲಾಗಿದೆ. ಕಳೆದ 15 ದಿನಗಳಿಂದ ಈ ಭಾಗದಲ್ಲಿ ತಾಪಮಾನ ಏರಿಕೆಯಾಗಿದ್ದು, ಮಕ್ಕಳು ಶಾಲೆಯತ್ತ ತಿರುಗಿಯೂ ನೋಡುತ್ತಿಲ್ಲ. ಹೀಗಾಗಿ ಅವರನ್ನು ಹೀಗೆ ಬಿಟ್ಟರೆ ಶಾಶ್ವತವಾಗಿ ಶಾಲೆಯಿಂದ ಹೊರಗುಳಿಯುವ ಸಾಧ್ಯತೆ ಇರುವ ಕಾರಣ ಮಕ್ಕಳ ಶಾಲೆಯತ್ತ ಸೆಳೆಯುವ ಸಲುವಾಗಿ ಈ ರೀತಿ ವ್ಯವಸ್ಥೆ ಮಾಡಲಾಗಿದೆ.
ಪೂರ್ವ ಭಾರತದಲ್ಲಿ ಮೇ 1 ರವರೆಗೆ ಮತ್ತು ದಕ್ಷಿಣ ಪೆನಿನ್ಸುಲರ್ ಪ್ರದೇಶದಲ್ಲಿ ಮುಂದಿನ ಐದು ದಿನಗಳಲ್ಲಿ ತೀವ್ರತರವಾದ ಬಿಸಿಗಾಳಿಯ ವಾತಾವರಣವನ್ನು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ.
ಹವಾಮಾನ ಇಲಾಖೆಯು ಇತ್ತೀಚಿಗೆ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಸಹ ಘೋಷಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಆಂಧ್ರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ತೀವ್ರವಾದ ಬಿಸಿಗಾಳಿ ಇರುವ ಸಾಧ್ಯತೆ ಇದ್ದು, ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚಿಸಿದೆ.
ಈ ರೀತಿ ಮಕ್ಕಳಿಗೆ ಬೇಸಿಗೆಯಲ್ಲಿ ಅನುಕೂಲವಾಗುವಂತೆ, ಬಿಸಿಗಾಳಿಯ ಹೊಡೆತದಿಂದ ಕೆಲ ಕಾಲ ತಂಪಾಗಿರಿಸಲು ಶಾಲೆ ಮಾಡಿರುವ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಮಕ್ಕಳ ಆರೋಗ್ಯದ ಕಡೆ ಶಿಕ್ಷಕರ ಕಾಳಜಿಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



Click it and Unblock the Notifications
