Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮುಂದಿನ 5 ದಿನ ಹೀಟ್ವೇವ್, ಬಿರುಗಾಳಿ ಮಳೆ ಎಚ್ಚರಿಕೆ: ಐಎಂಡಿ ವರದಿ
ತಾಪಮಾನ ಏರಿಕೆ ಒಂದು ಕಡೆಯಾದರೆ ಮತ್ತೊಂದು ಕಡೆ ಮಳೆಯ ಆಗಮನ ಕೂಡ ಜನರಲ್ಲಿ ಹೊಸ ರೀತಿ ಗೊಂದಲ ಮೂಡಿಸಿದೆ. ಬಿಸಿಲಿನ ನಡುವೆ ಸಂಜೆ ಸಮಯದಲ್ಲಿ ಹಲವು ಕಡೆ ಮಳೆಯಾಗುವುದು ನೋಡಬಹುದು. ಈ ನಡುವೆ ಈಗ ಭಾರತೀಯ ಹವಾಮಾನ ಇಲಾಖೆ ಮುಂದಿನ 5 ದಿನಗಳ ಕಾಲ ಹೀಟ್ ವೇವ್ನ ಎಚ್ಚರಿಕೆ ನೀಡಿದೆ. ಉತ್ತರ ಭಾರತದಲ್ಲಿ ಈ ಪ್ರಮಾಣ ಅಧಿಕವಾಗಿರಲಿದ್ದು, ನಿಗದಿಗಿಂತ ಹೆಚ್ಚು ತಾಪಮಾನ ವರದಿಯಾಗಲಿದೆ.
ಭಾರತದ ಮಧ್ಯ ಭಾಗದಲ್ಲಿ ಉಂಟಾದ ಮಳೆಯ ಕಾರಣದಿಂದಾಗಿ ಈಗ ಬಿಸಿ ಗಾಳಿಯ ಸೃಷ್ಟಿಯಾಗಿದೆ. ಹೀಗಾಗಿ ಉತ್ತರ ಭಾರತ ಹಾಗೂ ವಾಯುವ್ಯ ಭಾಗದಲ್ಲಿ ಗರಿಷ್ಠ 2ರಿಂದ 3 ಡಿಗ್ರಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆ ನೀಡಿದೆ. ಇದು ಹಲವು ಭಾಗದ ಮೇಲೆ ಪರಿಣಾಮ ಬೀರಲಿದ್ದು ಅತ್ಯಧಿಕ ತಾಪಮಾದ ಜೊತೆಗೆ ಉರಿ ಹೆಚ್ಚಾಗುವ ಸಂಭವವಿದೆ.

ಏಪ್ರಿಲ್ 22-24ರ ಅವಧಿಯಲ್ಲಿ ಉತ್ತರ ಪ್ರದೇಶದ ದಕ್ಷಿಣ ಭಾಗ ಮತ್ತು ಮಧ್ಯಪ್ರದೇಶದ ಹಲವು ಭಾಗದಲ್ಲಿ, ಏಪ್ರಿಲ್ 23-24ರಂದು ರಾಜಸ್ಥಾನ ಮತ್ತು ಹರಿಯಾಣದ ಹಲವು ಭಾಗದಲ್ಲಿ ತೀವ್ರ ಪ್ರಮಾಣದ ಹೀಟ್ ವೇವ್ ನೋಡಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹಾಗೆ ಹಳದಿ ಅಲರ್ಟ್ ಕೂಡ ನೀಡಲಾಗಿದೆ. ಈ ಸಮಯದಲ್ಲಿ ಮನೆಯಿಂದ ಹೊರಬರುವುದು ಸೇರಿದಂತೆ ಶಿಶುಗಳ ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಲು ಸೂಚಿಸಲಾಗಿದೆ.
ಈ ಭಾನುವಾರವು ಮಹಾರಾಷ್ಟ್ರದ ಚಂದ್ರಾಪುರವು ಭಾರತದ ಅತ್ಯಂತ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಿದೆ. ಅಂದು 44.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್ನಲ್ಲಿ ಗುಡುಗು, ಮಿಂಚು, ಬಿರುಗಾಳಿ ಎಚ್ಚರಿಕೆ
ಉತ್ತರ ಭಾರತದ ಕೆಲವು ಭಾಗದಲ್ಲಿ ಹೀಟ್ ವೇವ್ ಆತಂಕವಿದ್ದರೆ ಇತ್ತ ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಇದಕ್ಕೆ ವ್ಯತಿರಿಕ್ತ ಹವಾಮಾನ ವರದಿಯಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ನ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಗುಡುಗು ಮತ್ತು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದಿದೆ. ಹೀಗಾಗಿ ಈ ಭಾಗದ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಛತ್ತೀಸ್ಗಢ, ಒಡಿಶಾ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ಮತ್ತು ಆಂಧ್ರ ಕರಾವಳಿ ಭಾಗಗಳಲ್ಲಿ ಮುಂದಿನ 2 ದಿನಗೋ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಸೂಚಿಸಿದೆ.
ಹಾಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಕೂಡ ಮುಂದಿನ 2 ದಿನಗಳಲ್ಲಿ ಒಣ ಹವೆ ಇರಲಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಎಂದು ಕೂಡ ತಿಳಿಸಿದೆ. ಇನ್ನು ಕರ್ನಾಟಕದ ಒಳನಾಡು, ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾ ಮತ್ತು ಕೇರಳ, ತೆಲಂಗಾಣದಲ್ಲಿ ಮುಂದಿನ 4 ದಿನಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಏಪ್ರಿಲ್ 22-24 ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಭಾರತದ ಹಲವು ರಾಜ್ಯದಲ್ಲಿ ಒಣ ಹವೆಯ ಜೊತೆಗೆ ಮಳೆಬೀಳುವ ಸಾಧ್ಯತೆಯೂ ಇದೆ. ಹಗಲಿನಲ್ಲಿ ತಾಪಮಾಣ ಏರಿಕೆ ನೋಡಬಹುದು. ಹಾಗೆ ಸಂಜೆ ಸಮಯದಲ್ಲಿ ಮಳೆಯಾಗಲಿದೆ.



Click it and Unblock the Notifications