Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ಎಲ್ಲಾ ಕಡೆ ಬರೆಕುಸಿತ, ಪ್ರವಾಹ ಭೀತಿ: ಈ ಸಮಯದಲ್ಲಿ ಪ್ರಯಾಣ ಮಾಡುವುದಾದರೆ ಈ ಮುನ್ನೆಚ್ಚರಿಕೆವಹಿಸಿ
ಈ ವಾರ ಟ್ರಾವೆಲ್ ಮಾಡುವ ಪ್ಲ್ಯಾನ್ನಲ್ಲಿದ್ದೀರಾ? ನಿಮ್ಮ ಪ್ಲ್ಯಾನ್ನ ಸ್ವಲ್ಪ ಹಿಡಿದರೆ ಒಳ್ಳೆಯದು, ಏಕೆಂದರೆ ರಾಜ್ಯದ ಬಹುತೇಕ ಕಡೆ ಬರೆ ಕುಸಿತ ಉಂಟಾಗುತ್ತಿದೆ, ಪ್ರವಾಹದ ಭೀತಿ ಉಂಟಾಗಿದೆ, ಈ ಸಮಯದಲ್ಲಿ ಪ್ರಯಾಣ ಮಾಡಿದರೆ ರಿಸ್ಕ್ (ಅಪಾಯ) ಹೆಚ್ಚು. ಇನ್ನು ಪ್ರಯಾಣ ಮಾಡಿಯೇ ಆಗಬೇಕೆಂದಿದ್ದರೆ ನಿಮ್ಮ ಸುರಕ್ಷತೆಗಾಗಿ ಈ ಪ್ಲ್ಯಾನ್ ಮಾಡಿ ಮುಂದುವರೆಯುವುದು ಒಳ್ಳೆಯದು

ಟ್ರಿಪ್ಗೆ ಮೊದಲೇ ನೀವು ಹೊಗುವ ದಾರಿಯ ಸ್ಥಿತಿಗತಿ ತಿಳಿದುಕೊಳ್ಳಿ
ಬಹುತೇಕ ಕಡೆ ಬರೆ ಕುಸಿತದಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ, ಹೀಗಾಗಿ ರೋಡ್ಗಳನ್ನು ಬ್ಲಾಕ್ ಮಾಡಲಾಗಿದೆ, ನೀವು ಹೊರಡುವ ಸಮಯದಲ್ಲಿ ಯಾವುದೇ ಸಮಸ್ಯೆ ಇಲ್ಲದಿರಬಹುದು, ಆದರೆ ಆ ದಾರಿಯಲ್ಲಿ ಬೆಟ್ಟ-ಗುಡ್ಡಗಳಿದ್ದು ವಿಪರೀತ ಮಳೆ ಸುರಿಯುತ್ತಿದ್ದರೆ ಆ ದಾರಿಯಲ್ಲಿ ಹೋಗದಿರುವುದೇ ಈಗೀನ ಪರಿಸ್ಥಿತಿಯಲ್ಲಿ ಸುರಕ್ಷಿತ. ಬರೆ ಕುಸಿತ, ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಬ್ಲಾಕ್ ಆಗುವುದು ಈ ಬಗೆಯ ಸಾಧ್ಯತೆ ಇದೆ.
ಹವಾಮಾನ ವರದಿಯನ್ನು ಗಮನಿಸಿ
ನಿಮಗೆ ಹವಾಮಾನ ವರದಿ ಮುಂಚಿತವಾಗಿಯೇ ದೊರೆಯುವುದು. ಇನ್ನು ಎರಡು ಮೂರು ದಿನ ತುಂಬಾ ಮಳೆ ಇದೆಯೇ ಇಲ್ಲವೇ ಎಂಬುವುದೆಲ್ಲಾ ಹವಾಮಾನ ವರದಿಯಿಂದ ತಿಳಿದು ಬರುವುದು. ಅದರ ಪಕ್ಕ ಪ್ಲ್ಯಾನ್ ಮಾಡಿ.
ನೀವು ಯಾವ ಕಡೆ ಹೋಗುತ್ತಿದ್ದೀರಿ ಆ ಕಡೆಯವರ ಕೆಲವರ ಫೋನ್ ನಂಬರ್ ಪಡೆದುಕೊಳ್ಳಿ
ಅವರು ನಿಮಗೆ ಸೂಕ್ತ ಮಾಹಿತಿ ನೀಡುತ್ತಾರೆ, ಹಾಗಾಗಿ ಈ ಸಮಯದಲ್ಲಿ ಪ್ರಯಾಣ ಮಾಡುವಾಗ ಈ ರೀತಿ ಮಾಹಿತಿ ಪಡೆಯುವುದು ತುಂಬಾ ಒಳ್ಳೆಯದು, ಯಾರೂ ಪರಿಚಯವಿಲ್ಲದಿದ್ದರೆ ಸೋಷಿಯಲ್ ಮೀಡಿಯಾದ ಮೂಲಕ ನೀವು ತಿಳಿಯಬಹುದು.
ಸುರಕ್ಷಿತ ಜಾಗದಲ್ಲಿ ತಂಗಿ
ಈ ಸಮಯದಲ್ಲಿ ಗುಡ್ಡದ ಮೇಲಿನ ರೆಸಾರ್ಟ್ಗಳಲ್ಲಿ ತಂಗುವುದು ಅಷ್ಟೊಂದು ಸುರಕ್ಷಿತವಲ್ಲ. ಹಾಗಾಗಿ ಅಂಥ ಕಡೆ ತಂಗಬೇಡಿ, ನೀವು ಸುರಕ್ಷಿತವಾದ ಜಾಗದಲ್ಲಿ ಮಾತ್ರ ತಂಗಿ, ಗುಡ್ಡ, ಬೆಟ್ಟ, ರಸ್ತೆ ಬಿಡುಕು ಬಿಟ್ಟಿರುವ ಕಡೆಯಲ್ಲಾ ಹೋಗಬೇಡಿ.
ತುರ್ತು ಸಂದರ್ಭಕ್ಕೆ ಸಿದ್ಧರಾಗಿ
ಈ ಸಮಯದಲ್ಲಿ ಯಾವಾಗ ಏನಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಒಂದು ವೇಳೆ ರೋಡ್ ಬ್ಲಾಕ್ ಆದರೆ ಹಿಂದೆ ಹೋಗುವುದಕ್ಕೆ ಆಗುವುದಿಲ್ಲ, ಮುಂದೆ ಹೋಗುವುದಕ್ಕೆ ಸಾಧ್ಯವಿಲ್ಲ ಎಂದಾದರೆ ನೀರು, ತಿನ್ನಲು ವಸ್ತುಗಳು ನಿಮ್ಮ ಬಲಿ ಇರಲಿ.
ಬರೆಕುಸಿತದ ಅಪಾಯವಿರುವಾಗ ಯಾವ ರೀತಿಯ ಮುನ್ನೆಚ್ಚರಿಕೆವಹಿಸಬೇಕು?
ಜಾಗ್ರತೆಯಿಂದ ಇರಿ
ಒಂದು ವೇಳೆ ಅಲ್ಲಿಯ ಜಿಲ್ಲಾಡಿಳಿತ ಆ ಜಾಗ ಬಿಟ್ಟು ತೆರಳಬೇಕು ಎಂದು ಕೋರಿದಾಗ ಹಠಮಾಡಿ ಅಲ್ಲೇ ಇರುವ ಪ್ರಯತ್ನ ಮಾಡಬೇಡಿ.
ಸುರಕ್ಷಿತ ತಾಣದತ್ತ ಹೋಗಬೇಕು.
ಸ್ಥಳೀಯ ನ್ಯೂಸ್ ಗಮನಿಸುತ್ತಲೇ ಇರಿ.
ಬರೆಕುಸಿತದ ಸಮಯದಲ್ಲಿ ಏನು ಮಾಡಬಾರದು?
ಗಾಬರಿಯಾಗಿ ವರ್ತಿಸಬೇಡಿ
ಜಿಲ್ಲಾಡಳಿತದ ಸೂಚನೆ ನಿರ್ಲಕ್ಷ್ಯ ಮಾಡಬೇಡಿ
ಹೆಚ್ಚು ಅಪಾಯ ಇರುವ ಕಡೆ ಡ್ರೈ ಮಾಡಬೇಡಿ
ಸ್ಥಳೀಯ ಸುದ್ದಿಗಳು ಬರುವಾಗ ರೂಮರ್ ಅಂತ ನಿರ್ಲಕ್ಷ್ಯ ಬೇಡ.



Click it and Unblock the Notifications