Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ..! ಹವಾಮಾನ ಇಲಾಖೆ ಮುನ್ಸೂಚನೆ.!
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಕಳೆದೊಂದು ವಾರದಿಂದ ಮಳೆ ಚುರುಕು ಪಡೆದಿದೆ. ರಾಜ್ಯದ ನಾನಾ ಭಾಗದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ರೈತರ ಮುಖದಲ್ಲಿ ನಗು ಮೂಡಿದ್ದರೆ ಇಷ್ಟು ದಿನ ಬಿಸಿಲಿನಿಂದ ಕಂಗೆಟ್ಟಿದ್ದ ಮಂದಿ ತಂಪಾದ ವಾತಾವರಣದಿಂದ ಸಂತಸಗೊಂಡಿದ್ದಾರೆ.
ಮೇ ಕೊನೆಯ ವಾರದಲ್ಲಿ ಮಳೆ ಮತ್ತಷ್ಟು ಚುರುಕಾಗುವ ಸಂಭವವಂತು ಇದೆ. ಇನ್ನು ರಾಜ್ಯ ಮಾತ್ರವಲ್ಲ ದೇಶದಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ. ಮುಂಬೈನಲ್ಲಿ ಮಳೆ ಅಬ್ಬರಿಸಿದರೆ, ಗುಜರಾತ್, ರಾಜಸ್ಥಾನ್, ಮಹಾರಾಷ್ಟ್ರದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ.

ರಾಜ್ಯದಲ್ಲೂ ಉತ್ತಮ ಮಳೆಯಾಗಿದೆ. ಈ ಬಾರಿ ಮುಂಗಾರು ಅವಧಿ ಮುನ್ನವೇ ಆರಂಭವಾಗುವ ಮುನ್ಸೂಚನೆ ಸಿಕ್ಕಿದ್ದು, ರೈತರಲ್ಲಿ ಹರ್ಷ ತಂದಿದೆ. ಇನ್ನು ಈ ವರ್ಷ ಜೂನ್ ಮೊದಲ ವಾರದಿಂದಲೇ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಮಾನ್ಯವಾಗಿ ಜೂನ್ ನಿಂದ ಭಾರತದಲ್ಲಿ ಮುಂಗಾರು ಸುರಿಸುವ ಮೋಡಗಳು ಆಗಮಿಸುತ್ತವೆ. ಆದರೆ ಈ ಭಾರಿ ಅವಧಿಗೂ ಮೊದಲೇ ದೇಶದಲ್ಲಿ ಮುಂಗಾರು ಆಗಮಿಸಲಿದೆ ಎಂದು ತಿಳಿಸಿದೆ. ಈಗಾಗಲೇ ಐಎಂಡಿಯು ಈ ವರ್ಷ ದೇಶದಲ್ಲಿ ವಾಡಿಕೆಯಷ್ಟು (106%) ಮಳೆ ಆಗಲಿದೆ ಎಂದು ತಿಂಗಳ ಹಿಂದೆಯೇ ತಿಳಿಸಿತ್ತು.
ಈಗಾಗಲೇ ಮುಂಗಾರು ಮಳೆ ಆರಂಭವಾಗಲು ಬೇಕಾಗುವ ಎಲ್ಲಾ ಪೂರಕ ವಾತಾವರಣ ನಿರ್ಮಾಣಗೊಂಡಿದ್ದು, ಇದು ಮಾನ್ಸೂನ್ ಮಳೆ ಆರಂಭಕ್ಕೆ ದಾರಿ ಮಾಡಿಕೊಡಲಿದೆ. ಹೀಗಾಗಿ ಈ ಬಾರಿ ಅತ್ಯುತ್ತಮ ಮಳೆಯಾಗುವುದು ಖಚಿತ ಎನ್ನಲಾಗಿದೆ.
ಇನ್ನೊಂದು ವಾರ ಭಾರೀ ಮಳೆ
ರಾಜ್ಯದಲ್ಲಿ ಈಗಾಗಲೇ ಸಂಜೆ ವೇಳೆ ಭಾರೀ ಮಳೆಯಾಗುತ್ತಿದೆ. ಈ ಮಳೆ ಇನ್ನೂ ಒಂದು ವಾರದ ವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕಡೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ರಾಜ್ಯದಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ತುಮಕೂರಿನಲ್ಲಿ ಕೂಡ ಎರಡು ದಿನಗಳ ಬಳಿಕ ಮಳೆ ಜೋರಾಗಲಿದೆ. ಇನ್ನೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಂಡ್ಯ, ನಿಪ್ಪಾಣಿ, ನಂಜನಗೂಡು, ಚನ್ನಪಟ್ಟಣ, ರಾಮನಗರ, ಹೆಸರಘಟ್ಟ, ಮಾಗಡಿ, ಕೃಷ್ಣರಾಜಪೇಟೆ, ಮದ್ದೂರು, ತಿಪಟೂರು, ಹುಣಸೂರು, ಅಜ್ಜಂಪುರ, ಸಕಲೇಶಪುರ, ಬೇಗೂರು, ಹಾರಂಗಿಯಲ್ಲೂ ಮಳೆಯಾಗಿದೆ. ಮಳೆಯ ಜೊತೆಗೆ ಗುಡುಗು ಮಿಂಚು ಮತ್ತು ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೂ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ನೀಡಿದೆ.
ಸದ್ಯ ಈ ಮಳೆಯಿಂದಾಗಿ ಹಲವು ಭಾಗದಲ್ಲಿ ಕೃಷಿ ಚಟುವಟಿಕೆ ಚುರುಕು ಪಡೆಯಲು ಕಾರಣವಾಗಿದೆ. ಅದರಲ್ಲೂ ಕೆಲವು ಕಡೆ ನೀರಿಲ್ಲದೆ ಕಂಗೆಟ್ಟಿದ್ದ ಜನರು ಆರಂಭಿಕ ಮಳೆಯಿಂದಾಗಿ ಸಂತಸಗೊಂಡಿದ್ದಾರೆ. ಜೊತೆಗೆ ಈಗ ಈ ಮಳೆ ಮುಂದಿನ ಒದು ವಾರ ಮುಂದುವರೆಯುವ ಮುನ್ಸೂಚನೆಯೂ ಸಿಕ್ಕಿದ್ದು, ತಾಪಮಾನ ತಣ್ಣಗಾಗುವ ನಿರೀಕ್ಷೆ ಇದೆ.
ಹೀಗಾಗಿ ಹಿಂಗಾರಿನಲ್ಲಿ ಆರಂಭವಾಗಬೇಕಿದ್ದ ಕೃಷಿ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಈಗ ಭಿತ್ತನೆ ಬೀಜ, ಭೂಮಿ ಹದ ಮಾಡುವ ಕಡೆ ರೈತರು ಗಮನ ಹರಿಸಿದ್ದಾರೆ. ಇದಕ್ಕೆ ಪೂರಕವಾಗಿ ಮಳೆ ಸಹ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



Click it and Unblock the Notifications
