Latest Updates
-
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ
ಮುಂದಿನ 7 ದಿನಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ ..! ಹವಾಮಾನ ಇಲಾಖೆ ಮುನ್ಸೂಚನೆ!
ರಾಜ್ಯದ ಹಲವು ಭಾಗದಲ್ಲಿ ಮಳೆ ಕ್ಷೀಣಿಸಿದೆ. ಕಳೆದೊಂದು ವಾರದಿಂದ ಸುರಿಯುತ್ತಿದ್ದ ಈಗ ಸ್ವಲ್ಪ ಬಿಡುವು ನೀಡಿದೆ. ಅದರಲ್ಲೂ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಈಗ ಕೊಂಚ ಬಿಡುವು ನೀಡಿ ಬಿಸಲು ಬೀಳುತ್ತಿದೆ.
ಪ್ರವಾಹ, ನದಿ ಉಕ್ಕಿ ಮುಳುಗಡೆಯಾದ ಪ್ರಕರಣಗಳಂತಹ ಸಾಲು ಸಾಲು ದುರಂತಗಳ ನಡುವೆ ಈಗ ಬಿಸಿಲು ಕಾಣುತ್ತಿದ್ದೇವೆ, ಆದರೆ ಈ ನಡುವೆ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಈಗ ಆತಂಕ ಹೆಚ್ಚುವಂತೆ ಮಾಡಿದೆ. ಮುಂದಿನ 7 ದಿನಗಳ ಕಾಲ ದೇಶದ ಈ ವಿವಿಧ ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾಗಿ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಏಳು ದಿನಗಳಲ್ಲಿ ರಾಜಸ್ಥಾನ, ಉತ್ತರ ಪ್ರದೇಶ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಅಲ್ಲದೆ ಮುಂದಿನ ಐದು ದಿನಗಳಲ್ಲಿ ಕೇರಳ, ತಮಿಳುನಾಡು, ದಕ್ಷಿಣ ಒಳನಾಡು ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎದಿದೆ.
ವಾರದ ಹೆಚ್ಚಿನ ದಿನಗಳಲ್ಲಿ ಪಶ್ಚಿಮ ಮತ್ತು ಮಧ್ಯ ಭಾರತದಾದ್ಯಂತ ಸಾಕಷ್ಟು ವ್ಯಾಪಕವಾದ ಬೆಳಕಿನಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.
ಪಶ್ಚಿಮ ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಆಗಸ್ಟ್ 13 ರವರೆಗೆ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಆಗಸ್ಟ್ 14 ರವರೆಗೆ ಗುಡುಗು ಸಹಿತವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಪೆನಿನ್ಸುಲಾರ್ ಭಾರತದಾದ್ಯಂತ ಸಾಕಷ್ಟು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ ಮತ್ತು ಮಾಹೆ, ಲಕ್ಷದ್ವೀಪಗಳಲ್ಲಿ ಆಗಸ್ಟ್ 12 ರಿಂದ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ಎಲ್ಲಾ ಜಲಾಶಯಗಳು ಈಗ ಭರ್ತಿಯಾಗಿವೆ. ಜೊತೆಗೆ ಕೃಷಿ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಸುರಿದ ಭಾರೀ ಮಳೆ ಹಲವು ಕಡೆ ಅನಾಹುತಗಳ ಸೃಷ್ಟಿಗೆ ಕಾರಣವಾಗಿತ್ತು. ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡದಲ್ಲಿ ಮಳೆ ಅವಾಂತರ ಸೃಷ್ಟಿಸಿತ್ತು. ಕಳೆದೊಂದು ವಾರದಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗಿತ್ತಲ್ಲದೆ ಜನ ಜೀವನ ಯಥಾಸ್ಥಿತಿಗೆ ಬಂದಿತ್ತು.
ಇನ್ನು ಬೆಂಗಳೂರಿನಲ್ಲೂ ಮಳೆ ಆರ್ಭಟ ಜೋರಾಗಿದೆ. ಗುಡುಗು ಸಹಿತ ಮಳೆ ಅಬ್ಬರಿಸುತ್ತಿದೆ. ಕಳೆದ ಎರಡು ಮೂರು ದಿನದಿಂದ ಸಂಜೆ ವೇಳೆ ಅತ್ಯುತ್ತಮ ಮಳೆಯಾಗುತ್ತಿದೆ. ಹೀಗಾಗಿ ತಗ್ಗು ಪ್ರದೇಶ ಸೇರಿ ಹಲವು ಕಡೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ವಾಹನ ಸವಾರರು ಪರದಾಡಬೇಕಾದ ಅನಿವಾರ್ಯತೆ ಎದುರಾಗಿದೆ.



Click it and Unblock the Notifications











