Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಮಂಗಳವಾರ ಹನುಮನ ಈ ರೀತಿ ಪೂಜಿಸಿ..! ಬೇಡಿಕೊಂಡಿದ್ದೆಲ್ಲಾ ನೆರವೇರಲಿದೆ..!
ಮಂಗಳವಾರ ಭಗವಾನ್ ಹನುಮಂತನಿಗೆ ಮೀಡಲಿಟ್ಟಿರುವ ದಿನ ಎಂದು ಶಾಸ್ತ್ರ ಹೇಳುತ್ತದೆ. ಮಂಗಳವಾರ ಹನುಮಂತನ ಪೂಜೆಯಿಂದ ಒಳಿತಾಗಲಿದೆ ಎಂದು ನಂಬಲಾಗಿದೆ. ಶ್ರೀ ರಾಮನ ಪರಮಭಕ್ತನಾದ ಹನುಮ೦ತನು ಶಕ್ತಿ, ವಿವೇಕ, ಹಾಗೂ ಜ್ಞಾನಗಳ ಅಧಿದೇವತೆಯೆ೦ದೇ ಪರಿಗಣಿಸಲ್ಪಟ್ಟಿದ್ದಾನೆ. ಹಿ೦ದೂ ಪುರಾಣಶಾಸ್ತ್ರಗಳ ಪ್ರಕಾರ, ರಕ್ಕಸರನ್ನೆಲ್ಲಾ ಸ೦ಹರಿಸಿ ಜಗತ್ತಿನಲ್ಲಿ ನಡೆಯುತ್ತಿದ್ದ ಅನ್ಯಾಯಗಳನ್ನು ನಿವಾರಸಲು ಭಗವಾನ್ ಶಿವನು ಹನುಮ೦ತನ ಅವತಾರವನ್ನು ಧರಿಸಿದನೆ೦ದು ಹೇಳಲಾಗುತ್ತಿದೆ.
ರಾಮ ಭಕ್ತ ಹನುಮಂತನನ್ನು ಬಜರಂಗಿ ಆಂಜನೇಯ ಮುಂತಾದ ಹೆಸರುಗಳಿಂದ ಪ್ರಪಂಚದಾದ್ಯಂತ ಭಕ್ತರು ಪೂಜಿಸುತ್ತಾರೆ. ಧೈರ್ಯ, ಸ್ಥೈರ್ಯಗಳಿಗೆ ಪ್ರಸಿದ್ಧಿಯನ್ನು ಪಡೆದುಕೊಂಡಿರುವ ಆಂಜನೇಯ ಸ್ವಾಮಿ ನಿಷ್ಠೆಗೆ ಹೆಸರುವಾಸಿಯಾದವರು. ರಾಮ ಸೀತೆಯರನ್ನು ತಮ್ಮ ಹೃದಯದಲ್ಲಿಟ್ಟು ಪೂಜಿಸುವಷ್ಟು ಕಟ್ಟಾ ಭಕ್ತರಾಗಿದ್ದಾರೆ. ಹನುಮಂತನಿಗೆ ತನ್ನ ಸಾಹಸಗಳಿಂದ ಹೋದಲ್ಲೆಲ್ಲಾ ಹಲವಾರು ಹೆಸರುಗಳಿವೆ. ಮಾರುತಿ, ಪವನ ಪುತ್ರ, ಆಂಜನೀಪುತ್ರ ಹೀಗೆ ಭಕ್ತರ ಭಕ್ತಿಗೆ ಅನುಗುಣವಾಗಿ ಕರೆಯಲ್ಪಟ್ಟ ಹೆಸರುಗಳಿಂದ ಹನುಮಾನ್ ಪ್ರಸಿದ್ಧರು.

ಮಂಗಳವಾರದಂದು ವಿಶೇಷವಾಗಿ ಹನಮಂತನ ಪೂಜೆಯನ್ನು ಮಾಡಲಾಗುತ್ತದೆ. ಪ್ರಾತಃ ಕಾಲದಲ್ಲಿಯೇ ಎದ್ದು ಹನುಮಾನ್ ಪೂಜೆಯನ್ನು ಮಾಡಿದರೆ ಭಕ್ತರು ಹನುಮಂತನ ಕೃಪಾಕಟಾಕ್ಷಕ್ಕೆ ಪಾತ್ರರಾಗಬಹುದು ಎಂಬುದು ಹಿಂದಿನಿಂದಲೂ ನಂಬಿಕೊಂಡು ಬಂದಿರುವ ಆಚರಣೆಯಾಗಿದೆ. ಶಕ್ತಿ, ಬಲ ಮತ್ತು ಗೌರವವನ್ನು ಹೆಚ್ಚಿಸಿಕೊಳ್ಳಲು ಹನಮಂತನ ಪೂಜೆಯನ್ನು ಮಾಡಬೇಕು. ಹಾಗಾದರೆ ಮಂಗಳವಾರಂದು ಹನುಮನ ಪೂಜಾ ವಿಧಾನಗಳೇನು? ಯಾವ ಸಮಯದಲ್ಲಿ ಪೂಜೆ ಮಾಡಬೇಕು ಎಂಬುದನ್ನು ತಿಳಿಯಿರಿ.
ಹನುಮಾನ್ ಪೂಜಾ ವಿಧಿ
- ನೀವು ಪೂಜೆ ಮಾಡಬೇಕಾಗಿರುವ ಸ್ಥಳವನ್ನು ಶುದ್ಧ ಮಾಡಿ
- ಹನುಮಂತನಿಗೆ ಪೂಜೆಯನ್ನು ಅರ್ಪಿಸಿ
- ಹನುಮಂತನ ವಿಗ್ರಹವನ್ನು ನೀರಿನಿಂದ ಶುದ್ಧೀಕರಿಸಿ
- ನೀವು ಪೂಜೆ ಮಾಡಬೇಕಾಗಿರುವ ಸ್ಥಳಕ್ಕೆ ನೀರಿನ ಪ್ರೋಕ್ಷಣೆಯನ್ನು ಮಾಡಿ
- ಕೆಂಪು ಬಟ್ಟೆಯ ಮೇಲೆ ಹನುಮಾನ್ ವಿಗ್ರಹವನ್ನು ಇರಿಸಿ
- ಹನುಮಂತನ ಮೂರ್ತಿಯ ಮೇಲೆ ಕುಂಕುಮದ ಪೇಸ್ಟ್ ಹಚ್ಚಿ
- ಅಗರ್ಬತ್ತಿ ಮತ್ತು ದೀಪವನ್ನು ಹಚ್ಚಿ
- ದೇವರಿಗೆ ಹೂವು ಮತ್ತು ಹಣ್ಣು ಸಮರ್ಪಿಸಿ
- 108 ಅಕ್ಷತೆ, 108 ವೀಳ್ಯದೆಲೆ, 108 ಹಣ್ಣುಗಳನ್ನು ಇರಿಸಿ
- ಈ ದಿನ ಸಾತ್ವಿಕ ಆಹಾರವನ್ನು ಸೇವಿಸಿ. ಮಾಂಸಾಹಾರ ಸೇವನೆ ಬೇಡ
- ಹನುಮಂತನಿಗೆ 5 ಬಾಳೆಹಣ್ಣು ಅರ್ಪಿಸಿ
- ಈಶಾನ್ಯ ದಿಕ್ಕಿನಲ್ಲಿ ಹನುಮಂತನ ಪ್ರಾರ್ಥನೆಯನ್ನು ಮಾಡಿ
ಮಂಗಳವಾರದ ವ್ರತ ವಿಧಾನ
21 ದಿನಗಳ ಕಾಲ ಸತತವಾಗಿ ಉಪವಾಸವನ್ನು ಕೈಗೊಳ್ಳಬೇಕು. ಪ್ರಾತಃ ಕಾಲದಲ್ಲಿ ಏಳಬೇಕು. ಸ್ನಾನವನ್ನು ಮಾಡಿ ಗಂಗಾಜಲವನ್ನು ಮನೆಯಲ್ಲಿ ಪ್ರೋಕ್ಷಿಸಿ ಕೆಂಪು ವಸ್ತ್ರವನ್ನು ಧರಿಸಿ. ಮೇಲೆ ತಿಳಿಸಿದ ವಿಧಾನದಲ್ಲಿ ಪೂಜೆಯನ್ನು ಮಾಡಿ. ಪೂಜೆಯ ನಂತರ ಹನುಮಾನ್ ಚಾಲೀಸವನ್ನು ಪಠಿಸಿ 15 ನಿಮಿಷ ಧ್ಯಾನ ಮಾಡಿ ನಿಮ್ಮ ಪ್ರಾರ್ಥನೆಗಳನ್ನು ದೇವರಿಗೆ ಅರ್ಪಿಸಿ. ಬೆಲ್ಲದಿಂದ ಮಾಡಿದ ಆಹಾರವನ್ನು ಒಂದು ಬಾರಿ ಸೇವಿಸಿ. ಸಂಜೆ ಚಾಲೀಸವನ್ನು ಪಠಿಸಿ ಮತ್ತು ವೃತವನ್ನು ಮುರಿಯುವ ಮೊದಲು ದೇವರಿಗೆ ನೈವೇದ್ಯ ಅರ್ಪಿಸಿ.
ಹನುಮಂತನಿಗೆ ಆರತಿ ಮಾಡುವುದರಿಂದಾಗುವ ಪ್ರಯೋಜನಗಳು
- ಬಲ ಮತ್ತು ಶಕ್ತಿ ಸಾಧನೆ
- ಧನ ಲಾಭ ಎಲ್ಲಾ ಆರ್ಥಿಕ ಸಂಕಷ್ಟ ದೂರಾಗುತ್ತದೆ
- ನಿಮ್ಮ ಇಚ್ಛೆಯ ಕೆಲಸ ದೊರೆಯುತ್ತದೆ
- ಮಕ್ಕಳ ಭಾಗ್ಯ
- ಪಾಪ ವಿಮೋಚನೆ
- ನಿಮ್ಮ ಉದ್ಯೋಗವನ್ನು ಯಶಸ್ವಿಯಾಗಿಸುತ್ತದೆ
- ಬುದ್ಧಿವಂತಿಕೆ ಮತ್ತು ಜಾಣ್ಮೆಯನ್ನು ಹೆಚ್ಚಿಸಲು ಹುಡುಗರು
- ಶನಿ ದೋಷ ನಿವಾರಣೆ



Click it and Unblock the Notifications












