Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಸೈಫ್ ಅಲಿ ಖಾನ್ ಆಸ್ಪತ್ರೆಗೆ ಸೇರಿಸಿದ ಆಟೋ ಡ್ರೈವರ್ ಯಾರು? ಆತ ಎಷ್ಟು ಹಣ ಪಡೆದ ಗೊತ್ತಾ?
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದರೋಡೆಕೋರ ಚಾಕುವಿನಿಂದ ಹಲ್ಲೆ ನಡೆಸಿದ್ದ ಘಟನೆ ನಡೆದು ವಾರ ಕಳೆದಿದೆ. ಹಾಗೆ ಹಲ್ಲೆ ಮಾಡಿದಾತ ಈಗ ಪೊಲೀಸ್ ತನಿಖೆ ಎದುರಿಸುತ್ತಿದ್ದಾನೆ. ಭದ್ರತೆಯ ನಡುವೆ ಆತ ಮನೆಗೆ ನುಗ್ಗಿದ್ದು ಹೇಗೆ? ಹಲ್ಲೆಗೆ ಕಾರಣವೇನು ಎಂಬುದನ್ನು ತನಿಖೆ ಮಾಡಲಾಗುತ್ತಿದೆ. ಹಾಗೆ ಸೈಫ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ನಟ ಸೈಫ್ಗೆ ಹಲವು ಬಾರಿ ಆತ ಚಾಕು ಇರಿದಿದ್ದ ಹಾಗೆ ಶಸ್ತ್ರ ಚಿಕಿತ್ಸೆ ನೆರವೇರಿಸಿ ದೇಹದೊಳಗಿದ್ದ ಚಾಕುವನ್ನು ವೈದ್ಯರು ಹೊರತೆಗೆದಿದ್ದಾರೆ. ಆಧ್ರೆ ಹಲ್ಲೆ ನಡೆದಿದ್ದು ರಾತ್ರಿ ಆಗಿತ್ತು. ಹೀಗಾಗಿ ಸೈಫ್ ಕಾರು ಚಾಲನೆ ಮಾಡದೆ ಆಟೋದಲ್ಲಿ ಆಸ್ಪತ್ರೆಗೆ ಧಾವಿಸಿದ್ದರು, ಖುದ್ದು ಪತ್ನಿ ಕರೀನಾ ಕಪೂರ್ ಆಟೋವನ್ನು ಕೂಗಿ ಕರೆದಿದ್ದರಂತೆ. ಈಗ ಆಟೋ ಡ್ರೈವರ್ ಆ ದಿನ ಏನೆಲ್ಲಾ ನಡೆದಿತ್ತು ಎಂಬುದನ್ನು ವಿವರಿಸಿದ್ದಾನೆ.

ಸ್ಥಳೀಯ ಆಟೋ ಚಾಲಕ ಭಜನ್ ಸಿಂಗ್ ಆ ದಿನ ಸುಮಾರು 2 ಗಂಟೆ ಸುಮಾರಿಗೆ ಏನೆಲ್ಲಾ ನಡೆಯಿತು, ಕರೀನಾ ಕಪೂರ್ ಕರೆದು ಏನು ಹೇಳಿದರು, ಎಷ್ಟು ಹಣ ನೀಡಿದರು ಎಂಬೆಲ್ಲಾ ಮಾಹಿತಿಯನ್ನು ಹೇಳಿದ್ದಾನೆ. ತನಿಖೆಯ ಹಿನ್ನೆಲೆ ಆತ ಕೂಡ ಪೊಲೀಸ್ ಠಾಣೆಯಲ್ಲಿ ತನ್ನ ಹೇಳಿಕೆ ನೀಡಿದ್ದಾನೆ. ಆತ ತನ್ನ ಆಟೋದಲ್ಲಿ ಸೈಫ್ ಅಲಿ ಖಾನ್ ಅವರನ್ನು ಕೂರಿಸಿದ್ದನಂತೆ. ಹಾಗೆ ಸೈಫ್ ಅವರೇ ಲೀಲಾವತಿ ಆಸ್ಪತ್ರೆಗೆ ಹೋಗುವಂತೆ ಹೇಳಿದ್ದರಂತೆ.
ನನ್ನನ್ನು ವಿಚಾರಣೆಗಾಗಿ ಬಾಂದ್ರಾ ಪೊಲೀಸ್ ಠಾಣೆಗೆ ಕರೆಯಲಾಯಿತು. ಆ ರಾತ್ರಿ ನಾನು ಹಣದ ಬಗ್ಗೆ ಯೋಚಿಸಲಿಲ್ಲ. ಇಲ್ಲಿಯವರೆಗೆ ಕರೀನಾ ಕಪೂರ್ ಅಥವಾ ಬೇರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ನಾನು ಅವರೊಂದಿಗೆ ಯಾವುದೇ ಸಂಭಾಷಣೆ ನಡೆಸಿಲ್ಲ ಎಂದು ಆಟೋ ಚಾಲಕ ಹೇಳಿಕೊಂಡಿದ್ದಾರೆ.
ಅವರ ಬೆನ್ನಿನ ಭಾಗದಿಂದ ರಕ್ತ ಸುರಿಯುತ್ತಿರುವುದು ನನಗೆ ಕಾಣಿಸಿತು, ಇದು ನನಗೂ ನೋವುಂಟು ಮಾಡಿತ್ತು. ಆರಂಭದಲ್ಲಿ ಸೈಫ್ ಅಲಿ ಖಾನ್ ನನ್ನ ರಿಕ್ಷಾದಲ್ಲಿ ಕುಳಿತಿದ್ದಾರೆಂದು ನನಗೆ ತಿಳಿದಿರಲಿಲ್ಲ. ಯಾರೋ ಗಾಯಗೊಂಡ ವ್ಯಕ್ತಿ ನನ್ನ ಆಟೋ ಹತ್ತಿದ್ದಾರೆ ಅಂತಲೇ ನಾನು ಭಾವಿಸಿದ್ದೆ. ಆದ್ರೆ ಲೀಲಾವತಿ ಆಸ್ಪತ್ರೆಯಲ್ಲಿ ಅವರನ್ನು ಇಳಿಸಿದಾಗ ಅವರ ಮಗ ಹಾಗೂ ಸೈಫ್ ಮುಖ ನನಗೆ ಕಂಡಿತು. ಆಗ ನಟನಿಗೆ ಏನೋ ಆಗಿದೆ ಎಂಬುದನ್ನು ನನಗೆ ತಿಳಿಯಿತು ಎಂದು ಆಟೋ ಚಾಲಕ ಹೇಳಿದ್ದಾರೆ.
ಆಸ್ಪತ್ರೆಯ ಗೇಟ್ ಮುಂದೆ ನಾನು ಆಟೋ ನಿಲ್ಲಿಸಿದಾಗ ಆಂಬ್ಯುಲೆನ್ಸ್ ಶಬ್ದ ಸಿಬ್ಬಂದಿ ಬರುವುದು ಎಲ್ಲಾ ಕಾಣಿಸಿತು. ಅಷ್ಟರಾಗಲೇ ಆಸ್ಪತ್ರೆ ಸಿಬ್ಬಂದಿಗೂ ಇದು ನಟ ಸೈಫ್ ಅಲಿ ಖಾಬ್ ಎಂದು ತಿಳಿದುಬಂದಿತ್ತು. ಹೀಗಾಗಿ ವೇಗವಾಗಿ ಧಾವಿಸಿದರು. ಅವರ ಬೆನ್ನಿನಿಂದ ರಕ್ತ ವಿಪರೀತವಾಗಿ ಬರುತ್ತಿತ್ತು. ಆದ್ರೆ ಆಟೋದಲ್ಲಿದ್ದಾಗ ನನಗೆ ಅವರು ಎಂದು ತಿಳಿದಿರಲಿಲ್ಲ. ಎಷ್ಟು ಬೇಗ ಸಾಧ್ಯವೋ ಅಷ್ಟು ವೇಗವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವುದು ನನ್ನ ಗಮನದಲ್ಲಿತ್ತು. ಆಸ್ಪತ್ರೆ ಗೇಟ್ ಬಳಿ ಬಂದ ನಂತರ ಅವರನ್ನು ನೋಡಲು ಅವಕಾಶ ಸಿಗಲಿಲ್ಲ ಎಂದು ಆತ ಹೇಳಿಕೊಂಡಿದ್ದಾನೆ.
ಆದ್ರೆ ಅವರ ಬಳಿ ನಾನು ಯಾವುದೇ ಹಣ ಪಡೆಯಲಿಲ್ಲ. ಹಾಗೆ ಅಲ್ಲಿಂದ ಮರಳಿದೆ. ಇದಾದ ಬಳಿಕ ಯಾರು ಕೂಡ ನನ್ನ ಸಂಪರ್ಕಿಸಿರಲಿಲ್ಲ, ಪೊಲೀಸರ ಮುಂದೆ ನನಗೆ ತಿಳಿದ ವಿಚಾರ ಹೇಳಿದ್ದೇನೆ ಎಂದು ಆಟೋ ಚಾಲಕ ಅಂದು ನಡೆದ ಘಟನೆಯನ್ನು ವಿವರಿಸಿದ್ದಾನೆ.



Click it and Unblock the Notifications