Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸೈಫ್ ಅಲಿ ಖಾನ್ ಆಸ್ಪತ್ರೆಗೆ ಸೇರಿಸಿದ ಆಟೋ ಡ್ರೈವರ್ ಯಾರು? ಆತ ಎಷ್ಟು ಹಣ ಪಡೆದ ಗೊತ್ತಾ?
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದರೋಡೆಕೋರ ಚಾಕುವಿನಿಂದ ಹಲ್ಲೆ ನಡೆಸಿದ್ದ ಘಟನೆ ನಡೆದು ವಾರ ಕಳೆದಿದೆ. ಹಾಗೆ ಹಲ್ಲೆ ಮಾಡಿದಾತ ಈಗ ಪೊಲೀಸ್ ತನಿಖೆ ಎದುರಿಸುತ್ತಿದ್ದಾನೆ. ಭದ್ರತೆಯ ನಡುವೆ ಆತ ಮನೆಗೆ ನುಗ್ಗಿದ್ದು ಹೇಗೆ? ಹಲ್ಲೆಗೆ ಕಾರಣವೇನು ಎಂಬುದನ್ನು ತನಿಖೆ ಮಾಡಲಾಗುತ್ತಿದೆ. ಹಾಗೆ ಸೈಫ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ನಟ ಸೈಫ್ಗೆ ಹಲವು ಬಾರಿ ಆತ ಚಾಕು ಇರಿದಿದ್ದ ಹಾಗೆ ಶಸ್ತ್ರ ಚಿಕಿತ್ಸೆ ನೆರವೇರಿಸಿ ದೇಹದೊಳಗಿದ್ದ ಚಾಕುವನ್ನು ವೈದ್ಯರು ಹೊರತೆಗೆದಿದ್ದಾರೆ. ಆಧ್ರೆ ಹಲ್ಲೆ ನಡೆದಿದ್ದು ರಾತ್ರಿ ಆಗಿತ್ತು. ಹೀಗಾಗಿ ಸೈಫ್ ಕಾರು ಚಾಲನೆ ಮಾಡದೆ ಆಟೋದಲ್ಲಿ ಆಸ್ಪತ್ರೆಗೆ ಧಾವಿಸಿದ್ದರು, ಖುದ್ದು ಪತ್ನಿ ಕರೀನಾ ಕಪೂರ್ ಆಟೋವನ್ನು ಕೂಗಿ ಕರೆದಿದ್ದರಂತೆ. ಈಗ ಆಟೋ ಡ್ರೈವರ್ ಆ ದಿನ ಏನೆಲ್ಲಾ ನಡೆದಿತ್ತು ಎಂಬುದನ್ನು ವಿವರಿಸಿದ್ದಾನೆ.

ಸ್ಥಳೀಯ ಆಟೋ ಚಾಲಕ ಭಜನ್ ಸಿಂಗ್ ಆ ದಿನ ಸುಮಾರು 2 ಗಂಟೆ ಸುಮಾರಿಗೆ ಏನೆಲ್ಲಾ ನಡೆಯಿತು, ಕರೀನಾ ಕಪೂರ್ ಕರೆದು ಏನು ಹೇಳಿದರು, ಎಷ್ಟು ಹಣ ನೀಡಿದರು ಎಂಬೆಲ್ಲಾ ಮಾಹಿತಿಯನ್ನು ಹೇಳಿದ್ದಾನೆ. ತನಿಖೆಯ ಹಿನ್ನೆಲೆ ಆತ ಕೂಡ ಪೊಲೀಸ್ ಠಾಣೆಯಲ್ಲಿ ತನ್ನ ಹೇಳಿಕೆ ನೀಡಿದ್ದಾನೆ. ಆತ ತನ್ನ ಆಟೋದಲ್ಲಿ ಸೈಫ್ ಅಲಿ ಖಾನ್ ಅವರನ್ನು ಕೂರಿಸಿದ್ದನಂತೆ. ಹಾಗೆ ಸೈಫ್ ಅವರೇ ಲೀಲಾವತಿ ಆಸ್ಪತ್ರೆಗೆ ಹೋಗುವಂತೆ ಹೇಳಿದ್ದರಂತೆ.
ನನ್ನನ್ನು ವಿಚಾರಣೆಗಾಗಿ ಬಾಂದ್ರಾ ಪೊಲೀಸ್ ಠಾಣೆಗೆ ಕರೆಯಲಾಯಿತು. ಆ ರಾತ್ರಿ ನಾನು ಹಣದ ಬಗ್ಗೆ ಯೋಚಿಸಲಿಲ್ಲ. ಇಲ್ಲಿಯವರೆಗೆ ಕರೀನಾ ಕಪೂರ್ ಅಥವಾ ಬೇರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ನಾನು ಅವರೊಂದಿಗೆ ಯಾವುದೇ ಸಂಭಾಷಣೆ ನಡೆಸಿಲ್ಲ ಎಂದು ಆಟೋ ಚಾಲಕ ಹೇಳಿಕೊಂಡಿದ್ದಾರೆ.
ಅವರ ಬೆನ್ನಿನ ಭಾಗದಿಂದ ರಕ್ತ ಸುರಿಯುತ್ತಿರುವುದು ನನಗೆ ಕಾಣಿಸಿತು, ಇದು ನನಗೂ ನೋವುಂಟು ಮಾಡಿತ್ತು. ಆರಂಭದಲ್ಲಿ ಸೈಫ್ ಅಲಿ ಖಾನ್ ನನ್ನ ರಿಕ್ಷಾದಲ್ಲಿ ಕುಳಿತಿದ್ದಾರೆಂದು ನನಗೆ ತಿಳಿದಿರಲಿಲ್ಲ. ಯಾರೋ ಗಾಯಗೊಂಡ ವ್ಯಕ್ತಿ ನನ್ನ ಆಟೋ ಹತ್ತಿದ್ದಾರೆ ಅಂತಲೇ ನಾನು ಭಾವಿಸಿದ್ದೆ. ಆದ್ರೆ ಲೀಲಾವತಿ ಆಸ್ಪತ್ರೆಯಲ್ಲಿ ಅವರನ್ನು ಇಳಿಸಿದಾಗ ಅವರ ಮಗ ಹಾಗೂ ಸೈಫ್ ಮುಖ ನನಗೆ ಕಂಡಿತು. ಆಗ ನಟನಿಗೆ ಏನೋ ಆಗಿದೆ ಎಂಬುದನ್ನು ನನಗೆ ತಿಳಿಯಿತು ಎಂದು ಆಟೋ ಚಾಲಕ ಹೇಳಿದ್ದಾರೆ.
ಆಸ್ಪತ್ರೆಯ ಗೇಟ್ ಮುಂದೆ ನಾನು ಆಟೋ ನಿಲ್ಲಿಸಿದಾಗ ಆಂಬ್ಯುಲೆನ್ಸ್ ಶಬ್ದ ಸಿಬ್ಬಂದಿ ಬರುವುದು ಎಲ್ಲಾ ಕಾಣಿಸಿತು. ಅಷ್ಟರಾಗಲೇ ಆಸ್ಪತ್ರೆ ಸಿಬ್ಬಂದಿಗೂ ಇದು ನಟ ಸೈಫ್ ಅಲಿ ಖಾಬ್ ಎಂದು ತಿಳಿದುಬಂದಿತ್ತು. ಹೀಗಾಗಿ ವೇಗವಾಗಿ ಧಾವಿಸಿದರು. ಅವರ ಬೆನ್ನಿನಿಂದ ರಕ್ತ ವಿಪರೀತವಾಗಿ ಬರುತ್ತಿತ್ತು. ಆದ್ರೆ ಆಟೋದಲ್ಲಿದ್ದಾಗ ನನಗೆ ಅವರು ಎಂದು ತಿಳಿದಿರಲಿಲ್ಲ. ಎಷ್ಟು ಬೇಗ ಸಾಧ್ಯವೋ ಅಷ್ಟು ವೇಗವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವುದು ನನ್ನ ಗಮನದಲ್ಲಿತ್ತು. ಆಸ್ಪತ್ರೆ ಗೇಟ್ ಬಳಿ ಬಂದ ನಂತರ ಅವರನ್ನು ನೋಡಲು ಅವಕಾಶ ಸಿಗಲಿಲ್ಲ ಎಂದು ಆತ ಹೇಳಿಕೊಂಡಿದ್ದಾನೆ.
ಆದ್ರೆ ಅವರ ಬಳಿ ನಾನು ಯಾವುದೇ ಹಣ ಪಡೆಯಲಿಲ್ಲ. ಹಾಗೆ ಅಲ್ಲಿಂದ ಮರಳಿದೆ. ಇದಾದ ಬಳಿಕ ಯಾರು ಕೂಡ ನನ್ನ ಸಂಪರ್ಕಿಸಿರಲಿಲ್ಲ, ಪೊಲೀಸರ ಮುಂದೆ ನನಗೆ ತಿಳಿದ ವಿಚಾರ ಹೇಳಿದ್ದೇನೆ ಎಂದು ಆಟೋ ಚಾಲಕ ಅಂದು ನಡೆದ ಘಟನೆಯನ್ನು ವಿವರಿಸಿದ್ದಾನೆ.



Click it and Unblock the Notifications











