Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ನಾಗರ ಹಾವಿಗೂ ಇವೆ ಗೋರಿಗಳು..! ಬನಗಳು ಹುಟ್ಟಿಕೊಂಡಿದ್ದು ಏಕೆ ಗೊತ್ತಾ?
ಹಿಂದುಗಳ ಹಬ್ಬವಾಗಿರುವ ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರ ಶಿಲೆಗಳಿಗೆ ಪೂಜೆ ಮಾಡಲಾಗುತ್ತದೆ. ನಾಗರ ಬನದಲ್ಲಿ ವಿಶೇಷ ಪೂಜೆ ಹಾಗೂ ಕಲ್ಲಿಗೆ ಹಾಲೆರೆದು ಜನ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ನಾಗರ ಪಂಚಮಿ ಹಿಂದೂಗಳಿಗೆ ಪ್ರಮುಖ ಹಬ್ಬವಾಗಿದೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ನಾಗರ ಪಂಚಮಿಯನ್ನು ಶ್ರಾವಣ ಮಾಸದ ಶುಕ್ಲಪಕ್ಷದಲ್ಲಿ ಬರುವ ಐದನೆ ದಿನ ಅಂದರೆ ಪಂಚಮಿಯಂದು ಆಚರಿಸಲಾಗುತ್ತದೆ. ಇದು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಬರುತ್ತದೆ. ನಂಬಿಕೆಗಳ ಪ್ರಕಾರ ಶ್ರೀ ಕೃಷ್ಣನು ಕಾಳಿಯ ಎಂಬ ಹಾವಿನ ಉಪಟಳದಿಂದ ಜನರನ್ನು ರಕ್ಷಿಸಿದ ದಿನವೆಂದು ಈ ದಿನವನ್ನು ಕರೆಯಲಾಗುತ್ತದೆ. ಆದರೆ ನಿಮಗೆ ಗೊತ್ತಾ ನಾಗರಬನಗಳು ಹುಟ್ಟಿಕೊಂಡಿದ್ದು ಹೇಗೆ? ಈ ಹಬ್ಬ ಹುಟ್ಟಿದ್ದು ಹೇಗೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.

ಪ್ರತಿ ಊರಲ್ಲೂ ಒಂದೊಂದು ನಾಗರ ಬನ ಇರುವುದು ನಾವು ನೋಡುತ್ತೇವೆ. ನಿಮಗೆ ಅಚ್ಚರಿಯಾಗಬಹುದು. ಕಾಡುಗಳಲ್ಲಿಯೂ ನಾಗರ ಕಲ್ಲುಗಳು ಪತ್ತೆಯಾಗುತ್ತೆ. ಗ್ರಾಮದಲ್ಲೊಂದು ನಾಗರ ಬನ ಇರುವುದನ್ನು ನಾವು ನೋಡಿರುತ್ತೇವೆ. ಹಾಗಾದ್ರೆ ಈ ನಾಗರ ಬನಗಳು ಹುಟ್ಟಿಕೊಂಡಿದ್ದು ಹೇಗೆ ಎಂಬುದೇ ಅಚ್ಚರಿಯ ಮಾಹಿತಿಯಾಗಿದೆ.
ಪ್ರತಿ ಊರಿನಲ್ಲಿ ನಾಗರ ಹಾವುಗಳನ್ನು ದೇವರ ಸ್ವರೂಪ ಎಂದು ಪೂಜಿಸಲಾಗಿತ್ತು. ಊರಿನಲ್ಲಿ ಯಾವುದಾದರು ನಾಗರ ಹಾವು ಸತ್ತಿದ್ದರೆ ಅಂತಹ ಹಾವುಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸುತ್ತಿದ್ದರು. ನಮ್ಮ ಪೂರ್ವಜರು ಈ ರೀತಿ ಸತ್ತ ಹಾವುಗಳಿಗೆ ಕಾರ್ಯ ಮಾಡಲು ಮಾಡಿಟ್ಟ ಸ್ಥಳ ಇದಾಗಿದ್ದವಂತೆ. ಬಳಿಕ ಅದೇ ಜಾಗದಲ್ಲಿ ಕಲ್ಲುಗಳ ಇಟ್ಟು ಪೂಜಿಸಲು ಮುಂದಾದರು, ಬರು ಬರುತ್ತಾ ಈ ಜಾಗಗಳು ನಾಗರ ಬನಗಳಾದವು. ನೀವು ಕಾಡಿನಲ್ಲಿ ಕೆಲವೊಮ್ಮೆ ಒಂದೇ ಒಂದು ನಾಗರ ಕಲ್ಲು ಸಿಕ್ಕುವುದು ಸಮಾನ್ಯ, ಈ ರೀತಿ ಪೂರ್ವಜರು ಹಾವಿನ ಅಂತ್ಯ ಸಂಸ್ಕಾರದ ಬಳಿಕ ಅಲ್ಲಿ ಕಲ್ಲುಗಳನ್ನು ಗುರುತುಗಳಿಗಾಗಿ ಇಡುತ್ತಿದ್ದರು ಎಂದು ಹೇಳಲಾಗಿದೆ.
ಹೀಗಾಗಿ ನಾಗರ ಪಂಚಮಿ ಎಂದು ಈ ದಿನ ಜನರು ಭೂಮಿಯನ್ನು ಅಗೆಯಲು ಹೋಗುವುದಿಲ್ಲ. ಅದರ ಬದಲಿಗೆ ನಾಗರ ಕಲ್ಲು, ಮಣ್ಣಿನ ನಾಗ ಅಥವಾ ಚಿತ್ರ ಪಟದ ಮುಂದೆ ಉರಿದ ಭತ್ತ, ಧೂರ್ವವನ್ನು ಇಟ್ಟು ಪೂಜಿಸಲಾಗುತ್ತದೆ. ಇನ್ನು ಹಿಂದೆ ಇದು ಮಳೆಗಾಲದ ಸಮಯದಲ್ಲಿ ಹೆಚ್ಚಾಗಿ ಹಾವುಗಳು ಹೊರಗೆ ಕಾಣಿಸಿಕೊಳ್ಳುತ್ತಿದ್ದ ಕಾರಣದಿಂದ ಪೂರ್ವಜರು ಭಯಗೊಂಡು ಅವುಗಳಿಗೆ ಪೂಜೆ ಮಾಡಲು ಮುಂದಾದರಂತೆ. ಇದರಿಂದ ನಾಗರ ಪಂಚಮಿ ಆರಂಭಗೊಂಡಿತು ಎಂದು ಹೇಳಲಾಗಿದೆ.
ನಾಗನಿಗೆ ಇದೆ ಗೋರಿಗಳು
ಮನುಷ್ಯರಿಗೆ ಮಾತ್ರವಲ್ಲ ನಾಗರ ಹಾವಿಗೂ ಗೋರಿ ಕಟ್ಟಿರುವುದನ್ನು ನಾವು ನೋಡಬಹುದು. ಮಂಗಳೂರು ಸಮೀಪದ ಮೂಡುಬಿದ್ರೆ ಬಳಿಯ ಬೆಟಗೇರಿ ಎಂಬಲ್ಲಿ ಇಂದಿಗೂ ಹತ್ತಾರು ನಾಗನ ಗೋರಿಗಳು ಕಾಣಸಿಗುತ್ತವೆ. ಇವು ಹತ್ತಾರು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಗೋರಿಗಳಾಗಿವೆ. ನಾಗರ ಹಾವು ಮೃತಪಟ್ಟ ಬಳಿಕ ಅವುಗಳ ಅಂತಿಮ ಸಂಸ್ಕಾರ ನೆರವೇರಿಸಿ ಮಾಡಲಾಗಿರುವ ಗೋರಿಗಳು ಎನ್ನಲಾಗುತ್ತದೆ.
ಇಲ್ಲಿರುವ ನಾಗಬನದಲ್ಲಿ ಇಲ್ಲಿನ ಆದಿವಾಸಿಗಳಿಂದ ಪಾದೆಕಲ್ಲನ್ನು ಹಾಸಿ ನಾಗನನ್ನು ನಂಬಿದ್ದಾರೆ. ಇಲ್ಲಿ ಜೈನರ ನಾಗನ ಗೋರಿ ಇಲ್ಲ.ಮೂಲ ನಾಗನ ಕಲ್ಲಿಗೆ ವೈಷ್ಣವರ ಶೈಲಿಯಲ್ಲಿ ನಾಗನ ಪ್ರತಿಮೆಯನ್ನು ಪ್ರತಿಷ್ಟೆ ಮಾಡಲಾಗಿದೆ. ಈ ರೀತಿಯ ರಚನೆಗಳು ಬೇರೆ ಎಲ್ಲಿಯೂ ನೋಡಲು ಸಾಧ್ಯವಾಗುವುದಿಲ್ಲ. ಇನ್ನು ಹಳ್ಳಿ ಹಳ್ಳಿಗಳಲ್ಲು ನಾಗರ ಬನಗಳು ಕಾಣಸಿಗೋದು ಸಹ ನಮ್ಮ ಪೂರ್ವಜರ ಕೊಡುಗೆಯಾಗಿದೆ.



Click it and Unblock the Notifications
