Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ನಾಗರ ಹಾವಿಗೂ ಇವೆ ಗೋರಿಗಳು..! ಬನಗಳು ಹುಟ್ಟಿಕೊಂಡಿದ್ದು ಏಕೆ ಗೊತ್ತಾ?
ಹಿಂದುಗಳ ಹಬ್ಬವಾಗಿರುವ ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರ ಶಿಲೆಗಳಿಗೆ ಪೂಜೆ ಮಾಡಲಾಗುತ್ತದೆ. ನಾಗರ ಬನದಲ್ಲಿ ವಿಶೇಷ ಪೂಜೆ ಹಾಗೂ ಕಲ್ಲಿಗೆ ಹಾಲೆರೆದು ಜನ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ನಾಗರ ಪಂಚಮಿ ಹಿಂದೂಗಳಿಗೆ ಪ್ರಮುಖ ಹಬ್ಬವಾಗಿದೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ನಾಗರ ಪಂಚಮಿಯನ್ನು ಶ್ರಾವಣ ಮಾಸದ ಶುಕ್ಲಪಕ್ಷದಲ್ಲಿ ಬರುವ ಐದನೆ ದಿನ ಅಂದರೆ ಪಂಚಮಿಯಂದು ಆಚರಿಸಲಾಗುತ್ತದೆ. ಇದು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಬರುತ್ತದೆ. ನಂಬಿಕೆಗಳ ಪ್ರಕಾರ ಶ್ರೀ ಕೃಷ್ಣನು ಕಾಳಿಯ ಎಂಬ ಹಾವಿನ ಉಪಟಳದಿಂದ ಜನರನ್ನು ರಕ್ಷಿಸಿದ ದಿನವೆಂದು ಈ ದಿನವನ್ನು ಕರೆಯಲಾಗುತ್ತದೆ. ಆದರೆ ನಿಮಗೆ ಗೊತ್ತಾ ನಾಗರಬನಗಳು ಹುಟ್ಟಿಕೊಂಡಿದ್ದು ಹೇಗೆ? ಈ ಹಬ್ಬ ಹುಟ್ಟಿದ್ದು ಹೇಗೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.

ಪ್ರತಿ ಊರಲ್ಲೂ ಒಂದೊಂದು ನಾಗರ ಬನ ಇರುವುದು ನಾವು ನೋಡುತ್ತೇವೆ. ನಿಮಗೆ ಅಚ್ಚರಿಯಾಗಬಹುದು. ಕಾಡುಗಳಲ್ಲಿಯೂ ನಾಗರ ಕಲ್ಲುಗಳು ಪತ್ತೆಯಾಗುತ್ತೆ. ಗ್ರಾಮದಲ್ಲೊಂದು ನಾಗರ ಬನ ಇರುವುದನ್ನು ನಾವು ನೋಡಿರುತ್ತೇವೆ. ಹಾಗಾದ್ರೆ ಈ ನಾಗರ ಬನಗಳು ಹುಟ್ಟಿಕೊಂಡಿದ್ದು ಹೇಗೆ ಎಂಬುದೇ ಅಚ್ಚರಿಯ ಮಾಹಿತಿಯಾಗಿದೆ.
ಪ್ರತಿ ಊರಿನಲ್ಲಿ ನಾಗರ ಹಾವುಗಳನ್ನು ದೇವರ ಸ್ವರೂಪ ಎಂದು ಪೂಜಿಸಲಾಗಿತ್ತು. ಊರಿನಲ್ಲಿ ಯಾವುದಾದರು ನಾಗರ ಹಾವು ಸತ್ತಿದ್ದರೆ ಅಂತಹ ಹಾವುಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸುತ್ತಿದ್ದರು. ನಮ್ಮ ಪೂರ್ವಜರು ಈ ರೀತಿ ಸತ್ತ ಹಾವುಗಳಿಗೆ ಕಾರ್ಯ ಮಾಡಲು ಮಾಡಿಟ್ಟ ಸ್ಥಳ ಇದಾಗಿದ್ದವಂತೆ. ಬಳಿಕ ಅದೇ ಜಾಗದಲ್ಲಿ ಕಲ್ಲುಗಳ ಇಟ್ಟು ಪೂಜಿಸಲು ಮುಂದಾದರು, ಬರು ಬರುತ್ತಾ ಈ ಜಾಗಗಳು ನಾಗರ ಬನಗಳಾದವು. ನೀವು ಕಾಡಿನಲ್ಲಿ ಕೆಲವೊಮ್ಮೆ ಒಂದೇ ಒಂದು ನಾಗರ ಕಲ್ಲು ಸಿಕ್ಕುವುದು ಸಮಾನ್ಯ, ಈ ರೀತಿ ಪೂರ್ವಜರು ಹಾವಿನ ಅಂತ್ಯ ಸಂಸ್ಕಾರದ ಬಳಿಕ ಅಲ್ಲಿ ಕಲ್ಲುಗಳನ್ನು ಗುರುತುಗಳಿಗಾಗಿ ಇಡುತ್ತಿದ್ದರು ಎಂದು ಹೇಳಲಾಗಿದೆ.
ಹೀಗಾಗಿ ನಾಗರ ಪಂಚಮಿ ಎಂದು ಈ ದಿನ ಜನರು ಭೂಮಿಯನ್ನು ಅಗೆಯಲು ಹೋಗುವುದಿಲ್ಲ. ಅದರ ಬದಲಿಗೆ ನಾಗರ ಕಲ್ಲು, ಮಣ್ಣಿನ ನಾಗ ಅಥವಾ ಚಿತ್ರ ಪಟದ ಮುಂದೆ ಉರಿದ ಭತ್ತ, ಧೂರ್ವವನ್ನು ಇಟ್ಟು ಪೂಜಿಸಲಾಗುತ್ತದೆ. ಇನ್ನು ಹಿಂದೆ ಇದು ಮಳೆಗಾಲದ ಸಮಯದಲ್ಲಿ ಹೆಚ್ಚಾಗಿ ಹಾವುಗಳು ಹೊರಗೆ ಕಾಣಿಸಿಕೊಳ್ಳುತ್ತಿದ್ದ ಕಾರಣದಿಂದ ಪೂರ್ವಜರು ಭಯಗೊಂಡು ಅವುಗಳಿಗೆ ಪೂಜೆ ಮಾಡಲು ಮುಂದಾದರಂತೆ. ಇದರಿಂದ ನಾಗರ ಪಂಚಮಿ ಆರಂಭಗೊಂಡಿತು ಎಂದು ಹೇಳಲಾಗಿದೆ.
ನಾಗನಿಗೆ ಇದೆ ಗೋರಿಗಳು
ಮನುಷ್ಯರಿಗೆ ಮಾತ್ರವಲ್ಲ ನಾಗರ ಹಾವಿಗೂ ಗೋರಿ ಕಟ್ಟಿರುವುದನ್ನು ನಾವು ನೋಡಬಹುದು. ಮಂಗಳೂರು ಸಮೀಪದ ಮೂಡುಬಿದ್ರೆ ಬಳಿಯ ಬೆಟಗೇರಿ ಎಂಬಲ್ಲಿ ಇಂದಿಗೂ ಹತ್ತಾರು ನಾಗನ ಗೋರಿಗಳು ಕಾಣಸಿಗುತ್ತವೆ. ಇವು ಹತ್ತಾರು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಗೋರಿಗಳಾಗಿವೆ. ನಾಗರ ಹಾವು ಮೃತಪಟ್ಟ ಬಳಿಕ ಅವುಗಳ ಅಂತಿಮ ಸಂಸ್ಕಾರ ನೆರವೇರಿಸಿ ಮಾಡಲಾಗಿರುವ ಗೋರಿಗಳು ಎನ್ನಲಾಗುತ್ತದೆ.
ಇಲ್ಲಿರುವ ನಾಗಬನದಲ್ಲಿ ಇಲ್ಲಿನ ಆದಿವಾಸಿಗಳಿಂದ ಪಾದೆಕಲ್ಲನ್ನು ಹಾಸಿ ನಾಗನನ್ನು ನಂಬಿದ್ದಾರೆ. ಇಲ್ಲಿ ಜೈನರ ನಾಗನ ಗೋರಿ ಇಲ್ಲ.ಮೂಲ ನಾಗನ ಕಲ್ಲಿಗೆ ವೈಷ್ಣವರ ಶೈಲಿಯಲ್ಲಿ ನಾಗನ ಪ್ರತಿಮೆಯನ್ನು ಪ್ರತಿಷ್ಟೆ ಮಾಡಲಾಗಿದೆ. ಈ ರೀತಿಯ ರಚನೆಗಳು ಬೇರೆ ಎಲ್ಲಿಯೂ ನೋಡಲು ಸಾಧ್ಯವಾಗುವುದಿಲ್ಲ. ಇನ್ನು ಹಳ್ಳಿ ಹಳ್ಳಿಗಳಲ್ಲು ನಾಗರ ಬನಗಳು ಕಾಣಸಿಗೋದು ಸಹ ನಮ್ಮ ಪೂರ್ವಜರ ಕೊಡುಗೆಯಾಗಿದೆ.



Click it and Unblock the Notifications
