Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಮಾನಸ ಸರೋವರ ಯಾತ್ರೆಗೆ ಅರ್ಜಿ ಸಲ್ಲಿಸೋದು ಹೇಗೆ? ಎಷ್ಟು ಖರ್ಚಾಗಲಿದೆ?
ಕೋವಿಡ್ ಹಾಗೂ ಚೀನಾ ನಡುವಿನ ಬಿಕ್ಕಟ್ಟಿನ ಸಮಯದಲ್ಲಿ ತಾತ್ಕಾಲಿಕವಾಗಿ ಕೊನೆಯಗೊಂಡಿದ್ದ ಕೈಲಾಸ ಮಾನಸ ಸರೋವರ ಯಾತ್ರೆ ಈ ವರ್ಷ ಜುಲೈನಲ್ಲಿ ಆರಂಭಗೊಂಡಿತ್ತು. 5 ವರ್ಷಗಳ ವಿರಾಮದ ಬಳಿಕ ಮತ್ತೆ ಆರಂಭಗೊಂಡ ಯಾತ್ರೆ ಮುಂದುವರೆಸಲು ಯಾತ್ರಿಗಳು ನೋಂದಾಯಿಸಿಕೊಳ್ಳಲು ಮುಂದಾಗಿದ್ದರು. ಅದಾದ ಬಳಿಕ ಸುಮಾರು 36 ಯಾತ್ರಿಗಳ ಮೊದಲ ತಂಡ 5 ವರ್ಷದ ಬಳಿಕ ಸಿಕ್ಕಿಂ ದಾಟಿ ಚೀನಾ ಗಡಿ ದಾಟಿ ಮುಂದೆ ಸಾಗಿದ್ದರು.
ಈ ಯಾತ್ರೆಗೆ ನಿಗದಿತ ಸಮಯದಲ್ಲಿ ಹಾಗೆ ಪೂರ್ವ ನೋಂದಾಯಿತರಿಗೆ ಮಾತ್ರವೇ ಅವಕಾಶ ನೀಡಲಾಗುತ್ತದೆ. ಈ ವರ್ಷ ಸುಮಾರು 750 ಮಂದಿ ಈ ಯಾತ್ರೆಗೆ ಆಯ್ಕೆಯಾಗಿದ್ದರು. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸ ಪರ್ವತವು ಶಿವನ ವಾಸಸ್ಥಾನವಾಗಿದ್ದು, ಮತ್ತು ಅದನ್ನು ಪ್ರದಕ್ಷಿಣೆ ಹಾಕಿ ಮಾನಸ ಸರೋವರದಲ್ಲಿ ಸ್ನಾನ ಮಾಡುವುದರಿಂದ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ.

ಕೈಲಾಸ ಪರ್ವತ ಮತ್ತು ಮಾನಸ ಸರೋವರದ ಶಾಂತತೆಗೆ ಹೆಸರಾಗಿದೆ. ಕಟ್ಟುನಿಟ್ಟಾದ ಅರ್ಹತಾ ಮಾನದಂಡಗಳು ಮತ್ತು ಎಚ್ಚರಿಕೆಯ ಸಿದ್ಧತೆಯೊಂದಿಗೆ, ಯಾತ್ರಿಕರು ಶಿವನ ವಾಸಸ್ಥಾನ ಮತ್ತು ಮಾನಸ ಸರೋವರದ ಪ್ರಶಾಂತ, ಪವಿತ್ರ ಧಾಮಕ್ಕೆ ಭೇಟಿ ನೀಡುತ್ತಾರೆ. ಈ ಪರ್ವತವು
ಟಿಬೆಟಿಯನ್ ಸ್ವಾಯತ್ತ ಪ್ರದೇಶದ ದೂರದ ಪಶ್ಚಿಮ ಹಿಮಾಲಯ ಶ್ರೇಣಿಗಳಲ್ಲಿ ನೆಲೆಗೊಂಡಿದೆ.
ಬರೋಬ್ಬರಿ 6,638 ಮೀಟರ್ ಎತ್ತರವಿರುವ ಭವ್ಯವಾದ, ವಜ್ರದ ಆಕಾರ ಹೊಂದಿರುವ ಕೈಲಾಸ ಪರ್ವತ ಆಧ್ಯಾತ್ಮಿಕ ವಿಚಾರವಾಗಿ ಶಾಂತಿಯ ಮೂಲವಾಗಿ ಪರಿಗಣಿಸಲಾಗಿದೆ. ಇದು ಕೇವಲ ಹಿಂದುಗಳಿಗೆ ಮಾತ್ರವಲ್ಲದೆ ಜೈನ, ಬೌದ್ಧ ಹಾಗೂ ಬಾನ್ ಸಂಪ್ರದಾಯಿಗಳಿಗೂ ಪ್ರಮುಖ ಯಾತ್ರಾ ಸ್ಥಳವಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರತಿ ವರ್ಷ ಜೂನ್ ಮತ್ತು ಸೆಪ್ಟೆಂಬರ್ ನಡುವೆ ಅಧಿಕೃತ ಕೈಲಾಸ ಮಾನಸಸರೋವರ ಯಾತ್ರೆಯನ್ನು ನಡೆಸಲಿದೆ.
ಕೈಲಾಸ ಮಾನಸ ಸರೋವರ ಯಾತ್ರೆಗೆ ಆಯ್ಕೆ ಹೇಗೆ ಮಾಡುತ್ತಾರೆ?
ಕೈಲಾಸ ಮಾನಸ ಯಾತ್ರೆಯ ಸಂಬಂಧ ಎಲ್ಲರನ್ನೂ ಆಯ್ಕೆ ಮಾಡುವುದಿಲ್ಲ. ಈ ಯಾತ್ರೆಗೆ ತೆರಳಲು ಹಲವು ನಿಯಮಗಳು, ಅರ್ಹತಾ ಮಾನದಂಡಗಳಿವೆ. ಅರ್ಜಿ ಸಲ್ಲಿಸುವ ಭಕ್ತರು ಹಲವು ಷರತ್ತುಗಳಿಗೆ ಬದ್ದರಾಗಿರಬೇಕು. ಹಾಗೆ ಇಲಾಖಾ ನಿಯಮಗಳು ಮತ್ತು ಅರ್ಹತೆಯನ್ನು ಹೊಂದಿರಬೇಕು.
ಭಕ್ತರಿಗೆ ಇರಬೇಕಾದ ಅರ್ಹತೆ ಏನು?
ಭಾರತದ ಪ್ರಜೆಯಾಗಿರಬೇಕು
6 ತಿಂಗಳ ಮಾನ್ಯವಾಗಿರುವ ಭಾರತದ ಪಾಸ್ಪೋರ್ಟ್ ಹೊಂದಿರಬೇಕು
25 ವರ್ಷ ಮೇಲ್ಪಟ್ಟು 70 ವರ್ಷ ವಯಸ್ಸಿನೊಳಗಿರಬೇಕು
ದೈಹಿಕವಾಗಿ ಸದೃಢರಾಗಿರಬೇಕು ಮತ್ತು ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕು
ಕೈಲಾಸ ಯಾತ್ರೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಸ್ಕ್ಯಾನ್ ಮಾಡಿದ ಪಾಸ್ಪೋರ್ಟ್ ಸೈಜ್ ಫೋಟೋ, ವೈಯಕ್ತಿಕ ಮಾಹಿತಿ ಹೊಂದಿರುವ ದಾಖಲೆಗಳು, ಆಧಾರ್, ಗುರುತಿನ ಚೀಟಿ, ಕುಟುಂಬ ಮಾಹಿತಿಯ ದಾಖಲೆ, ವೈದ್ಯಕೀಯ ಪ್ರಮಾಣ ಪತ್ರ (ಅಗತ್ಯತೆ ಇದ್ದರೆ) ಪಾಸ್ಪೋರ್ಟ್ ಸೇರಿ ಕೆಲವು ದಾಖಲೆಗಳ ನೀಡಬೇಕಾಗುತ್ತದೆ.
ಮಾನಸ ಸರೋವರ ಯಾತ್ರೆಗೆ ಅಂದಾಜು ಎಷ್ಟು ಖರ್ಚಾಗುತ್ತದೆ
ತೀರ್ಥಯಾತ್ರೆಯ ವೆಚ್ಚವು ಆಯ್ಕೆ ಮಾಡಿದ ಮಾರ್ಗವನ್ನು ಅವಲಂಬಿಸಿ ಬದಲಾಗುತ್ತದೆ. ಉತ್ತರಾಖಂಡ್ ಮಾರ್ಗವು 1.74 ರೂಪಾಯಿ ವೆಚ್ಚದಾಯಕವಾಗಿದ್ದರೆ ಸಿಕ್ಕಿಂನ ಮಾರ್ಗವು ಪ್ರತಿ ವ್ಯಕ್ತಿಗೆ 2.83 ಲಕ್ಷ ರೂಪಾಯಿ ಖರ್ಚಾಗಲಿದೆ. ಈ ಖರ್ಚು ವೈಯಕ್ತಿಕ ಕಾರಣದಿಂದಾಗಿ ಹೆಚ್ಚು ಕಡಿಮೆ ಆಗಬಹುದು. ಹಾಗೆ ನೀವು ಯಾವ ಭಾಗದಿಂದ ಪ್ರಯಾಣಿಸುತ್ತೀರಿ ಎನ್ನುವುದು ಸೇರಿದಂತೆ ಹಲವು ಕಾರಣಗಳಿಂದ ಈ ಮೊತ್ತ ಬದಲಾಗುತ್ತದೆ. ಹಾಗೆ ಲಘು ವಿಮಾನ ಸೇವೆಯನ್ನು ಸಹ ಆರಂಭಿಸಿದ್ದನ್ನು ಇಲ್ಲಿ ನೆನೆಯಬಹುದು.



Click it and Unblock the Notifications