Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
ಮಾನಸ ಸರೋವರ ಯಾತ್ರೆಗೆ ಅರ್ಜಿ ಸಲ್ಲಿಸೋದು ಹೇಗೆ? ಎಷ್ಟು ಖರ್ಚಾಗಲಿದೆ?
ಕೋವಿಡ್ ಹಾಗೂ ಚೀನಾ ನಡುವಿನ ಬಿಕ್ಕಟ್ಟಿನ ಸಮಯದಲ್ಲಿ ತಾತ್ಕಾಲಿಕವಾಗಿ ಕೊನೆಯಗೊಂಡಿದ್ದ ಕೈಲಾಸ ಮಾನಸ ಸರೋವರ ಯಾತ್ರೆ ಈ ವರ್ಷ ಜುಲೈನಲ್ಲಿ ಆರಂಭಗೊಂಡಿತ್ತು. 5 ವರ್ಷಗಳ ವಿರಾಮದ ಬಳಿಕ ಮತ್ತೆ ಆರಂಭಗೊಂಡ ಯಾತ್ರೆ ಮುಂದುವರೆಸಲು ಯಾತ್ರಿಗಳು ನೋಂದಾಯಿಸಿಕೊಳ್ಳಲು ಮುಂದಾಗಿದ್ದರು. ಅದಾದ ಬಳಿಕ ಸುಮಾರು 36 ಯಾತ್ರಿಗಳ ಮೊದಲ ತಂಡ 5 ವರ್ಷದ ಬಳಿಕ ಸಿಕ್ಕಿಂ ದಾಟಿ ಚೀನಾ ಗಡಿ ದಾಟಿ ಮುಂದೆ ಸಾಗಿದ್ದರು.
ಈ ಯಾತ್ರೆಗೆ ನಿಗದಿತ ಸಮಯದಲ್ಲಿ ಹಾಗೆ ಪೂರ್ವ ನೋಂದಾಯಿತರಿಗೆ ಮಾತ್ರವೇ ಅವಕಾಶ ನೀಡಲಾಗುತ್ತದೆ. ಈ ವರ್ಷ ಸುಮಾರು 750 ಮಂದಿ ಈ ಯಾತ್ರೆಗೆ ಆಯ್ಕೆಯಾಗಿದ್ದರು. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸ ಪರ್ವತವು ಶಿವನ ವಾಸಸ್ಥಾನವಾಗಿದ್ದು, ಮತ್ತು ಅದನ್ನು ಪ್ರದಕ್ಷಿಣೆ ಹಾಕಿ ಮಾನಸ ಸರೋವರದಲ್ಲಿ ಸ್ನಾನ ಮಾಡುವುದರಿಂದ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ.

ಕೈಲಾಸ ಪರ್ವತ ಮತ್ತು ಮಾನಸ ಸರೋವರದ ಶಾಂತತೆಗೆ ಹೆಸರಾಗಿದೆ. ಕಟ್ಟುನಿಟ್ಟಾದ ಅರ್ಹತಾ ಮಾನದಂಡಗಳು ಮತ್ತು ಎಚ್ಚರಿಕೆಯ ಸಿದ್ಧತೆಯೊಂದಿಗೆ, ಯಾತ್ರಿಕರು ಶಿವನ ವಾಸಸ್ಥಾನ ಮತ್ತು ಮಾನಸ ಸರೋವರದ ಪ್ರಶಾಂತ, ಪವಿತ್ರ ಧಾಮಕ್ಕೆ ಭೇಟಿ ನೀಡುತ್ತಾರೆ. ಈ ಪರ್ವತವು
ಟಿಬೆಟಿಯನ್ ಸ್ವಾಯತ್ತ ಪ್ರದೇಶದ ದೂರದ ಪಶ್ಚಿಮ ಹಿಮಾಲಯ ಶ್ರೇಣಿಗಳಲ್ಲಿ ನೆಲೆಗೊಂಡಿದೆ.
ಬರೋಬ್ಬರಿ 6,638 ಮೀಟರ್ ಎತ್ತರವಿರುವ ಭವ್ಯವಾದ, ವಜ್ರದ ಆಕಾರ ಹೊಂದಿರುವ ಕೈಲಾಸ ಪರ್ವತ ಆಧ್ಯಾತ್ಮಿಕ ವಿಚಾರವಾಗಿ ಶಾಂತಿಯ ಮೂಲವಾಗಿ ಪರಿಗಣಿಸಲಾಗಿದೆ. ಇದು ಕೇವಲ ಹಿಂದುಗಳಿಗೆ ಮಾತ್ರವಲ್ಲದೆ ಜೈನ, ಬೌದ್ಧ ಹಾಗೂ ಬಾನ್ ಸಂಪ್ರದಾಯಿಗಳಿಗೂ ಪ್ರಮುಖ ಯಾತ್ರಾ ಸ್ಥಳವಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರತಿ ವರ್ಷ ಜೂನ್ ಮತ್ತು ಸೆಪ್ಟೆಂಬರ್ ನಡುವೆ ಅಧಿಕೃತ ಕೈಲಾಸ ಮಾನಸಸರೋವರ ಯಾತ್ರೆಯನ್ನು ನಡೆಸಲಿದೆ.
ಕೈಲಾಸ ಮಾನಸ ಸರೋವರ ಯಾತ್ರೆಗೆ ಆಯ್ಕೆ ಹೇಗೆ ಮಾಡುತ್ತಾರೆ?
ಕೈಲಾಸ ಮಾನಸ ಯಾತ್ರೆಯ ಸಂಬಂಧ ಎಲ್ಲರನ್ನೂ ಆಯ್ಕೆ ಮಾಡುವುದಿಲ್ಲ. ಈ ಯಾತ್ರೆಗೆ ತೆರಳಲು ಹಲವು ನಿಯಮಗಳು, ಅರ್ಹತಾ ಮಾನದಂಡಗಳಿವೆ. ಅರ್ಜಿ ಸಲ್ಲಿಸುವ ಭಕ್ತರು ಹಲವು ಷರತ್ತುಗಳಿಗೆ ಬದ್ದರಾಗಿರಬೇಕು. ಹಾಗೆ ಇಲಾಖಾ ನಿಯಮಗಳು ಮತ್ತು ಅರ್ಹತೆಯನ್ನು ಹೊಂದಿರಬೇಕು.
ಭಕ್ತರಿಗೆ ಇರಬೇಕಾದ ಅರ್ಹತೆ ಏನು?
ಭಾರತದ ಪ್ರಜೆಯಾಗಿರಬೇಕು
6 ತಿಂಗಳ ಮಾನ್ಯವಾಗಿರುವ ಭಾರತದ ಪಾಸ್ಪೋರ್ಟ್ ಹೊಂದಿರಬೇಕು
25 ವರ್ಷ ಮೇಲ್ಪಟ್ಟು 70 ವರ್ಷ ವಯಸ್ಸಿನೊಳಗಿರಬೇಕು
ದೈಹಿಕವಾಗಿ ಸದೃಢರಾಗಿರಬೇಕು ಮತ್ತು ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕು
ಕೈಲಾಸ ಯಾತ್ರೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಸ್ಕ್ಯಾನ್ ಮಾಡಿದ ಪಾಸ್ಪೋರ್ಟ್ ಸೈಜ್ ಫೋಟೋ, ವೈಯಕ್ತಿಕ ಮಾಹಿತಿ ಹೊಂದಿರುವ ದಾಖಲೆಗಳು, ಆಧಾರ್, ಗುರುತಿನ ಚೀಟಿ, ಕುಟುಂಬ ಮಾಹಿತಿಯ ದಾಖಲೆ, ವೈದ್ಯಕೀಯ ಪ್ರಮಾಣ ಪತ್ರ (ಅಗತ್ಯತೆ ಇದ್ದರೆ) ಪಾಸ್ಪೋರ್ಟ್ ಸೇರಿ ಕೆಲವು ದಾಖಲೆಗಳ ನೀಡಬೇಕಾಗುತ್ತದೆ.
ಮಾನಸ ಸರೋವರ ಯಾತ್ರೆಗೆ ಅಂದಾಜು ಎಷ್ಟು ಖರ್ಚಾಗುತ್ತದೆ
ತೀರ್ಥಯಾತ್ರೆಯ ವೆಚ್ಚವು ಆಯ್ಕೆ ಮಾಡಿದ ಮಾರ್ಗವನ್ನು ಅವಲಂಬಿಸಿ ಬದಲಾಗುತ್ತದೆ. ಉತ್ತರಾಖಂಡ್ ಮಾರ್ಗವು 1.74 ರೂಪಾಯಿ ವೆಚ್ಚದಾಯಕವಾಗಿದ್ದರೆ ಸಿಕ್ಕಿಂನ ಮಾರ್ಗವು ಪ್ರತಿ ವ್ಯಕ್ತಿಗೆ 2.83 ಲಕ್ಷ ರೂಪಾಯಿ ಖರ್ಚಾಗಲಿದೆ. ಈ ಖರ್ಚು ವೈಯಕ್ತಿಕ ಕಾರಣದಿಂದಾಗಿ ಹೆಚ್ಚು ಕಡಿಮೆ ಆಗಬಹುದು. ಹಾಗೆ ನೀವು ಯಾವ ಭಾಗದಿಂದ ಪ್ರಯಾಣಿಸುತ್ತೀರಿ ಎನ್ನುವುದು ಸೇರಿದಂತೆ ಹಲವು ಕಾರಣಗಳಿಂದ ಈ ಮೊತ್ತ ಬದಲಾಗುತ್ತದೆ. ಹಾಗೆ ಲಘು ವಿಮಾನ ಸೇವೆಯನ್ನು ಸಹ ಆರಂಭಿಸಿದ್ದನ್ನು ಇಲ್ಲಿ ನೆನೆಯಬಹುದು.



Click it and Unblock the Notifications











