Latest Updates
-
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್!
ಶುಕ್ರವಾರ ಈ ಲಕ್ಷ್ಮಿ ಕುಬೇರ ಮಂತ್ರ ಪಠಿಸಿ, ಆರ್ಥಿಕ ಸಂಕಷ್ಟ ದೂರಾಗುವುದು
ಶುಕ್ರವಾರ ಲಕ್ಷ್ಮಿ ಪೂಜೆ ಮಾಡಿದರೆ ಲಕ್ಷ್ಮಿ ನಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ ಎಂಬುವುದು ಅವಳನ್ನು ನಂಬಿರುವ ಭಕ್ತರ ಬಲವಾದ ನಂಬಿಕೆ. ಶ್ರೀ ಲಕ್ಷ್ಮಿಯನ್ನು ಪ್ರತಿ ಶುಕ್ರವಾರ ಅತ್ಯಂತ ಶ್ರದ್ಧಾ ಭಕ್ತಿಯಿಂದ ಪೂಜಿಸುತ್ತಾರೆ. ಈ ದಿನ ಉಪವಾಸವಿದ್ದು ಲಕ್ಷ್ಮಿಯನ್ನು ಆರಾಧಿಸಿದರೆ ಇನ್ನೂ ಒಳ್ಳೆಯದು, ಅವಳ ಕೃಪೆಗೆ ಬೇಗನೆ ಪಾತ್ರರಾಗುವಿರಿ.

ಲಕ್ಷ್ಮಿ ಒಲಿದರೆ ಹಣದ ಕೊರತೆಯೇ ಇರುವುದಿಲ್ಲ, ಮನೆಯಲ್ಲಿ ಸಂಪತ್ತು, ಸಮೃದ್ಧಿ ಹೆಚ್ಚುವುದು, ಆದ್ದರಿಂದ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಎಲ್ಲರೂ ಬಯಸುತ್ತಾರೆ. ನೀವು ಸಂಪತ್ತು ಹೆಚ್ಚಲು ಶುಕ್ರವಾರ ಪೂಜೆ ಮಾಡುವಾಗ ಲಕ್ಷ್ಮಿ ಕುಬೇರ ಮಂತ್ರಗಳನ್ನು ಹೇಳಿದರೆ ಇನ್ನೂ ಒಳ್ಳೆಯದು.
ಶುಕ್ರವಾರ ಲಕ್ಷ್ಮಿ ಪೂಜೆಯನ್ನು ಹೇಗೆ ಮಾಡಬೇಕು? ಈ ದಿನ ಪಠಿಸಬೇಕಾದ ಮಂತ್ರಗಳು ಇವುಗಳ ಕುರಿತ ಮಾಹಿತಿ ಇಲ್ಲಿದೆ:
ಲಕ್ಷ್ಮಿ ಪೂಜೆಗೆ ಸಿದ್ಧತೆ
* ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ. ಮಡಿ ಬಟ್ಟೆ ಧರಿಸಿ.
* ಶುಕ್ರವಾರ ಲಕ್ಷ್ಮಿಯನ್ನು ಪೂಜಿಸುವ ಮುನ್ನ ದೇವರ ಪೂಜಾ ವಸ್ತುಗಳು ಹಾಗೂ ದೇವರ ಕೋಣೆಯನ್ನು ಸ್ವಚ್ಛಗೊಳಿಸಬೇಕು. ಅವಳ ಮೂರ್ತಿಯನ್ನು ತೊಳೆದು ಇಡಬೇಕು, ಫೋಟೋವಾದರೆ ಒರೆಸಿ ಇಡಿ.
* ಮನೆಮುಂದೆ ಹಾಗೂ ದೇವರ ಕೋಣೆಯಲ್ಲಿ ರಂಗೋಲಿ ಹಾಕಿ.
* ನಂತರ ದೇವಯನ್ನು ಹಲಗೆಯ ಮೇಲೆ ಪ್ರತಿಷ್ಠಾಪಿಸಿ, ಅವಳಿಗೆ ಬಟ್ಟೆ, ಆಭರಣ, ಹೂ, ಹಣ್ಣುಗಳಿಂದ ಅಲಂಕರಿಸಿ.
* ಲಕ್ಷ್ಮಿಯನ್ನು ಪೂಜಿಸುವಾಗ ತುಂದು ಕಂಚಿನ ತಂಬಿಗೆಯಲ್ಲಿ ನೀರು ತುಂಬಿ ಅದರಲ್ಲಿ ನಾಣ್ಯ ಹಾಕಿ, ಜುಟ್ಟು ಇರುವ ತೆಂಗಿನಕಾಯಿ ಇಟ್ಟು ಕುಂಕುಮ ಇಡಲು ಮರೆಯದಿರಿ.
* ಶಂಖವೂ ಇದ್ದರೆ ಒಳ್ಳೆಯದು.
* ದೇವಿಗೆ ದೈವೇದ್ಯ ಅರ್ಪಿಸಲು ಅಕ್ಕಿ ಪಾಯಸ ಮಾಡಿಡಿ.
* ನಂತರ ದೇವಿಗೆ ತುಪ್ಪದ ದೀಪ ಹಚ್ಚಿ ಮಂತ್ರಗಳನ್ನು ಹೇಳಿ
* ನಂತರ ದೇವಿಗೆ ನೈವೇದ್ಯ ಅರ್ಪಿಸಿ.
* ನಂತರ ಆ ಪ್ರಸಾದವನ್ನು ಮನೆಮಂದಿಗೆ ಹಂಚಿ.
ಸಂಜೆ ಹೊತ್ತಿನಲ್ಲಿ ಲಕ್ಷ್ಮಿ ಪೂಜೆ
ಸಂಜೆ ಹೊತ್ತು ಲಕ್ಷ್ಮಿ ದೀಪ ಹಚ್ಚಿದ ಬಳಿಕ ಅವಳಿಗೆ ಆರತಿ ಮಾಡಿ ಮನೆ ಮುಂದೆ ತುಪ್ಪದ ಹಚ್ಚಿಡಬೇಕು. ದೀಪದ ಬತ್ತಿಗೆ ಕೆಂಪು ಬಣ್ಣದ ನೂಲು ಬಳಸಿದರೆ ಇನ್ನೂ ಒಳ್ಳೆಯದು. ಅವಳಿಗೆ ಬಿಳಿ ಹಾಗೂ ಕೆಂಪು ಹೂಗಳನ್ನು ಅರ್ಪಿಸಿ. ಮನೆ ಬಾಗಿಲಿನಲ್ಲಿ ದೀಪ ಬೆಳಗುವುದರಿಂದ ಲಕ್ಷ್ಮಿ ಒಲಿಯುತ್ತಾಳೆ ಇದರಿಂದ ನಿಮ್ಮ ಆರ್ಥಿಕತೆಯನ್ನು ಸುಧಾರಣೆ ಕಾಣುವಿರಿ.
ಶುಕ್ರವಾರ ಈ ಲಕ್ಷ್ಮಿ ಕುಬೇರ ಮಂತ್ರ ಪಠಿಸಿ
ಲಕ್ಷ್ಮಿ ಕುಬೇರ ಮಂತ್ರ: .
"ಓಂ ಹ್ರೀಂ ಶ್ರೀಂ ಕ್ರೀಂ ಶ್ರೀಂ ಕುಬೇರಾಯ, ಅಷ್ಟ ಲಕ್ಷ್ಮಿ ಮಮ ಗೃಹೆ ಧನಂ ಪುರಾಯ ಪುರಾಯ ನಮಃ"
ಮಹಾಲಕ್ಷ್ಮಿ ಮಂತ್ರ:
"ಓಂ ಶ್ರೀಂ ಹ್ರೀಂ ಶ್ರೀಂ ಕಮಲೆ ಕಮಲಲಾಯೆ ಪ್ರಸೀದ, ಪ್ರಸೀದ ಓಂ ಶ್ರೀಂ ಹ್ರೀಂ ಶ್ರೀಂ ಮಹಾಲಕ್ಷ್ಮಯೆ ನಮಃ"
ಕುಬೇರ ಮಂತ್ರ:
ಓಂ ಶ್ರೀಂ ಒಂ ಹ್ರೀಂ ಶ್ರೀಂ ಓಂ ಹ್ರೀಂ ಶ್ರೀಂ ಕ್ಲೀಮ್ ವಿತ್ತೆಶ್ವರಾಯ ನಮಃ
ಓಂ ಯಕ್ಷಾಯ ಕುಬೇರಾಯ ವೈಶ್ರವಣಾಯ ಧನಧಾನ್ಯಾಧಿಪತಯೇ ಧನಧಾನ್ಯಸಮೃದ್ಧಿಂ ಮೇ ದೇಹಿ ದಾಪಯ ಸ್ವಾಹಾ
ಈ ಮಂತ್ರಗಳನ್ನು ಪಠಿಸುವುದರಿಂದ ಲಕ್ಷ್ಮಿ ಪ್ರಸನ್ನಳಾಗುತ್ತಾಳೆ.



Click it and Unblock the Notifications

