Latest Updates
-
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ! -
ಎವೆಲಿನ್ ಶರ್ಮಾ ವಿಚ್ಛೇದನ: ಮಕ್ಕಳ ಭವಿಷ್ಯಕ್ಕಾಗಿ ಈ ಜೋಡಿ ಆರಿಸಿದ ಹೊಸ ದಾರಿ ಯಾವುದು? -
ಬಿಸಿಲ ಧಗೆಗೆ ತಂಪಾದ ಗುಡ್ ನ್ಯೂಸ್: ಮೇ 8 ರಿಂದ ಶುರುವಾಗಲಿದೆ ಗ್ರೇಟ್ ಸಮ್ಮರ್ ಸೇಲ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಪದ್ಧತಿಯಿಂದ ಇಡೀ ದಿನ ಇರಿ ಫ್ರೆಶ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಕೂಲ್ ಆಗಿರಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ಫಿಟ್ನೆಸ್ ದಿನಚರಿಯನ್ನು ಬದಲಾಯಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ!
ಶುಕ್ರವಾರ ಈ ಲಕ್ಷ್ಮಿ ಕುಬೇರ ಮಂತ್ರ ಪಠಿಸಿ, ಆರ್ಥಿಕ ಸಂಕಷ್ಟ ದೂರಾಗುವುದು
ಶುಕ್ರವಾರ ಲಕ್ಷ್ಮಿ ಪೂಜೆ ಮಾಡಿದರೆ ಲಕ್ಷ್ಮಿ ನಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ ಎಂಬುವುದು ಅವಳನ್ನು ನಂಬಿರುವ ಭಕ್ತರ ಬಲವಾದ ನಂಬಿಕೆ. ಶ್ರೀ ಲಕ್ಷ್ಮಿಯನ್ನು ಪ್ರತಿ ಶುಕ್ರವಾರ ಅತ್ಯಂತ ಶ್ರದ್ಧಾ ಭಕ್ತಿಯಿಂದ ಪೂಜಿಸುತ್ತಾರೆ. ಈ ದಿನ ಉಪವಾಸವಿದ್ದು ಲಕ್ಷ್ಮಿಯನ್ನು ಆರಾಧಿಸಿದರೆ ಇನ್ನೂ ಒಳ್ಳೆಯದು, ಅವಳ ಕೃಪೆಗೆ ಬೇಗನೆ ಪಾತ್ರರಾಗುವಿರಿ.

ಲಕ್ಷ್ಮಿ ಒಲಿದರೆ ಹಣದ ಕೊರತೆಯೇ ಇರುವುದಿಲ್ಲ, ಮನೆಯಲ್ಲಿ ಸಂಪತ್ತು, ಸಮೃದ್ಧಿ ಹೆಚ್ಚುವುದು, ಆದ್ದರಿಂದ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಎಲ್ಲರೂ ಬಯಸುತ್ತಾರೆ. ನೀವು ಸಂಪತ್ತು ಹೆಚ್ಚಲು ಶುಕ್ರವಾರ ಪೂಜೆ ಮಾಡುವಾಗ ಲಕ್ಷ್ಮಿ ಕುಬೇರ ಮಂತ್ರಗಳನ್ನು ಹೇಳಿದರೆ ಇನ್ನೂ ಒಳ್ಳೆಯದು.
ಶುಕ್ರವಾರ ಲಕ್ಷ್ಮಿ ಪೂಜೆಯನ್ನು ಹೇಗೆ ಮಾಡಬೇಕು? ಈ ದಿನ ಪಠಿಸಬೇಕಾದ ಮಂತ್ರಗಳು ಇವುಗಳ ಕುರಿತ ಮಾಹಿತಿ ಇಲ್ಲಿದೆ:
ಲಕ್ಷ್ಮಿ ಪೂಜೆಗೆ ಸಿದ್ಧತೆ
* ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ. ಮಡಿ ಬಟ್ಟೆ ಧರಿಸಿ.
* ಶುಕ್ರವಾರ ಲಕ್ಷ್ಮಿಯನ್ನು ಪೂಜಿಸುವ ಮುನ್ನ ದೇವರ ಪೂಜಾ ವಸ್ತುಗಳು ಹಾಗೂ ದೇವರ ಕೋಣೆಯನ್ನು ಸ್ವಚ್ಛಗೊಳಿಸಬೇಕು. ಅವಳ ಮೂರ್ತಿಯನ್ನು ತೊಳೆದು ಇಡಬೇಕು, ಫೋಟೋವಾದರೆ ಒರೆಸಿ ಇಡಿ.
* ಮನೆಮುಂದೆ ಹಾಗೂ ದೇವರ ಕೋಣೆಯಲ್ಲಿ ರಂಗೋಲಿ ಹಾಕಿ.
* ನಂತರ ದೇವಯನ್ನು ಹಲಗೆಯ ಮೇಲೆ ಪ್ರತಿಷ್ಠಾಪಿಸಿ, ಅವಳಿಗೆ ಬಟ್ಟೆ, ಆಭರಣ, ಹೂ, ಹಣ್ಣುಗಳಿಂದ ಅಲಂಕರಿಸಿ.
* ಲಕ್ಷ್ಮಿಯನ್ನು ಪೂಜಿಸುವಾಗ ತುಂದು ಕಂಚಿನ ತಂಬಿಗೆಯಲ್ಲಿ ನೀರು ತುಂಬಿ ಅದರಲ್ಲಿ ನಾಣ್ಯ ಹಾಕಿ, ಜುಟ್ಟು ಇರುವ ತೆಂಗಿನಕಾಯಿ ಇಟ್ಟು ಕುಂಕುಮ ಇಡಲು ಮರೆಯದಿರಿ.
* ಶಂಖವೂ ಇದ್ದರೆ ಒಳ್ಳೆಯದು.
* ದೇವಿಗೆ ದೈವೇದ್ಯ ಅರ್ಪಿಸಲು ಅಕ್ಕಿ ಪಾಯಸ ಮಾಡಿಡಿ.
* ನಂತರ ದೇವಿಗೆ ತುಪ್ಪದ ದೀಪ ಹಚ್ಚಿ ಮಂತ್ರಗಳನ್ನು ಹೇಳಿ
* ನಂತರ ದೇವಿಗೆ ನೈವೇದ್ಯ ಅರ್ಪಿಸಿ.
* ನಂತರ ಆ ಪ್ರಸಾದವನ್ನು ಮನೆಮಂದಿಗೆ ಹಂಚಿ.
ಸಂಜೆ ಹೊತ್ತಿನಲ್ಲಿ ಲಕ್ಷ್ಮಿ ಪೂಜೆ
ಸಂಜೆ ಹೊತ್ತು ಲಕ್ಷ್ಮಿ ದೀಪ ಹಚ್ಚಿದ ಬಳಿಕ ಅವಳಿಗೆ ಆರತಿ ಮಾಡಿ ಮನೆ ಮುಂದೆ ತುಪ್ಪದ ಹಚ್ಚಿಡಬೇಕು. ದೀಪದ ಬತ್ತಿಗೆ ಕೆಂಪು ಬಣ್ಣದ ನೂಲು ಬಳಸಿದರೆ ಇನ್ನೂ ಒಳ್ಳೆಯದು. ಅವಳಿಗೆ ಬಿಳಿ ಹಾಗೂ ಕೆಂಪು ಹೂಗಳನ್ನು ಅರ್ಪಿಸಿ. ಮನೆ ಬಾಗಿಲಿನಲ್ಲಿ ದೀಪ ಬೆಳಗುವುದರಿಂದ ಲಕ್ಷ್ಮಿ ಒಲಿಯುತ್ತಾಳೆ ಇದರಿಂದ ನಿಮ್ಮ ಆರ್ಥಿಕತೆಯನ್ನು ಸುಧಾರಣೆ ಕಾಣುವಿರಿ.
ಶುಕ್ರವಾರ ಈ ಲಕ್ಷ್ಮಿ ಕುಬೇರ ಮಂತ್ರ ಪಠಿಸಿ
ಲಕ್ಷ್ಮಿ ಕುಬೇರ ಮಂತ್ರ: .
"ಓಂ ಹ್ರೀಂ ಶ್ರೀಂ ಕ್ರೀಂ ಶ್ರೀಂ ಕುಬೇರಾಯ, ಅಷ್ಟ ಲಕ್ಷ್ಮಿ ಮಮ ಗೃಹೆ ಧನಂ ಪುರಾಯ ಪುರಾಯ ನಮಃ"
ಮಹಾಲಕ್ಷ್ಮಿ ಮಂತ್ರ:
"ಓಂ ಶ್ರೀಂ ಹ್ರೀಂ ಶ್ರೀಂ ಕಮಲೆ ಕಮಲಲಾಯೆ ಪ್ರಸೀದ, ಪ್ರಸೀದ ಓಂ ಶ್ರೀಂ ಹ್ರೀಂ ಶ್ರೀಂ ಮಹಾಲಕ್ಷ್ಮಯೆ ನಮಃ"
ಕುಬೇರ ಮಂತ್ರ:
ಓಂ ಶ್ರೀಂ ಒಂ ಹ್ರೀಂ ಶ್ರೀಂ ಓಂ ಹ್ರೀಂ ಶ್ರೀಂ ಕ್ಲೀಮ್ ವಿತ್ತೆಶ್ವರಾಯ ನಮಃ
ಓಂ ಯಕ್ಷಾಯ ಕುಬೇರಾಯ ವೈಶ್ರವಣಾಯ ಧನಧಾನ್ಯಾಧಿಪತಯೇ ಧನಧಾನ್ಯಸಮೃದ್ಧಿಂ ಮೇ ದೇಹಿ ದಾಪಯ ಸ್ವಾಹಾ
ಈ ಮಂತ್ರಗಳನ್ನು ಪಠಿಸುವುದರಿಂದ ಲಕ್ಷ್ಮಿ ಪ್ರಸನ್ನಳಾಗುತ್ತಾಳೆ.



Click it and Unblock the Notifications
