Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶುಕ್ರವಾರ ಈ ಲಕ್ಷ್ಮಿ ಕುಬೇರ ಮಂತ್ರ ಪಠಿಸಿ, ಆರ್ಥಿಕ ಸಂಕಷ್ಟ ದೂರಾಗುವುದು
ಶುಕ್ರವಾರ ಲಕ್ಷ್ಮಿ ಪೂಜೆ ಮಾಡಿದರೆ ಲಕ್ಷ್ಮಿ ನಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ ಎಂಬುವುದು ಅವಳನ್ನು ನಂಬಿರುವ ಭಕ್ತರ ಬಲವಾದ ನಂಬಿಕೆ. ಶ್ರೀ ಲಕ್ಷ್ಮಿಯನ್ನು ಪ್ರತಿ ಶುಕ್ರವಾರ ಅತ್ಯಂತ ಶ್ರದ್ಧಾ ಭಕ್ತಿಯಿಂದ ಪೂಜಿಸುತ್ತಾರೆ. ಈ ದಿನ ಉಪವಾಸವಿದ್ದು ಲಕ್ಷ್ಮಿಯನ್ನು ಆರಾಧಿಸಿದರೆ ಇನ್ನೂ ಒಳ್ಳೆಯದು, ಅವಳ ಕೃಪೆಗೆ ಬೇಗನೆ ಪಾತ್ರರಾಗುವಿರಿ.

ಲಕ್ಷ್ಮಿ ಒಲಿದರೆ ಹಣದ ಕೊರತೆಯೇ ಇರುವುದಿಲ್ಲ, ಮನೆಯಲ್ಲಿ ಸಂಪತ್ತು, ಸಮೃದ್ಧಿ ಹೆಚ್ಚುವುದು, ಆದ್ದರಿಂದ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಎಲ್ಲರೂ ಬಯಸುತ್ತಾರೆ. ನೀವು ಸಂಪತ್ತು ಹೆಚ್ಚಲು ಶುಕ್ರವಾರ ಪೂಜೆ ಮಾಡುವಾಗ ಲಕ್ಷ್ಮಿ ಕುಬೇರ ಮಂತ್ರಗಳನ್ನು ಹೇಳಿದರೆ ಇನ್ನೂ ಒಳ್ಳೆಯದು.
ಶುಕ್ರವಾರ ಲಕ್ಷ್ಮಿ ಪೂಜೆಯನ್ನು ಹೇಗೆ ಮಾಡಬೇಕು? ಈ ದಿನ ಪಠಿಸಬೇಕಾದ ಮಂತ್ರಗಳು ಇವುಗಳ ಕುರಿತ ಮಾಹಿತಿ ಇಲ್ಲಿದೆ:
ಲಕ್ಷ್ಮಿ ಪೂಜೆಗೆ ಸಿದ್ಧತೆ
* ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ. ಮಡಿ ಬಟ್ಟೆ ಧರಿಸಿ.
* ಶುಕ್ರವಾರ ಲಕ್ಷ್ಮಿಯನ್ನು ಪೂಜಿಸುವ ಮುನ್ನ ದೇವರ ಪೂಜಾ ವಸ್ತುಗಳು ಹಾಗೂ ದೇವರ ಕೋಣೆಯನ್ನು ಸ್ವಚ್ಛಗೊಳಿಸಬೇಕು. ಅವಳ ಮೂರ್ತಿಯನ್ನು ತೊಳೆದು ಇಡಬೇಕು, ಫೋಟೋವಾದರೆ ಒರೆಸಿ ಇಡಿ.
* ಮನೆಮುಂದೆ ಹಾಗೂ ದೇವರ ಕೋಣೆಯಲ್ಲಿ ರಂಗೋಲಿ ಹಾಕಿ.
* ನಂತರ ದೇವಯನ್ನು ಹಲಗೆಯ ಮೇಲೆ ಪ್ರತಿಷ್ಠಾಪಿಸಿ, ಅವಳಿಗೆ ಬಟ್ಟೆ, ಆಭರಣ, ಹೂ, ಹಣ್ಣುಗಳಿಂದ ಅಲಂಕರಿಸಿ.
* ಲಕ್ಷ್ಮಿಯನ್ನು ಪೂಜಿಸುವಾಗ ತುಂದು ಕಂಚಿನ ತಂಬಿಗೆಯಲ್ಲಿ ನೀರು ತುಂಬಿ ಅದರಲ್ಲಿ ನಾಣ್ಯ ಹಾಕಿ, ಜುಟ್ಟು ಇರುವ ತೆಂಗಿನಕಾಯಿ ಇಟ್ಟು ಕುಂಕುಮ ಇಡಲು ಮರೆಯದಿರಿ.
* ಶಂಖವೂ ಇದ್ದರೆ ಒಳ್ಳೆಯದು.
* ದೇವಿಗೆ ದೈವೇದ್ಯ ಅರ್ಪಿಸಲು ಅಕ್ಕಿ ಪಾಯಸ ಮಾಡಿಡಿ.
* ನಂತರ ದೇವಿಗೆ ತುಪ್ಪದ ದೀಪ ಹಚ್ಚಿ ಮಂತ್ರಗಳನ್ನು ಹೇಳಿ
* ನಂತರ ದೇವಿಗೆ ನೈವೇದ್ಯ ಅರ್ಪಿಸಿ.
* ನಂತರ ಆ ಪ್ರಸಾದವನ್ನು ಮನೆಮಂದಿಗೆ ಹಂಚಿ.
ಸಂಜೆ ಹೊತ್ತಿನಲ್ಲಿ ಲಕ್ಷ್ಮಿ ಪೂಜೆ
ಸಂಜೆ ಹೊತ್ತು ಲಕ್ಷ್ಮಿ ದೀಪ ಹಚ್ಚಿದ ಬಳಿಕ ಅವಳಿಗೆ ಆರತಿ ಮಾಡಿ ಮನೆ ಮುಂದೆ ತುಪ್ಪದ ಹಚ್ಚಿಡಬೇಕು. ದೀಪದ ಬತ್ತಿಗೆ ಕೆಂಪು ಬಣ್ಣದ ನೂಲು ಬಳಸಿದರೆ ಇನ್ನೂ ಒಳ್ಳೆಯದು. ಅವಳಿಗೆ ಬಿಳಿ ಹಾಗೂ ಕೆಂಪು ಹೂಗಳನ್ನು ಅರ್ಪಿಸಿ. ಮನೆ ಬಾಗಿಲಿನಲ್ಲಿ ದೀಪ ಬೆಳಗುವುದರಿಂದ ಲಕ್ಷ್ಮಿ ಒಲಿಯುತ್ತಾಳೆ ಇದರಿಂದ ನಿಮ್ಮ ಆರ್ಥಿಕತೆಯನ್ನು ಸುಧಾರಣೆ ಕಾಣುವಿರಿ.
ಶುಕ್ರವಾರ ಈ ಲಕ್ಷ್ಮಿ ಕುಬೇರ ಮಂತ್ರ ಪಠಿಸಿ
ಲಕ್ಷ್ಮಿ ಕುಬೇರ ಮಂತ್ರ: .
"ಓಂ ಹ್ರೀಂ ಶ್ರೀಂ ಕ್ರೀಂ ಶ್ರೀಂ ಕುಬೇರಾಯ, ಅಷ್ಟ ಲಕ್ಷ್ಮಿ ಮಮ ಗೃಹೆ ಧನಂ ಪುರಾಯ ಪುರಾಯ ನಮಃ"
ಮಹಾಲಕ್ಷ್ಮಿ ಮಂತ್ರ:
"ಓಂ ಶ್ರೀಂ ಹ್ರೀಂ ಶ್ರೀಂ ಕಮಲೆ ಕಮಲಲಾಯೆ ಪ್ರಸೀದ, ಪ್ರಸೀದ ಓಂ ಶ್ರೀಂ ಹ್ರೀಂ ಶ್ರೀಂ ಮಹಾಲಕ್ಷ್ಮಯೆ ನಮಃ"
ಕುಬೇರ ಮಂತ್ರ:
ಓಂ ಶ್ರೀಂ ಒಂ ಹ್ರೀಂ ಶ್ರೀಂ ಓಂ ಹ್ರೀಂ ಶ್ರೀಂ ಕ್ಲೀಮ್ ವಿತ್ತೆಶ್ವರಾಯ ನಮಃ
ಓಂ ಯಕ್ಷಾಯ ಕುಬೇರಾಯ ವೈಶ್ರವಣಾಯ ಧನಧಾನ್ಯಾಧಿಪತಯೇ ಧನಧಾನ್ಯಸಮೃದ್ಧಿಂ ಮೇ ದೇಹಿ ದಾಪಯ ಸ್ವಾಹಾ
ಈ ಮಂತ್ರಗಳನ್ನು ಪಠಿಸುವುದರಿಂದ ಲಕ್ಷ್ಮಿ ಪ್ರಸನ್ನಳಾಗುತ್ತಾಳೆ.



Click it and Unblock the Notifications
