Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬೆಂಗಳೂರು ಬಸವನಗುಡಿಯಲ್ಲಿ ಸ್ಪೆಷಲ್ ಸಂಕ್ರಾಂತಿ

ಸಾಮಾನ್ಯಕ್ಕೆ, ಬಸವನಗುಡಿ ಅಂತ ಯಾಕೆ ಹೆಸರು ಇಡ್ತಾರಪ್ಪಾ ಅಂದರೆ ಅದಕ್ಕೂ ಮುನ್ನ... ಹುಟ್ಟಿಸಿದ ದೇವರು ಹುಲ್ಲು ಮೇಯಿಸೋಲ್ವಾ ಎಂದು ಬದುಕು ಕಟ್ಟಿಕೊಳ್ಳಲು 20 ವರ್ಷಗಳ ಹಿಂದೆ ಬೆಂಗಳೂರಿನ ಬಸವನಗುಡಿಗೆ ಬಂದೆ. ಆಗ ಬಸವನಗುಡಿ ಬಡಾವಣೆಗೆ ಪ್ರದಕ್ಷಿಣೆ ಹಾಕಿದಾಗ ದಾರಿಯುದ್ದಕ್ಕೂ 'ಬಸವನಗುಡಿಗೆ ಯಾಕೆ ಈ ಹೆಸರು ಬಂತು' ಎಂಬ ಪ್ರಶ್ನೆ ನನಗೆ ಸಾಥ್ ನೀಡಿತ್ತು.
ಆಮೇಲೆ ಅನಿಸಿದ್ದು, ಬೆಂಗಳೂರಿನ ಈ ಬಡಾವಣೆಗೆ ಬಸವನಗುಡಿ ಎಷ್ಟು ಅರ್ಥಪೂರ್ಣವಾಗಿದೆ ಎಂದು! ಏಕೆಂದರೆ ಎಲ್ಲೆಂದರಲ್ಲಿ, ಹೌದು ನಡುರಸ್ತೆಗಳಲ್ಲೂ ನಡುಚಾಚಿ ಮಲಗಿರುವ ಗೋವುಗಳನ್ನು ಕಂಡಾಗ ನಿಜಕ್ಕೂ ನನ್ನ ಹಳ್ಳಿ ವಾತಾವರಣ ನೆನಪಿಗೆ ಬಂದಿತ್ತು.
ಆಮೇಲಾಮೇಲೆ ಕಾಲ ಬದಲಾಗುತ್ತಾ ಬಂತು. ಅದೇನೋ Y2K ಅಂತ ಬಂದಮೇಲಿನ ಕಾಲಘಟ್ಟದಲ್ಲಿ ಬೆಂಗಳೂರು ಸಿಲಿಕಾನ್ ಸಿಟಿಯಾಗಿ ಪರಿವರ್ತನೆಯಾಗಿದ್ದೇ ಬಂತು, ಅದುವರೆಗೂ ಬಸವನಗುಡಿಯ ಕಾಲಬುಡಲದಲ್ಲಿ ಮಲಗಿದ್ದ ಜಾನುವಾರು ಸಂತತಿಗೆ ಸಾಫ್ಟ್ ವೇರುಗಳ ಬೈಕು, ಕಾರು ಬಾರಿನ ಆರ್ಭಟದಲ್ಲಿ ಗರಬಡಿದಂತಾಯಿತು.
ಬಸವನಗುಡಿ ಆಸುಪಾಸು ಹೊಲಗದ್ದೆಗಳು ಇದ್ದವಂತೆ. ಇಲ್ಲಿ ಗೌಳಿಗರು ಹೆಚ್ಚಾಗಿ ನೆಲೆಸಿದ್ದರಂತೆ. ಇಲ್ಲಿದ್ದ ಜನಸಂಖ್ಯೆಯಷ್ಟೇ ಹಸು-ಕರು ಎತ್ತುಗಳು ಇದ್ದವಂತೆ. ಇಲ್ಲಿ ಸಂಕ್ರಾಂತಿ ಊರಹಬ್ಬವಾಗಿ ನಡೆಯುತ್ತಿತ್ತು. ಕಡಲೆಕಾಯಿ ಪರಿಶೆಗಿಂತ ಜೋರಾಗಿ ಜನ ಸೇರುತ್ತಿದ್ದರಂತೆ ಎಂಬುದೆಲ್ಲ ಕಾಲಗರ್ಭದಲ್ಲಿ ಅಡಗಿಹೋಗಿದೆ.
ಆದರೂ ದೊಡ್ಡಗಣಪತಿ ದೇವಸ್ಥಾನದ ಬಂಡೆಬಸವ ಇದಕ್ಕೆ ಮೂಕ ಸಾಕ್ಷಿಯಾಗಿ ತಳವೂರಿರುವುದರಿಂದ ಬಸವನಗುಡಿಯಲ್ಲಿ ಸಂಕ್ರಾಂತಿ ಸಂಭ್ರಮವನ್ನು ಇನ್ನೂ ಕಾಣಬಹುದಾಗಿದೆ. ಮನೆಸಂಪ್ರದಾಯ, ಊರಸಂಪ್ರದಾಯ ಎಂದು ಇಲ್ಲಿನ ಗೋಪಾಲಕರು ಈಗಲೂ ತಮ್ಮ ಜಾನುವಾರುಗಳನ್ನು ಸಿಂಗರಿಸಿ, ಸಂಭ್ರಮಿಸುವುದುಂಟು.
ಸಿಂಗರಿಸಿದ ಎತ್ತುಗಳನ್ನು ಒಂದಷ್ಟು ಮೆರವಣಿಗೆ ಮಾಡಿಸಿ, ಮೈದಾನದಲ್ಲಿ ಹಾಕಿರುವ ಕಿಚ್ಚಿನ ಮೇಲೆ ಅವುಗಳನ್ನು ಹಾಯಿಸುವುದೂ ಉಂಟು. ನಶಿಸುತ್ತಿರುವ ಈ ಸಂಪ್ರದಾಯಕ್ಕೆ ಸಾಕ್ಷಿಯಾಗಲು ಈ ಬಾರಿಯಾದರೂ ಬಸವನಗುಡಿ ನೆಟ್ಟಕಲ್ಲಪ್ಪ ಸರ್ಕಲಿಗೆ ಜನವರಿ 14ರಂದು ಬರುತ್ತೀರಲ್ವೇ?



Click it and Unblock the Notifications