Latest Updates
-
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ! -
ಪುಣೆಯಲ್ಲಿ ಮಳೆ ರಜೆ: ವರ್ಕ್ ಫ್ರಮ್ ಹೋಮ್ ಜೊತೆಗೆ ಮಕ್ಕಳನ್ನು ನಿಭಾಯಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್
ಬೆಂಗಳೂರು ಬಸವನಗುಡಿಯಲ್ಲಿ ಸ್ಪೆಷಲ್ ಸಂಕ್ರಾಂತಿ

ಸಾಮಾನ್ಯಕ್ಕೆ, ಬಸವನಗುಡಿ ಅಂತ ಯಾಕೆ ಹೆಸರು ಇಡ್ತಾರಪ್ಪಾ ಅಂದರೆ ಅದಕ್ಕೂ ಮುನ್ನ... ಹುಟ್ಟಿಸಿದ ದೇವರು ಹುಲ್ಲು ಮೇಯಿಸೋಲ್ವಾ ಎಂದು ಬದುಕು ಕಟ್ಟಿಕೊಳ್ಳಲು 20 ವರ್ಷಗಳ ಹಿಂದೆ ಬೆಂಗಳೂರಿನ ಬಸವನಗುಡಿಗೆ ಬಂದೆ. ಆಗ ಬಸವನಗುಡಿ ಬಡಾವಣೆಗೆ ಪ್ರದಕ್ಷಿಣೆ ಹಾಕಿದಾಗ ದಾರಿಯುದ್ದಕ್ಕೂ 'ಬಸವನಗುಡಿಗೆ ಯಾಕೆ ಈ ಹೆಸರು ಬಂತು' ಎಂಬ ಪ್ರಶ್ನೆ ನನಗೆ ಸಾಥ್ ನೀಡಿತ್ತು.
ಆಮೇಲೆ ಅನಿಸಿದ್ದು, ಬೆಂಗಳೂರಿನ ಈ ಬಡಾವಣೆಗೆ ಬಸವನಗುಡಿ ಎಷ್ಟು ಅರ್ಥಪೂರ್ಣವಾಗಿದೆ ಎಂದು! ಏಕೆಂದರೆ ಎಲ್ಲೆಂದರಲ್ಲಿ, ಹೌದು ನಡುರಸ್ತೆಗಳಲ್ಲೂ ನಡುಚಾಚಿ ಮಲಗಿರುವ ಗೋವುಗಳನ್ನು ಕಂಡಾಗ ನಿಜಕ್ಕೂ ನನ್ನ ಹಳ್ಳಿ ವಾತಾವರಣ ನೆನಪಿಗೆ ಬಂದಿತ್ತು.
ಆಮೇಲಾಮೇಲೆ ಕಾಲ ಬದಲಾಗುತ್ತಾ ಬಂತು. ಅದೇನೋ Y2K ಅಂತ ಬಂದಮೇಲಿನ ಕಾಲಘಟ್ಟದಲ್ಲಿ ಬೆಂಗಳೂರು ಸಿಲಿಕಾನ್ ಸಿಟಿಯಾಗಿ ಪರಿವರ್ತನೆಯಾಗಿದ್ದೇ ಬಂತು, ಅದುವರೆಗೂ ಬಸವನಗುಡಿಯ ಕಾಲಬುಡಲದಲ್ಲಿ ಮಲಗಿದ್ದ ಜಾನುವಾರು ಸಂತತಿಗೆ ಸಾಫ್ಟ್ ವೇರುಗಳ ಬೈಕು, ಕಾರು ಬಾರಿನ ಆರ್ಭಟದಲ್ಲಿ ಗರಬಡಿದಂತಾಯಿತು.
ಬಸವನಗುಡಿ ಆಸುಪಾಸು ಹೊಲಗದ್ದೆಗಳು ಇದ್ದವಂತೆ. ಇಲ್ಲಿ ಗೌಳಿಗರು ಹೆಚ್ಚಾಗಿ ನೆಲೆಸಿದ್ದರಂತೆ. ಇಲ್ಲಿದ್ದ ಜನಸಂಖ್ಯೆಯಷ್ಟೇ ಹಸು-ಕರು ಎತ್ತುಗಳು ಇದ್ದವಂತೆ. ಇಲ್ಲಿ ಸಂಕ್ರಾಂತಿ ಊರಹಬ್ಬವಾಗಿ ನಡೆಯುತ್ತಿತ್ತು. ಕಡಲೆಕಾಯಿ ಪರಿಶೆಗಿಂತ ಜೋರಾಗಿ ಜನ ಸೇರುತ್ತಿದ್ದರಂತೆ ಎಂಬುದೆಲ್ಲ ಕಾಲಗರ್ಭದಲ್ಲಿ ಅಡಗಿಹೋಗಿದೆ.
ಆದರೂ ದೊಡ್ಡಗಣಪತಿ ದೇವಸ್ಥಾನದ ಬಂಡೆಬಸವ ಇದಕ್ಕೆ ಮೂಕ ಸಾಕ್ಷಿಯಾಗಿ ತಳವೂರಿರುವುದರಿಂದ ಬಸವನಗುಡಿಯಲ್ಲಿ ಸಂಕ್ರಾಂತಿ ಸಂಭ್ರಮವನ್ನು ಇನ್ನೂ ಕಾಣಬಹುದಾಗಿದೆ. ಮನೆಸಂಪ್ರದಾಯ, ಊರಸಂಪ್ರದಾಯ ಎಂದು ಇಲ್ಲಿನ ಗೋಪಾಲಕರು ಈಗಲೂ ತಮ್ಮ ಜಾನುವಾರುಗಳನ್ನು ಸಿಂಗರಿಸಿ, ಸಂಭ್ರಮಿಸುವುದುಂಟು.
ಸಿಂಗರಿಸಿದ ಎತ್ತುಗಳನ್ನು ಒಂದಷ್ಟು ಮೆರವಣಿಗೆ ಮಾಡಿಸಿ, ಮೈದಾನದಲ್ಲಿ ಹಾಕಿರುವ ಕಿಚ್ಚಿನ ಮೇಲೆ ಅವುಗಳನ್ನು ಹಾಯಿಸುವುದೂ ಉಂಟು. ನಶಿಸುತ್ತಿರುವ ಈ ಸಂಪ್ರದಾಯಕ್ಕೆ ಸಾಕ್ಷಿಯಾಗಲು ಈ ಬಾರಿಯಾದರೂ ಬಸವನಗುಡಿ ನೆಟ್ಟಕಲ್ಲಪ್ಪ ಸರ್ಕಲಿಗೆ ಜನವರಿ 14ರಂದು ಬರುತ್ತೀರಲ್ವೇ?



Click it and Unblock the Notifications