Latest Updates
-
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ!
ಮಕರ ಸಂಕ್ರಾಂತಿ: ಉಡುಪಿಯಲ್ಲಿ ವೈಭವದ ಮೂರು ತೇರು
ದಕ್ಷಿಣಾಯಣದ ಆರು ತಿಂಗಳ ಅವಧಿಯ ಕೊನೆಯ ದಿನವಾದ ಮಕರ ಸಂಕ್ರಮಣದ ದಿನದಂದು ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಮಠದ ಸಂಪ್ರದಾಯದಂತೆ ಮೂರು ರಥವನ್ನು ಎಳೆಯುವ ಉತ್ಸವ ಅನಾದಿ ಕಾಲದಿಂದಲೂ ನಡೆದು ಕೊಂಡು ಬರುತ್ತಿದೆ.
ಮಾರ್ಗಶಿರ ಮಾಸ ಕೃಷ್ಣಪಕ್ಷದ ದ್ವಾದಶಿಯಿಂದ ಅಂದರೆ ಜನವರಿ 9ರಿಂದ ಆರಂಭವಾಗುವ ಸಪ್ತೋತ್ಸವದ ಆರನೇ ದಿನ ರಾತ್ರಿ ಮಾಧ್ವ ಸಂಪ್ರದಾಯಂದಂತೆ ಬ್ರಹ್ಮರಥೋತ್ಸವ ಸೇರಿ ಮೂರು ರಥವನ್ನು ಅ ್ಟ ಮಠಾಧೀಶರ ಉಪಸ್ಥಿತಿಯಲ್ಲಿ ಎಳೆಯಲಾಗುವುದು.
12ನೇ ಶತಮಾನದಲ್ಲಿ ಆಚಾರ್ಯ ಮಧ್ವರು ಮಕರ ಸಂಕ್ರಾಂತಿಯ ದಿನದಂದು ಕಡಗೋಲು ಕೃಷ್ಣ ವಿಗ್ರಹವನ್ನು ಪ್ರತಿಷ್ಟಾಪಿಸಿದರು.

ಅಂದಿನಿಂದ ಮಧ್ವಾಚಾರ್ಯರ ಆದೇಶದಂತೆ ಮಕರ ಸಂಕ್ರಾಂತಿಯ ಪುಣ್ಯದಿನದಂದು ಮೂರು ರಥ ಮತ್ತು ಮರುದಿನ ಹಗಲು ಬ್ರಹ್ಮ ರಥವನ್ನು ಎಳೆಯುವುದು ಮಠದ ಪದ್ಧತಿ. ಹಗಲು ಉತ್ಸವ ಈ ಭಾಗದಲ್ಲಿ 'ಚೂರ್ಣೋತ್ಸವ' ಎಂದೇ ಪ್ರಸಿದ್ದ.
ಮೂರು ರಥ ಎಳೆಯುವ ದಿನದಂದು ಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ ದೇವ ಉತ್ಸವ ಮೂರ್ತಿಯನ್ನು ಮಧ್ವ ಸರೋವರದಲ್ಲಿ ನಡೆಯುವ ತೆಪ್ಪೋತ್ಸವದ ನಂತರ ಕೃಷ್ಣ ಮಠದ ದ್ವಾರದಲ್ಲಿ ಕ್ರಮವಾಗಿ ಬ್ರಹ್ಮರಥ, ಗರುಡ ರಥ ಮತ್ತು ಮಹಾಪೂಜೆ ರಥ (ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ) ಎಂದು ಕರೆಯಲ್ಪಡುವ ರಥದಲ್ಲಿ ಇಟ್ಟು ರಥಬೀದಿ ಸುತ್ತ ಒಂದು ಸುತ್ತು ಎಳೆಯಲಾಗುವುದು.
ರಥ ಸಾಗುವ ಮುಂದೆ ಮಠಾಧೀಷರು ನಡೆದುಕೊಂಡು ಬರುವುದು ಮಠದ ಇನ್ನೊಂದು ಸಂಪ್ರದಾಯ. ಇತ್ತೀಚಿನ ದಿನಗಳಲ್ಲಿ ಮೂರು ರಥದ ಜೊತೆ ಇನ್ನೆರಡು ರಥಗಳನ್ನೂ ಎಳೆಯಲಾಗುತ್ತದೆ.
ಇದಾದ ಮರುದಿನ ಹಗಲು ಉತ್ಸವ ನಡೆಯುತ್ತದೆ. ಅಂದು ಕೃಷ್ಣ ಮತ್ತು ಮುಖ್ಯಪ್ರಾಣನ ಉತ್ಸವ ಮೂರ್ತಿಯನ್ನು ರಥದಲ್ಲಿ ಇಟ್ಟ ನಂತರ ಗರುಡ ರಥವನ್ನು ಮೂರು ಸುತ್ತು ಸುತ್ತುತ್ತಾನೆ. ಅದಾದ ನಂತರವೇ ರಥ ಎಳೆಯಲು ಚಾಲನೆ ನೀಡಲಾಗುತ್ತದೆ.
ವೈಭವದ ಉತ್ಸವದ ನಂತರ ಪರ್ಯಾಯ ಸ್ವಾಮಿಗಳು ಭಕ್ತಾದಿಗಳಿಗೆ ಮಂತ್ರಾಕ್ಷತೆಯನ್ನು ನೀಡುತ್ತಾರೆ. ಇದಾದ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.
ಲಕ್ಷಾಂತರ ಮಂದಿ ಭಕ್ತಾದಿಗಳು ಒಟ್ಟು ಏಳು ದಿನ ನಡೆಯುವ ಉತ್ಸವಕ್ಕೆ ವರ್ಷ ವರ್ಷ ಸಾಕ್ಷಿಯಾಗುತ್ತಾರೆ



Click it and Unblock the Notifications