Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಟಿ-20 ವಿಶ್ವಕಪ್ ಮುಡಿಗೇರಿಸಿದ ಭಾರತ: ಬಹುಮಾನದ ಮೊತ್ತ ಎಷ್ಟು ಕೋಟಿ ಗೊತ್ತಾ?
ಕೋಟಿ ಕೋಟಿ ಭಾರತೀಯರ ಕನಸಾಗಿದ್ದ ವಿಶ್ವಕಪ್ ಭಾರತ ಕ್ರಿಕೆಟ್ ತಂಡಕ್ಕೆ ಒಲಿದಿದೆ. ಬರೋಬ್ಬರಿ 11 ವರ್ಷಗಳ ನಂತರ ಐಸಿಸಿ ಟ್ರೋಪಿಯೊಂದನ್ನ ಭಾರತ ತಂಡ ಗೆದ್ದುಕೊಂಡಿದೆ. ನಿನ್ನೆ ನಡೆದ ಟಿ-20 ವಿಶ್ವಕಪ್ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಗೆದ್ದು ಬೀಗಿದೆ.
ನಾಯಕ ರೋಗಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಕೊನೆಯ ವಿಶ್ವಕಪ್ ಟೂರ್ನಿ ಇದಾಗಿರಲಿದೆ ಎನ್ನಲಾಗಿತ್ತು. ಹೀಗಾಗಿ ಭಾರತಕ್ಕೆ ಗೆಲ್ಲಲೇಬೇಕಾದ ಒತ್ತಡವೂ ಇತ್ತು. ಕೊನೆಯ ಓವರ್ನಲ್ಲಿ ಭಾರತ ತಂಡ ಗೆಲುವಿನ ನಗೆ ಬೀರಿ ಕೋಟಿ ಕೋಟಿ ಅಭಿಮಾನಿಗಳಲ್ಲಿ ಸಂತೋಷದ ಕಣ್ಣೀರು ತರಿಸಿದೆ. 11 ವರ್ಷಗಳಿಂದ ಕಾದಿದ್ದ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಪ್ರಶಸ್ತಿ ಗೆದ್ದ ಬಳಿಕ ನಾಯಕ ರೋಹಿತ್ ಹಾಗೂ ವಿರಾಟ್ ಕೊಹ್ಲಿ ಸೇರಿ ಆಟಗಾರರು ಮೈದಾನದಲ್ಲೇ ಭಾವುಕರಾಗಿದ್ದರು.

ಈ ಹಿಂದೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಮುಗ್ಗರಿಸಿ ಭಾರೀ ನಿರಸೆ ಮೂಡಿಸಿದ್ದರು. ಹೀಗಾಗಿ ಈ ಟೂರ್ನಿಯಲ್ಲಿ ಗೆಲುವಿಗಾಗಿ ಕಾಯುತ್ತಿದ್ದರು. ಜೊತೆಗೆ ಕೋಚ್ ರಾಹುಲ್ ದ್ರಾವಿಡ್ಗೂ ಸಹ ಇದು ಕೊನೆಯ ಟೂರ್ನಿಯಾಗಿರಲಿದೆ. ಇದಾದ ಬಳಿಕ ಮಾಜಿ ಆಟಗಾರ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ದ್ರಾವಿಡ್ಗೂ ಸಹ ಈ ಕಪ್ ಗೆಲ್ಲಬೇಕಾದ ಒತ್ತಡವೂ ಹಾಗೂ ಯಶಸ್ಸಿನ ಬೀಳ್ಕೊಡುಗೆಯ ಅನಿವಾರ್ಯತೆ ಇತ್ತು.
ಸದ್ಯ ಐಸಿಸಿಯ ಅತ್ಯುತ್ತಮ ಟೂರ್ನಿಗಳಲ್ಲಿ ಟಿ-20 ವಿಶ್ವಕಪ್ ಟೂರ್ನಿ ಸಹ ಒಂದಾಗಿದೆ. ಈ ಬಾರಿ ಹೊಸ ತಂಡಗಳು ಸಹ ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿವೆ. ಅಲ್ಲದೆ ಐಸಿಸಿಯಿಂದ ಒಂದಿಷ್ಟು ಹಣ ಪಡೆದಿವೆ, ಹಾಗಾದ್ರೆ ಫೈನಲ್ನಲ್ಲಿ ಆಡಿರುವ ಎರಡು ತಂಡಗಳಿಗೆ ಐಸಿಸಿಯಿಂದ ಎಷ್ಟು ಹಣ ಸಿಗಲಿದೆ ಎಂಬುದು ನಿಮಗೆ ಗೊತ್ತಾ?
ಐಸಿಸಿ ಈ ಟೂರ್ನಿಯ ಎಲ್ಲಾ ಪ್ರಾಯೋಜಕತ್ವ ಹಾಗೂ ಟಿಕೆಟ್ ಮಾರಾಟದಿಂದ ಬರುವ ಹಣದ ಪಾಲು ಹೊಂದಿರಲಿದೆ. ಹೀಗಾಗಿ ಐಸಿಸಿ ಫೈನಲ್ ಪಂದ್ಯ ಆಡಿರುವ ಎರಡು ತಂಡಗಳು ಸೇರಿ ಪ್ರತಿ ತಂಡಗಳಿಗೂ ಇಂತಿಷ್ಟು ಎಂದು ಹಣ ನೀಡಲಿದೆ. ಅದ್ರಲ್ಲೂ ಪ್ರಶಸ್ತಿ ಮೊತ್ತ ದುಪ್ಪಟ್ಟಾಗಿರಲಿದೆ.
2024 ರ T20 ವಿಶ್ವಕಪ್ ಚಾಂಪಿಯನ್ ಟೀಮ್ ಇಂಡಿಯಾ, ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC)ನಿಂದ ಅಂದಾಜು 20.42 ಕೋಟಿ ರೂಪಾಯಿ ಮೊತ್ತ ಪಡೆಯಲಿದೆ. ಇನ್ನು ರನ್ನರ್ ಅಪ್ ತಂಡವಾದ ಸೌತ್ ಆಫ್ರಿಕಾ ಸುಮಾರು 10.67 ಕೋಟಿ ರೂಪಾಯಿ ಹಣ ಬಹುಮಾನ ಮೊತ್ತವಾಗಿ ಪಡೆದುಕೊಳ್ಳಲಿದೆ ಎಂದು ತಿಳಿದುಬಂದಿದೆ.
ಈ ಎರಡು ತಂಡ ಮಾತ್ರವಲ್ಲದೆ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಕ್ರಮವಾಗಿ ಸೆಮಿಫೈನಲ್ನಲ್ಲಿ ಸೋತ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ಎರಡೂ ತಂಡಗಳು ತಲಾ 6.56 ಕೋಟಿ ರೂಪಾಯಿ ಪಡೆದುಕೊಂಡಿವೆ. ಇನ್ನುಳಿದಂತೆ ಹಲವು ತಂಡಗಳು ತಾವಾಡಿದ ಪ್ರತಿ ಪಂದ್ಯಕ್ಕೂ ಇಂತಿಷ್ಟು ಮೊತ್ತ ನಿಗದಿಯಾಗಿರುತ್ತದೆ.
T20 ವಿಶ್ವಕಪ್ 2024ರಲ್ಲಿ ಒಟ್ಟು ಬಹುಮಾನದ ಮೊತ್ತವು $ 11.25 ಮಿಲಿಯನ್ ಆಗಿದೆ, ಇದು ಸುಮಾರು 93 ಕೋಟಿ ರೂಪಾಯಿಗಳಿಗೆ ಸಮನಾಗಿರುತ್ತದೆ. ಇದು ಟೂರ್ನಿಯುದ್ಧಕ್ಕೂ ನೀಡಲಾಗುವ ಹಲವು ರೀತಿಯ ಪ್ರಶಸ್ತಿಗಳ ಒಳಗೊಂಡಿರಲಿದೆ.
ಇದಲ್ಲದೆ ಫೈನಲ್ ಪಂದ್ಯದಲ್ಲಿ ಅಬ್ಬರಿಸಿ 76 ರನ್ಗಳಿಸಿದ ವಿರಾಟ್ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅವರಿಗೆ ಬಹುಮಾನದ ಮೊತ್ತವಾಗಿ $5000 ನೀಡಲಾಗಿದೆ. ಇತ್ತ ಸೂರ್ಯ ಕುಮಾರ್ ಯಾದವ್ ಹಿಡಿದ ಕ್ಯಾಚ್ಗೆ ಸ್ಮಾರ್ಟ್ ಕ್ಯಾಚ್ ಆಫ್ ದಿ ಮ್ಯಾಚ್ ಅವಾರ್ಡ್ ನೀಡಲಾಗಿದ್ದು $3000 ಬಹುಮಾನದ ಮೊತ್ತವಾಗಿದೆ. ಅಲ್ಲದೆ ಪ್ಲೇಯರ್ ಆಫ್ ದಿ ಸೀರಿಸ್ ಅವಾರ್ಡ್ ಜಸ್ಪ್ರೀತ್ ಬುಮ್ರಾಗೆ ನೀಡಲಾಗಿದ್ದು, ಅವರು 9 ವಿಕೆಟ್ ಪಡೆದಿದ್ದಾರೆ. ಈ ಬಹುಮಾನದ ಮೊತ್ತ $15000 ಆಗಿದೆ.



Click it and Unblock the Notifications