Latest Updates
-
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು
ಮೊದಲ ಶ್ರಾವಣ ಸೋಮವಾರ: ಶ್ರಾವಣದಲ್ಲಿ ಯಾವೆಲ್ಲಾ ದಿನಗಳಲ್ಲಿ ಉಪವಾಸ ಮಾಡಬೇಕು?
ಶ್ರಾವಣ ಬಂತೆಂದರೆ ಸಡಗರ ಶುರು, ಏಕೆಂದರೆ ಈ ಶ್ರಾವಣ ಸಾಲು-ಸಾಲು ಹಬ್ಬಗಳನ್ನು ಹೊತ್ತು ತರುವುದರಿಂದ ಸಡಗರ ಮಾಸ.ಶ್ರಾವಣ ಮಾಸ ಶಿವನ ಆರಾಧನೆಗೆ ಮೀಸಲಿರುವ ಮಾಸ, ಅದರಲ್ಲಿಯೂ ಶ್ರಾವಣ ಸೋಮವಾರ ಎಂದರೆ ಇನ್ನೂ ವಿಶೇಷ, ಶಿವನ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ.

ಶ್ರಾವಣ ಮಾಸದಲ್ಲಿ ರುದ್ರಾಭಿಷೇಕಕ್ಕೆ ತುಂಬಾನೇ ಮಹತ್ವವಿದೆ
ಶ್ರಾವಣ ಮಾಸದಲ್ಲಿ ರುದ್ರಾಭಿಷೇಕ ಮಾಡಿಸಿದರೆ ಒಳ್ಳೆಯದು, ಶಿವನಿಗೆ, ಜಲ, ಹಾಲು, ತುಪ್ಪ, ಮೊಸರು, ಜೇನು ಇವುಗಳಿಂದಲೂ ಅಭಿಷೇಕ ಮಾಡಿಸಬಹುದು, ಶಿವನಿಗೆ ಬಿಲ್ವೆಪತ್ರೆ ಎಲೆಯನ್ನು ಅರ್ಪಿಸಿ, ಶಿವ ಮಂತ್ರಗಳನ್ನು ಹೇಳುತ್ತಾ ವಿಶೇಷ ಪೂಜೆ ಸಲ್ಲಿಸಲಾಗುವುದು. ಹೀಗೆ ಪೂಜೆ ಸಲ್ಲಿಸುವುದರಿಂದ ಎಲ್ಲಾ ಕಷ್ಟಗಳು ದೂರಾಗುವುದು ಎಂಬ ನಂಬಿಕೆ.
ಶ್ರಾವಣ ಮಾಸದಲ್ಲಿ ಈ ದಿನಗಳಲ್ಲಿ ಉಪವಾಸವಿದ್ದರೆ ಒಳ್ಳೆಯದು
ಶ್ರಾವಣ ಸೋಮವಾರ: ಉಪವಾಸವಿದ್ದು ಶಿವನಿಗೆ ಪೂಜೆ ಸಲ್ಲಿಸುತ್ತಾರೆ.
16 ಸೊಮವಾರ ವ್ರತ: ಈ ವ್ರತವನ್ನು ಒಂದು ಸೊಮವಾರ ಕೈಗೊಂಡರೆ 16 ಸೊಮವಾರದವರೆಗೆ ಮಾಡಬೇಕು.
ಪ್ರದೋಷ ವ್ರತ: ಕರಷ್ಣ ಪಕ್ಷ ಹಾಗೂ ಶುಕ್ಲ ಪಕ್ಷದ ತ್ರಯೋದಶಿಯಂದು ಪ್ರದೋಷವನ್ನು ಆಚರಿಸಲಾಗುವುದು, ಈ ದಿನದಲ್ಲಿ ಕೂಡ ಉಪವಾಸವಿದ್ದು ಶಿವನ ಆರಾಧನೆ ಮಾಡುತ್ತಾರೆ.
ಮಂಗಳ ಗೌರಿ ವ್ರತ: ಶ್ರಾವಣ ಮಾಸದ ಮಂಗಳವಾರ ಮುತ್ತೈದೆಯರು ಮಂಗಳಗೌರಿ ವ್ರತ ಅಚರಿಸುತ್ತಾರೆ.
ಶನಿ ವ್ರತ: ಶ್ರಾವನ ಮಾಸದ ಶನಿವಾರದಲ್ಲಿ ಶ್ರನಿ ವ್ರತ ಕೈಗೊಳ್ಳಲಾಗುವುದು.
ಈ ವ್ರತಗಳನ್ನು ಮಾಡುವುದು ಕಷ್ಟಗಳು ದುರಾಗುವುದು, ಇಷ್ಟಾರ್ಥಗಳು ನೆರವೇರುವುದು ಎಂಬ ಧಾರ್ಮಿಕ ನಂಬಿಕೆ.
ಶ್ರಾವಣ ಮಾಸದ ವಿಶೇಷತೆಯೇನು?
ಶ್ರಾವಣ ಮಾಸದಲ್ಲಿ ಸಾತ್ವಿಕ ಅಹಾರವನ್ನು ಮಾತ್ರ ಸೇವಿಸಬೇಕು.
ಶ್ರಾವಣ ಮಾಸದಲ್ಲಿ ವ್ರತ ನಿಯಮವನ್ನು ಅನುಸರಿಸುವುದರಿಂದ ಧಾರ್ಮಿಕ ಜ್ಞಾನ ಹೆಚ್ಚುವುದು, ಮನಸ್ಸಿಗೆ ನೆಮ್ಮದಿ ದೊರೆಯುವುದು.
ನಕಾರಾತ್ಮಕ ಶಕ್ತಿಗಳನ್ನು ದೂರವಿಡುತ್ತದೆ: ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡುವುದರಿಂದ ಶಿವನ ಕೃಪೆಯಿಂದ ಎಲ್ಲಾ ಕಷ್ಟಗಳು ದೂರಾಗುವುದು ಅಲ್ಲದೆ ಯಾವುದೇ ನಕಾರಾತ್ಮಕ ಶಕ್ತಿಗಳು ನಮ್ಮನ್ನು ಬಾಧಿಸುವುದಿಲ್ಲ.
ಕುಟಂಬದಲ್ಲಿ ಸಂತೋಷ ಇರಲಿದೆ: ಮನೆಯ ಸದಸ್ಯರ ಆರೋಗ್ಯ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಂತೋಷ ನೆಲೆಸಲಿದೆ.



Click it and Unblock the Notifications