Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ಜನ್ಮಾಷ್ಟಮಿ 3 ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆದಿದೆ
ಜನ್ಮಾಷ್ಟಮಿ ಶ್ರೀಕೃಷ್ಣ ಪರಮಾತ್ಮನ ಆರಾಧನೆಗೆ ಮೀಸಲಾದ ದಿನ. ಶ್ರಾವಣ ಮಾಸದ ಕೃಷ್ಣಪಕ್ಷದ ಅಷ್ಟಮಿಯಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಈ ವರ್ಷದಲ್ಲಿ ಅಷ್ಟಮಿ ತಿಥಿ 6 ಮತ್ತು 7ಕ್ಕೆ ಇದೆ. ಆದರೆ ಜನ್ಮಾಷ್ಟಮಿಯನ್ನು ಸೆಪ್ಟೆಂಬರ್ 6ರಂದೇ ಆಚರಿಸಲಾಗುವುದು.
ಪಂಚಾಂಗ ಪ್ರಕಾರ ಅಷ್ಟಮಿ ತಿಥಿ ಸೆಪ್ಟೆಂಬರ್ 6 ಮಧ್ಯಾಹ್ನ 3:37ಕ್ಕೆ ಪ್ರಾರಂಭ
ಸೆಪ್ಟೆಂಬರ್ 7ರಂದು ಸಂಜೆ 04:14ಕ್ಕೆ ಮುಕ್ತಾಯ.
ರೋಹಿಣಿ ನಕ್ಷತ್ರ ಸೆಪ್ಟೆಂಬರ್ 6 ಬೆಳಗ್ಗೆ 09:20ಕ್ಕೆ ಪ್ರಾರಂಭವಾಗಿ ಸೆಪ್ಟೆಂಬರ್ 7 ಬೆಳಗ್ಗೆ 10:25ರವರೆಗೆ ಇರಲಿದೆ.
ಸೆಪ್ಟೆಂಬರ್ 6ರಂದು ಮಧ್ಯರಾತ್ರಿ 11:57ರಂದು 12:42ರವರೆಗೆ ಪೂಜಾ ಮುಹೂರ್ತವಿದೆ.

ಹಲವು ವರ್ಷಗಳ ಬಳಿಕ ಈ ದಿನ ಮತ್ತಷ್ಟು ವಿಶೇಷವಾಗಿದೆ
ಶ್ರೀಕೃಷ್ಣ ಮಧ್ಯರಾತ್ರಿಯಂದು ಜನಿಸಿದ ಎಂದು ಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಶ್ರೀ ಕೃಷ್ಣನು ರೋಹಿಣಿ ನಕ್ಷತ್ರದಲ್ಲಿ ಜನಿಸಿದನು. ಈ ವರ್ಷ ಅಂದ್ರೆ 2023ರ ಕೃಷ್ಣ ಜನ್ಮಾಷ್ಟಮಿಯಂದು ಕೂಡ ರೋಹಿಣಿ ನಕ್ಷತ್ರವಿದೆ. ಸೆಪ್ಟೆಂಬರ್ 6ರಂದು ಮಧ್ಯರಾತ್ರಿ 11:57ರಂದು 12:42ರವರೆಗೆ ಪೂಜಾ ಮುಹೂರ್ತವಿದೆ. ಇದರಿಂದ ಕೂಡ ಈ ವರ್ಷದ ಕೃಷ್ಣ ಜನ್ಮಾಷ್ಟಮಿ ಶ್ರೀಕೃಷ್ಣ ಜನಿಸಿದ ಅದೇ ಘಳಿಗೆಯಂತೆಯೇ ಬಂದಿರುವುದು ತುಂಬಾನೇ ವಿಶೇಷವಾಗಿದೆ.
ಜನ್ಮಾಷ್ಟಮಿ ಮಹತ್ವ
ಶ್ರೀಕೃಷ್ಣನನ್ನು ವಿಷ್ಣುವಿನ 8ನೇ ಅವತಾರವೆಂದು ಹೇಳಲಾಗುವುದು. ದುಷ್ಟರ ಶಿಕ್ಷೆ ನೀಡಿ, ಶಿಷ್ಟರ ಪಾಲನೆಗಾಗಿ ಶ್ರೀಕೃಷ್ಣನ ಅವತಾರ ಎತ್ತಿದ. ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಶ್ರೀ ಕೃಷ್ಣ ಜನಿಸಿದ ಎಂದು ಹೇಳಲಾಗುವುದು. ಈ ವರ್ಷ ಅಧಿಕ ಶ್ರಾವಣ ಮಾಸ ಬಂದಿರುವುದರಿಂದ ದಕ್ಷಿಣ ಭಾರತದಲ್ಲಿ ಶ್ರಾವಣದ ಅಷ್ಟಮಿಯಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುವುದು (ಉತ್ತರ ಭಾರತದಲ್ಲಿ ಭಾದ್ರಪದ ಮಾಸ). ದ್ವಾಪರ ಯುಗದಲ್ಲಿ ದೈವಿಕ ರೂಪದಲ್ಲಿ ಜನಿಸಿದನು ಶ್ರೀಕೃಷ್ಣ.
ಈ ದಿನದಂದು ಬರೀ ಹಣ್ಣು ಹಾಗೂ ನೀರನ್ನು ಸೇವಿಸಿ ಉಪವಾಸವನ್ನು ಮಾಡುತ್ತಾರೆ. ಈ ದಿನ ಕೃಷ್ಣ ಪರಮಾತ್ಮನಿಗೆ ಹಾಲು, ಜೇನುತುಪ್ಪ, ಗಂಗಾಜಲದಿಂದ ಸ್ನಾನ ಮಾಡಿಸಿ, ನಂತರ ಶ್ರೀ ಕೃಷ್ಣನ ಅಲಂಕರಿಸಿ ಪೂಜಿಸಲಾಗುವುದು. ಇದರ ಜೊತೆಗೆ ಮೊಸರು ಕುಡಿಕೆ ಒಡೆಯುವುದು ಮುಂತಾದ ಆಟಗಳನ್ನು ಕೂಡ ಆಡುವುದರಿಂದ ಈ ದಿನದ ಸಂಭ್ರಮ ಮತ್ತಷ್ಟು ಹೆಚ್ಚಾಗುವುದು.
ಈ ಕೃಷ್ಣ ಜನ್ಮಾಷ್ಟಮಿಗೆ ಎಲ್ಲಾ ರಾಶಿಗಳ ಮೇಲೆ ಶ್ರೀಕೃಷ್ಣನ ಕೃಪೆ ಇರಲಿದೆ, ಆದರೆ ಈ ರಾಶಿಗಳ ಮೇಲೆ ವಿಶೇಷ ಕೃಪೆ ಇರಲಿದೆ.
ವೃಷಭ ರಾಶಿ
ವೃಷಭ ರಾಶಿಯವರ ಮೇಲೆ ಶ್ರೀಕೃಷ್ಣ ವಿಶೇಷ ಕೃಪೆ ಇರಲಿದೆ. ಈ ಜನ್ಮಾಷ್ಟಮಿ ನಿಮಗೆ ತುಂಬಾನೇ ವಿಶೇಷವಾಗಿರಲಿದೆ. ನಿಮಗೆ ಯಶಸ್ಸು ದೊರೆಯಲಿದೆ. ಈ ದಿನ ನೀವು ಏನಾದರೂ ಹೊಸ ಕಾರ್ಯ ಮಾಡಿದರೆ ಅದರಲ್ಲಿ ಯಶಸ್ಸು ಕಾಣುವಿರಿ. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ಕೃಷ್ಣ ಜನ್ಮಾಷ್ಟಮಿಯ ಬಳಿಕ ನಿಮ್ಮ ಜೀವನದಲ್ಲಿ ಅನೇಕ ಧನಾತ್ಮಕ ಬದಲಾವಣೆಗಳು ಉಂಟಾಗಲಿದೆ. ನೀವು ಬಯಸಿದಂತೆಯೇ ಫಲಿತಾಂಶ ದೊರೆಯಲಿದೆ. ಬಾಕಿಯುಳಿದಿರುವ ಕೆಲಸಗಳು ಕೂಡ ಪೂರ್ಣಗೊಳ್ಳಲಿದೆ. ವೃತ್ತಿ ಜೀವನದಲ್ಲಿ ಬೆಳವಣಿಗೆಯನ್ನು ಕಾಣುವಿರಿ.
ಸಿಂಹ ರಾಶಿ
ಸಿಂಹ ರಾಶಿಯವರ ಮೇಲೆ ಕೂಡ ಶ್ರೀಕೃಷ್ಣನ ವಿಶೇಷ ಕೃಪೆ ಇರಲಿದೆ. ನೀವು ನಿಮ್ಮ ಕೆಲಸದಲ್ಲಿ ಒಳ್ಳೆಯ ಫಲಿತಾಂಶ ಕಾಣುವಿರಿ. ನಿಮ್ಮ ಬಯಕೆ ಈಡೇರಲಿದೆ. ವೃತ್ತಿ ಜೀವನದಲ್ಲಿ ಯಶಸ್ಸು ದೊರೆಯಲಿದೆ.



Click it and Unblock the Notifications