Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಜನ್ಮಾಷ್ಟಮಿಯಂದು ಏನು ಮಾಡಬೇಕು, ಏನು ಮಾಡಲೇಬಾರದು?
ಹಿಂದೂಗಳಿಗೆ ಜನ್ಮಾಷ್ಟಮಿ ತುಂಬಾನೇ ವಿಶೇಷವಾದ ಆಚರಣೆಯಾಗಿದೆ. ಈ ದಿನ ಶ್ರೀಕೃಷ್ಣನ ಜನ್ಮ ದಿನ. ಶ್ರಾವಣ ಮಾಸದ ಅಷ್ಟಮ ತಿಥಿಯಂದು ಜನ್ಮಾಷ್ಟಮಿಯನ್ನು ಆಚರಿಸಲಾಗುವುದು(ಉತ್ತರ ಭಾರತದ ಕಡೆ ಭಾದ್ರಪದ ಮಾಸ ಶುರುವಾಗಿದೆ). ಈ ವರ್ಷ ಅಷ್ಟಮಿ ತಿಥಿ ಸೆಪ್ಟೆಂಬರ್ 6 ಹಾಗೂ 7ಕ್ಕೆ ಬಂದಿದ್ದು ಸೆಪ್ಟೆಂಬರ್ 6 ಮಧ್ಯರಾತ್ರಿಯಂದ ಜನ್ಮಾಷ್ಟಮಿ ಆಚರಿಸಲಾಗುವುದು.
ಜನ್ಮಾಷ್ಟಮಿಯಂದು ಭಕ್ತರು ಉಪವಾಸವಿದ್ದು ಶ್ರೀಕೃಷ್ಣ ಆರಾಧನೆ ಮಾಡಲಾಗುವುದು. ಶ್ರೀ ಕೃಷ್ಣನನ್ನು ಭಕ್ತಿಯಿಂದ ಆರಾಧಿಸಿದರೆ ನಮ್ಮೆಲ್ಲಾ ಕಷ್ಟಗಳಿಗೆ ಶ್ರೀಕೃಷ್ಣ ಯಾವುದೋ ಒಂದು ರೂಪದಲ್ಲಿ ಪರಿಹಾರ ಸೂಚಿಸುತ್ತಾನೆ ಎಂಬುವುದು ಭಕ್ತರ ಅಚಲ ನಂಬಿಕೆ. ಜನ್ಮಾಷ್ಟಮಿಯಂದು ಉಪವಾಸವಿರುವವರು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ ಬನ್ನಿ:

ಜನ್ಮಾಷ್ಟಮಿಗೆ ಮುನ್ನವೇ ಮನೆಯನ್ನು ಸ್ವಚ್ಛ ಮಾಡಬೇಕು
ಮನೆಯನ್ನು ಸ್ವಚ್ಛಮಾಡಬೇಕು, ಪೂಜೆಯ ಕೋಣೆಯನ್ನು ಸ್ವಚ್ಛ ಮಾಡಿ ಅಲಂಕರಿಸಿ. ಮನೆಯನ್ನೂ ಅಲಂಕರಿಸಿ
* ಶ್ರೀಕೃಷ್ಣನನ್ನು ಉಯ್ಯಾಲೆಯಲ್ಲಿ ಕೂರಿಸಿ
ಮನೆಯನ್ನು ಅಲಂಕರಿಸಿ ಶ್ರೀಕೃಷ್ಣನನ್ನು ತೂಗು ಉಯ್ಯಾಲೆಯಲ್ಲಿ ಕೂರಿಸಿ, ವಸ್ತುಗಳು ಹಾಗೂ ಆಭರಣಗಳಿಂದ ಅಲಂಕರಿಸಿ.
* ಪೂಜೆಗೆ ಮುನ್ನ ಸಂಕಲ್ಪ ತೆಗೆದುಕೊಳ್ಳಿ
ನೀವು ಪೂಜೆಗೆ ಮುನ್ನ ಸಂಕಲ್ಪ ಮಾಡಬೇಕು. ದೇಹ ಹಾಗೂ ಮನಸ್ಸು ಶುದ್ಧವಾಗಿರಬೇಕು. ಶ್ರೀಹರಿಯ ನಾಮವೊಂದೇ ಮನಸ್ಸಿನಲ್ಲಿರಬೇಕು.
* ಶ್ರೀಕೃಷ್ಣನಿಗೆ ವಿವಿಧ ಬಗೆಯ ನೈವೇದ್ಯ ಅರ್ಪಿಸಿ
ಶ್ರೀ ಕೃಷ್ಣನಿಗೆ ಪೂಜೆ ಸಲ್ಲಿಸಿದ ಬಳಿಕ ವಿವಿಧ ಬಗೆಯ ನೈವೇದ್ಯ ಅರ್ಪಿಸಿ. ಶ್ರೀ ಕೃಷ್ಣನಿಗೆ ಬಗೆ-ಬಗೆಯ ನೈವೇದ್ಯ ಅರ್ಪಿಸಿ. ಹಣ್ಣುಗಳು, ಸಿಹಿ ತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸಿ.
ಮಂತ್ರಗಳನ್ನು ಪಠಿಸಿ, ಕೀರ್ತನೆಗಳನ್ನು ಹೇಳಿ
ಕೃಷ್ಣ ಮೂಲ ಮಂತ್ರ
ಓಂ ಕೃಷ್ಣಾಯ ಮಂತ್ರ
ಹರೇ ಕೃಷ್ಣ ಮಹಾ ಮಂತ್ರ
ಹರೇ ಕೃಷ್ಣ, ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ ಹರೇ ರಾಮ, ಹರೇ ರಾಮ, ರಾಮ ರಾಮ ಹರೇ ಹರೇ
ಗಾಯತ್ರಿ ಮಂತ್ರ
|| ಓಂ ದೇವಕಿ ನಂದನಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ಕೃಷ್ಣಃ ಪ್ರಚೋದಯಾತ್ || || ಓಂ ದೇವಕಿನಂದನಾಯ ವಿದ್ಮಿಹೇ ವಾಸುದೇವಾಯ ಧೀಮಹಿ | ತನ್ನೋ: ಕೃಷ್ಣಃ ಪ್ರಚೋದಯಾತ್ ||
ಏನು ಮಾಡಬಾರದು?
ಈ ದಿನ ಯಾವ ಕ್ರೂರ ಕೆಲಸ ಮಾಡಬಾರದು:
ಕೃಷ್ಣ ಜನ್ಮಾಷ್ಟಮಿಯಂದು ಯಾರಿಗೂ ನೋವುಂಟು ಮಾಡಬೇಡಿ, ಹಿರಿಯರನ್ನು ಗೌರವಿಸಿ, ಕೆಟ್ಟ ಹಾಗೂ ಕ್ರೂರ ಕೆಲಸವನ್ನು ಮಾಡಬೇಡಿ.
ತಾಮಸಿಕ ಕಾರ್ಯಗಳಿಂದ ದೂರವಿರಿ
ಈ ದಿನ ಜೂಜಾಡುವುದು, ಮದ್ಯಪಾನ, ಮಾಂಸಾಹಾರ ಸೇವನೆ, ಈರುಳ್ಳಿ, ಬೆಳ್ಳುಳ್ಳಿ ಸೇವನೆ ಮಾಡುವುದು ಮಾಡಬಾರದು.



Click it and Unblock the Notifications











