Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಹೆತ್ತ ತಾಯಿಗೆ ಅನ್ನ, ನೀರು ನೀಡದೆ ಕೂಡಿ ಹಾಕಿ ಕುಂಭಮೇಳಕ್ಕೆ ಪತ್ನಿ, ಮಕ್ಕಳು, ಅತ್ತೆ-ಮಾವ ಜೊತೆ ಹೋದ ಪಾಪಿ ಮಗ!
ಮಾಡಿರುವುದೆಲ್ಲಾ ಮಹಾಪಾಪದ ಕೆಲಸ, ನಂತರ ಕುಂಭಮೇಳಕ್ಕೆ ಹೋಗಿ ಪುಣ್ಯ ಕಟ್ಟಿಕೊಳ್ಳಲು ಬಯಸಿದ ಪಾಪಿ ಮಗನ ಕತೆಯಿದು. ಇಂಥ ಮಕ್ಕಳು ಇದ್ದಾರಾ? ಅಂತ ಕೆಲವರು ಕೇಳಬಹುದು, ಆದರೆ ಇಂಥ ಅನೇಕ ಮಕ್ಕಳಿದ್ದಾರೆ, ಇಂಥವರಿಗೆ ತಕ್ಕ ಶಿಕ್ಷೆಯಾದರೆ ಮಾತ್ರ ತಂದೆ-ತಾಯಿಗಳಿಗೆ ಹಿಂಸೆ ಕೊಡುವುದನ್ನು ಕಡಿಮೆ ಮಾಡಬಹುದು.

ಈ ಘಟನೆ ನಡೆದಿರುವುದು ಜಾರ್ಖಂಡ್ನಲ್ಲಿ, ಆತ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೋಗಿ ಗಂಗೆಯಲ್ಲಿ ಮಿಂದು ಪುಣ್ಯ ಕಟ್ಟಿಕೊಳ್ಳಲು ಬಯಸುತ್ತಾನೆ, ಇಂಥವರು ಆ ಗಂಗೆಯಲ್ಲಿ ಮುಳುಗಿದರೆ ಗಂಗೆಯೂ ಮಲೀನವಾಗುತ್ತಾಳೆ ಅಂಥ ಪಾಪಿಗಳು, ಏಕೆಂದರೆ ಈತ ತಾನು ಕುಂಭಮೇಳಕ್ಕೆ ಹೋಗಲು ತನ್ನ 65 ವರ್ಷದ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಅನ್ನ, ನೀರು ಸಿಗದೆ ಆ ತಾಯಿ ನರಳುವಂತೆ ಮಾಡಿದ್ದಾನೆ.
ಮಗ ತನ್ನ ತಾಯಿಯನ್ನು ಮಾತ್ರ ಮನೆಯಯೊಳಗೆ ಕೂಡಿ ಹಾಕಿ ಪತ್ನಿ, ಮಕ್ಕಳು ಹಾಗೂ ಪತ್ನಿಯ ಪೋಷಕರ ಜೊತೆಗೆ ಪ್ರಯಾಗ್ರಾಜ್ಗೆ ಹೋಗಿದ್ದಾನೆ. ಮನೆಯಲ್ಲಿರುವ ತಾಯಿಗೆ ಒಂದು ಊಟದ ವ್ಯವಸ್ಥೆಯನ್ನೂ ಮಾಡಿರಲಿಲ್ಲ, ಆ ತಾಯಿಗೆ ಒಂದೆರಡು ದಿನ ಉಳಿದ ಹಳಸಿದ ಅನ್ನ ತಿಂದಿದ್ದಾಳೆ ನಂತರ ಹಸಿವು ತಡೆಯಲಾರದೆ ಜೋರಾಗಿ ಕಿರುಚುತ್ತಾಳೆ, ಆ ಶಬ್ದ ಕೇಳಿಸಿದ ನೆರೆಹೊರೆಯವರು ಬಂದು ವಿಚಾರಣೆ ಮಾಡಿದಾಗ ತಾಯಿ ಆಹಾರವಿಲ್ಲದೆ ಕಷ್ಟಪಡುತ್ತಿರುವುದು ತಿಳಿಯುತ್ತದೆ.
ನಂತರ ಆ ತಾಯಿಯ ಮಗಳಿಗೆ ವಿಷಯ ತಿಳಿಸಲಾಗುವುದು, ಪೊಲೀಸರ ಸಮೇತ ಬಂದ ಆಕೆ ತಾಯಿಯನ್ನು ರಕ್ಷಣೆ ಮಾಡ್ತಾಳೆ. ಕೂಡಲೇ ತಾಯಿಗೆ ಆಹಾರ, ಔಷಧ ನೀಡಿ ನಂತರ ಸಮೀಪದ ಆಸ್ಪತ್ರೆಗೆ ಚಿಕಿತ್ಸೆ ಕರೆದೊಯ್ಯಲಾಯ್ತು.
ಈ ಘಟನೆ ಬಗ್ಗೆ ಮಗನಿಗೆ ಹೇಳಿದಾಗ CCL(Central Coalfields Limited) ಉದ್ಯೋಗಿಯಾಗಿರುವ ಆತ, ಇಲ್ಲ ನಾನು ತಾಯಿಗೆ ಆಹಾರ ವ್ಯವಸ್ಥೆ ಮಾಡಿದ್ದೆ, ಆದರೆ ತಾಯಿ ಆ ಆಹಾರ ಮುಟ್ಟಿಲ್ಲ ಎಂಬುವುದಾಗಿ ಹೇಳುತ್ತಾನೆ. ಮಗ ದೊಡ್ಡ ಹುದ್ದೆಯಲ್ಲಿದ್ದರೂ ತನ್ನ ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೆ ಇರುವ ವಿಷಯ ವೈರಲ್ ಆಗಿದ್ದು ಇದರಿಂದಾಗಿ ಆತ ತೀವ್ರ ಮುಜುಗರ ಪಡುವಂತಾಗಿದೆ, ಆತನಿಗೆ ಅದು ಆಗಬೇಕಾಗಿದಿದ್ದೇ....
ತಾಯಿಯನ್ನು ಜೊತೆಗೆ ಕರೆದೊಯ್ಯಲು ಸಾಧ್ಯವಾಗದೆ ಇದ್ದರೆ ಅವರಿದ್ದ ಸ್ಥಳದಿಂದ 5 ಕಿ.ಮೀ ದೂರದಲ್ಲಿರುವ ತಂಗಿಯ ಮನೆಗೆ ಕರೆದುಕೊಂಡು ಹೋಗಿ ಬಿಟ್ಟು ನಂತರ ಕುಂಭಮೇಳಕ್ಕೆ ಹೋಗಬಹುದಿತ್ತು, ಸಂಬಂಧಗಳು ಅಷ್ಟಾಗಿ ಸರಿಯಿರಲ್ಲ ಕಾಣುತ್ತೆ, ಅದೇನೆ ಇರಲಿ ಆರೋಗ್ಯ ಸರಿಯಿಲ್ಲದ ತಾಯಿಯನ್ನು ಇಷ್ಟೊಂದು ಬೇಜಾವ್ದಾರಿಯಿಂದ ಬಿಟ್ಟು ಹೋಗಿದ್ದಾನೆ, ಅವರು ಹೇಗೆ ಇರ್ತಾರೆ ಎಂಬ ಚಿಕ್ಕ ಕಲ್ಪನೆಯೂ ಆತನಿಗೆ ಬರಲಿಲ್ಲ ಕಾಣುತ್ತೆ.
ಹೆತ್ತ ತಂದೆ-ತಾಯಿಗೆ ಕಷ್ಟಕೊಟ್ಟು ಯಾವ ದೇವಾಲಯದಲ್ಲಿ ಹೋಗಿ ಕೈ ಮುಗಿದರೂ ಪುಣ್ಯ ದೊರೆಯಲ್ಲ, ಇದನ್ನು ಪ್ರತಿಯೊಬ್ಬ ಮಕ್ಕಳು ಅರೆತುಕೊಂಡರೆ ಈ ಸಮಾಜದಲ್ಲಿ ವೃದ್ಧಾಶ್ರಮ ಅವಶ್ಯಕತೆ ಬರುವುದೇ ಇಲ್ಲ ಅಲ್ವಾ?



Click it and Unblock the Notifications
