Latest Updates
-
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ!
ಜೂನ್ 17, ಶನಿ ಅಮವಾಸ್ಯೆಯಂದೇ ಕಾಕತಾಳೀಯವಾಗಿ 3 ಘಟನೆ ಸಂಭವಿಸಲಿದೆ: ಇದರ ಪ್ರಭಾವ ಹೇಗಿರಲಿದೆ ಗೊತ್ತಾ?
ಶನಿವಾರ ಅಮವಾಸ್ಯೆ ಬಂದಿದೆ. ಈ ರೀತಿ ಶನಿವಾರ ಅಮವಾಸ್ಯೆ ಬಂದರೆ ಶನಿ ಅಮವಾಸ್ಯೆ ಎಂದು ಕರೆಯಲಾಗುವುದು. ವೈದಿಕ ದೃಷ್ಟಿಯಿಂದ ಶನಿ ಅಮವಾಸ್ಯೆ ತುಂಬಾನೇ ಮಹತ್ವವಾದ ದಿನವಾಗಿದೆ. ಶನಿವಾರ ಶನಿದೇವನ ಪೂಜೆಗೆ ಮೀಸಲಾದ ದಿನ, ಆ ದಿನ ಅಮವಾಸ್ಯೆ ಬಂದರೆ ಶನಿ ದೇವನ ಪೂಜೆಗೆ ಮತ್ತಷ್ಟು ಶ್ರೇಷ್ಠವಾದ ದಿನವೆಂದು ಪರಿಗಣಿಸಲಾಗಿದೆ. ಅದರಲ್ಲೂ ಈ ಬಾರಿಯ ಅಮವಾಸ್ಯೆ ಹಲವು ವಿಶೇಷತೆಗಳಿಂದ ಕೂಡಿದ್ದು ಕಾಕತಾಳೀಯವಾಗಿ ಹಲವು ಪ್ರಮುಖ ಘಟನೆಗಳು ಒಂದೇ ದಿನ ಘಟಿಸಲಿದೆ. ಈ ಕಾರಣಕ್ಕೆ ಜೂನ್ 17ಕ್ಕೆ ತುಂಬಾನೇ ಪ್ರಮುಖವಾಗಿದೆ.

ಜೂನ್ 17ರ ಶನಿವಾರ ತುಂಬಾನೇ ಪ್ರಾಮುಖ್ಯಯಿಂದ ಕೂಡಿದೆ ಏಕೆ?
* ಶನಿ ಅಮವಾಸ್ಯೆಯಂದೇ ಶನಿದೇವ ಕುಂಭ ರಾಶಿಯಲ್ಲಿ ವಕ್ರೀಯವಾಗಿ ಚಲಿಸಲಿದೆ. 30 ವರ್ಷಗಳ ಬಳಿಕ ಶನಿಯು ವಕ್ರೀಯವಾಗಿ ಚಲಿಸಲಿದೆ.
* ಇದೇ ದಿನ ತ್ರಿಕೋನ ರಾಜಯೋಗ ಮತ್ತು ಶಶರಾಜಯೋಗವು ರೂಪುಗೊಳ್ಳುತ್ತದೆ
* ಈ ದಿನ ಸರ್ವಾರ್ಥ ಸಿದ್ಧಿ ಮತ್ತು ಅಮೃತ ಸಿದ್ಧಿ ಯೋಗವೂ ರೂಪಗೊಳ್ಳಲಿದೆ.
ಕುಂಭ ರಾಶಿಯಲ್ಲಿ ಶನಿ ವಕ್ರೀಯ ಚಲನೆ: ವೈದಿಕ ದೃಷ್ಟಿಯಿಂದ ಶನಿಯ ವಕ್ರೀಯ ಚಲನೆಗೆ ತುಂಬಾನೇ ಮಹತ್ವವಿದೆ. 30 ವರ್ಷಗಳ ನಂತರ ಶನಿಯು ಕುಂಭ ರಾಶಿಯಲ್ಲಿ ಹಿಮ್ಮುಖ ಚಲನೆಯಲ್ಲಿ ಚಲಿಸಲಿದೆ. ನವೆಂಬರ್ 4ರವರೆಗೆ ಶನಿಯು ಕುಂಭ ರಾಶಿಯಲ್ಲಿ ಹಿಮ್ಮುಖ ಚಲನೆಯಲ್ಲಿ ಇರಲಿದ್ದು ನಂತರ ಮಾರ್ಗಿಯಾಗಲಿದೆ. ಈ ಅವಧಿಯಲ್ಲಿ ಶನಿಯು ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ನಾಲ್ಕು ತಿಂಗಳು ಶನಿಯು ಹಿಮ್ಮುಖ ಚಲನೆಯಲ್ಲಿ ಇದ್ದಾಗ ದೇಶ ಹಾಗೂ ಪ್ರಪಂಚದ ಮೇಲೆ ಹಲವು ರೀತಿಯಲ್ಲಿ ಪ್ರಭಾವ ಬೀರಲಿದೆ. ಹವಾಮಾನದಲ್ಲಿ ತುಂಬಾನೇ ಬದಲಾವಣೆ ಆಗಲಿದೆ. ರಾಜಕೀಯ ಕ್ಷೇತ್ರದಲ್ಲೂ ಅನೇಕ ಬದಲಾವಣೆಗಳು ಕಂಡು ಬರಲಿದೆ.
ತ್ರಿಕೋನ ರಾಜಯೋಗ ಮತ್ತು ಶಶರಾಜಯೋಗ: ಈ ದಿನ ತ್ರಿಕೋನ ರಾಜಯೋಗ ಮತ್ತು ಶಶರಾಜಯೋಗ ಏರ್ಪಡುವುದರಿಂದ ಶನಿ ಸಾಡೇಸಾತಿ, ಶನಿ ಧೈಯ್ಯ ಇರುವವರು ಶನಿ ದೇವನಿಗೆ ಪರಿಹಾರ ಮಾಡುವುದರಿಂದ ಸಂಕಷ್ಟಗಳು ಕಡಿಮೆಯಾಗಲಿದೆ. ಅಲ್ಲದೆ ಈ ದಿನ ಸರ್ವಾರ್ಥ ಸಿದ್ಧಿ ಮತ್ತು ಅಮೃತ ಸಿದ್ಧಿ ಯೋಗವೂ ರೂಪಗೊಂಡಿರುವುದರಿಂದ ಈ ದಿನ ಪೂಜಾ ಕಾರ್ಯಗಳಿಗೆ ತುಂಬಾನೇ ಶುಭವಾಗಿದೆ. ಈ ದಿನದಲ್ಲಿ ಪೂಜೆ ಮಾಡುವುದರಿಂದ ಹೆಚ್ಚಿನ ಫಲ ಸಿಗಲಿದೆ.
ಪಿತೃದೋಷಕ್ಕೆ ಪರಿಹಾರ
ಈ ದಿನ ಪಿತೃದೋಷಕ್ಕೆ ಪರಿಹಾರ ಮಾಡಲು ಕೂಡ ಈ ದಿನ ತುಂಬಾನೇ ಶ್ರೇಷ್ಠವಾಗಿದೆ. ಈ ದಿನ ಪಿತೃಗಳನ್ನು ತೃಪ್ತಿ ಪಡಿಸುವುದರಿಂದ ಪಿತೃದೋಷದಿಂದ ಮುಕ್ತರಾಗಬಹುದು. ಈ ದಿನ ಬಡವರಿಗೆ ದಾನ ಮಾಡಿ. ಹಿರಿಯರನ್ನು ಗೌರವಿಸಿ.
ಈ ಪರಿಹಾರ ಮಾಡಿ
* ಶನಿ ಅಮಾವಾಸ್ಯೆಯ ದಿನದಂದು ಹನುಮಂತನಿಗೆ ತುಳಸಿ ಮಾಲೆಯನ್ನು ಅರ್ಪಿಸಬೇಕು. ಇದನ್ನು ಮಾಡುವುದರಿಂದ ಹನುಮಾನ್ನ ಕೃಪೆಗೆ ಪಾತ್ರರಾಗುವಿರಿ, ಇದರಿಂದ ಶನಿಯ ಅಶುಭ ಪರಿಣಾಮಗಳು ಕಡಿಮೆಯಾಗುವುದು.
* ಹನುಮಾನ್ ಚಾಲೀಸಾ ಪಠಿಸಿ.
* ಹನುಮಂತನಿಗೆ ಕುಂಕುಮವನ್ನು ಅರ್ಪಿಸಿ ಪೂಜೆ ಮಾಡಿ.
* ಈ ದಿನ ಕಪ್ಪು ಎಳ್ಳು ಹಾಗೂ ಉದ್ದು ದಾನ ಮಾಡಿ
* ಶನಿ ಮಂತ್ರಗಳನ್ನು ಪಠಿಸಿ.
ಶನಿಗೆ ಪರಿಹಾರ ಮಾಡುವುದರಿಂದ ಸಾಡೇಸಾತಿ ಮತ್ತು ಶನಿಧೈಯ್ಯ ಇರುವವರಿಗೆ ಶನಿಯ ಕೆಟ್ಟ ಪ್ರಭಾವ ಕಡಿಮೆಯಾಗಲಿದೆ.



Click it and Unblock the Notifications
