Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜೂನ್ 17, ಶನಿ ಅಮವಾಸ್ಯೆಯಂದೇ ಕಾಕತಾಳೀಯವಾಗಿ 3 ಘಟನೆ ಸಂಭವಿಸಲಿದೆ: ಇದರ ಪ್ರಭಾವ ಹೇಗಿರಲಿದೆ ಗೊತ್ತಾ?
ಶನಿವಾರ ಅಮವಾಸ್ಯೆ ಬಂದಿದೆ. ಈ ರೀತಿ ಶನಿವಾರ ಅಮವಾಸ್ಯೆ ಬಂದರೆ ಶನಿ ಅಮವಾಸ್ಯೆ ಎಂದು ಕರೆಯಲಾಗುವುದು. ವೈದಿಕ ದೃಷ್ಟಿಯಿಂದ ಶನಿ ಅಮವಾಸ್ಯೆ ತುಂಬಾನೇ ಮಹತ್ವವಾದ ದಿನವಾಗಿದೆ. ಶನಿವಾರ ಶನಿದೇವನ ಪೂಜೆಗೆ ಮೀಸಲಾದ ದಿನ, ಆ ದಿನ ಅಮವಾಸ್ಯೆ ಬಂದರೆ ಶನಿ ದೇವನ ಪೂಜೆಗೆ ಮತ್ತಷ್ಟು ಶ್ರೇಷ್ಠವಾದ ದಿನವೆಂದು ಪರಿಗಣಿಸಲಾಗಿದೆ. ಅದರಲ್ಲೂ ಈ ಬಾರಿಯ ಅಮವಾಸ್ಯೆ ಹಲವು ವಿಶೇಷತೆಗಳಿಂದ ಕೂಡಿದ್ದು ಕಾಕತಾಳೀಯವಾಗಿ ಹಲವು ಪ್ರಮುಖ ಘಟನೆಗಳು ಒಂದೇ ದಿನ ಘಟಿಸಲಿದೆ. ಈ ಕಾರಣಕ್ಕೆ ಜೂನ್ 17ಕ್ಕೆ ತುಂಬಾನೇ ಪ್ರಮುಖವಾಗಿದೆ.

ಜೂನ್ 17ರ ಶನಿವಾರ ತುಂಬಾನೇ ಪ್ರಾಮುಖ್ಯಯಿಂದ ಕೂಡಿದೆ ಏಕೆ?
* ಶನಿ ಅಮವಾಸ್ಯೆಯಂದೇ ಶನಿದೇವ ಕುಂಭ ರಾಶಿಯಲ್ಲಿ ವಕ್ರೀಯವಾಗಿ ಚಲಿಸಲಿದೆ. 30 ವರ್ಷಗಳ ಬಳಿಕ ಶನಿಯು ವಕ್ರೀಯವಾಗಿ ಚಲಿಸಲಿದೆ.
* ಇದೇ ದಿನ ತ್ರಿಕೋನ ರಾಜಯೋಗ ಮತ್ತು ಶಶರಾಜಯೋಗವು ರೂಪುಗೊಳ್ಳುತ್ತದೆ
* ಈ ದಿನ ಸರ್ವಾರ್ಥ ಸಿದ್ಧಿ ಮತ್ತು ಅಮೃತ ಸಿದ್ಧಿ ಯೋಗವೂ ರೂಪಗೊಳ್ಳಲಿದೆ.
ಕುಂಭ ರಾಶಿಯಲ್ಲಿ ಶನಿ ವಕ್ರೀಯ ಚಲನೆ: ವೈದಿಕ ದೃಷ್ಟಿಯಿಂದ ಶನಿಯ ವಕ್ರೀಯ ಚಲನೆಗೆ ತುಂಬಾನೇ ಮಹತ್ವವಿದೆ. 30 ವರ್ಷಗಳ ನಂತರ ಶನಿಯು ಕುಂಭ ರಾಶಿಯಲ್ಲಿ ಹಿಮ್ಮುಖ ಚಲನೆಯಲ್ಲಿ ಚಲಿಸಲಿದೆ. ನವೆಂಬರ್ 4ರವರೆಗೆ ಶನಿಯು ಕುಂಭ ರಾಶಿಯಲ್ಲಿ ಹಿಮ್ಮುಖ ಚಲನೆಯಲ್ಲಿ ಇರಲಿದ್ದು ನಂತರ ಮಾರ್ಗಿಯಾಗಲಿದೆ. ಈ ಅವಧಿಯಲ್ಲಿ ಶನಿಯು ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ನಾಲ್ಕು ತಿಂಗಳು ಶನಿಯು ಹಿಮ್ಮುಖ ಚಲನೆಯಲ್ಲಿ ಇದ್ದಾಗ ದೇಶ ಹಾಗೂ ಪ್ರಪಂಚದ ಮೇಲೆ ಹಲವು ರೀತಿಯಲ್ಲಿ ಪ್ರಭಾವ ಬೀರಲಿದೆ. ಹವಾಮಾನದಲ್ಲಿ ತುಂಬಾನೇ ಬದಲಾವಣೆ ಆಗಲಿದೆ. ರಾಜಕೀಯ ಕ್ಷೇತ್ರದಲ್ಲೂ ಅನೇಕ ಬದಲಾವಣೆಗಳು ಕಂಡು ಬರಲಿದೆ.
ತ್ರಿಕೋನ ರಾಜಯೋಗ ಮತ್ತು ಶಶರಾಜಯೋಗ: ಈ ದಿನ ತ್ರಿಕೋನ ರಾಜಯೋಗ ಮತ್ತು ಶಶರಾಜಯೋಗ ಏರ್ಪಡುವುದರಿಂದ ಶನಿ ಸಾಡೇಸಾತಿ, ಶನಿ ಧೈಯ್ಯ ಇರುವವರು ಶನಿ ದೇವನಿಗೆ ಪರಿಹಾರ ಮಾಡುವುದರಿಂದ ಸಂಕಷ್ಟಗಳು ಕಡಿಮೆಯಾಗಲಿದೆ. ಅಲ್ಲದೆ ಈ ದಿನ ಸರ್ವಾರ್ಥ ಸಿದ್ಧಿ ಮತ್ತು ಅಮೃತ ಸಿದ್ಧಿ ಯೋಗವೂ ರೂಪಗೊಂಡಿರುವುದರಿಂದ ಈ ದಿನ ಪೂಜಾ ಕಾರ್ಯಗಳಿಗೆ ತುಂಬಾನೇ ಶುಭವಾಗಿದೆ. ಈ ದಿನದಲ್ಲಿ ಪೂಜೆ ಮಾಡುವುದರಿಂದ ಹೆಚ್ಚಿನ ಫಲ ಸಿಗಲಿದೆ.
ಪಿತೃದೋಷಕ್ಕೆ ಪರಿಹಾರ
ಈ ದಿನ ಪಿತೃದೋಷಕ್ಕೆ ಪರಿಹಾರ ಮಾಡಲು ಕೂಡ ಈ ದಿನ ತುಂಬಾನೇ ಶ್ರೇಷ್ಠವಾಗಿದೆ. ಈ ದಿನ ಪಿತೃಗಳನ್ನು ತೃಪ್ತಿ ಪಡಿಸುವುದರಿಂದ ಪಿತೃದೋಷದಿಂದ ಮುಕ್ತರಾಗಬಹುದು. ಈ ದಿನ ಬಡವರಿಗೆ ದಾನ ಮಾಡಿ. ಹಿರಿಯರನ್ನು ಗೌರವಿಸಿ.
ಈ ಪರಿಹಾರ ಮಾಡಿ
* ಶನಿ ಅಮಾವಾಸ್ಯೆಯ ದಿನದಂದು ಹನುಮಂತನಿಗೆ ತುಳಸಿ ಮಾಲೆಯನ್ನು ಅರ್ಪಿಸಬೇಕು. ಇದನ್ನು ಮಾಡುವುದರಿಂದ ಹನುಮಾನ್ನ ಕೃಪೆಗೆ ಪಾತ್ರರಾಗುವಿರಿ, ಇದರಿಂದ ಶನಿಯ ಅಶುಭ ಪರಿಣಾಮಗಳು ಕಡಿಮೆಯಾಗುವುದು.
* ಹನುಮಾನ್ ಚಾಲೀಸಾ ಪಠಿಸಿ.
* ಹನುಮಂತನಿಗೆ ಕುಂಕುಮವನ್ನು ಅರ್ಪಿಸಿ ಪೂಜೆ ಮಾಡಿ.
* ಈ ದಿನ ಕಪ್ಪು ಎಳ್ಳು ಹಾಗೂ ಉದ್ದು ದಾನ ಮಾಡಿ
* ಶನಿ ಮಂತ್ರಗಳನ್ನು ಪಠಿಸಿ.
ಶನಿಗೆ ಪರಿಹಾರ ಮಾಡುವುದರಿಂದ ಸಾಡೇಸಾತಿ ಮತ್ತು ಶನಿಧೈಯ್ಯ ಇರುವವರಿಗೆ ಶನಿಯ ಕೆಟ್ಟ ಪ್ರಭಾವ ಕಡಿಮೆಯಾಗಲಿದೆ.



Click it and Unblock the Notifications