Latest Updates
-
ಪೊಲೀಸ್ ಕಿರುಕುಳದಿಂದ ಬೇಸತ್ತಿದ್ದೀರಾ? ಪ್ರೇಮಿಗಳಿಗೆ ರಕ್ಷಣೆ ನೀಡಲು ಹೈಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್! -
ಬಿಸಿಲ ಬೇಗೆಯಿಂದ ತತ್ತರಿಸಿದೆಯೇ? ನಿಮ್ಮ ಮನೆ ಮತ್ತು ಗಿಡಗಳನ್ನು ತಂಪಾಗಿರಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಸರಳ ಟಿಪ್ಸ್ ಪಾಲಿಸಿ: ಸುಡುವ ಬಿಸಿಲಿನಲ್ಲಿ ಆರೋಗ್ಯವಾಗಿರುವುದು ಹೇಗೆ? -
ಸುಡುವ ಬಿಸಿಲಿಗೆ ಸುಸ್ತಾದ್ರಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ಕೂಲಿಂಗ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸದಿದ್ದರೆ ಕಾದಿದೆ ದೊಡ್ಡ ಅಪಾಯ! -
ಸಲಿಂಗ ಜೋಡಿಗಳಿಗೆ ಸಿಕ್ತು ಭದ್ರತೆ: ಹೈಕೋರ್ಟ್ನ ಈ ತೀರ್ಪು ನಿಮ್ಮ ಬದುಕನ್ನೇ ಬದಲಿಸಬಹುದು! -
ಸುಡುವ ಬಿಸಿಲಿಗೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ನಕಲಿ ಜಿಮ್ ಸಪ್ಲಿಮೆಂಟ್ ಬಳಸುತ್ತಿದ್ದೀರಾ? ದೆಹಲಿಯ ಈ ದಾಳಿ ನಿಮ್ಮ ಕಣ್ಣು ತೆರೆಸುತ್ತದೆ! -
40 ಡಿಗ್ರಿ ಬಿಸಿಲಲ್ಲೂ ಫ್ರೆಶ್ ಆಗಿರಬೇಕಾ? ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ! -
ಹೀಟ್ವೇವ್ ಅಲರ್ಟ್: ಬಿಸಿಲ ಬೇಗೆಯಲ್ಲಿ ಫಿಟ್ನೆಸ್ ಕಾಪಾಡಿಕೊಳ್ಳಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಸೆ. 4ಕ್ಕೆ ಗುರು ವಕ್ರೀಯ ಚಲನೆ: 118 ದಿನ ಈ 4 ರಾಶಿಯವರು ತುಂಬಾನೇ ಜಾಗ್ರತೆ
ಜ್ಯೋತಿಷ್ಯದ ಪ್ರಕಾರ ಗುರು ಸಂಚಾರಕ್ಕೆ ತುಂಬಾನೇ ಮಹತ್ವವಿದೆ. ಗುರು ಮೇಷ ರಾಶಿಯಲ್ಲಿದೆ. ಈ ಸೆಪ್ಟೆಂಬರ್ 4ಕ್ಕೆ ಗುರು ವಕ್ರೀಯ ಚಲನೆ ಮಾಡಲಿದೆ. ಗುರು ದುರ್ಬಲ ಸ್ಥಾನದಲ್ಲಿದ್ದಾಗ ಅದು ರಾಶಿಗಳ ಮೇಲೆ ಕೆಟ್ಟ ಪ್ರಭಾವ ಬೀರಲಿದೆ. ಗುರು ವಕ್ರೀಯ ಚಲನೆ ಮಾಡಿದಾಗ ಈ ರಾಶಿಗಳಲ್ಲಿ ದುರ್ಬಲ ಸ್ಥಾನದಲ್ಲಿ ಇರಲಿದೆ. 118 ದಿನಗಳವರೆಗೆ ಗುರು ವಕ್ರೀಯ ಚಲನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಯಾವೆಲ್ಲಾ ರಾಶಿಯವರು ಜಾಗ್ರತೆವಹಿಸಬೇಕು ನೋಡೋಣ ಬನ್ನಿ:

ಮೇಷ ರಾಶಿ
ಗುರು ಹಿಮ್ಮುಖ ಚಲನೆ ಮಾಡಲಾರಂಭಿಸಿದಾಗ ಈ ಅವಧಿಯಲ್ಲಿ ಗೊಂದಲವಿರಲಿದೆ, ನೀವು ಈ ಅವಧಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುವುದು. ಈ ಅವಧಿಯಲ್ಲಿ ನಿಮ್ಮ ತಂದೆಯ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಬಹುದು. ಖರ್ಚು ಹೆಚ್ಚಾಗಲಿದೆ, ಆದರೆ ಮಿತಿಯಲ್ಲಿ ಖರ್ಚು ಮಾಡಿದರೆ ಆರ್ಥಿಕ ಸಂಕಷ್ಟ ಉಂಟಾಗುವುದನ್ನು ತಡೆಗಟ್ಟಬಹುದು.
ವೃಷಭ ರಾಶಿ
ಈ ಅವಧಿಯಲ್ಲಿ ಆರೋಗ್ಯದಲ್ಲಿ ಸಮಸ್ಯೆಗಳು ಉಂಟಾಗಬಹುದು. ಲಿವರ್ಗೆ ಸಂಬಂಧಿಸಿದ ಸಮಸ್ಯೆ ಕಾಡಬಹುದು, ಆರೋಗ್ಯದ ಕಡೆ ಗಮನಹರಿಸಿ. ವೃತ್ತಿ ಜೀವನದಲ್ಲಿ ಸವಾಲುಗಳು ಎದುರಾಗುವುದು, ಕುಟುಂಬದ ವಿಷಯದಲ್ಲೂ ಕೆಲ ಸಮಸ್ಯೆಗಳಿರಬಹುದು.
ಕರ್ಕ ರಾಶಿ
ಈ ಅವಧಿಯಲ್ಲಿ ಕೆಲಸದಲ್ಲಿ ತುಂಬಾನೇ ಒತ್ತಡ ಇರಲಿದೆ. ಕೆಲಸದಲ್ಲಿ ನಿರ್ಲಕ್ಷ್ಯ ನಿಮ್ಮ ಸಮಸ್ಯೆ ಮತ್ತಷ್ಟು ಹೆಚ್ಚಿಸುವುದು. ನೀವು ಕೆಲಸದ ಬದಲಾವಣೆ ಬಗ್ಗೆ ಯೋಚಿಸುತ್ತಿದ್ದರೆ ಸ್ವಲ್ಪ ಕಾಯುವುದು ಒಳ್ಳೆಯದು. ತಂದೆಯೊಂದಿಗಿನ ಸಂಬಂಧದಲ್ಲಿ ಏರಳಿತಗಳಿರಬಹುದು.ಅನೇಕ ಆರೋಗ್ಯ ಸಮಸ್ಯೆ ಕೂಡ ಉಂಟಾಗುವುದು.
ಸಿಂಹ ರಾಶಿ
ಈ ಅವಧಿಯಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚಾಗುವುದು, ಇದರಿಂದ ನಿಮಗೆ ಒತ್ತಡ ಹೆಚ್ಚಾಗಲಿದೆ. ದೂರ ಪ್ರಯಾಣ ಖುಷಿ ನೀಡುವುದಕ್ಕಿಂತ ಆಯಾಸ ಹೆಚ್ಚಾಗುವುದು. ಸಂಬಂಧದಲ್ಲೂ ಏರಳಿತ ಉಂಟಾಗುವುದು. ಅನಗ್ಯತ ಚರ್ಚೆಗೆ ಹೋಗಬೇಡಿ, ನೀವು ನಿಮ್ಮ ಕೆಲಸ ಕಾರ್ಯದತ್ತ ಗಮನಹರಿಸಿ.
ಗುರು ದುರ್ಬಲ ಸ್ಥಾನದಲ್ಲಿದ್ದಾಗ ಏನಾಗುತ್ತದೆ?
* ಈ ಅವಧಿಯಲ್ಲಿ ಆಲೋಚನೆಗಳು ದುರ್ಬಲವಾಗುವುದು
* ಈ ಅವಧಿಯಲ್ಲಿ ನಿಮ್ಮ ಇಮೇಜ್ಗೆ ಧಕ್ಕೆಯಾಗಬಹುದು, ಆದ್ದರಿಂದ ಜಾಗ್ರತೆವಹಿಸಿ.
* ವಿದ್ಯಾರ್ಥಿಗಳಿಗೆ ಶಿಕ್ಷಣದ ಕಡೆ ಗಮನ ಹರಿಸಲು ಸಾಧ್ಯವಾಗಲ್ಲ
* ಗುರು ದುರ್ಬಲ ಸ್ಥಾನದಲ್ಲಿದ್ದರೆ ಆತ್ಮವಿಶ್ವಾಸ ಕಡಿಮೆಯಾಗುವುದು.
* ಗುರು ದುರ್ಬಲವಾಗಿದ್ದಾಗ ಆರೋಗ್ಯ ಸಮಸ್ಯೆಗಳು ಉಂಟಾಗುವುದು.
ಪರಿಹಾರವೇನು?
* ಹಳದಿ ಆಭರಣ ಧರಿಸಿ, ಚಿನ್ನ ಧರಿಸುವುದು ಕೂಡ ಉತ್ತಮ ಪರಿಹಾರವಾಗಿದೆ
* ಏನಾದರೂ ಪ್ರಮುಖ ಕಾರ್ಯಕ್ಕೆ ಹೋಗುವಾಗ ಹಳದಿ ಬಟ್ಟೆ ಧರಿಸಿ, ಒಂದು ಹಳದಿ ಕರ್ಚೀಫ್ ಆದರೂ ನಿಮ್ಮ ಬಳಿಯಿರಲಿ
* ಗುರುವಾರ ಉಪವಾಸ ಮಾಡಿ
* ಗುರು ಬೀಜ ಮಂತ್ರ ಪಠಿಸಿ
* ಜನರಿಗೆ ಗುರುವಾಗ ಬೆಲ್ಲದಿಂದ ಮಾಡಿದ ಸಿಹಿ ಅಥವಾ ಬೆಲ್ಲವನ್ನು ಅರ್ಪಿಸಿ.
* ನಿರ್ಗತಿಕರಿಗೆ ದಾನ ಮಾಡಿ
* ಕಾಗೆಗಳಿಗೆ ಆಹಾರ ಹಾಕಿ.



Click it and Unblock the Notifications