Latest Updates
-
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ!
ಸೆ. 4ಕ್ಕೆ ಗುರು ವಕ್ರೀಯ ಚಲನೆ: 118 ದಿನ ಈ 4 ರಾಶಿಯವರು ತುಂಬಾನೇ ಜಾಗ್ರತೆ
ಜ್ಯೋತಿಷ್ಯದ ಪ್ರಕಾರ ಗುರು ಸಂಚಾರಕ್ಕೆ ತುಂಬಾನೇ ಮಹತ್ವವಿದೆ. ಗುರು ಮೇಷ ರಾಶಿಯಲ್ಲಿದೆ. ಈ ಸೆಪ್ಟೆಂಬರ್ 4ಕ್ಕೆ ಗುರು ವಕ್ರೀಯ ಚಲನೆ ಮಾಡಲಿದೆ. ಗುರು ದುರ್ಬಲ ಸ್ಥಾನದಲ್ಲಿದ್ದಾಗ ಅದು ರಾಶಿಗಳ ಮೇಲೆ ಕೆಟ್ಟ ಪ್ರಭಾವ ಬೀರಲಿದೆ. ಗುರು ವಕ್ರೀಯ ಚಲನೆ ಮಾಡಿದಾಗ ಈ ರಾಶಿಗಳಲ್ಲಿ ದುರ್ಬಲ ಸ್ಥಾನದಲ್ಲಿ ಇರಲಿದೆ. 118 ದಿನಗಳವರೆಗೆ ಗುರು ವಕ್ರೀಯ ಚಲನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಯಾವೆಲ್ಲಾ ರಾಶಿಯವರು ಜಾಗ್ರತೆವಹಿಸಬೇಕು ನೋಡೋಣ ಬನ್ನಿ:

ಮೇಷ ರಾಶಿ
ಗುರು ಹಿಮ್ಮುಖ ಚಲನೆ ಮಾಡಲಾರಂಭಿಸಿದಾಗ ಈ ಅವಧಿಯಲ್ಲಿ ಗೊಂದಲವಿರಲಿದೆ, ನೀವು ಈ ಅವಧಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುವುದು. ಈ ಅವಧಿಯಲ್ಲಿ ನಿಮ್ಮ ತಂದೆಯ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಬಹುದು. ಖರ್ಚು ಹೆಚ್ಚಾಗಲಿದೆ, ಆದರೆ ಮಿತಿಯಲ್ಲಿ ಖರ್ಚು ಮಾಡಿದರೆ ಆರ್ಥಿಕ ಸಂಕಷ್ಟ ಉಂಟಾಗುವುದನ್ನು ತಡೆಗಟ್ಟಬಹುದು.
ವೃಷಭ ರಾಶಿ
ಈ ಅವಧಿಯಲ್ಲಿ ಆರೋಗ್ಯದಲ್ಲಿ ಸಮಸ್ಯೆಗಳು ಉಂಟಾಗಬಹುದು. ಲಿವರ್ಗೆ ಸಂಬಂಧಿಸಿದ ಸಮಸ್ಯೆ ಕಾಡಬಹುದು, ಆರೋಗ್ಯದ ಕಡೆ ಗಮನಹರಿಸಿ. ವೃತ್ತಿ ಜೀವನದಲ್ಲಿ ಸವಾಲುಗಳು ಎದುರಾಗುವುದು, ಕುಟುಂಬದ ವಿಷಯದಲ್ಲೂ ಕೆಲ ಸಮಸ್ಯೆಗಳಿರಬಹುದು.
ಕರ್ಕ ರಾಶಿ
ಈ ಅವಧಿಯಲ್ಲಿ ಕೆಲಸದಲ್ಲಿ ತುಂಬಾನೇ ಒತ್ತಡ ಇರಲಿದೆ. ಕೆಲಸದಲ್ಲಿ ನಿರ್ಲಕ್ಷ್ಯ ನಿಮ್ಮ ಸಮಸ್ಯೆ ಮತ್ತಷ್ಟು ಹೆಚ್ಚಿಸುವುದು. ನೀವು ಕೆಲಸದ ಬದಲಾವಣೆ ಬಗ್ಗೆ ಯೋಚಿಸುತ್ತಿದ್ದರೆ ಸ್ವಲ್ಪ ಕಾಯುವುದು ಒಳ್ಳೆಯದು. ತಂದೆಯೊಂದಿಗಿನ ಸಂಬಂಧದಲ್ಲಿ ಏರಳಿತಗಳಿರಬಹುದು.ಅನೇಕ ಆರೋಗ್ಯ ಸಮಸ್ಯೆ ಕೂಡ ಉಂಟಾಗುವುದು.
ಸಿಂಹ ರಾಶಿ
ಈ ಅವಧಿಯಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚಾಗುವುದು, ಇದರಿಂದ ನಿಮಗೆ ಒತ್ತಡ ಹೆಚ್ಚಾಗಲಿದೆ. ದೂರ ಪ್ರಯಾಣ ಖುಷಿ ನೀಡುವುದಕ್ಕಿಂತ ಆಯಾಸ ಹೆಚ್ಚಾಗುವುದು. ಸಂಬಂಧದಲ್ಲೂ ಏರಳಿತ ಉಂಟಾಗುವುದು. ಅನಗ್ಯತ ಚರ್ಚೆಗೆ ಹೋಗಬೇಡಿ, ನೀವು ನಿಮ್ಮ ಕೆಲಸ ಕಾರ್ಯದತ್ತ ಗಮನಹರಿಸಿ.
ಗುರು ದುರ್ಬಲ ಸ್ಥಾನದಲ್ಲಿದ್ದಾಗ ಏನಾಗುತ್ತದೆ?
* ಈ ಅವಧಿಯಲ್ಲಿ ಆಲೋಚನೆಗಳು ದುರ್ಬಲವಾಗುವುದು
* ಈ ಅವಧಿಯಲ್ಲಿ ನಿಮ್ಮ ಇಮೇಜ್ಗೆ ಧಕ್ಕೆಯಾಗಬಹುದು, ಆದ್ದರಿಂದ ಜಾಗ್ರತೆವಹಿಸಿ.
* ವಿದ್ಯಾರ್ಥಿಗಳಿಗೆ ಶಿಕ್ಷಣದ ಕಡೆ ಗಮನ ಹರಿಸಲು ಸಾಧ್ಯವಾಗಲ್ಲ
* ಗುರು ದುರ್ಬಲ ಸ್ಥಾನದಲ್ಲಿದ್ದರೆ ಆತ್ಮವಿಶ್ವಾಸ ಕಡಿಮೆಯಾಗುವುದು.
* ಗುರು ದುರ್ಬಲವಾಗಿದ್ದಾಗ ಆರೋಗ್ಯ ಸಮಸ್ಯೆಗಳು ಉಂಟಾಗುವುದು.
ಪರಿಹಾರವೇನು?
* ಹಳದಿ ಆಭರಣ ಧರಿಸಿ, ಚಿನ್ನ ಧರಿಸುವುದು ಕೂಡ ಉತ್ತಮ ಪರಿಹಾರವಾಗಿದೆ
* ಏನಾದರೂ ಪ್ರಮುಖ ಕಾರ್ಯಕ್ಕೆ ಹೋಗುವಾಗ ಹಳದಿ ಬಟ್ಟೆ ಧರಿಸಿ, ಒಂದು ಹಳದಿ ಕರ್ಚೀಫ್ ಆದರೂ ನಿಮ್ಮ ಬಳಿಯಿರಲಿ
* ಗುರುವಾರ ಉಪವಾಸ ಮಾಡಿ
* ಗುರು ಬೀಜ ಮಂತ್ರ ಪಠಿಸಿ
* ಜನರಿಗೆ ಗುರುವಾಗ ಬೆಲ್ಲದಿಂದ ಮಾಡಿದ ಸಿಹಿ ಅಥವಾ ಬೆಲ್ಲವನ್ನು ಅರ್ಪಿಸಿ.
* ನಿರ್ಗತಿಕರಿಗೆ ದಾನ ಮಾಡಿ
* ಕಾಗೆಗಳಿಗೆ ಆಹಾರ ಹಾಕಿ.



Click it and Unblock the Notifications