Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಸೆ. 4ಕ್ಕೆ ಗುರು ವಕ್ರೀಯ ಚಲನೆ: 118 ದಿನ ಈ 4 ರಾಶಿಯವರು ತುಂಬಾನೇ ಜಾಗ್ರತೆ
ಜ್ಯೋತಿಷ್ಯದ ಪ್ರಕಾರ ಗುರು ಸಂಚಾರಕ್ಕೆ ತುಂಬಾನೇ ಮಹತ್ವವಿದೆ. ಗುರು ಮೇಷ ರಾಶಿಯಲ್ಲಿದೆ. ಈ ಸೆಪ್ಟೆಂಬರ್ 4ಕ್ಕೆ ಗುರು ವಕ್ರೀಯ ಚಲನೆ ಮಾಡಲಿದೆ. ಗುರು ದುರ್ಬಲ ಸ್ಥಾನದಲ್ಲಿದ್ದಾಗ ಅದು ರಾಶಿಗಳ ಮೇಲೆ ಕೆಟ್ಟ ಪ್ರಭಾವ ಬೀರಲಿದೆ. ಗುರು ವಕ್ರೀಯ ಚಲನೆ ಮಾಡಿದಾಗ ಈ ರಾಶಿಗಳಲ್ಲಿ ದುರ್ಬಲ ಸ್ಥಾನದಲ್ಲಿ ಇರಲಿದೆ. 118 ದಿನಗಳವರೆಗೆ ಗುರು ವಕ್ರೀಯ ಚಲನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಯಾವೆಲ್ಲಾ ರಾಶಿಯವರು ಜಾಗ್ರತೆವಹಿಸಬೇಕು ನೋಡೋಣ ಬನ್ನಿ:

ಮೇಷ ರಾಶಿ
ಗುರು ಹಿಮ್ಮುಖ ಚಲನೆ ಮಾಡಲಾರಂಭಿಸಿದಾಗ ಈ ಅವಧಿಯಲ್ಲಿ ಗೊಂದಲವಿರಲಿದೆ, ನೀವು ಈ ಅವಧಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುವುದು. ಈ ಅವಧಿಯಲ್ಲಿ ನಿಮ್ಮ ತಂದೆಯ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಬಹುದು. ಖರ್ಚು ಹೆಚ್ಚಾಗಲಿದೆ, ಆದರೆ ಮಿತಿಯಲ್ಲಿ ಖರ್ಚು ಮಾಡಿದರೆ ಆರ್ಥಿಕ ಸಂಕಷ್ಟ ಉಂಟಾಗುವುದನ್ನು ತಡೆಗಟ್ಟಬಹುದು.
ವೃಷಭ ರಾಶಿ
ಈ ಅವಧಿಯಲ್ಲಿ ಆರೋಗ್ಯದಲ್ಲಿ ಸಮಸ್ಯೆಗಳು ಉಂಟಾಗಬಹುದು. ಲಿವರ್ಗೆ ಸಂಬಂಧಿಸಿದ ಸಮಸ್ಯೆ ಕಾಡಬಹುದು, ಆರೋಗ್ಯದ ಕಡೆ ಗಮನಹರಿಸಿ. ವೃತ್ತಿ ಜೀವನದಲ್ಲಿ ಸವಾಲುಗಳು ಎದುರಾಗುವುದು, ಕುಟುಂಬದ ವಿಷಯದಲ್ಲೂ ಕೆಲ ಸಮಸ್ಯೆಗಳಿರಬಹುದು.
ಕರ್ಕ ರಾಶಿ
ಈ ಅವಧಿಯಲ್ಲಿ ಕೆಲಸದಲ್ಲಿ ತುಂಬಾನೇ ಒತ್ತಡ ಇರಲಿದೆ. ಕೆಲಸದಲ್ಲಿ ನಿರ್ಲಕ್ಷ್ಯ ನಿಮ್ಮ ಸಮಸ್ಯೆ ಮತ್ತಷ್ಟು ಹೆಚ್ಚಿಸುವುದು. ನೀವು ಕೆಲಸದ ಬದಲಾವಣೆ ಬಗ್ಗೆ ಯೋಚಿಸುತ್ತಿದ್ದರೆ ಸ್ವಲ್ಪ ಕಾಯುವುದು ಒಳ್ಳೆಯದು. ತಂದೆಯೊಂದಿಗಿನ ಸಂಬಂಧದಲ್ಲಿ ಏರಳಿತಗಳಿರಬಹುದು.ಅನೇಕ ಆರೋಗ್ಯ ಸಮಸ್ಯೆ ಕೂಡ ಉಂಟಾಗುವುದು.
ಸಿಂಹ ರಾಶಿ
ಈ ಅವಧಿಯಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚಾಗುವುದು, ಇದರಿಂದ ನಿಮಗೆ ಒತ್ತಡ ಹೆಚ್ಚಾಗಲಿದೆ. ದೂರ ಪ್ರಯಾಣ ಖುಷಿ ನೀಡುವುದಕ್ಕಿಂತ ಆಯಾಸ ಹೆಚ್ಚಾಗುವುದು. ಸಂಬಂಧದಲ್ಲೂ ಏರಳಿತ ಉಂಟಾಗುವುದು. ಅನಗ್ಯತ ಚರ್ಚೆಗೆ ಹೋಗಬೇಡಿ, ನೀವು ನಿಮ್ಮ ಕೆಲಸ ಕಾರ್ಯದತ್ತ ಗಮನಹರಿಸಿ.
ಗುರು ದುರ್ಬಲ ಸ್ಥಾನದಲ್ಲಿದ್ದಾಗ ಏನಾಗುತ್ತದೆ?
* ಈ ಅವಧಿಯಲ್ಲಿ ಆಲೋಚನೆಗಳು ದುರ್ಬಲವಾಗುವುದು
* ಈ ಅವಧಿಯಲ್ಲಿ ನಿಮ್ಮ ಇಮೇಜ್ಗೆ ಧಕ್ಕೆಯಾಗಬಹುದು, ಆದ್ದರಿಂದ ಜಾಗ್ರತೆವಹಿಸಿ.
* ವಿದ್ಯಾರ್ಥಿಗಳಿಗೆ ಶಿಕ್ಷಣದ ಕಡೆ ಗಮನ ಹರಿಸಲು ಸಾಧ್ಯವಾಗಲ್ಲ
* ಗುರು ದುರ್ಬಲ ಸ್ಥಾನದಲ್ಲಿದ್ದರೆ ಆತ್ಮವಿಶ್ವಾಸ ಕಡಿಮೆಯಾಗುವುದು.
* ಗುರು ದುರ್ಬಲವಾಗಿದ್ದಾಗ ಆರೋಗ್ಯ ಸಮಸ್ಯೆಗಳು ಉಂಟಾಗುವುದು.
ಪರಿಹಾರವೇನು?
* ಹಳದಿ ಆಭರಣ ಧರಿಸಿ, ಚಿನ್ನ ಧರಿಸುವುದು ಕೂಡ ಉತ್ತಮ ಪರಿಹಾರವಾಗಿದೆ
* ಏನಾದರೂ ಪ್ರಮುಖ ಕಾರ್ಯಕ್ಕೆ ಹೋಗುವಾಗ ಹಳದಿ ಬಟ್ಟೆ ಧರಿಸಿ, ಒಂದು ಹಳದಿ ಕರ್ಚೀಫ್ ಆದರೂ ನಿಮ್ಮ ಬಳಿಯಿರಲಿ
* ಗುರುವಾರ ಉಪವಾಸ ಮಾಡಿ
* ಗುರು ಬೀಜ ಮಂತ್ರ ಪಠಿಸಿ
* ಜನರಿಗೆ ಗುರುವಾಗ ಬೆಲ್ಲದಿಂದ ಮಾಡಿದ ಸಿಹಿ ಅಥವಾ ಬೆಲ್ಲವನ್ನು ಅರ್ಪಿಸಿ.
* ನಿರ್ಗತಿಕರಿಗೆ ದಾನ ಮಾಡಿ
* ಕಾಗೆಗಳಿಗೆ ಆಹಾರ ಹಾಕಿ.



Click it and Unblock the Notifications
