Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಏಪ್ರಿಲ್ 1ಕ್ಕೆ ಕಾಮದ ಏಕಾದಶಿ: ಈ ವ್ರತ ಆಚರಿಸಿದರೆ ಕೆಲಸ ಕಾರ್ಯಗಳಲ್ಲಿ ಸಿಗಲಿದೆ ಯಶಸ್ಸು
ಹಿಂದೂ ಪಂಚಾಂಗದ ಪ್ರಕಾರ ಏಪ್ರಿಲ್ 1ಕ್ಕೆ ಕಾಮದ ಏಕಾದಶಿ ಆಚರಿಸಲಾಗುವುದು. ಈ ಏಕಾದಶಿಯ ವಿಶೇಷತೆಯೆಂದರೆ ಕನ್ನಡ ಮಾಸದ ಅಥವಾ ಹಿಂದೂ ಮಾಸದ ಮೊದಲ ಏಕಾದಶಿಯಾಗಿದೆ.
ಚೈತ್ರಮಾಸದ ಶುಕ್ಲಪಕ್ಷದಲ್ಲಿ ಈ ಏಕಾದಶಿ ಆಚರಿಸಲಾಗುವುದು. ಏಕಾದಶಿಯೆಂದರೆ ಶ್ರೀವಿಷ್ಣುವಿನ ಆರಾಧನೆಗೆ ಮೀಸಲಾದ ದಿನ.

ಏಪ್ರಿಲ್ 1ರಂದು ಆಚರಿಸಲಾಗುವ ಕಾಮದ ಏಕಾದಶಿಯ ಮಹತ್ವವೇನು, ಪೂಜಾ ಸಮಯ ಹಾಗೂ ಪಾರಣ ಸಮಯ ಯಾವಾಗ, ಪೂಜೆಯ ನಿಯಮಗಳೇನು ಎಂಬೆಲ್ಲಾ ಮಾಹಿತಿ ನೋಡೋಣ:
ಕಾಮದ ಏಕಾದಶಿಯ ಮಹತ್ವವೇನು?
ಕಾಮದ ಏಕಾದಶಿ ಆಚರಿಸುವುದರಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ವಿ ಗಳಿಸುವಿರಿ. ವೃತ್ತಿ ಜೀವನದಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಅಸ್ಥಿರತೆ, ವ್ಯವಹಾರ ಚೆನ್ನಾಗಿ ನಡೆಯುತ್ತಿಲ್ಲ, ಉದ್ಯಮದಲ್ಲಿ ನಾನು ಬಯಸಿದ ಲಾಭ ಗಳಿಸುತ್ತಿಲ್ಲ ಎಂದಾದರೆ ಈ ಏಕಾದಶಿಯನ್ನು ಪಾಲಿಸಿದರೆ ನಿಮ್ಮ ಕೆಲಸದಲ್ಲಿ ಪ್ರಗತಿಯನ್ನು ಕಾಣುವಿರಿ.
ಕಾಮದ ಏಕಾದಶಿ ಪೂಜಾಗೆ ಶುಭ ಮುಹೂರ್ತ:
ಕಾಮದ ಏಕಾದಶಿ ಏಪ್ರಿಲ್ 1 ಶನಿವಾರ ಆಚರಿಸಲಾಗುವುದು.
ಏಕಾದಶಿ ತಿಥಿ ಪ್ರಾರಂಭ: ಮಾರ್ಚ್ 31 ಮಧ್ಯರಾತ್ರಿ 01:58ಕ್ಕೆ
ಏಕಾದಶಿ ತಿಥಿ ಮುಕ್ತಾಯ: ಏಪ್ರಿಲ್ 2 ಮುಂಜಾನೆ 04:19ಕ್ಕೆ
ಮಪಾರಣ ಸಮಯ: ಏಪ್ರಿಲ್ 2 ಮಧ್ಯಾಹ್ನ 01:37ರಿಂದ 0:04ರವರೆಗೆ
ಏಕಾದಶಿಯನ್ನು ಹೇಗೆ ಆಚರಿಸಬೇಕು?
ಈ ದಿನ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ, ಉಪವಾಸವಿದ್ದು ಸಂಕಲ್ಪ ತೆಗೆದುಕೊಳ್ಳಬೇಕು. ಈ ದಿನ ಶ್ರೀ ವಿಷ್ಣುವಿನ ಸಹಸ್ರನಾಮ ಪಠಿಸಿ ಹಾಗೂ ಪೂಜೆಗೆ ಶ್ರೀ ವಿಷ್ಣುವಿಗೆ ಪ್ರಿಯವಾದ ಹಳದಿ ಹೂಗಳು ಹಾಗೂ ಹಳದಿ ಹಣ್ಣುಗಳನ್ನು ಅರ್ಪಿಸಿ. ಪೂಜೆಯಲ್ಲಿ ತುಳಸಿ ಇರಲಿ.
ಈ ದಿನ ಉಪವಾಸವಿದ್ದು ವಿಷ್ಣುವಿನ ಧ್ಯಾನ ಮಾಡಬೇಕು. ಈ ದಿನ ಸತ್ಯ ನಾರಾಯಣ ಕತೆ ಓದುವುದು, ಕೇಳುವುದು ಒಳ್ಳೆಯದು.
ಏಕಾದಶಿಯ ಆಚರಿಸುವುದರಿಂದ ದೊರೆಯುವ ಪ್ರಯೋಜನ
ಯಾರು ಶ್ರದ್ಧಾ ಭಕ್ತಿಯಿಂದ ಏಕಾದಶಿಯನ್ನು ಆಚರಿಸುತ್ತಾರೋ ಅವರಿಗೆ ಮೋಕ್ಷ ಸಿಗಲಿದೆ. ಎಲ್ಲಾ ಕಷ್ಟಗಳಿಂದ ಮುಕ್ತಿ ಸಿಗಲಿದೆ. ಕಾಮದ ಏಕಾದಶಿ ಆಚರಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಪ್ರಯೋಜನ ಪಡೆಯುವಿರಿ.
ಕಾಮದ ಏಕಾದಶಿ ಪೌರಾಣಿಕ ಹಿನ್ನೆಲೆ
ರತ್ನಪುರಾ ಎಂಬ ರಾಜ್ಯದಲ್ಲಿ ಲಲಿತ್ ಹಾಗೂ ಲಲಿತಾ ಎಂಬ ದಂಪತಿ ಇರುತ್ತಾರೆ. ಅವರಿದ್ದ ರಾಜ್ಯವನ್ನು ಪುಂಡರಿಕ ಎಂಬ ರಾಜ ಆಳುತ್ತಿದ್ದ. ಲಲಿತ್ ಆಸ್ಥಾನದಲ್ಲಿ ಸಂಗೀತಗಾರನಾಗಿದ್ದರೆ ಲಿಲಿತಾ ಆ ಸಂಗೀತಕ್ಕೆ ನೃತ್ಯ ಮಾಡುತ್ತಿದ್ದಳು. ಒಂದು ದಿನ ಲಲಿತ್ ಸಂಗೀತ ನುಡಿಸುವಾಗ ಆತನ ಹೆಂಡತಿಯನ್ನು ಗಮನಿಸುತ್ತಾನೆ, ಏಕೋ ಅವಳು ಬೇಸರದಿಂದ ಇರುವಂತೆ ಕಾಣುತ್ತಾಳೆ, ಅವಳ ನೃತ್ಯ ತಪ್ಪುತ್ತದೆ. ಆಗ ಸಂಗೀತ ನುಡಿಸುವುದು ನಿಲ್ಲಿಸಿ ಹೆಂಡತಿ ಬಳಿ ಏನಾಯಿತು ಎಂದು ಕೇಳುತ್ತಾನೆ.
ಆಗ ಅಲ್ಲಿದ್ದ ಕಾರ್ಲೋಟಕ ಸರ್ಪ ರಾಜನಿಗೆ ಲಲಿತ್ ಬಗ್ಗೆ ದೂರು ನೀಡುತ್ತಾನೆ. ನನಗಿಂತ ಹೆಂಡತಿಗೆ ಪ್ರಾಮುಖ್ಯತೆ ನೀಡಿದ್ದಕ್ಕೆ ರಾಜನು ನೀನೊಬ್ಬ ನರ ಭಕ್ಷಕನು ಆಗು ಎಂದು ಶಾಪ ನೀಡುತ್ತಾನೆ. ಲಲಿತಾ ಪತಿಯನ್ನು ಹುಡುಕು ಕಾಡಿನಲ್ಲಿ ಅಲಿಯುತ್ತಾ ಇರುವಾಗ ಆಕೆಗೆ ಶ್ರಿಂಘಿ ಋಷಿ ಸಿಗುತ್ತಾರೆ. ಅವರು ಆಕೆಗೆ ಕಾಮದ ಏಕಾದಶಿಯ ಮಹತ್ವ ಹೇಳಿ ಅದನ್ನು ಆಚರಿಸಲು ತಿಳಿಸುತ್ತಾರೆ. ಆಕೆ ಮಹಾವಿಷ್ಣುವನ್ನು ಭಕ್ತಿಯಿಂದ ಆರಾಧಿಸಿ ಪತಿಯನ್ನು ಪಾಪದಿಂದ ವಿಮೋಚನೆ ಮಾಡುತ್ತಾಳೆ.



Click it and Unblock the Notifications
