Latest Updates
-
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು
ದೆಹಲಿ ಮೆಟ್ರೋದಲ್ಲಿ ಕಾವಾಡಿಯ ಯಾತ್ರಿಕರ ನೃತ್ಯ ವೈರಲ್: ಈ ಯಾತ್ರೆಯ ಧಾರ್ಮಿಕ ಮಹತ್ವವೇನು?
ದೆಹಲಿ ಮೆಟ್ರೋ ವೀಡಿಯೋ ಅನೇಕ ಕಾರಣಗಳಿಂದ ಆಗಾಗ ವೈರಲ್ ಆಗುತ್ತಿರುತ್ತದೆ, ಇದೀಗ ಕಾವಾಡಿಯಾ ಯಾತ್ರಿಕರು ಶಿವನ ಕುರಿತ ಭಜನೆಗಳನ್ನು ಹಾಡುತ್ತಾ ನೃತ್ಯ ಮಾಡುತ್ತಿರುವ ವೀಡಿಯೋ ತುಂಬಾನೇ ವೈರಲ್ ಆಗಿದೆ. ಈ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ಸದ್ದು ಮಾಡುತ್ತಿದೆ.
'Now it's Kanwariya's dance in Delhi Metro 😃' ಎಂದು ಕ್ಯಾಪ್ಷನ್ ನೀಡಿ ಪಂಕಜ್ ಉಪಾಧ್ಯಾಯ ಎಂಬುವರು ಈ ವೀಡಿಯೋವನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದು ಹಳದಿ ವಸ್ತ್ರ, ಕಪ್ಪು ಸಾಲು ಧರಿಸಿ ಬರಿಗಾಲಿನಲ್ಲಿ ನೃತ್ಯ ಮಾಡುತ್ತಿರುವ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ಸದ್ದು ಮಾಡುತ್ತಿದೆ.

ಕಾನ್ವಾರ್ ಯಾತ್ರೆ
ವಾರ್ಷಿಕ ಕಾವಾಡಿಯಾ / ಕಾನ್ವಾರ್ ಯಾತ್ರೆ ಪ್ರಾರಂಭವಾಗಿದೆ. ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭವಾಗಿದೆ, ನಮ್ಮಲ್ಲಿ ಇನ್ನೂ ಆಷಾಢ ಮುಗಿದಿಲ್ಲ. ಈ ಶ್ರಾವಣ ಮಾಸದಲ್ಲಿ ಕಾವಾಡಿಯ ಯಾತ್ರೆ ಅಂತ ಮಾಡಲಾಗುವುದು. ಪಂಜಾಬ್, ಹರಿಯಾಣ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ದೆಹಲಿಗೆ ಬರುತ್ತಾರೆ. ಈ ಸಮಯದಲ್ಲಿ ದೆಹಲಿಯಲ್ಲಿ ಎಲ್ಲಿ ನೋಡಿದರೂ ಕೇಸರಿ ಬಟ್ಟೆ ಧರಿಸಿದ ಕಾವಾಡಿಯಾ ಯಾತ್ರಿಕರೇ ಕಾಣ ಸಿಗುತ್ತಾರೆ.
ಕಾವಾಡಿಯಾ ಯಾತ್ರೆಯ ಧಾರ್ಮಿಕ ಮಹತ್ವ
ಕಾವಾಡಿಯ ಯಾತ್ರೆಯಲ್ಲಿ ಭಕ್ತರು ಹರಿಧ್ವಾರ, ಗಂಗೋತ್ರಿ, ರಿಷಿಕೇಷದಿಮದ ಗಂಗಾ ನದಿಯ ನೀರಿನ್ನು ಒಂದು ಮಡಿಕೆಯಲ್ಲಿ ತುಂಬುತ್ತಾರೆ. ಆ ಮಡಿಕೆಯನ್ನು ಮುಚ್ಚಳ ಹಾಕಿ ಭದ್ರಪಡಿಸಿರುತ್ತಾರೆ, ಆ ಮಡಿಕೆ ಅಲಂಕಾರ ಮಾಡಿರುತ್ತಾರೆ, ಅದನ್ನು ತೋಳಿನಲ್ಲಿ ಎತ್ತಿಕೊಂಡು ಸಾಗುತ್ತಾರೆ. ಹರಿಧ್ವಾರದಿಂದ ಅವರ ಪ್ರಯಾಣ ಪ್ರಾರಂಭವಾಗಿ ಮನೆಗೆ ತಲುಪುವವರೆಗೆ ಆ ಮಡಿಕೆಯನ್ನು ಕೆಳಗೆ ಇಡುವಂತೆ ಇಲ್ಲ, ಮಡಿಕೆ ಎತ್ತಿಕೊಂಡಿರುವವರಿಗೆ ಸುಸ್ತಾದಾಗ ಆ ಗುಂಪಿನಲ್ಲಿರುವ ಇತರರು ಹೊತ್ತುಕೊಳ್ಳುತ್ತಾರೆ, ಹೀಗೆ ಆ ಪವಿತ್ರ ನೀರನ್ನು ತಂದು ಊರಿನಲ್ಲಿರುವ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುವುದು. ಈ ಸಮಯದಲ್ಲಿ ಭಕ್ತರು ಹರ ಹರ ಮಹಾದೇವ ಎಂದು ದೇವರ ಸ್ಮರಣೆ ಮಾಡುತ್ತಾರೆ.
ಪೌರಾಣಿಕ ಹಿನ್ನಲೆ
ದಾನವರು ಹಾಗೂ ದೇವತೆಗಳ ನಡುವೆ ಅಮೃತಕ್ಕಾಗಿ ಸಮುದ್ರಮಂಥನ ಮಾಡುವಾಗ ಮೊದಲು ಹಾಲಾಹಲ ಅಂದರೆ ವಿಷ ಉಕ್ಕುತ್ತೆ, ಅದನ್ನು ಶಿವ ಕುಡಿದು ಮೂರು ಲೋಕದ ರಕ್ಷಣೆ ಮಾಡುತ್ತಾನೆ. ಆದರೆ ವಿಷ ಕುಡಿದಾಗ ಶಿವನಿಗೆ ಗಂಟಲಿನಲ್ಲಿ ತುಂಬಾ ಉರಿ ಉಂಟಾಗುತ್ತದೆ. ಆವಾಗ ಗಂಗೆಯ ನೀರನ್ನು ಶಿವನ ಮೇಲೆ ಸುರಿದಾಗ ಶಿವನಿಗೆ ಉರಿ ಕಡಿಮೆಯಾಯಿತು, ಅಲ್ಲಿಂದ ಶಿವಲಿಂಗಕ್ಕೆ ಗಂಗಾ ನೀರನ್ನು ಸುರಿಯುವ ಆಚರಣೆ ಜಾರಿಗೆ ಬಂತು ಎಂದು ಹೇಳಲಾಗುತ್ತಿದೆ.



Click it and Unblock the Notifications