Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ದೆಹಲಿ ಮೆಟ್ರೋದಲ್ಲಿ ಕಾವಾಡಿಯ ಯಾತ್ರಿಕರ ನೃತ್ಯ ವೈರಲ್: ಈ ಯಾತ್ರೆಯ ಧಾರ್ಮಿಕ ಮಹತ್ವವೇನು?
ದೆಹಲಿ ಮೆಟ್ರೋ ವೀಡಿಯೋ ಅನೇಕ ಕಾರಣಗಳಿಂದ ಆಗಾಗ ವೈರಲ್ ಆಗುತ್ತಿರುತ್ತದೆ, ಇದೀಗ ಕಾವಾಡಿಯಾ ಯಾತ್ರಿಕರು ಶಿವನ ಕುರಿತ ಭಜನೆಗಳನ್ನು ಹಾಡುತ್ತಾ ನೃತ್ಯ ಮಾಡುತ್ತಿರುವ ವೀಡಿಯೋ ತುಂಬಾನೇ ವೈರಲ್ ಆಗಿದೆ. ಈ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ಸದ್ದು ಮಾಡುತ್ತಿದೆ.
'Now it's Kanwariya's dance in Delhi Metro 😃' ಎಂದು ಕ್ಯಾಪ್ಷನ್ ನೀಡಿ ಪಂಕಜ್ ಉಪಾಧ್ಯಾಯ ಎಂಬುವರು ಈ ವೀಡಿಯೋವನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದು ಹಳದಿ ವಸ್ತ್ರ, ಕಪ್ಪು ಸಾಲು ಧರಿಸಿ ಬರಿಗಾಲಿನಲ್ಲಿ ನೃತ್ಯ ಮಾಡುತ್ತಿರುವ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ಸದ್ದು ಮಾಡುತ್ತಿದೆ.

ಕಾನ್ವಾರ್ ಯಾತ್ರೆ
ವಾರ್ಷಿಕ ಕಾವಾಡಿಯಾ / ಕಾನ್ವಾರ್ ಯಾತ್ರೆ ಪ್ರಾರಂಭವಾಗಿದೆ. ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭವಾಗಿದೆ, ನಮ್ಮಲ್ಲಿ ಇನ್ನೂ ಆಷಾಢ ಮುಗಿದಿಲ್ಲ. ಈ ಶ್ರಾವಣ ಮಾಸದಲ್ಲಿ ಕಾವಾಡಿಯ ಯಾತ್ರೆ ಅಂತ ಮಾಡಲಾಗುವುದು. ಪಂಜಾಬ್, ಹರಿಯಾಣ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ದೆಹಲಿಗೆ ಬರುತ್ತಾರೆ. ಈ ಸಮಯದಲ್ಲಿ ದೆಹಲಿಯಲ್ಲಿ ಎಲ್ಲಿ ನೋಡಿದರೂ ಕೇಸರಿ ಬಟ್ಟೆ ಧರಿಸಿದ ಕಾವಾಡಿಯಾ ಯಾತ್ರಿಕರೇ ಕಾಣ ಸಿಗುತ್ತಾರೆ.
ಕಾವಾಡಿಯಾ ಯಾತ್ರೆಯ ಧಾರ್ಮಿಕ ಮಹತ್ವ
ಕಾವಾಡಿಯ ಯಾತ್ರೆಯಲ್ಲಿ ಭಕ್ತರು ಹರಿಧ್ವಾರ, ಗಂಗೋತ್ರಿ, ರಿಷಿಕೇಷದಿಮದ ಗಂಗಾ ನದಿಯ ನೀರಿನ್ನು ಒಂದು ಮಡಿಕೆಯಲ್ಲಿ ತುಂಬುತ್ತಾರೆ. ಆ ಮಡಿಕೆಯನ್ನು ಮುಚ್ಚಳ ಹಾಕಿ ಭದ್ರಪಡಿಸಿರುತ್ತಾರೆ, ಆ ಮಡಿಕೆ ಅಲಂಕಾರ ಮಾಡಿರುತ್ತಾರೆ, ಅದನ್ನು ತೋಳಿನಲ್ಲಿ ಎತ್ತಿಕೊಂಡು ಸಾಗುತ್ತಾರೆ. ಹರಿಧ್ವಾರದಿಂದ ಅವರ ಪ್ರಯಾಣ ಪ್ರಾರಂಭವಾಗಿ ಮನೆಗೆ ತಲುಪುವವರೆಗೆ ಆ ಮಡಿಕೆಯನ್ನು ಕೆಳಗೆ ಇಡುವಂತೆ ಇಲ್ಲ, ಮಡಿಕೆ ಎತ್ತಿಕೊಂಡಿರುವವರಿಗೆ ಸುಸ್ತಾದಾಗ ಆ ಗುಂಪಿನಲ್ಲಿರುವ ಇತರರು ಹೊತ್ತುಕೊಳ್ಳುತ್ತಾರೆ, ಹೀಗೆ ಆ ಪವಿತ್ರ ನೀರನ್ನು ತಂದು ಊರಿನಲ್ಲಿರುವ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುವುದು. ಈ ಸಮಯದಲ್ಲಿ ಭಕ್ತರು ಹರ ಹರ ಮಹಾದೇವ ಎಂದು ದೇವರ ಸ್ಮರಣೆ ಮಾಡುತ್ತಾರೆ.
ಪೌರಾಣಿಕ ಹಿನ್ನಲೆ
ದಾನವರು ಹಾಗೂ ದೇವತೆಗಳ ನಡುವೆ ಅಮೃತಕ್ಕಾಗಿ ಸಮುದ್ರಮಂಥನ ಮಾಡುವಾಗ ಮೊದಲು ಹಾಲಾಹಲ ಅಂದರೆ ವಿಷ ಉಕ್ಕುತ್ತೆ, ಅದನ್ನು ಶಿವ ಕುಡಿದು ಮೂರು ಲೋಕದ ರಕ್ಷಣೆ ಮಾಡುತ್ತಾನೆ. ಆದರೆ ವಿಷ ಕುಡಿದಾಗ ಶಿವನಿಗೆ ಗಂಟಲಿನಲ್ಲಿ ತುಂಬಾ ಉರಿ ಉಂಟಾಗುತ್ತದೆ. ಆವಾಗ ಗಂಗೆಯ ನೀರನ್ನು ಶಿವನ ಮೇಲೆ ಸುರಿದಾಗ ಶಿವನಿಗೆ ಉರಿ ಕಡಿಮೆಯಾಯಿತು, ಅಲ್ಲಿಂದ ಶಿವಲಿಂಗಕ್ಕೆ ಗಂಗಾ ನೀರನ್ನು ಸುರಿಯುವ ಆಚರಣೆ ಜಾರಿಗೆ ಬಂತು ಎಂದು ಹೇಳಲಾಗುತ್ತಿದೆ.



Click it and Unblock the Notifications