Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ದೆಹಲಿ ಮೆಟ್ರೋದಲ್ಲಿ ಕಾವಾಡಿಯ ಯಾತ್ರಿಕರ ನೃತ್ಯ ವೈರಲ್: ಈ ಯಾತ್ರೆಯ ಧಾರ್ಮಿಕ ಮಹತ್ವವೇನು?
ದೆಹಲಿ ಮೆಟ್ರೋ ವೀಡಿಯೋ ಅನೇಕ ಕಾರಣಗಳಿಂದ ಆಗಾಗ ವೈರಲ್ ಆಗುತ್ತಿರುತ್ತದೆ, ಇದೀಗ ಕಾವಾಡಿಯಾ ಯಾತ್ರಿಕರು ಶಿವನ ಕುರಿತ ಭಜನೆಗಳನ್ನು ಹಾಡುತ್ತಾ ನೃತ್ಯ ಮಾಡುತ್ತಿರುವ ವೀಡಿಯೋ ತುಂಬಾನೇ ವೈರಲ್ ಆಗಿದೆ. ಈ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ಸದ್ದು ಮಾಡುತ್ತಿದೆ.
'Now it's Kanwariya's dance in Delhi Metro 😃' ಎಂದು ಕ್ಯಾಪ್ಷನ್ ನೀಡಿ ಪಂಕಜ್ ಉಪಾಧ್ಯಾಯ ಎಂಬುವರು ಈ ವೀಡಿಯೋವನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದು ಹಳದಿ ವಸ್ತ್ರ, ಕಪ್ಪು ಸಾಲು ಧರಿಸಿ ಬರಿಗಾಲಿನಲ್ಲಿ ನೃತ್ಯ ಮಾಡುತ್ತಿರುವ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ಸದ್ದು ಮಾಡುತ್ತಿದೆ.

ಕಾನ್ವಾರ್ ಯಾತ್ರೆ
ವಾರ್ಷಿಕ ಕಾವಾಡಿಯಾ / ಕಾನ್ವಾರ್ ಯಾತ್ರೆ ಪ್ರಾರಂಭವಾಗಿದೆ. ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭವಾಗಿದೆ, ನಮ್ಮಲ್ಲಿ ಇನ್ನೂ ಆಷಾಢ ಮುಗಿದಿಲ್ಲ. ಈ ಶ್ರಾವಣ ಮಾಸದಲ್ಲಿ ಕಾವಾಡಿಯ ಯಾತ್ರೆ ಅಂತ ಮಾಡಲಾಗುವುದು. ಪಂಜಾಬ್, ಹರಿಯಾಣ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ದೆಹಲಿಗೆ ಬರುತ್ತಾರೆ. ಈ ಸಮಯದಲ್ಲಿ ದೆಹಲಿಯಲ್ಲಿ ಎಲ್ಲಿ ನೋಡಿದರೂ ಕೇಸರಿ ಬಟ್ಟೆ ಧರಿಸಿದ ಕಾವಾಡಿಯಾ ಯಾತ್ರಿಕರೇ ಕಾಣ ಸಿಗುತ್ತಾರೆ.
ಕಾವಾಡಿಯಾ ಯಾತ್ರೆಯ ಧಾರ್ಮಿಕ ಮಹತ್ವ
ಕಾವಾಡಿಯ ಯಾತ್ರೆಯಲ್ಲಿ ಭಕ್ತರು ಹರಿಧ್ವಾರ, ಗಂಗೋತ್ರಿ, ರಿಷಿಕೇಷದಿಮದ ಗಂಗಾ ನದಿಯ ನೀರಿನ್ನು ಒಂದು ಮಡಿಕೆಯಲ್ಲಿ ತುಂಬುತ್ತಾರೆ. ಆ ಮಡಿಕೆಯನ್ನು ಮುಚ್ಚಳ ಹಾಕಿ ಭದ್ರಪಡಿಸಿರುತ್ತಾರೆ, ಆ ಮಡಿಕೆ ಅಲಂಕಾರ ಮಾಡಿರುತ್ತಾರೆ, ಅದನ್ನು ತೋಳಿನಲ್ಲಿ ಎತ್ತಿಕೊಂಡು ಸಾಗುತ್ತಾರೆ. ಹರಿಧ್ವಾರದಿಂದ ಅವರ ಪ್ರಯಾಣ ಪ್ರಾರಂಭವಾಗಿ ಮನೆಗೆ ತಲುಪುವವರೆಗೆ ಆ ಮಡಿಕೆಯನ್ನು ಕೆಳಗೆ ಇಡುವಂತೆ ಇಲ್ಲ, ಮಡಿಕೆ ಎತ್ತಿಕೊಂಡಿರುವವರಿಗೆ ಸುಸ್ತಾದಾಗ ಆ ಗುಂಪಿನಲ್ಲಿರುವ ಇತರರು ಹೊತ್ತುಕೊಳ್ಳುತ್ತಾರೆ, ಹೀಗೆ ಆ ಪವಿತ್ರ ನೀರನ್ನು ತಂದು ಊರಿನಲ್ಲಿರುವ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುವುದು. ಈ ಸಮಯದಲ್ಲಿ ಭಕ್ತರು ಹರ ಹರ ಮಹಾದೇವ ಎಂದು ದೇವರ ಸ್ಮರಣೆ ಮಾಡುತ್ತಾರೆ.
ಪೌರಾಣಿಕ ಹಿನ್ನಲೆ
ದಾನವರು ಹಾಗೂ ದೇವತೆಗಳ ನಡುವೆ ಅಮೃತಕ್ಕಾಗಿ ಸಮುದ್ರಮಂಥನ ಮಾಡುವಾಗ ಮೊದಲು ಹಾಲಾಹಲ ಅಂದರೆ ವಿಷ ಉಕ್ಕುತ್ತೆ, ಅದನ್ನು ಶಿವ ಕುಡಿದು ಮೂರು ಲೋಕದ ರಕ್ಷಣೆ ಮಾಡುತ್ತಾನೆ. ಆದರೆ ವಿಷ ಕುಡಿದಾಗ ಶಿವನಿಗೆ ಗಂಟಲಿನಲ್ಲಿ ತುಂಬಾ ಉರಿ ಉಂಟಾಗುತ್ತದೆ. ಆವಾಗ ಗಂಗೆಯ ನೀರನ್ನು ಶಿವನ ಮೇಲೆ ಸುರಿದಾಗ ಶಿವನಿಗೆ ಉರಿ ಕಡಿಮೆಯಾಯಿತು, ಅಲ್ಲಿಂದ ಶಿವಲಿಂಗಕ್ಕೆ ಗಂಗಾ ನೀರನ್ನು ಸುರಿಯುವ ಆಚರಣೆ ಜಾರಿಗೆ ಬಂತು ಎಂದು ಹೇಳಲಾಗುತ್ತಿದೆ.



Click it and Unblock the Notifications