Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದೆಹಲಿ ಮೆಟ್ರೋದಲ್ಲಿ ಕಾವಾಡಿಯ ಯಾತ್ರಿಕರ ನೃತ್ಯ ವೈರಲ್: ಈ ಯಾತ್ರೆಯ ಧಾರ್ಮಿಕ ಮಹತ್ವವೇನು?
ದೆಹಲಿ ಮೆಟ್ರೋ ವೀಡಿಯೋ ಅನೇಕ ಕಾರಣಗಳಿಂದ ಆಗಾಗ ವೈರಲ್ ಆಗುತ್ತಿರುತ್ತದೆ, ಇದೀಗ ಕಾವಾಡಿಯಾ ಯಾತ್ರಿಕರು ಶಿವನ ಕುರಿತ ಭಜನೆಗಳನ್ನು ಹಾಡುತ್ತಾ ನೃತ್ಯ ಮಾಡುತ್ತಿರುವ ವೀಡಿಯೋ ತುಂಬಾನೇ ವೈರಲ್ ಆಗಿದೆ. ಈ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ಸದ್ದು ಮಾಡುತ್ತಿದೆ.
'Now it's Kanwariya's dance in Delhi Metro 😃' ಎಂದು ಕ್ಯಾಪ್ಷನ್ ನೀಡಿ ಪಂಕಜ್ ಉಪಾಧ್ಯಾಯ ಎಂಬುವರು ಈ ವೀಡಿಯೋವನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದು ಹಳದಿ ವಸ್ತ್ರ, ಕಪ್ಪು ಸಾಲು ಧರಿಸಿ ಬರಿಗಾಲಿನಲ್ಲಿ ನೃತ್ಯ ಮಾಡುತ್ತಿರುವ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ಸದ್ದು ಮಾಡುತ್ತಿದೆ.

ಕಾನ್ವಾರ್ ಯಾತ್ರೆ
ವಾರ್ಷಿಕ ಕಾವಾಡಿಯಾ / ಕಾನ್ವಾರ್ ಯಾತ್ರೆ ಪ್ರಾರಂಭವಾಗಿದೆ. ಉತ್ತರ ಭಾರತದ ಕಡೆ ಶ್ರಾವಣ ಪ್ರಾರಂಭವಾಗಿದೆ, ನಮ್ಮಲ್ಲಿ ಇನ್ನೂ ಆಷಾಢ ಮುಗಿದಿಲ್ಲ. ಈ ಶ್ರಾವಣ ಮಾಸದಲ್ಲಿ ಕಾವಾಡಿಯ ಯಾತ್ರೆ ಅಂತ ಮಾಡಲಾಗುವುದು. ಪಂಜಾಬ್, ಹರಿಯಾಣ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ದೆಹಲಿಗೆ ಬರುತ್ತಾರೆ. ಈ ಸಮಯದಲ್ಲಿ ದೆಹಲಿಯಲ್ಲಿ ಎಲ್ಲಿ ನೋಡಿದರೂ ಕೇಸರಿ ಬಟ್ಟೆ ಧರಿಸಿದ ಕಾವಾಡಿಯಾ ಯಾತ್ರಿಕರೇ ಕಾಣ ಸಿಗುತ್ತಾರೆ.
ಕಾವಾಡಿಯಾ ಯಾತ್ರೆಯ ಧಾರ್ಮಿಕ ಮಹತ್ವ
ಕಾವಾಡಿಯ ಯಾತ್ರೆಯಲ್ಲಿ ಭಕ್ತರು ಹರಿಧ್ವಾರ, ಗಂಗೋತ್ರಿ, ರಿಷಿಕೇಷದಿಮದ ಗಂಗಾ ನದಿಯ ನೀರಿನ್ನು ಒಂದು ಮಡಿಕೆಯಲ್ಲಿ ತುಂಬುತ್ತಾರೆ. ಆ ಮಡಿಕೆಯನ್ನು ಮುಚ್ಚಳ ಹಾಕಿ ಭದ್ರಪಡಿಸಿರುತ್ತಾರೆ, ಆ ಮಡಿಕೆ ಅಲಂಕಾರ ಮಾಡಿರುತ್ತಾರೆ, ಅದನ್ನು ತೋಳಿನಲ್ಲಿ ಎತ್ತಿಕೊಂಡು ಸಾಗುತ್ತಾರೆ. ಹರಿಧ್ವಾರದಿಂದ ಅವರ ಪ್ರಯಾಣ ಪ್ರಾರಂಭವಾಗಿ ಮನೆಗೆ ತಲುಪುವವರೆಗೆ ಆ ಮಡಿಕೆಯನ್ನು ಕೆಳಗೆ ಇಡುವಂತೆ ಇಲ್ಲ, ಮಡಿಕೆ ಎತ್ತಿಕೊಂಡಿರುವವರಿಗೆ ಸುಸ್ತಾದಾಗ ಆ ಗುಂಪಿನಲ್ಲಿರುವ ಇತರರು ಹೊತ್ತುಕೊಳ್ಳುತ್ತಾರೆ, ಹೀಗೆ ಆ ಪವಿತ್ರ ನೀರನ್ನು ತಂದು ಊರಿನಲ್ಲಿರುವ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುವುದು. ಈ ಸಮಯದಲ್ಲಿ ಭಕ್ತರು ಹರ ಹರ ಮಹಾದೇವ ಎಂದು ದೇವರ ಸ್ಮರಣೆ ಮಾಡುತ್ತಾರೆ.
ಪೌರಾಣಿಕ ಹಿನ್ನಲೆ
ದಾನವರು ಹಾಗೂ ದೇವತೆಗಳ ನಡುವೆ ಅಮೃತಕ್ಕಾಗಿ ಸಮುದ್ರಮಂಥನ ಮಾಡುವಾಗ ಮೊದಲು ಹಾಲಾಹಲ ಅಂದರೆ ವಿಷ ಉಕ್ಕುತ್ತೆ, ಅದನ್ನು ಶಿವ ಕುಡಿದು ಮೂರು ಲೋಕದ ರಕ್ಷಣೆ ಮಾಡುತ್ತಾನೆ. ಆದರೆ ವಿಷ ಕುಡಿದಾಗ ಶಿವನಿಗೆ ಗಂಟಲಿನಲ್ಲಿ ತುಂಬಾ ಉರಿ ಉಂಟಾಗುತ್ತದೆ. ಆವಾಗ ಗಂಗೆಯ ನೀರನ್ನು ಶಿವನ ಮೇಲೆ ಸುರಿದಾಗ ಶಿವನಿಗೆ ಉರಿ ಕಡಿಮೆಯಾಯಿತು, ಅಲ್ಲಿಂದ ಶಿವಲಿಂಗಕ್ಕೆ ಗಂಗಾ ನೀರನ್ನು ಸುರಿಯುವ ಆಚರಣೆ ಜಾರಿಗೆ ಬಂತು ಎಂದು ಹೇಳಲಾಗುತ್ತಿದೆ.



Click it and Unblock the Notifications