Latest Updates
-
ನಾಳೆ ಸೂರ್ಯ-ಬುಧ ಸಂಯೋಗ: ಬುಧಾದಿತ್ಯ ಯೋಗದಿಂದ ಈ ರಾಶಿಯವರ ಬದುಕಲ್ಲಿ ಬೆಳಕು! -
ತೂಕ ಇಳಿಸಲು ಪೇಪರ್ ಅಷ್ಟು ತೆಳುವಾದ ರಾಗಿ ದೋಸೆ ಮಾಡಿ! -
ಜೀವನದಲ್ಲಿ ಮಹತ್ವದ ಬದಲಾವಣೆ, ವೈವಾಹಿಕ ಯೋಗ! ಕೊಂಚ ಒತ್ತಡ, ತಾಳ್ಮೆ ಇರಲಿ -
March 06 Horoscope: ಸಾಲ ನೀಡುವಾಗ ಹತ್ತು ಬಾರಿ ಆಲೋಚಿಸಿ! -
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ! -
ಕೊನೆಗೂ ಕಣ್ಣು ಬಿಟ್ಟ ಶುಕ್ರ-ಶನಿ: ಈ ರಾಶಿಯವರ ಜೀವನದಲ್ಲಿ ಭೌತಿಕ ಸುಖ! ಸಂಪತ್ತು ತುಂಬಿ ತುಳುಕಲಿದೆ -
ಬದನೆಕಾಯಿ ಕಹಿ ತೆಗೆಯೋದು ಹೇಗೆ? ಈ ಸಿಂಪಲ್ ಟ್ರಿಕ್ ಬಳಸಿ.. ಬಲು ರುಚಿ! ಕಹಿ ಅನ್ನೋದೇ ಇರಲ್ಲ -
ಮಧ್ಯಪ್ರಾಚ್ಯ ಸಂಘರ್ಷ: ಭಾರತದಲ್ಲಿ ಏರಿಕೆಯಾಗಲಿದೆ ಈ ವಸ್ತುಗಳ ಬೆಲೆ! -
ಇವ್ರು ಬೇಗ ಲವ್ನಲ್ಲಿ ಬೀಳ್ತಾರೆ.. ಮದುವೆ ಅಂದ್ರೆ ಅನ್ಪ್ರೆಡಿಕ್ಟಬಲ್! ನಿಮ್ಮ ಜನ್ಮದಿನಾಂಕ ಇದೇನಾ?
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ!
ರಾಜ್ಯ ಸರ್ಕಾರದ 2026-27ನೇ ಸಾಲಿನ ಬಹುನಿರೀಕ್ಷಿತ ಬಜೆಟ್ ಮಂಡನೆಯಾಗಿದ್ದು, ಹಲವು ಕ್ಷೇತ್ರಗಳಿಗೆ ಬರಪೂರ ಕೊಡುಗೆ ನೀಡಲಾಗಿದೆ. ಬರೋಬ್ಬರಿ 4,48,004 ಕೋಟಿ ರೂಪಾಯಿ ಗಾತ್ರದ ದಾಖಲೆಯ ಬಜೆಟ್ ಇದಾಗಿದೆ. 2025-26ನೇ ಸಾಲಿನ ಪರಿಷ್ಕೃತ ಅಂದಾಜು 3,95,307 ಕೋಟಿ ರೂ.ಗಳಷ್ಟಿತ್ತು. ಈ ಬಾರಿ ತುಸು ಏರಕೆಯಾಗಿದೆ. ಈ ಬಾರಿ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚು ಹಂಚಿಕೆಯಾಗಿದೆ. ಹಾಗೆ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೂ ಸಹ ದೊಡ್ಡ ಮೊತ್ತದ ಹಂಚಿಕೆ ನೋಡಬಹುದು.
ಈ ಬಾರಿಯ ಬಜೆಟ್ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸುಮಾರು 17,817 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದು ಒಟ್ಟು ಬಜೆಟ್ ಗಾತ್ರದ ಶೇ.4 ರಷ್ಟಾಗಿದೆ. ಹಾಗೆ ಈ ಬಜೆಟ್ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಬರೋಬ್ಬರಿ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.

ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಅಂಗನವಾಡಿ ಸಿಬ್ಬಂದಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಪ್ರಸ್ತುತ ಸೇವೆ ಸಲ್ಲಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ ಒಂದು ಜೊತೆ ಹೆಚ್ಚುವರಿ ಸಮವಸ್ತ್ರ ವಿತರಿಸಲು ಸರ್ಕಾರ ನಿರ್ಧರಿಸಿದೆ.
ಆರೋಗ್ಯ ವಲಯಕ್ಕೆ ಈ ಬಜೆಟ್ನಲ್ಲಿ ಸಿಕ್ಕಿದ್ದೇನು?
ಈ ಬಾರಿಯ ಬಜೆಟ್ನಲ್ಲಿ ಆರೋಗ್ಯ ವಲಯಕ್ಕೂ ಬರಪೂರ ಕೊಡುಗೆ ನೀಡಲಾಗಿದೆ. ಅದ್ರಲ್ಲೂ ಹೊಸ ಆಸ್ಪತ್ರೆ, ಹಳೆಯ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿದೆ.
ಹಾಗೆ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೋಲಾರದಲ್ಲಿ ESI ಆಸ್ಪತ್ರೆಗಳನ್ನು ಉನ್ನತೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗೆ ವಿಜಯಪುರದಲ್ಲಿ 12 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ ನಿರ್ಮಾಣಕ್ಕೂ ಈ ಬಜೆಟ್ನಲ್ಲಿ ಯೋಜನೆ ರೂಪಿಸಲಾಗಿದೆ.
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ
ಸಂಪುಟ ಸಭೆ ಹಾಗೆ ಅಧಿವೇಶನದಲ್ಲಿ ಚರ್ಚೆಯಾಗಿದ್ದ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಸಂಬಂಧಿಸಿದಂತೆ ಬಜೆಟ್ನಲ್ಲಿಯೂ ಈ ಕುರಿತ ಅಧಿಕೃತ ಘೋಷಣೆ ಹೊರಬಿದ್ದಿದೆ. ಆಸ್ಟ್ರೇಲಿಯಾದಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶ ಇದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ಎಕ್ಸ್ನಂತಹ ವೇದಿಕೆಗಳಿಗೆ ಲಾಗ್-ಇನ್ ಆಗುವಾಗ ಆಧಾರ್ ಅಥವಾ ಇತರ ಗುರುತಿನ ಚೀಟಿ ಮೂಲಕ ವಯಸ್ಸನ್ನು ಕಡ್ಡಾಯವಾಗಿ ದೃಢೀಕರಿಸಬೇಕಾಗಬಹುದು. 16 ವರ್ಷದೊಳಗಿನ ಮಕ್ಕಳಿಗೆ ಖಾತೆ ತೆರೆಯಲು ಅವಕಾಶ ನೀಡುವ ಸಂಸ್ಥೆಗಳ ಮೇಲೆ ಭಾರಿ ದಂಡ ವಿಧಿಸುವ ಅವಕಾಶ ಈ ಕಾನೂನಿನಲ್ಲಿರಲಿದೆ.



Click it and Unblock the Notifications











